ಬೆಳೆಗೆ ಮಳೆ ಕೊರತೆ, ಕಾಡು ಪ್ರಾಣಿಗಳ ಕಾಟ


Team Udayavani, Sep 13, 2019, 12:32 PM IST

KOLAR-TDY-1

ಮಹದೇವಪುರ ಗ್ರಾಮದಲ್ಲಿ ರೈತರೊಬ್ಬರು ಬೆಳೆದಿದ್ದ ತರಕಾರಿ ಬೆಳೆ ಕಾಡು ಪ್ರಾಣಿಗಳ ದಾಳಿಗೆ ನಾಶವಾಗಿದೆ.

ಬೇತಮಂಗಲ: ಮಳೆಯಿಲ್ಲದೆ, ಕಂಗಾಲಾಗಿರುವ ಬರಪೀಡಿತ ಜಿಲ್ಲೆಯ ರೈತರು, ಬೋರ್‌ವೆಲ್ನಲ್ಲಿ ಬರುವ ಅಲ್ಪ-ಸ್ವಲ್ಪ ನೀರಿನಲ್ಲಿ ಸಾವಿರಾರು ರೂ. ಖರ್ಚು ಮಾಡಿ ಬೆಳೆದಿದ್ದ ಬೆಳೆಯನ್ನು, ಕಾಡುಪ್ರಾಣಿಗಳಿಂದ ರಕ್ಷಿಸಿಕೊಳ್ಳಲು ಜೀವ ಕೈಯಲ್ಲಿ ಹಿಡಿದು ಹೋರಾಡಬೇಕಾಗಿದೆ.

ಹೋಬಳಿಯ ಮಹದೇವಪುರ, ರಾಮಸಾಗರ, ಗೆನ್ನೇರಹಳ್ಳಿ, ಮೋತಕಪಲ್ಲಿ, ಕಂಗಾಡ್ಲಹಳ್ಳಿ, ಸುಂದರಪಾಳ್ಯ, ಎನ್‌.ಜಿ ಹುಲ್ಕೂರು ಗ್ರಾಮಗಳಲ್ಲಿ ಕಾಡು ಪ್ರಾಣಿಗಳ ಹಾವಳಿ ಹೆಚ್ಚಾಗಿದೆ. ಮುಂಗಾರು ಪೂರ್ವದಲ್ಲಿ ಸುರಿದ ಅಲ್ಪ ಸ್ವಲ್ಪ ಮಳೆಯ ಹದಕ್ಕೆ ಬಿತ್ತನೆ ಮಾಡಿದ್ದ ಶೇಂಗಾ, ಮುಂತಾದ ಮಳೆಯಾಶ್ರಿತ ಬೆಳೆ ಈಗ ಬಾಡಿದ್ದು, ಅದನ್ನೂ ಜಿಂಕೆ, ಕಾಡುಹಂದಿ, ನವಿಲು ತಿನ್ನುತ್ತಿವೆ.

ಪಾಣಿಗಳಿಗೂ ಇಲ್ಲ ಆಹಾರ: ರೈತರು ಎಷ್ಟು ಸಂಕಷ್ಟ ಎದುರಿಸುತ್ತಿದ್ದಾರೋ ಅದೇ ಪರಿಸ್ಥಿತಿ ಕಾಡು ಪ್ರಾಣಿಗಳಿಗೂ ಬಂದಿದೆ. ಆರಣ್ಯದಲ್ಲಿ ಹಸಿರು ಇಲ್ಲದೆ, ಹೊಟ್ಟೆ ಪಾಡಿಗಾಗಿ ಅರಣ್ಯದಂಚಿನ ರೈತರ ಜಮೀನಿಗೆ, ಕೆಲವೊಮ್ಮೆ ಊರಿಗಳಿಗೆ ನುಗ್ಗುತ್ತಿವೆ. ಇವುಗಳಿಂದ ಬೆಳೆ ಉಳಿಸಿಕೊಳ್ಳಲು ಇಡೀ ರಾತ್ರಿ ಜಮೀನಿನಲ್ಲೇ ಕಾವಲು ಕಾಯುವಂತಹ ಪರಿಸ್ಥಿತಿ ರೈತರದ್ದಾಗಿದೆ.

ರೈತರ ಗೋಳು ಕೇಳ್ಳೋರಿಲ್ಲ: ರೈತರು ಒಂದು ಬೆಳೆ ಬೆಳೆಯಲು ಸಾವಿರಾರು ಖರ್ಚು ಮಾಡಬೇಕಿದೆ. ಬೀಜ ಬಿತ್ತನೆ, ಗೊಬ್ಬರ, ಕೀಟನಾಶಕ, ಕೂಲಿ, ಸಾಗಣೆ ಇತರೆ ಖರ್ಚುಗಳು ರೈತರನ್ನು ಹೈರಾಣಾಗಿಸಿವೆ. ಬೆಳೆ ಕೈಗೆ ಬಂದು ಇನ್ನೇನು ಮಾರುಕಟ್ಟೆಗೆ ಸಾಗಿಸಬೇಕು ಎನ್ನುವಷ್ಟರಲ್ಲಿ ಕಾಡು ಹಂದಿ, ಜಿಂಕೆ, ನವಿಲುಗಳು ಬಂದು ಬೆಳೆ ನಾಶ ಮಾಡುತ್ತವೆ. ಅಲ್ಲಿಗೆ ರೈತರು ಪಟ್ಟ ಕಷ್ಟ ನೀರಿನಲ್ಲಿ ಹೋಮ ಮಾಡಿದಂತೆ.

ರಾತ್ರಿ ಇಡೀ ಶಬ್ಧ: ಕಾಡು ಹಂದಿಗಳು, ನವೀಲು, ಇತರೆ ಕಾಡು ಪ್ರಾಣಿಗಳನ್ನು ಓಡಿಸಲು ರಾತ್ರಿ ವೇಳೆ ಪಟಾಕಿ ಸುಡುವುದು, ಖಾಲಿ ಬಾಟಲಿ ತೋಟಗಳಲ್ಲಿ ಕಟ್ಟುವುದು, ಜೋರಾಗಿ ಕೂಗಿ ಓಡಿಸುವ ಪ್ರಯತ್ನ ರೈತರು ಮಾಡುತ್ತಿದ್ದರೂ ಪ್ರಾಣಿಗಳು ಜಗ್ಗುತ್ತಿಲ್ಲ. ಇವು ಹೆಚ್ಚಾಗಿ ಮುಸುಕಿನ ಜೋಳ, ಆಲೂಗಡ್ಡೆ, ಶೇಂಗಾ, ರಾಗಿ, ಕ್ಯಾರೇಟ್, ಇತರೆ ತರಕಾರಿ ತೋಟಗಳಿಗೆ ಹೆಚ್ಚಾಗಿ ದಾಳಿ ಮಾಡಿ ರೈತರ ಬೆಳೆಗಳನ್ನು ನಾಶಪಡಿಸಿ ಲಕ್ಷಾಂತರ ರೂ. ನಷ್ಟ ತಂದೊಡ್ಡುತ್ತಿವೆ.

ಕಾಡು ಪ್ರಾಣಿಗಳ ಆಹಾರಕ್ಕೆ ಬರ ಕಾಡುತ್ತಿದೆ. ಕುಡಿಯುವ ನೀರಿಗೂ ಪರದಾಡುವ ಪರಿಸ್ಥಿತಿ ಎದುರಾಗಿರುವುದರಿಂದ ಅವು ಇತ್ತ ಲಗ್ಗೆ ಇಡಲು ಪ್ರಮುಖ ಕಾರಣ ಎಂಬುದಕ್ಕೆ ರಾತ್ರೋರಾತ್ರಿ ದಾಳಿ ಮಾಡುತ್ತಿರುವುದೇ ನಿದರ್ಶನವಾಗಿದೆ.

ಕಾಡು ಪ್ರಾಣಿಗಳ ಹಾವಳಿಯಿಂದ ಬೆಳೆ ರಕ್ಷಿಸಿಕೊಳ್ಳಲು ಜಮೀನಿನ ಸುತ್ತಾ ಕಡ್ಡಿಗಳನ್ನು ಹೂಳುವುದು, ಅದಕ್ಕೆ ವಿದ್ಯುತ್‌ ದ್ವೀಪ ಹಾಕಿ ರಾತ್ರಿ ಇಡೀ ಕಾವಲು ಕಾಯಲಾಗುತ್ತದೆ. ರಾತ್ರಿ ವಿದ್ಯುತ್‌ ದ್ವೀಪ ಉರಿಯುತ್ತಿದ್ದರೆ, ಶಬ್ಧ, ಬೆಳಕಿನಿಂದಾದರೂ ಈ ಕಾಡು ಪ್ರಾಣಿಗಳ ಹಾವಳಿ ತಪ್ಪಿಸಲು ರೈತರು ವಿವಿಧ ಕ್ರಮಕೈಗೊಳ್ಳುತ್ತಿದ್ದಾರೆ. ಇಷ್ಟೆಲ್ಲಾ ಕಂಣ್ಗಾವಲಿನ ನಡುವೆಯೂ ಆಲೂಗಡ್ಡೆ, ಕ್ಯಾರೇಟ್, ಬೀಟ್ರೋಟ್, ಮತ್ತಿತರ ಬೆಳೆಯನ್ನು ತನ್ನ ಮೂತಿಯಿಂದಲೇ ಆಗೆದು ತಿನ್ನುವ ಕಾಡು ಹಂದಿ, ಚಿಗುರೆಲೆಯನ್ನೇ ಜಿಂಕೆಗಳು ತಿನ್ನುತ್ತಿವೆ. ನೀರಿಗಾಗಿ ಹನಿ ನೀರಾವರಿಗೆ ಅಳವಡಿಸಿ ರುವ ಪೈಪ್‌ಗ್ಳನ್ನು ನವಿಲುಗಳು ತೂತು ಮಾಡುತ್ತಿವೆ, ಕಾಡು ಪ್ರಾಣಿಗಳ ಉಪಟಳ ನಿಯಂತ್ರಿಸಲು ಸಾಧ್ಯ ವಾಗದಂತಹ ಪರಿಸ್ಥಿತಿ ಇದೆ. ಹೊಟ್ಟೆಪಾಡಿಗಾಗಿ ರೈತರು, ಪ್ರಾಣಿಗಳ ನಡುವೆ ನಡೆಯುತ್ತಿರುವ ಈ ಸಂಘರ್ಷಕ್ಕೆ ಕೊನೆ ಎಂಬುದೇ ಈಗ ಯಕ್ಷ ಪ್ರಶ್ನೆಯಾಗಿದೆ.

 

● ಆರ್‌.ಪುರುಷೋತ್ತಮರೆಡ್ಡಿ

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಇಂದಿನ ಸ್ಥಿತಿ “ಮನೆಯೊಂದು 100 ಬಾಗಿಲು’: ಮುನಿಸ್ವಾಮಿ ವ್ಯಂಗ್ಯ

Congress ಇಂದಿನ ಸ್ಥಿತಿ “ಮನೆಯೊಂದು 100 ಬಾಗಿಲು’: ಮುನಿಸ್ವಾಮಿ ವ್ಯಂಗ್ಯ

Students: ಗೋಡೆ ಒಡೆಯಲು ಎಸ್ಸೆಸ್ಸೆಲ್ಸಿ ಮಕ್ಕಳ ಬಳಕೆ: ಕ್ರಮಕ್ಕೆ ಆಗ್ರಹ

Students: ಗೋಡೆ ಒಡೆಯಲು ಎಸ್ಸೆಸ್ಸೆಲ್ಸಿ ಮಕ್ಕಳ ಬಳಕೆ: ಕ್ರಮಕ್ಕೆ ಆಗ್ರಹ

KGF: ಅಪ್ರಾಪ್ತ ವಯಸ್ಸಿನ ಗರ್ಭಿಣಿಯರು;  98 ಕೇಸ್‌ ದಾಖಲು

KGF: ಅಪ್ರಾಪ್ತ ವಯಸ್ಸಿನ ಗರ್ಭಿಣಿಯರು;  98 ಕೇಸ್‌ ದಾಖಲು

ಕಾಡು ಪ್ರಾಣಿ ದಾಳಿ: ಕೋಲಾರದ ಯೋಧ ಗುಜರಾತ್‌ನಲ್ಲಿ ಸಾವು

ಕಾಡು ಪ್ರಾಣಿ ದಾಳಿ: ಕೋಲಾರದ ಯೋಧ ಗುಜರಾತ್‌ನಲ್ಲಿ ಸಾವು

Kolar Lok Sabha constituency: ಅಲೆಗಳು ಗೌಣ, ಸ್ಥಳೀಯ ಲೆಕ್ಕಾಚಾರಗಳೇ ನಿರ್ಣಾಯಕ

Kolar Lok Sabha constituency: ಅಲೆಗಳು ಗೌಣ, ಸ್ಥಳೀಯ ಲೆಕ್ಕಾಚಾರಗಳೇ ನಿರ್ಣಾಯಕ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.