ಅರ್ಜಿ ಕೊಟ್ಟರೂ ಠಾಣೆಗೆ ಜಮೀನು ಮಂಜೂರಿಲ್ಲ

2 ವರ್ಷಗಳಿಂದ ಬಾಡಿಗೆ ಕಟ್ಟಡದಲ್ಲಿ ಮುಳಬಾಗಿಲು ಗ್ರಾಮಾಂತರ ಠಾಣೆ ನಿರ್ವಹಣೆ

Team Udayavani, Jun 21, 2019, 1:30 PM IST

kolar-tdy-2..

ಮುಳಬಾಗಿಲು ನಗರದ ನರಸಿಂಹತೀರ್ಥದ ಬಾಡಿಗೆ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮಾಂತರ ಪೊಲೀಸ್‌ ಠಾಣೆ.

ಮುಳಬಾಗಿಲು: ಸರ್ಕಾರಿ ಯೋಜನೆಯೊಂದರ ಅಗತ್ಯಕ್ಕಾಗಿ ಜಮೀನು ಮಂಜೂರು ಮಾಡಲು 2 ವರ್ಷಗಳಿಂದ ಕಂದಾಯ ಅಧಿಕಾರಿಗಳು ಮೀನಮೇಷ ಎಣಿಸುತ್ತಿರುವುದಕ್ಕೆ ತಾಲೂಕಿನಾ ದ್ಯಂತ ಜನತೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ತಾಲೂಕಿನ 186 ಗ್ರಾಮಗಳಲ್ಲಿ ಜನರ ರಕ್ಷಣೆ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಸರ್ಕಾರ ಮುಳಬಾಗಿಲು ಠಾಣೆಯನ್ನು ನಗರ ಠಾಣೆಯನ್ನಾಗಿ ರೂಪಿಸಿ ಗ್ರಾಮಾಂತರ ಠಾಣೆಯನ್ನು ಮಂಜೂರು ಮಾಡಿ ಅದಕ್ಕೆ ಮೂಲಭೂತ ಸೌಕರ್ಯ ಒದಗಿಸಲು 3ವರ್ಷಗಳ ಹಿಂದೆಯೇ ಕೋಟ್ಯಂತರ ರೂ.ಗಳನ್ನು ಮಂಜೂರು ಮಾಡಿದೆ. ಅಂತೆಯೇ 2016ರ ಅಕ್ಟೋಬರ್‌ನಲ್ಲಿಯೇ ಮುಳಬಾಗಿಲು ಗ್ರಾಮಾಂತರ ಠಾಣೆ ಅಗತ್ಯ ಸಿಬ್ಬಂದಿಗಳಿಂದ ಕಾರ್ಯಾರಂಭಿಸಿದ್ದು ನಂತರ 2017ರ ಆಗಸ್ಟ್‌ 16 ರಂದು ಪೊಲೀಸ್‌ ಇಲಾಖೆ ನರಸಿಂಹತೀರ್ಥದ ಶ್ರೀಪಾದರಾಜ ಮಠದ ಕಟ್ಟಡವೊಂದನ್ನು 27 ಸಾವಿರ ರೂ.ಗಳಿಗೆ ಬಾಡಿಗೆ ಪಡೆದು ಠಾಣೆ ಆರಂಭಿಸಿತ್ತು. 186 ಗ್ರಾಮಗಳ ಜನರ ದೂರುಗಳನ್ನು ರಾಜೀ ಮಾಡಿಸುವ ಮೂಲಕ ಗ್ರಾಮಸ್ಥರ ಸಮಸ್ಯೆಗಳನ್ನು ಪೊಲೀಸರು ಬಗೆಹರಿಸುತ್ತಿದ್ದಾರೆ.

ಶಾಂತಿ ಸುವ್ಯವಸ್ಥೆ:ಅಲ್ಲದೇ ಠಾಣೆ ವ್ಯಾಪ್ತಿಯ ಗಡಿಯ ಪಲಮನೇರು, ಪುಂಗನೂರು, ರಾಮಸಮುದ್ರಂ, ಬೆಟ್ಟಗುಡ್ಡಗಳಿಂದ ಆವೃತವಾದ ನಕ್ಸಲಿಯರ ಪ್ರದೇಶ, ಠಾಣಾ ಸರಹದ್ದಿನ 186 ಗ್ರಾಮಗಳಲ್ಲಿ ರಾಜಕೀಯ ವೈಷಮ್ಯ ಉಂಟಾದಾಗ ಗ್ರಾಮ ಗಸ್ತು ವ್ಯವಸ್ಥೆ ಸುಗಮವಾಗಿ ನಡೆಸುತ್ತಿದ್ದಾರೆ. ಈ ಮೂಲಕ ಜನರ ರಕ್ಷಣೆ ಮತ್ತು ಕಾನೂನು ಸುವ್ಯವಸ್ಥೆಯನ್ನು ಗ್ರಾಮಾಂತರ ಪೊಲೀಸ್‌ ಠಾಣೆ ಕಾಪಾಡುತ್ತಿದೆ.

ನಂತರ ಪೊಲೀಸ್‌ ಅಧಿಕಾರಿಗಳು ನಗರದ ಅಂಚಿನಲ್ಲಿಯೇ ಜನಸಾಮಾನ್ಯರ ಅನುಕೂಲಕ್ಕೆ ತಕ್ಕಂತ ನೂತನ ಠಾಣಾ ಕಟ್ಟಡ ನಿರ್ಮಾಣಕ್ಕೆ ಅಗತ್ಯವುಳ್ಳ ಮುಳಬಾಗಿಲು ರೂರಲ್ ಸ.ನಂ.715ರಲ್ಲಿನ 1.36 ಎಕರೆ ಜಮೀನು ಮಂಜೂರು ಮಾಡಲು ಕೋರಿ 2017 ಮತ್ತು 2018ರಲ್ಲಿ 2ಬಾರಿ ತಹಶೀಲ್ದಾರ್‌ ಕಚೇರಿಗೆ ಅರ್ಜಿ ನೀಡಿದರು. ಆದರೆ ಕಂದಾಯ ಇಲಾಖೆ ಅಧಿಕಾರಿ ಗಳು ಮಾತ್ರ ತಮಗೆ ಯಾವುದೇ ಸಂಬಂಧವೇ ಇಲ್ಲವೆನ್ನುವಂತೆ ವರ್ತಿಸುತ್ತಿದ್ದಾರೆ ಎನ್ನಲಾಗಿದೆ. ಇದರಿಂದ ಬೇಸರಗೊಂಡ ಪೊಲೀಸರೇ ಹಲವು ಬಾರಿ 2-3 ಕಡೆ ಜಮೀನು ತೋರಿಸಿದರೂ ಯಾವು ದೇ ಜಮೀನು ಮಂಜೂರು ಮಾಡದ ಕಾರಣ, ಪೊಲೀಸ್‌ ಅಧಿಕಾರಿಗಳು ವಿಧಿ ಇಲ್ಲದೇ ಬಾಡಿಗೆ ಕಟ್ಟಡದಲ್ಲಿಯೇ ಕಾರ್ಯನಿರ್ವಹಿಸುವಂತಾಗಿದೆ.

ದಸಂಸ ಜಿಲ್ಲಾ ಸಂಯೋಜಕರಾದ ತಾತಿಕಲ್ ರಾಮಚಂದ್ರ, ತಾಲೂಕು ಕಂದಾಯ ಇಲಾಖೆಯಲ್ಲಿ ಹಲವು ವರ್ಷಗಳಿಂದಲೂ ಕೆಲವು ಸ್ಥಳೀಯ ಅಧಿಕಾರಿ-ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದು ಸರ್ಕಾರಿ ಜಮೀನುಗಳ ಸಂರಕ್ಷಣೆ ಜವಾಬ್ದಾರಿ ಇಲ್ಲ. ನೂರಾರು ಎಕರೆ ಸರ್ಕಾರಿ ಜಮೀನು ನಕಲಿ ದಾಖಲೆಗಳ ಮೂಲಕ ಭೂ ಮಾಫಿಯಾದವರ ಪಾಲಾಗುತ್ತಿದೆ. ಭೂ ದಾಖಲೆಗಳ ಇಲಾಖೆ ಆಯು ಕ್ತರು ಇತ್ತ ಕಡೆ ಗಮನಹರಿಸಬೇಕೆಂದು ಒತ್ತಾಯಿಸಿ ದ್ದಾರೆ. ಒಟ್ಟಿನಲ್ಲಿ 2 ವರ್ಷಗಳ ಹಿಂದೆ ಯೇ ಕೋಟ್ಯಂತರ ರೂ.ಗಳ ಅನುದಾನ ಮಂಜೂ ರು ಮಾಡಿದ್ದರೂ ಕಟ್ಟಡ ನಿರ್ಮಾಣಕ್ಕೆ ಅಗತ್ಯವುಳ್ಳ ಜಮೀನು ಮಂಜೂರು ಮಾಡದ ಕಂದಾಯ ಇಲಾಖೆ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.