ಅನುದಾನ ಕೊರತೆ : ತ್ಯಾಜ್ಯ ಘಟಕ ಅಪೂರ್ಣ


Team Udayavani, Aug 3, 2023, 3:42 PM IST

tdy-18

ಮುಳಬಾಗಿಲು: ತಾಲೂಕಿನ ಮುಷ್ಟೂರು ಗ್ರಾ.ಪಂ. ವ್ಯಾಪ್ತಿಯಲ್ಲಿ 9 ಹಳ್ಳಿಗಳಲ್ಲಿ ಸುಮಾರು 7500-8000 ಜನರು ವಾಸವಾಗಿದ್ದಾರೆ. ಪ್ರತಿ ನಿತ್ಯ ಉತ್ಪತ್ತಿಯಾಗುವ ಕಸವನ್ನು ವಿಲೇವಾರಿ ಮಾಡಲು ಕಸ ವಿಲೇವಾರಿ ಮಾಡಲು ಸರ್ಕಾರ ಮೂರು ವರ್ಷಗಳ ಹಿಂದೆ ತ್ಯಾಜ್ಯ ಘಟಕ ನಿರ್ಮಾಣಕ್ಕೆ ಮುಷ್ಟೂರು ಗ್ರಾಮದ ಅಂಚಿನ ಲ್ಲಿರುವ ನಗವಾರದ ಮಾಣಿಕ್ಯನ ಕೆರೆಯಲ್ಲಿ ಸ.ನಂ.416 ರಲ್ಲಿ 1 ಎಕರೆ ಜಮೀನನ್ನು ಮಂಜೂರು ಮಾಡಿದೆ.

ಗುತ್ತಿಗೆದಾರ ಮುನಿಯಪ್ಪ ನರೇಗಾ ಯೋಜನೆಯಡಿ 11.80 ಲಕ್ಷ ವೆಚ್ಚದಲ್ಲಿ ತ್ಯಾಜ್ಯ ಘಟಕದ ಕಟ್ಟಡ ನಿರ್ಮಾಣ ಕಾಮಗಾರಿ ಪ್ರಾರಂಭಿಸಿದ್ದರು. ಆದರೆ, ಗುತ್ತಿಗೆದಾರನಿಗೆ ನಿಗದಿತ ಕಾಲಕ್ಕೆ ಹಣ ನೀಡದೇ ಇದ್ದಿದ್ದರಿಂದ 6 ಲಕ್ಷ ಹಣ ಪಡೆದು ಕಾಮಗಾರಿ ಅರ್ಧಕ್ಕೆ ನಿಲ್ಲಿಸಿದ್ದಾರೆ. ಇದರಿಂದ ಜನರಿಗೆ ಅನುಕೂಲವಾಗಬೇಕಾದ ತ್ಯಾಜ್ಯ ವಿಲೇವಾರಿ ಘಟಕ ಕಾಮಗಾರಿ ಒಂದುವರೆ ವರ್ಷದಿಂದ ಅಪೂರ್ಣಗೊಂಡಿದೆ. ಗ್ರಾ.ಪಂ.ಗೆ ವರ್ಗಾವಣೆಗೊಂಡ ಪಿಡಿಒ ಮತ್ತೂಬ್ಬ ಗುತ್ತಿಗೆದಾರ ಮುನಿಯಪ್ಪ ನವರ ಮೂಲಕ ಉಳಿಕೆ 5.80 ಲಕ್ಷ ಹಣದಲ್ಲಿ ಕಾಮಗಾರಿ ಪ್ರಾರಂಭಿಸಲು ಅಣಿಯಾಗಿದ್ದಾರೆ. ಅಲ್ಲದೇ ಮುಷ್ಟೂರು ಗ್ರಾಪಂ ವ್ಯಾಪ್ತಿಯ ಕಸ ವಿಲೇವಾರಿ ಘಟಕದ ಕಾಮಗಾರಿ ಪೂರ್ಣಗೊಳ್ಳದೆ ಕಾರಣ ಹಳ್ಳಿಗಳಲ್ಲಿ ಕಸ ವಿಲೇವಾರಿ ಮಾಡದೇ ಎಲ್ಲದರಲ್ಲಿ ಕಸ ಕೊಳೆಯುತ್ತಿದೆ ಎನ್ನುವುದು ಸಾರ್ವಜನಿಕರ ಆರೋಪ.

ಕುಡುಕರ ತಾಣವಾದ ಕಟ್ಟಡ: ಕಸ ವಿಲೇವಾರಿ ಘಟಕದ ಕಟ್ಟಡಕ್ಕೆ ಸುತ್ತಲೂ ಗೋಡೆಗಳನ್ನು ಕಟ್ಟಿರುವುದರಿಂದ ಕುಡುಕರು ಕಟ್ಟಡದ ಒಳಗೆ ನೂರಾರು ಮದ್ಯದ ಮತ್ತು ನೀರಿನ ಖಾಲಿ ಬಾಟಲ್‌ಗ‌ಳು, ಹಾಗೂ ನೀರಿನ ಪ್ಲಾಸ್ಟಿಕ್‌ ಕವರ್‌ಗಳನ್ನು ಎಲ್ಲೆಂದರಲ್ಲಿ ಬಿಸಾಡಲಾಗಿದೆ. ಗ್ರಾ.ಪಂ. ಅಧಿಕಾರಿಗಳಿಗೆ ತಿಳಿಸಿದರೆ ಯಾರೊಬ್ಬರೂ ಇತ್ತ ಕಡೆ ಭೇಟಿ ನೀಡಿಲ್ಲವೆಂದು ಗ್ರಾಮಸ್ಥ ರಾಜಪ್ಪ ಆರೋಪಿಸಿದ್ದಾರೆ. ಈಚೆಗೆ ನರೇಗಾದ ವತಿಯಿಂದ ಗ್ರಾಪಂ ನೂತನ ಕಟ್ಟಡವನ್ನು ನಿರ್ಮಾಣ ಮಾಡುವ ಸಮಯದಲ್ಲೇ ತ್ಯಾಜ್ಯ ಘಟಕದ ಕಾಮಗಾರಿ ಕೈ ಗೆತ್ತಿಕೊಳ್ಳಲಾಯಿತು. ಎರಡನ್ನೂ ಒಂದೇ ಬಾರಿ ಉದ್ಘಾಟಿಸಲು ಸೂಚಿಸಲಾಗಿತ್ತು. ಆದರೆ ಪಂಚಾಯತಿ ಕಟ್ಟಡ ಉದ್ಘಾಟನೆ ಆಗಿ ಸುಮಾರು ಒಂದು ವರ್ಷ ಆಗುತ್ತಿದ್ದರೂ, ತ್ಯಾಜ್ಯ ಘಟಕದ ಕಟ್ಟಡ ಇನ್ನೂ ಪೂರ್ಣವಾಗದೆ ಅರ್ಧಕ್ಕೆ ನಿಂತಿದೆ ಎನ್ನುವುದು ಸಾರ್ವಜನಿಕರ ಆರೋಪವಾಗಿದೆ.

ಎಲ್ಲೆಂದರಲ್ಲಿ ಕೊಳೆಯುತ್ತಿರುವ ಕಸ: ಇನ್ನು ಎರಡು ಮೂರು ವರ್ಷಗಳಿಂದಲೂ ಘನ ಮತ್ತು ದ್ರವ ತ್ಯಾಜ್ಯ ಘಟಕದ ಕಾಮಗಾರಿ ಪೂರ್ಣಗೊಳ್ಳದೇ ಇರುವುದರಿಂದ ಎರಡೂ ಗ್ರಾ.ಪಂ.ಗಳ ವ್ಯಾಪ್ತಿಯ ಎಲ್ಲಾ ಹಳ್ಳಿಗಳಲ್ಲಿ ಕಸ ಎಲ್ಲೆಂದರಲ್ಲಿ ಕೊಳೆಯುತ್ತಿದ್ದರೂ, ಕಟ್ಟಡ ಕಾಮಗಾರಿಗಳ ನಿರ್ಮಾಣಕ್ಕೆ ಹಣ ಬಿಡುಗಡೆಯಾಗದೇ ಇರುವುದರಿಂದ ತ್ಯಾಜ್ಯ ಘಟಕಗಳು ಕೆಲವು ವರ್ಷಗಳಿಂದ ಅಪೂರ್ಣಗೊಂಡು ಕಾಮಗಾರಿ ನನೆಗುದಿಗೆ ಬಿದ್ದಿದೆ ಎನ್ನಲಾಗುತ್ತಿದೆ.

ಅನೈತಿಕ ಚಟುವಟಿಕೆಗಳ ತಾಣ: ಇನ್ನು ಕಾಮಗಾರಿ ಕಟ್ಟಡದ ಗೋಡೆಗಳನ್ನು ಮಾತ್ರ ನಿರ್ಮಿಸಿ ಗೋಡೆಗಳ ಮೇಲೆ ಕಬ್ಬಿಣದ ಸಲಾಕೆಗಳನ್ನು ಮಾತ್ರ ಅಳವಡಿಸಲಾಗಿದೆ.ಇನ್ನು ಗೋಡೆಗಳಿಗೆ ಸ್ವಲ್ಪ ಮಟ್ಟಿಗೆ ಸಿಮೆಂಟ್‌ ಪ್ಲಾಸ್ಟಿಂಗ್‌ ಮಾಡಲಾಗಿದ್ದು ಮಿಕ್ಕ ಎಲ್ಲಾ ಗೋಡೆಗಳು ಪ್ಲಾಸ್ಟಿಂಗ್‌ ಇಲ್ಲದೆ ಇಟ್ಟಿಗೆಯ ಗೋಡೆಗಳು ಮಳೆಗೆ ನೆನೆಯುತ್ತಿದೆ.ಕಟ್ಟಡದ ಒಳಗಡೆ ಒಣ ಮತ್ತು ಹಸಿ ಕಸಕ್ಕೆ ಗೋಡೆಗಳನ್ನು ನಿರ್ಮಿಸಿ ಪ್ರತ್ಯೇಕಿಸುವುದನ್ನು ನಿರ್ಮಿಸಬೇಕಾಗಿದೆ. ಆದರೆ ಕಾಮಗಾರಿ ಪೂರ್ಣವಾಗದ ಕಾರಣ ವಿಲೇವಾರಿ ಘಟಕದ ಕಟ್ಟಡ ಪುಂಡ ಪೋಕರಿಗಳ ಅನೈತಿಕ ಚಟುವಟಿಕೆಗಳ ತಾಣವಾಗಿದೆ.

ಕಾಮಗಾರಿ ಮಾಡುತ್ತಿರುವ ಗ್ರಾಮ ಪಂಚಾಯತಿ ಸದಸ್ಯ ಚಂದ್ರಶೇಖರ್‌ ಅವರಿಗೆ ಇನ್ನು ಬಿಲ್‌ ಆಗಿಲ್ಲ ಎಂದು ತಿಳಿದು ಬಂದಿದ್ದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು. -ಗುರುಪಾದಪ್ಪ ಸಂತೋಷ್‌ ಕುಂಬಾರ್‌, ಪಿಡಿಒ ಮುಷ್ಟೂರು

-ಎಂ.ನಾಗರಾಜಯ್ಯ

ಟಾಪ್ ನ್ಯೂಸ್

Vijayapura ಮರ್ಯಾದಾ ಹತ್ಯೆ: ಇಬ್ಬರಿಗೆ ಗಲ್ಲು,ಐವರಿಗೆ ಜೀವಾವಧಿ ಶಿಕ್ಷೆ

Vijayapura ಮರ್ಯಾದಾ ಹತ್ಯೆ: ಇಬ್ಬರಿಗೆ ಗಲ್ಲು,ಐವರಿಗೆ ಜೀವಾವಧಿ ಶಿಕ್ಷೆ

Dharwad; ವಾರಂಟಿ ಇಲ್ಲದ ಕಾಂಗ್ರೆಸ್ ನ‌ ಗ್ಯಾರಂಟಿ ನಂಬಬೇಡಿ: ಅಣ್ಣಾಮಲೈ

Dharwad; ವಾರಂಟಿ ಇಲ್ಲದ ಕಾಂಗ್ರೆಸ್ ನ‌ ಗ್ಯಾರಂಟಿ ನಂಬಬೇಡಿ: ಅಣ್ಣಾಮಲೈ

Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್‌ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ

Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್‌ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ

1–dsdsadd

Honnavar; ಖಾಸಗಿ ಬಸ್‌ ಪಲ್ಟಿ: 2 ಸಾವು, 45ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

1-qewqeqweqw

CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ

1-assas-aa

Rae Bareli ರಣಕಣ; ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ: ಗೆಲುವು ಸುಲಭವೇ?

Water Supply

Water scarcity; ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ನೀರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vijayapura ಮರ್ಯಾದಾ ಹತ್ಯೆ: ಇಬ್ಬರಿಗೆ ಗಲ್ಲು,ಐವರಿಗೆ ಜೀವಾವಧಿ ಶಿಕ್ಷೆ

Vijayapura ಮರ್ಯಾದಾ ಹತ್ಯೆ: ಇಬ್ಬರಿಗೆ ಗಲ್ಲು,ಐವರಿಗೆ ಜೀವಾವಧಿ ಶಿಕ್ಷೆ

Dharwad; ವಾರಂಟಿ ಇಲ್ಲದ ಕಾಂಗ್ರೆಸ್ ನ‌ ಗ್ಯಾರಂಟಿ ನಂಬಬೇಡಿ: ಅಣ್ಣಾಮಲೈ

Dharwad; ವಾರಂಟಿ ಇಲ್ಲದ ಕಾಂಗ್ರೆಸ್ ನ‌ ಗ್ಯಾರಂಟಿ ನಂಬಬೇಡಿ: ಅಣ್ಣಾಮಲೈ

Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್‌ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ

Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್‌ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ

1–dsdsadd

Honnavar; ಖಾಸಗಿ ಬಸ್‌ ಪಲ್ಟಿ: 2 ಸಾವು, 45ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

accident

Yellapur: ಟಿಪ್ಪರ್ ಗೆ ಢಿಕ್ಕಿಯಾಗಿ ಬೈಕ್ ಸಹಸವಾರೆ ಬಾಲಕಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.