ಕುಡಿವ ನೀರಿನ ಸಮಸ್ಯೆ ಆಗದಂತೆ ನೋಡಿಕೊಳ್ಳಿ

ಬೋರ್‌ವೆಲ್‌ ಕೊರೆಸಲು 15 ದಿನದೊಳಗೆ ಕ್ರಿಯಾಯೋಜನೆ ಸಲ್ಲಿಸಿ „ ಅಧಿಕಾರಿಗಳಿಗೆ ಪ್ರಭಾರ ಡೀಸಿ ದರ್ಶನ್‌ ಸೂಚನೆ

Team Udayavani, Mar 1, 2020, 3:40 PM IST

1-March-21

ಕೋಲಾರ: ಮುಂಬರುವ ಬೇಸಿಗೆಯಲ್ಲಿ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸದಂತೆ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಪ್ರಭಾರ ಜಿಲ್ಲಾಧಿಕಾರಿ ಎಚ್‌.ವಿ. ದರ್ಶನ್‌ ಸೂಚಿಸಿದರು.

ಜಿಲ್ಲಾಡಳಿತ ಭವನದಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತು ಅಧಿಕಾರಿಗಳ ಸಭೆ ನಡೆಸಿದ ಅವರು, ಮಾರ್ಚ್‌ನಿಂದ ಮೇ ತಿಂಗಳವರೆಗೆ ಕುಡಿಯುವ ನೀರಿನ ಪರಿಸ್ಥಿತಿಯನ್ನು ನಿಭಾಯಿಸುವುದು ಅತ್ಯಂತ ಪ್ರಮುಖವಾದ ಕೆಲಸ. ನೀರಿನ ಸಮಸ್ಯೆ ಕಂಡುಬರ ಬಹುದಾದ ಗ್ರಾಮಗಳನ್ನು ಈಗಿನಿಂದಲೇ ಗುರುತಿಸಿಟ್ಟುಕೊಳ್ಳಿ, ಸಮಸ್ಯೆ ಎದುರಾದ ತಕ್ಷಣ ಬಗೆಹರಿಸಲು ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಿ ಎಂದು ತಿಳಿಸಿದರು.

ಮಂಜೂರಾತಿ ಪಡೆದುಕೊಳ್ಳಿ: ಶಾಸಕರ ಅಧ್ಯಕ್ಷತೆಯಲ್ಲಿ ಟಾಸ್ಕ್ಪೋ ರ್ಸ್‌ ಸಮಿತಿ ಸಭೆ ನಡೆಸಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಕೈಗೊಳ್ಳ ಬೇಕಾದ ಕ್ರಮಗಳ ಕುರಿತು ಚರ್ಚಿಸಿ ಕ್ರಿಯಾ ಯೋಜನೆಯೊಂದಿಗೆ 15 ದಿನಗಳ ಒಳಗೆ ಪ್ರಸ್ತಾವನೆ ಸಲ್ಲಿಸುವಂತೆ ಸೂಚಿಸಿದ ಅವರು, ಈಗಾಗಲೇ ಕ್ರಿಯಾಯೋಜನೆ ಇಲ್ಲದೆ ಕೊರೆದಿರುವ ಬೋರ್‌ವೆಲ್‌ ಗಳಿಗೆ ಘಟನೋತ್ತರ ಮಂಜೂರಾತಿ ಪಡೆದುಕೊಳ್ಳಿ ಎಂದು ಸಲಹೆ ನೀಡಿದರು.

1.50 ಲಕ್ಷ ರೂ. ಹೆಚ್ಚು ನೀಡಲ್ಲ: ಕುಡಿಯುವ ನೀರಿನ ಸಮಸ್ಯೆ ಕಂಡುಬಂದಲ್ಲಿ ಮೊದಲ ಆಯ್ಕೆಯಾಗಿ ಖಾಸಗಿ ಬೋರ್‌ವೆಲ್‌ಗ‌ಳನ್ನು ಪಡೆದುಕೊಳ್ಳಿ, ಮಾಸಿಕ ನಿಗದಿತ ಮೊತ್ತವನ್ನು ನೀಡಲಾಗುವುದು. ನಂತರದ ಆಯ್ಕೆ ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡುವುದಾಗಿರಲಿ. ಬೊರ್‌ವೆಲ್‌ ಮರು ಕೊರೆಯಿಸಲು 1.50 ಲಕ್ಷ ರೂ. ಹೆಚ್ಚು ನೀಡಲು ಸಾಧ್ಯವಿಲ್ಲ. ಹಾಗಾಗಿ 700 ಅಡಿಗಿಂತ ಹೆಚ್ಚು ಕೊರೆದಿರುವ ಬೋರ್‌ವೆಲ್‌ ರೀಡ್ರಿಲ್‌ ಮಾಡಲು ಹೋಗಬೇಡಿ ಎಂದು ಸೂಚಿಸಿದರು.

ಮಾಹಿತಿ ಅಪ್‌ಲೋಡ್‌ ಮಾಡಿ: ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡುವ ಸಂಬಂಧ  ಆ್ಯಪ್ ನಲ್ಲಿ ಫೋಟೋ, ಮಹಜರು ನಡೆಸಿರುವ ಬಗ್ಗೆ ಮಾಹಿತಿ ಅಪ್‌ಲೋಡ್‌ ಮಾಡಬೇಕು, ನೀರಿನ ಮೂಲವನ್ನು ವಾರಕ್ಕೆ ಎರಡ್ಮೂರು ಬಾರಿಯಾದರೂ ಗುಣಮಟ್ಟದ ಪರೀಕ್ಷೆ ನಡೆಸಬೇಕು. ನೀರು ಸರಬರಾಜು ವಿಚಾರದಲ್ಲಿ ಆಡಿಟ್‌ ವರದಿಯಲ್ಲಿ ವ್ಯಕ್ತವಾಗಿರುವ ಆಕ್ಷೇಪಣೆಗಳನ್ನು ಗಮನ ದಲ್ಲಿಟ್ಟುಕೊಂಡು ಟ್ರಿಪ್‌ಶೀಟ್‌, ಲಾಗ್‌ಬುಕ್‌ಗಳನ್ನು ಕಡ್ಡಾಯವಾಗಿ ನಿರ್ವಹಿಸಬೇಕೆಂದು ತಿಳಿಸಿದರು.

ಎಇಇಗೆ ತರಾಟೆ: ಕಳೆದ ಏಪ್ರಿಲ್‌ನಿಂದ ಈವರೆಗೆ ಕ್ರಿಯಾಯೋಜನೆಯಲ್ಲಿ ಇಲ್ಲದೆ 126 ಬೋರ್‌ವೆಲ್‌ ಕೊರೆಯಿಸಿರುವ ಬಗ್ಗೆ ಗ್ರಾಮೀಣ ನೀರು ಸರಬರಾಜು ಇಲಾಖೆ ಪ್ರಭಾರ ಎಇಇ ಶ್ರೀನಿವಾಸ್‌ ಸಭೆಗೆ ಮಾಹಿತಿ ನೀಡಿದಾಗ ಅಸಮಾಧಾನಗೊಂಡ ಡೀಸಿ, ಕ್ರಿಯಾ ಯೋಜನೆ ಇಲ್ಲದೆ ಬೋರ್‌ವೆಲ್‌ ಕೊರೆಯಿಸದಂತೆ ಕಳೆದ ತಿಂಗಳ ಹಿಂದೆಯೇ ಸೂಚನೆ ನೀಡಿದ್ದರೂ ಇನ್ನೂ ಕೊರೆಯಿಸುತ್ತಲೇ ಇದ್ದೀರಿ, ಹಣ ಪಾವತಿ ಹೇಗೆ ಮಾಡುತ್ತೀರಿ ಎಂದು ತರಾಟೆಗೆ ತೆಗೆದುಕೊಂಡರು.

ಬೆಳಗ್ಗೆ 7ರಿಂದ ರಾತ್ರಿ 10 ಗಂಟೆಯವರೆಗೆ ವಿವಿಧ ಗ್ರಾಮಗಳಲ್ಲಿ ನೀರಿನ ಸಮಸ್ಯೆ ಬಗ್ಗೆ ತಮಗೆ ದೂರವಾಣಿ ಕರೆ ಬರುತ್ತದೆ. ನೀರಿನ ಸಮಸ್ಯೆಗೆ ಸಂಬಂಧಿಸಿದಂತೆ ಸ್ಪಂದಿಸಲು ಸಹಾಯವಾಣಿ ಆರಂಭಿಸಿ, ಕಚೇರಿ ಅವಧಿಯಲ್ಲಿ ಬಂದ ಎಲ್ಲ ಕರೆಗಳಿಗೆ ಸಂಬಂಧಿಸಿದಂತೆ ಗ್ರಾಮದ ಹೆಸರು, ಕರೆ ಮಾಡಿದವರ ಸಂಪರ್ಕ ಸಂಖ್ಯೆಯನ್ನು ದಾಖಲಿಸಿಕೊಳ್ಳಲು ವ್ಯವಸ್ಥೆ ಮಾಡುವಂತೆ ತಹಸೀಲ್ದಾರ್‌ ಹಾಗೂ ತಾಪಂ ಇಒಗಳಿಗೆ ಸೂಚಿಸಿದರು.

ಎಡೀಸಿ ಶಿವಸ್ವಾಮಿ, ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ ಎಇ ವೆಂಕಟಾಚಲಯ್ಯ, ತಾಪಂ ಇಒ, ತಹಶೀಲ್ದಾರ್‌, ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ ಎಇಇ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

8-Borderline-Personality-Disorder

Borderline Personality Disorder: ಬಾರ್ಡರ್‌ಲೈನ್‌ ಪರ್ಸನಾಲಿಟಿ ಡಿಸಾರ್ಡರ್‌

Election; ಮೋದಿ ನೇತೃತ್ವದ ‘ನವ ಭಾರತ’ಕ್ಕೆ ಮದರಸಾಗಳ ಅಗತ್ಯವಿಲ್ಲ: ಹಿಮಂತ ಬಿಸ್ವಾ ಶರ್ಮಾ

Election; ಮೋದಿ ನೇತೃತ್ವದ ‘ನವ ಭಾರತ’ಕ್ಕೆ ಮದರಸಾಗಳ ಅಗತ್ಯವಿಲ್ಲ: ಹಿಮಂತ ಬಿಸ್ವಾ ಶರ್ಮಾ

Air India Express ವಿಮಾನದ ಇಂಜಿನ್ ನಲ್ಲಿ ಬೆಂಕಿ; ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ

Air India Express ವಿಮಾನದ ಇಂಜಿನ್ ನಲ್ಲಿ ಬೆಂಕಿ; ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ

6-

Pregnancy: ಗರ್ಭಧಾರಣೆಯ ಭಾವನಾತ್ಮಕ ಅಂಶಗಳು

5-

Neuromodulation therapy : ಮಾನಸಿಕ ಕಾಯಿಲೆಗಳಿಗೆ ನ್ಯೂರೋಮಾಡ್ಯುಲೇಷನ್‌ ಚಿಕಿತ್ಸೆ

RCBvsCSK; ಧೋನಿಯ 110 ಮೀ ಸಿಕ್ಸ್ ಕಾರಣದಿಂದ ನಾವು ಗೆದ್ದೆವು..: ದಿ.ಕಾರ್ತಿಕ್ ಹೇಳಿದ್ದೇನು

RCBvsCSK; ಧೋನಿಯ 110 ಮೀ ಸಿಕ್ಸ್ ಕಾರಣದಿಂದ ನಾವು ಗೆದ್ದೆವು..: ಕಾರ್ತಿಕ್ ಹೇಳಿದ್ದೇನು

Man finds Rs 9,900 crore in his bank account

Bhadohi; ಯು.ಪಿ ವ್ಯಕ್ತಿಯ ಖಾತೆಗೆ ಬರೋಬ್ಬರಿ 9,900 ಕೋಟಿ ರೂ ಜಮೆ! ಆಗಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kolar: ಶಸ್ತ್ರಕ್ರಿಯೆ ನಡೆಸಿ ಬಾಣಂತಿ ದೇಹದಲ್ಲೇ ಬಟ್ಟೆ ಬಿಟ್ಟ ಕೋಲಾರ ಆಸ್ಪತ್ರೆ ವೈದ್ಯೆ?

Kolar: ಶಸ್ತ್ರಕ್ರಿಯೆ ನಡೆಸಿ ಬಾಣಂತಿ ದೇಹದಲ್ಲೇ ಬಟ್ಟೆ ಬಿಟ್ಟ ಕೋಲಾರ ಆಸ್ಪತ್ರೆ ವೈದ್ಯೆ?

ಸಾಲ ತೀರಿಸಲು 3 ತಿಂಗಳ ಮಗುವನ್ನೇ ಮಾರಿದ ಅಪ್ಪ!

ಸಾಲ ತೀರಿಸಲು 3 ತಿಂಗಳ ಮಗುವನ್ನೇ ಮಾರಿದ ಅಪ್ಪ!

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

8-Borderline-Personality-Disorder

Borderline Personality Disorder: ಬಾರ್ಡರ್‌ಲೈನ್‌ ಪರ್ಸನಾಲಿಟಿ ಡಿಸಾರ್ಡರ್‌

Election; ಮೋದಿ ನೇತೃತ್ವದ ‘ನವ ಭಾರತ’ಕ್ಕೆ ಮದರಸಾಗಳ ಅಗತ್ಯವಿಲ್ಲ: ಹಿಮಂತ ಬಿಸ್ವಾ ಶರ್ಮಾ

Election; ಮೋದಿ ನೇತೃತ್ವದ ‘ನವ ಭಾರತ’ಕ್ಕೆ ಮದರಸಾಗಳ ಅಗತ್ಯವಿಲ್ಲ: ಹಿಮಂತ ಬಿಸ್ವಾ ಶರ್ಮಾ

7-kmc-ramdas-pai-block

ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಲೋಕಾರ್ಪಣೆಗೊಂಡಿದೆ ನೂತನ ಡಾ|ರಾಮದಾಸ್‌ ಎಂ.ಪೈ ಬ್ಲಾಕ್‌

Air India Express ವಿಮಾನದ ಇಂಜಿನ್ ನಲ್ಲಿ ಬೆಂಕಿ; ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ

Air India Express ವಿಮಾನದ ಇಂಜಿನ್ ನಲ್ಲಿ ಬೆಂಕಿ; ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ

6-

Pregnancy: ಗರ್ಭಧಾರಣೆಯ ಭಾವನಾತ್ಮಕ ಅಂಶಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.