ಮುಖ್ಯಾಧಿಕಾರಿಗೆ ಖಾಲಿ ಕೊಡಗಳ ಪ್ರದರ್ಶನ


Team Udayavani, Mar 17, 2020, 5:35 PM IST

kolar-tdy-1

ಶ್ರೀನಿವಾಸಪುರ: ಪಟ್ಟಣದ ಪಟ್ಟಾಭಿ ರಸ್ತೆ, ಕಬೀರ್‌ ರಸ್ತೆ ಹಾಗೂ ವಿನೋಬಾ ರಸ್ತೆಗಳ ನಿವಾಸಿಗಳು ಸಮರ್ಪಕ ಕುಡಿಯುವ ನೀರು ಪೂರೈಕೆಗೆ ಆಗ್ರಹಿಸಿ ಪುರಸಭೆ ಮುಖ್ಯಾಧಿಕಾರಿ ಮುಂದೆ ಖಾಲಿ ಕೊಡ ಪ್ರದರ್ಶಿಸಿ ಪ್ರತಿಭಟನೆ ನಡೆಸಿದರು.

ಟ್ಯಾಂಕರ್‌ನಲ್ಲಿ ಹತ್ತು ದಿನಗಳಿಗೊಮ್ಮೆ ನೀರು ಪೂರೈಕೆ ಮಾಡಲಾಗುತ್ತಿದೆ. ಇದರಿಂದ ಕುಡಿಯುವ ನೀರಿಗೆ ತೀವ್ರ ಸಮಸ್ಯೆಯಾಗಿದೆ. ನೀರು ಪೂರೈಕೆ ಮಾಡುವವರಿಗೆ ಕೇಳಿದರೆ ಕಚೇರಿಗೆ ಹೋಗಿ ಕೇಳಿ ಎಂದು ಹೇಳುತ್ತಾರೆ. ಹಾಗಾಗಿ ಸಮಸ್ಯೆ ಬಗೆಹರಿಸುವವರು ಯಾರು ಎಂದು ಪ್ರತಿಭಟನಾನಿರತ ಮಹಿಳೆಯರು ಪ್ರಶ್ನೆ ಮಾಡಿದರು.

ಪ್ರತಿದಿನ ಪೂರೈಸಿ: ಒಂದು ವರ್ಷದ ಹಿಂದೆ ಕೊಳವೆ ಬಾವಿ ರಿಪೇರಿ ಮಾಡಿ ಮೋಟಾರ್‌ ಆಳವಡಿಸಲಾಗಿತ್ತು. ಆದರೆ, ಅಳವಡಿಸಿದ ಮೋಟಾರ್‌ 3 ತಿಂಗಳಲ್ಲಿ ಕೆಟ್ಟು ಹೋಯಿತು. ಮತ್ತೆ ಈ ಕಡೆ ಪುರಸಭೆಯ ಸಿಬ್ಬಂದಿ ಗಮನ ಹರಿಸಲಿಲ್ಲ. ನಂತರ ಟ್ಯಾಂಕರ್‌ ಮೂಲಕ ನೀರು ಪೂರೈಕೆ ಮಾಡಿದರೂ ಸಾಕಾಗುತ್ತಿಲ್ಲ. ಪ್ರತಿದಿನ ಸರಬರಾಜು ಮಾಡಬೇಕಾದ ನೀರನ್ನು ವಾರಕ್ಕೊಮ್ಮೆ ನೀಡಿದರೆ ಹೇಗೆ? ಕೊಳವೆ ಬಾವಿ ರಿಪೇರಿ ಮಾಡಿ ಹೊಸ ಮೋಟಾರ್‌ ಅಳವಡಿಸಿಕೊಡಿ ಎಂದರು.

ಇಂದಿನಿಂದ ಪ್ರತಿದಿನ ಟ್ಯಾಂಕರ್‌ ನೀರು: ದೂರಗಳನ್ನು ಆಲಿಸಿದ ಮುಖ್ಯಾಧಿಕಾರಿ ವಿ.ಮೋಹನ್‌ ಕುಮಾರ್‌, ತಮ್ಮ ರಸ್ತೆಯ ಬದಿ ಇರುವ ಕೊಳವೆ ಬಾವಿ ಪರಿಶೀಲಿಸಿ ಅದರಲ್ಲಿ ನೀರಿದ್ದರೆ ಅದಕ್ಕೆ ಮೋಟಾರ್‌ ಅಳವಡಿಸಲಾಗುತ್ತದೆ. ಜೊತೆಗೆ ಮಂಗಳವಾರದಿಂದಲೇ ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡಲಾಗುತ್ತದೆ ಎಂದು ಭರವಸೆ ನೀಡಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ನಿವಾಸಿಗಳು, ಸಮಸ್ಯೆ ತೀವ್ರವಾಗಿದೆ. ದಿನ ನಿತ್ಯದ ಚಟುವಟಿಕೆಗಳಿಗೆ ಬೇಕಾದಷ್ಟು ನೀರು ಪೂರೈಕೆ ಆಗುತ್ತಿಲ್ಲ. ಟ್ಯಾಂಕರ್‌ ನೀರು ಬಂದರೂ ಅದು ವಾರಕ್ಕೊಮ್ಮೆ. ಒಂದೆರೆಡು ಬಿಂದಿಗೆ ಹಿಡಿದುಕೊಂಡು ಹೋಗಬೇಕು. ಹೆಚ್ಚು ಬಿಂದಿಗೆ ನೀರು ಕೇಳಿದರೆ ಕಚೇರಿಯಲ್ಲಿ ಕೇಳಿ ಎನ್ನುತ್ತಾರೆ. ಅಧಿಕಾರಿಗಳು ಕೊಟ್ಟ ಭರವಸೆಯಂತೆ ಹಿಂದಿರುಗುತ್ತಿದ್ದೇವೆ. ಮಂಗಳವಾರದಿಂದ ನಮಗೆ ಸಮರ್ಪಕ ನೀರು ಸರಬರಾಜು ಮಾಡದಿದ್ದರೆ ಪುರಸಭೆಯ ಮುಂದಿನ ರಸ್ತೆಯಲ್ಲಿ ಪ್ರತಿಭಟನೆ ಮಾಡಲಾಗುತ್ತದೆ ಎಚ್ಚರಿಸಿದರು.

ಈ ಸಂದರ್ಭದಲ್ಲಿ ಶೋಭಾ, ಪ್ರಮೀಳಾ, ಲಕ್ಷ್ಮೀ, ಜಯಮ್ಮ, ಪದ್ಮಮ್ಮ, ಎನ್‌.ಆರ್‌.ನಾರಾಯಣಸ್ವಾಮಿ, ರಾಜೇಶ್‌ ಇತರರು ಇದ್ದರು.

ಟಾಪ್ ನ್ಯೂಸ್

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

11

Politics: ಮುನಿಯಪ್ಪ ಬೆಂಬಲಿಗರಿಗೆ ಭವಿಷ್ಯದ ಆತಂಕ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.