ಕಾರ್ಮಿಕ, ರೈತನ ಪುತ್ರಿಯರು ಟಾಪರ್‌

ದ್ವಿತೀಯ ಪಿಯುಸಿ ಕಲಾ ವಿಭಾಗದಲ್ಲಿ ಅಂಜಲಿ, ಕೋಮಲಾ ಸಾಧನೆ, ಕಾಲೇಜು ಶಿಕ್ಷಕರಿಂದ ಅಭಿನಂದನೆ

Team Udayavani, Jul 16, 2020, 12:09 PM IST

ಕಾರ್ಮಿಕ, ರೈತನ ಪುತ್ರಿಯರು ಟಾಪರ್‌

ಕೋಲಾರ: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಕಲಾ ವಿಭಾಗದಲ್ಲಿ ನಗರದ ಸರ್ಕಾರಿ ಬಾಲಕಿಯರ ಕಾಲೇಜಿನ ಇಬ್ಬರು ಹೆಣ್ಣು ಮಕ್ಕಳು ಜಿಲ್ಲೆಗೆ ಮೊದಲಿಗರಾಗಿ, ಬಡತನ ಸಾಧನೆಗೆ ಅಡ್ಡಿಯಾಗದು ಎಂಬುದನ್ನು ಸಾಕ್ಷೀಕರಿಸಿದ್ದಾರೆ. ನಗರದ ಬಾಲಕಿಯರ ಪಿಯು ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಎ.ವಿ.ಅಂಜಲಿ ಮತ್ತು ಎಸ್‌.ಎನ್‌.ಕೋಮಲಾ ಸರ್ಕಾರಿ ಸರ್ಕಾರಿ ಕಾಲೇಜಲ್ಲಿ ಓದಿ ಸಾಧನೆ ಮಾಡಿದ್ದಾರೆ.

ಅಂಗಡಿ ಕೂಲಿಯಿಂದ ಜೀವನ ನಿರ್ವಹಣೆ: ತಾಲೂಕಿನ ಅರಹಳ್ಳಿ ಗ್ರಾಮದ ವೆಂಕಟೇಶ್‌ ಮತ್ತು ವೆಂಕಟಲಕ್ಷ್ಮೀ ದಂಪತಿಗಳ ಮೂವರು ಮಕ್ಕಳಲ್ಲಿ 2ನೇಯವಳಾದ ಎ.ವಿ.ಅಂಜಲಿ, ದ್ವಿತೀಯ ಪಿಯು ಕಲಾ ವಿಭಾಗದಲ್ಲಿ 568 ಅಂಕ ಗಳಿಸಿ, ಜಿಲ್ಲೆಗೆ ಮೊದಲಿಗರಾಗಿದ್ದಾರೆ. ಪ್ರೌಢ ಶಾಲಾ ವ್ಯಾಸಂಗವನ್ನು ಅನುದಾನಿತ ಸಬರಮತಿ ಪ್ರೌಢಶಾಲೆಯಲ್ಲಿ ಮಾಡಿದ ಈ ವಿದ್ಯಾರ್ಥಿನಿ ಎಸ್ಸೆಸ್ಸೆಲ್ಸಿಯಲ್ಲಿ 510 ಅಂಕ ಗಳಿಸಿದ್ದರು. ತಂದೆ ನಗರದ ಹಾರ್ಡ್‌ವೇರ್‌ ಅಂಗಡಿ ಯೊಂದರಲ್ಲಿ ಕೆಲಸ ಮಾಡುತ್ತಿದ್ದು, ತಾಯಿ ಗೃಹಿಣಿ. ಬಡತನದಿಂದಾಗಿ ಖಾಸಗಿ ಕಾಲೇಜು ಅಥವಾ ವಿಜ್ಞಾನ ವಿಭಾಗಕ್ಕೆ ಸೇರದೇ ಸರ್ಕಾರಿ ಬಾಲಕಿಯರ ಕಾಲೇಜಿನಲ್ಲಿ
ಕಲಾ ವಿಭಾಗ ಆರಿಸಿಕೊಂಡು ಸಾಧನೆ ಮಾಡಿದ್ದಾರೆ, ಮುಂದೆ ಕೆಎಎಸ್‌ ಪರೀಕ್ಷೆ ಎದುರಿಸುವ ತವಕ ಹೊಂದಿದ್ದಾರೆ.

ಮಗಳ ಓದಿಗೆ ಅಡಚಣೆಯಾಗದಂತೆ ತಂದೆ ವೆಂಕಟೇಶ್‌ ದ್ವಿತೀಯ ಪಿಯುಸಿಗೆ ಬರುತ್ತಿದ್ದಂತೆ ಮನೆಯಲ್ಲಿ ಟಿ.ವಿ. ಮಾರಾಟ ಮಾಡಿ, ತಾವೂ ಮನರಂಜನೆಯಿಂದ
ವಂಚಿತರಾಗಿದ್ದಾಗಿ ತಿಳಿಸಿದರು. ಬೆಳಗ್ಗೆ 2 ಗಂಟೆ ಹಾಗೂ ರಾತ್ರಿ 6 ರಿಂದ 10 ಗಂಟೆಯವರೆಗೂ ಓದುತ್ತಿದ್ದುದಾಗಿ ತಿಳಿಸುವ ಅಂಜಲಿ, ದ್ವಿತೀಯ ಪಿಯುಸಿಯಲ್ಲಿ ಕನ್ನಡ- 97, ಇಂಗ್ಲಿಷ್‌-82, ಇತಿಹಾಸ-97, ಅರ್ಥ ಶಾಸ್ತ್ರ-94, ಸಮಾಜಶಾಸ್ತ್ರ-99 ಹಾಗೂ ರಾಜ್ಯ ಶಾಸ್ತ್ರದಲ್ಲಿ 90 ಅಂಕ ಗಳಿಸಿದ್ದಾರೆ.

ರೈತನ ಮಗಳು ಜಿಲ್ಲೆಗೆ ದ್ವಿತೀಯ: ತಾಲೂಕಿನ ರಾಮಪುರ ನಿವಾಸಿ ವೃತ್ತಿಯಲ್ಲಿ ಕೃಷಿಕರಾದ ನಂಜುಂಡಪ್ಪ, ಲಕ್ಷ್ಮಿದೇವಮ್ಮ ದಂಪತಿಯ ಪುತ್ರಿಯಾದ ಎಸ್‌.ಎನ್‌.ಕೋಮಲಾ 551 ಅಂಕ ಗಳಿಸುವ ಮೂಲಕ ಜಿಲ್ಲೆಗೆ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ಪ್ರೌಢ ಶಿಕ್ಷಣವನ್ನು ಹುತ್ತೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಮುಗಿಸಿರುವ ಈ ವಿದ್ಯಾರ್ಥಿನಿಯು, ಮುಂದೆ ಸರ್ಕಾರಿ ಮಹಿಳಾ ಕಾಲೇಜಿನಲ್ಲೇ ಪದವಿ, ಸ್ನಾತಕೋತ್ತರ ಪದವಿ ಮುಗಿಸಿ ಕೆಎಎಸ್‌ ಪರೀಕ್ಷೆ ಬರೆಯುವ ಆಶಯ ವ್ಯಕ್ತಪಡಿಸಿದ್ದಾರೆ. ಕಲಾವಿಭಾಗ ಆಯ್ಕೆ ಮಾಡಿಕೊಂಡಿದ್ದಕ್ಕೆ ಖುಷಿ ಇದೆ, ದಿನಕ್ಕೆ 6 ಗಂಟೆ ಓದುತ್ತಿದ್ದುದಾಗಿ ಈಕೆ ಹೇಳಿದ್ದಾರೆ.

ಈ ವಿದ್ಯಾರ್ಥಿನಿ ಕನ್ನಡ-98, ಇಂಗ್ಲಿಷ್‌ -81, ಇತಿಹಾಸ-95, ಅರ್ಥಶಾಸ್ತ್ರ-87, ಸಮಾಜಶಾಸ್ತ್ರ-96, ರಾಜ್ಯಶಾಸ್ತ್ರದಲ್ಲಿ 94 ಅಂಕ ಪಡೆದಿದ್ದಾರೆ. ಈ ಸಾಧಕ ವಿದ್ಯಾರ್ಥಿನಿಯ ರನ್ನು ಕಾಲೇಜಿನ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಕೃಷ್ಣಮೂರ್ತಿ, ಸದಸ್ಯ ವೇಣು, ಪ್ರಾಂಶುಪಾಲ ಬಾಲಕೃಷ್ಣ, ಉಪನ್ಯಾಸಕರಾದ ಗೋಪಾಲಕೃಷ್ಣನ್‌, ಆನಂದಕುಮಾರ್‌, ಅಶ್ವತ್ಥಗೌಡ, ಟಿ.ಚಂದ್ರಪ್ಪ, ದಿನಕರ್‌, ವೆಂಕಟೇಶ್‌, ಉದಯಕುಮಾರ್‌ ಅಭಿನಂದಿಸಿದ್ದಾರೆ.

ಟಾಪ್ ನ್ಯೂಸ್

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.