ಜ.8ರ ಸಾರ್ವತ್ರಿಕ ಮುಷ್ಕರಕ್ಕೆ ಕೆಪಿಆರ್‌ಎಸ್‌ ಬೆಂಬಲ


Team Udayavani, Dec 29, 2019, 3:59 PM IST

kolar-tdy-1

ಕೋಲಾರ: ಜನವರಿ 8ರಂದು ನಡೆಯಲಿರುವ ಅಖೀಲ ಭಾರತ ಸಾರ್ವತ್ರಿಕ ಮುಷ್ಕರಕ್ಕೆ ಬೆಂಬಲವಾಗಿ ಕೆಪಿಆರ್‌ಎಸ್‌ ಜಿಲ್ಲಾ ಸಮಿತಿಯಿಂದ ರೈತರು ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗೆ ಮುಷ್ಕರದ ಪತ್ರ ಕಳುಹಿಸಿದರು.

ನಗರದ ಹೊರವಲಯದ ಟಮಕದಲ್ಲಿ ಜಮಾಗೊಂಡ ಕರ್ನಾಟಕ ಪ್ರಾಂತ ರೈತ ಸಂಘದ ಕಾರ್ಯಕರ್ತರು ಬೈಕ್‌ ಮೆರವಣಿಗೆಯಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ, ಪ್ರತಿಭಟನೆ ನಡೆಸಿದ ಕೇಂದ್ರ ಕಾರ್ಮಿಕ ಸಂಘಗಳು 2020ರ ಜ.8ರಂದು ನಡೆದ ಅಖೀಲ ಭಾರತ ಸಾರ್ವತ್ರಿಕ ಮುಷ್ಕರ ಸಕ್ರಿಯವಾಗಿ ಬೆಂಬಲಿಸಬೇಕು ಎಂದು ಮನವಿ ಸಲ್ಲಿಸಿದರು.

ದೇಶಾದ್ಯಂತ ಮುಷ್ಕರ: ಕೇಂದ್ರ ಕಾರ್ಮಿಕ ಸಂಘಗಳು, ಬೆಲೆ ಏರಿಕೆ, ನಿರುದ್ಯೋಗ, ಕನಿಷ್ಠ ವೇತನ, ಬೆಂಬಲ ಬೆಲೆ, ಪಿಎಸ್‌ಇಗಳ ಖಾಸಗೀಕರಣ, ಆರೋಗ್ಯ ಮತ್ತು ಶಿಕ್ಷಣ ಸೇರಿದಂತೆ ಅಗತ್ಯ ಸೇವೆಗಳು, ರೈಲ್ವೆ ಖಾಸಗೀಕರಣ, ಆರ್‌ಸಿಇಪಿಗೆ ಸಹಿ ಹಾಕುವ ಅಪಾಯ, ಅಲ್ಪಸಂಖ್ಯಾತರು, ಮಹಿಳೆಯರು, ಮಕ್ಕಳ ದಲಿತರು ಮತ್ತು ಆದಿವಾಸಿಗಳು ಮೇಲಿನ ದೌರ್ಜನ್ಯ ವಿರೋದಿಸುವ ಇತ್ಯಾದಿ ಪ್ರಶ್ನೆಗಳ ಆಧಾರದಲ್ಲಿ ದೇಶಾದ್ಯಂತ ಮುಷ್ಕರ ನಡೆಯಲಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಹೆಚ್ಚುತ್ತಿದೆ ಬಡತನ, ಹಸಿವು: ಸಾರ್ವತ್ರಿಕ ಮುಷ್ಕರ ಭಾರತದ ಜನರ ನೈಜ ಸಮಸ್ಯೆಗಳ ವಿರುದ್ಧ ರೈತರ ಆತ್ಮಹತ್ಯೆ ಅಡೆತಡೆಯಿಲ್ಲದೆ ಮುಂದುವರಿದಿದ್ದು, ಕೃಷಿ ಬಿಕ್ಕಟ್ಟು ತೀವ್ರಗೊಳ್ಳುತ್ತಿದೆ. ಕೃಷಿ ವೆಚ್ಚಗಳು ಹೆಚ್ಚಾಗು ತ್ತಿರುವುದರಿಂದ ಆದಾಯಗಳು ಕುಸಿಯುತ್ತಿವೆ. ಬೆಲೆಗಳು ಕೃಷಿಗೆ ಬೆಂಬಲವಾಗಿಲ್ಲ. ಎಂಜಿಎನ್‌ಆರ್‌ ಇಜಿಎ ಕಳಚಲಾಗುತ್ತಿದೆ. ಬೆಳೆ ವಿಮಾ ಯೋಜನೆಯು ಕಾರ್ಪೊರೇಟ್‌ ಕಂಪನಿಗಳಿಗೆ ಲಾಭ ಹೆಚ್ಚಿಸಲು ಸಹಾಯ ಮಾಡುತ್ತಿದೆ. ಪಿಎಂ-ಕಿಸಾನ್‌ ಅಡಿಯಲ್ಲಿನ ಸಣ್ಣ ಮೊತ್ತವೂ ಬಹುಪಾಲು ಜನರಿಗೆ ಲಭ್ಯವಿಲ್ಲ. ಬಡತನ ಮತ್ತು ಹಸಿವು ಬೆಳೆಯುತ್ತಿವೆ ಎಂದರು

ಕೆಪಿಆರ್‌ಎಸ್‌ ಜಿಲ್ಲಾಧ್ಯಕ್ಷ ಪಿ.ಆರ್‌.ಸೂರ್ಯ ನಾರಾಯಣ್‌ ಮಾತನಾಡಿ, ಎಲ್ಲ ವರ್ಗದವರು ಬಿಜೆಪಿ ಸರ್ಕಾರದ ನೀತಿಗಳ ವಿರುದ್ಧ ತೀವ್ರ ಅಸಮಾ ಧಾನ ಮತ್ತು ಆಕ್ರೋಶವಿದೆ. ರೈತರ ಸಮಸ್ಯೆ ಎತ್ತಿ ಹಿಡಿಯಲು ಎಲ್ಲ ಪ್ರಯತ್ನಗಳನ್ನು ಮಾಡಬೇಕು. ಕಳೆದ ಚುನಾವಣೆಯ ನಂತರ ದೇಶಾದ್ಯಂತದ ಮೊದಲ ಪ್ರಮುಖ ಮುಷ್ಕರದೊಂದಿಗೆ ಗ್ರಾಮೀಣ ಹರತಾಳು ಆಚರಿಸಲಾಗುವುದು. ಇದಕ್ಕೆ ಸಹಕರಿಸಬೇಕೆಂದರು.

ಕೆಪಿಆರ್‌ಎಸ್‌ ಜಿಲ್ಲಾ ಕಾರ್ಯದರ್ಶಿ ಟಿ.ಎಂ. ವೆಂಕಟೇಶ್‌ ಮಾತನಾಡಿ, ನರೇಂದ್ರ ಮೋದಿಯವರ ಕಾರ್ಪೊರೇಟ್‌ ಪರ ನೀತಿಗಳು ಬಿಜೆಪಿ ಸರ್ಕಾರವನ್ನು ಮುನ್ನಡೆಸಿದವು. ಕೃಷಿಕರ ಜೀವನೋಪಾಯ ಉದ್ದೇಶ ಪೂರ್ವಕವಾಗಿ ನಾಶಪಡಿಸಲು ಹೊರಟಿದೆ. ಬೆಳೆ ಗಳನ್ನು ಬೆಳೆಸುವವರು ರೂ.12,000 ಕೋಟಿಗಿಂತ ಹೆಚ್ಚಿನ ನಷ್ಟವನ್ನು ಹೊಂದಿದ್ದಾರೆಂದು ಅಂದಾಜಿಸಲಾಗಿದೆ. ವಿನಾಶಕಾರಿ ಹಾದಿಯಿಂದ ಹಿಂದೆ ಸರಿಯುವಂತೆ ಮತ್ತು ರೈತರಿಗೆ ಆಗುವ ನಷ್ಟವನ್ನು ಸರಿ ದೂಗಿಸಲು ಬಿಜೆಪಿ ಸರ್ಕಾರವನ್ನು ಒತ್ತಾಯಿಸಿದರು. ಕಾರ್ಪೊರೇಟ್‌ ವಲಯದ ಆಜ್ಞೆಯ ಮೇರೆಗೆ ಬಿಜೆಪಿ ಸರ್ಕಾರ ಆಕ್ರಮಣಕಾರಿಯಾಗಿ ಅನುಸರಿಸು ತ್ತಿರುವ ರೈತ ವಿರೋಧಿ  ಶಾಸನಗಳು ಮತ್ತು ಮುಕ್ತ ವ್ಯಾಪಾರ ಒಪ್ಪಂದಗಳ ವಿರುದ್ಧ ಜಾಗರೂಕರಾಗಿರಲು ಎಐಕೆಎಸ್‌ ಜನತೆಗೆ ಕರೆ ನೀಡುತ್ತದೆ. ಕೋಮುವಾದಿ ಶಕ್ತಿಗಳ ವಿರುದ್ಧ ವಿಶಾಲವಾದ ಐಕ್ಯತೆ ನಿರ್ಮಿಸಿ ದೇಶವನ್ನು ಕೋಮು ಧ್ರುವೀಕರಿಸುವ ಪ್ರಯತ್ನಗಳನ್ನು ಎದುರಿಸಲಾಗುವುದು ಎಂದರು.

ಕೆಪಿಆರ್‌ಎಸ್‌ ಜಿಲ್ಲಾ ಉಪಾಧ್ಯಕ್ಷ ಕೃಷ್ಣೇಗೌಡ, ಪಿ.ಆರ್‌.ನವೀನ್‌, ಕುರ್ಕಿ ದೇವರಾಜ್‌, ಗಂಗಮ್ಮ, ಸಿ.ಮುನಿಸ್ವಾಮಿಗೌಡ, ತಾಲೂಕು ಅಧ್ಯಕ್ಷ ಎನ್‌.ಎನ್‌. ಶ್ರೀರಾಮ್‌, ಕಾರ್ಯದರ್ಶಿ ನಾರಾಯಣರೆಡ್ಡಿ, ಮುಖಂಡರಾದ ಪಿ.ವಿ.ರಮಣ್‌, ಮಾಲೂರು ಅಶೋಕ್‌,ವೆಂಕಟೇಶ್‌ ವೆಂಕಟಪ್ಪ ಭಾಗವಹಿಸಿದ್ದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.