ಬಾರದ ಮುಂಗಾರು ಮಳೆ, ಬಿತ್ತನೆಗೆ ಹಿನ್ನಡೆ

ತುಂತುರು ಮಳೆಯ ಹದದಲ್ಲೇ ಕೆಲ ರೈತರಿಂದ ಬಿತ್ತನೆ • ಮತ್ತೆ ಆತಂಕಕ್ಕೆ ಸಿಲುಕಿದ ಅನ್ನದಾತ

Team Udayavani, Jul 23, 2019, 1:36 PM IST

kolar-tdy-1

ಮಾಲೂರು ತಾಲೂಕಿನ ದೊಡ್ಡಶಿವಾರದ ರೈತ ತುಂತುರು ಮಳೆಯ ಹದಕ್ಕೇ ದ್ವಿದಳ ಧಾನ್ಯ ಬೀಜ ಬಿತ್ತನೆ ಮಾಡಿದರು.

ಮಾಲೂರು: ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಮಳೆ ಕೊರತೆಯಿಂದ ಸಕಾಲದಲ್ಲಿ ಕೃಷಿ ಚಟುವಟಿಕೆಗಳು ಆರಂಭವಾಗದೇ ತಾಲೂಕಿನ ರೈತರು ಆತಂಕಗೊಂಡಿದ್ದಾರೆ. ನಿಗದಿಯಂತೆ ಮಳೆಯಾಗಿದ್ದರೆ ಈ ವೇಳೆಗಾಗಲೇ ಶೇ.70 ಬಿತ್ತನೆ ಕಾರ್ಯ ಮುಗಿಯಬೇಕಾಗಿತ್ತು. ಆದರೆ, ಮಳೆ ಕೈಕೊಟ್ಟಿರುವ ಕಾರಣ ರೈತರಿಗೆ ಆದಾಯ ತಂದುಕೊಡುವ ಮತ್ತು ವರ್ಷಪೂರ್ತಿ ಜನ ಜಾನುವಾರುಗಳಿಗೆ ಆಹಾರ ಒದಗಿಸಬೇಕಿದ್ದ ದ್ವಿದಳ, ಏಕದಳ ಹಾಗೂ ಮಳೆಯಾಶ್ರಿತ ಬೆಳೆಗಳ ಬಿತ್ತನೆಗೆ ಹಿನ್ನಡೆಯಾಗುತ್ತಿದೆ.

ಮುಂಗಾರು ಪೂರ್ವದಲ್ಲಿ ಉತ್ತಮ ಮಳೆಯಾದ ಕಾರಣ ರೈತರು ಜಮೀನನ್ನು ಹದ ಮಾಡಿ, ಬಿತ್ತನೆಗೆ ಸಿದ್ಧಮಾಡಿಕೊಂಡಿದ್ದಾರೆ. ಆದರೆ, ಮಳೆಯ ಅಭಾವದಿಂದ ಬಿತ್ತನೆಗೆ ಹಿನ್ನಡೆಯಾಗಿದೆ. ತಾಲೂಕಿನಲ್ಲಿ ಈ ವೇಳೆಗೆ ನೆಲಗಡಲೆ 400 ಹೆಕ್ಟೇರ್‌ನಲ್ಲಿ ಬಿತ್ತನೆಯಾಗಬೇಕಿತ್ತು. ಆದರೆ, ಮಳೆ ಅಭಾವದಿಂದ 204 ಹೆಕ್ಟೇರ್‌ನಲ್ಲಿ ಮಾತ್ರ ನಡೆದಿದೆ. ತೊಗರಿ 77 ಹೆಕ್ಟೇರ್‌ನಲ್ಲಿ ಬಿತ್ತನೆ ಮಾಡಲಾಗಿದೆ.

ಬಿತ್ತನೆ ಬೀಜ, ಗೊಬ್ಬರ ದಾಸ್ತಾನು: ಜೂನ್‌ ಅಂತ್ಯಕ್ಕೆ 69.9 ಮಿಮೀ ಮಳೆಯಾಗಬೇಕಾಗಿತ್ತು. ಆದರೆ, ಆಗಿಲ್ಲ. ಅದರೂ ಕೆಲವು ರೈತರು ಗಾಳಿ ಮಧ್ಯೆ ಆಗಾಗ ಬೀಳುವ ತುಂತುರು ಮಳೆಯ ಹದದಲ್ಲೇ ಬಿತ್ತನೆ ಮಾಡಲು ಮುಂದಾಗಿದ್ದಾರೆ. ಕಸಬಾ, ಟೇಕಲ್, ಮಾಸ್ತಿ, ಲಕ್ಕೂರು ರೈತ ಸಂಪರ್ಕ ಕೇಂದ್ರಗಳಲ್ಲಿ ಈಗಾಗಲೇ 100 ಕ್ವಿಂಟಲ್ ನೆಲಗಡಲೆ, 15 ಕ್ವಿಂಟಲ್ ತೊಗರಿ, 5 ಕ್ವಿಂಟಲ್ ಅಲಸಂದಿ, ರಾಗಿ 202 ಕ್ವಿಂಟಲ್, ಪೋಷಕಾಂಶಗಳಾದ ಬೋರಾನ್‌, ಎರೆಹುಳು, ಜಿಪ್ಸಂ, ಜೀಂಕ್‌ ಗೊಬ್ಬರನ್ನು ದಾಸ್ತಾನು ಮಾಡಲಾಗಿದೆ.

ತುಂತುರು ಮಳೆಯಲ್ಲೇ ಬಿತ್ತನೆ: ತೊಗರಿ ಜುಲೈ ಅಂತ್ಯದವರೆಗೆ, ರಾಗಿಯನ್ನು ಆಗಸ್ಟ್‌ವರೆಗೂ ಬಿತ್ತನೆ ಮಾಡಲು ಕಲಾವಕಾಶವಿದೆ. ಆದರೆ, ಆಷಾಢ ಗಾಳಿ ಜೋರಾಗಿರುವ ಈ ಸಮಯದಲ್ಲಿ ಧಾರಾಕಾರವಾಗಿ ಮಳೆ ಬರುವುದು ಕಷ್ಟ ಎಂಬ ಆತಂಕ ರೈತರನ್ನು ಕಾಡುತ್ತಿದೆ. ಆದರೆ, ಕೆಲವು ರೈತರು ಎರಡು ಮೂರು ದಿನಗಳಿಂದ ತಾಲೂಕಿನ ಕೆಲವು ಪ್ರದೇಶಗಳಲ್ಲಿ ಬೀಳುತ್ತಿರುವ ತುಂತುರು ಮಳೆಯಲ್ಲೇ ಕಾರಿಅವರೆ, ಅಲಸಂದಿ ಬಿತ್ತನೆ ಮಾಡಿದ್ದು, ಅವರೂ ಮಳೆಯನ್ನೇ ಎದುರು ನೋಡುತ್ತಿದ್ದಾರೆ.

ಈಬಾರಿಯೂ ಆತಂಕ: ಕಳೆದ ವರ್ಷ ಪ್ರಸಕ್ತ ಸಾಲಿಗಿಂತಲೂ ಹೆಚ್ಚಿನ ಬಿತ್ತನೆಯಾಗಿತ್ತಾದರೂ ಕಾಳು ಕಟ್ಟುವ ಸಮಯಲ್ಲಿ ಹಿಂಗಾರು ಮಳೆ ಕೈಕೊಟ್ಟಿದ್ದರಿಂದ ಬೆಳೆ ಒಣಗಿ, ನಿರೀಕ್ಷಿತ ಫ‌ಸಲು ಕೈಸೇರದ ಕಾರಣ ರೈತರು ತೀವ್ರ ನಷ್ಟವನ್ನು ಅನುಭವಿಸಿದ್ದರು. ಹೀಗಾಗಿ ಈ ಬಾರಿಯೂ ಅಂತಹದ್ದೇ ಪರಿಸ್ಥಿತಿ ನಿರ್ಮಾಣವಾಗುವ ಸಾಧ್ಯತೆ ಇದೆ ಎಂಬ ಭಯ ರೈತರನ್ನು ಕಾಡುತ್ತಿದೆ.

ಬೆಳೆ ವಿಮೆ ಮಾಡಿಸಿ: ಇಂತಹ ಪರಿಸ್ಥಿತಿಯಲ್ಲಿ ರೈತರ ಆತಂಕ ದೂರ ಮಾಡಲು ಕೃಷಿ ಇಲಾಖೆಯಿಂದ ರೈತರಿಗೆ ಅಗತ್ಯ ಮಾಹಿತಿ ನೀಡಿರುವ ಕೃಷಿ ಅಧಿಕಾರಿಗಳು, ರೈತ ಸುರಕ್ಷಾ, ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ಬೆಳೆ ವಿಮೆ ಮಾಡಿಸಲು ಹೇಳಿದ್ದಾರೆ. ಜು.31ರವರೆಗೆ ಕಾಲಾವಕಾಶವಿದೆ. ತಾಲೂಕಿನ ರೈತರಿಗೆ ರಾಗಿ, ನೆಲಗಡಲೆ, ತೊಗರಿ, ಹುರಳಿ ಬೆಳೆಗಳಿಗೆ ಹೋಬಳಿ ಮಟ್ಟದಲ್ಲಿ ವಿಮೆ ಮಾಡಿಸಲು ಸೂಚಿಸಲಾಗಿದೆ. ಬೆಳೆ ಸಾಲ ಪಡೆದ ರೈತರಿಗೆ ವಿಮೆ ಕಡ್ಡಾಯವಾಗಿದ್ದು, ಪಡೆಯದ ರೈತರಿಗೆ ಬೆಳೆ ವಿಮೆಯು ಐಚ್ಛಿಕವಾಗಿದೆ. ವಿಮಾ ಮೊತ್ತವು ಬೆಳೆ ಸಾಲ ಪಡೆದ ರೈತರಿಗೆ ಹಾಗೂ ಬೆಳೆ ಸಾಲ ಪಡೆಯದ ರೈತರಿಗೆ ಒಂದೇ ಆಗಿದ್ದು, ವಿಮೆಯ ಕೊನೆಯ ದಿನಾಂಕಕ್ಕೆ ರೈತರು ವಿಮಾ ಕಂತನ್ನು ಬ್ಯಾಂಕಿಗೆ ಪಾವತಿಸಿ ಸ್ವೀಕೃತಿ ಪಡೆಯಬಹುದಾಗಿದೆ.

ಬೆಳೆ ಸಾಲ ಪಡೆಯದ ರೈತರು ಬ್ಯಾಂಕುಗಳಿಗೆ ಘೋಷಣೆಯನ್ನು ಸಲ್ಲಿಸುವಾಗಿನ ಅರ್ಜಿಯೊಂದಿಗೆ ಭೂಮಿ ಹೊಂದಿರುವುದಕ್ಕೆ ಪಹಣಿ,ಬ್ಯಾಂಕ್ ಪಾಸ್‌ಪುಸ್ತಕ, ಕಂದಾಯ ರಶೀದಿ, ಆಧಾರ್‌ ಸಂಖ್ಯೆ ಸಲ್ಲಿಸಬೇಕು, 2018ರ ಹಂಗಾಮಿನಲ್ಲಿ ಯೋಜನೆಯ ಅನುಷ್ಠಾನಕ್ಕೆ ಯುನೈಟೆಡ್‌ ಇಂಡಿಯಾ ಇನ್ಸೂರೆನ್ಸ್‌ ಕಂಪನಿಯ ಅಧಿಕಾರಿಗಳನ್ನು ಸಂಪರ್ಕಿಸಬಹುದು. ಯೋಜನೆವಾರು ಬೆಳೆವಾರು, ರೈತರ ವಿವರಗಳನ್ನು ಆನ್‌ಲೈನ್‌ ಪೋರ್ಟಲ್ ಮೂಲಕ ನೋಂದಾಯಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಕೃಷಿ ಇಲಾಖೆಯ ರೈತ ಸಂಪರ್ಕ ಕೇಂದ್ರ ಮತ್ತು ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಸಂಪರ್ಕಿಸುವಂತೆ ತಿಳಿಸಿದ್ದಾರೆ.

 

● ಎಂ.ರವಿಕುಮಾರ್‌

ಟಾಪ್ ನ್ಯೂಸ್

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

11

Politics: ಮುನಿಯಪ್ಪ ಬೆಂಬಲಿಗರಿಗೆ ಭವಿಷ್ಯದ ಆತಂಕ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

LS polls 2024: ಕೋಲಾರ ಮೈತ್ರಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಜೆಡಿಎಸ್‌ ಮುಖಂಡರು ಗೈರು

LS polls 2024: ಕೋಲಾರ ಮೈತ್ರಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ; ಜೆಡಿಎಸ್‌ ಮುಖಂಡರು ಗೈರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್‌

D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.