ಖಾಸಗಿ ವ್ಯಾಮೋಹ ಬಿಟ್ಟು ಸರ್ಕಾರಿ ಶಾಲೆಗೆ ಸೇರಿಸಿ

ಸರ್ಕಾರಿ ಶಾಲೆಗಳಲ್ಲಿ ಸ್ಮಾರ್ಟ್‌ ಕ್ಲಾಸ್‌, ಗುಣಮಟ್ಟದ ಬೋಧನೆ ಸಿಗುತ್ತೆ: ಪ್ರದೀಪ್‌ಕುಮಾರ್‌

Team Udayavani, May 13, 2019, 2:21 PM IST

kolar-tdy-6..

ಕೋಲಾರ ತಾಲೂಕಿನ ಅರಾಭಿಕೊತ್ತನೂರು ಗ್ರಾಪಂ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಸರ್ಕಾರಿ ಪ್ರೌಢಶಾಲೆ ಶಿಕ್ಷಕರು ದಾಖಲಾತಿ ಅಭಿಯಾನ ನಡೆಸಿದರು.

ಕೋಲಾರ: ಸರ್ಕಾರಿ ಶಾಲೆಗಳಲ್ಲಿ ವಿವಿಧ ಕಂಪನಿ ಹಾಗೂ ದಾನಿಗಳ ನೆರವಿನಿಂದ ಹೈಟೆಕ್‌ ಸ್ಪರ್ಶದೊಂದಿಗೆ ಕಲಿಕಾ ಸೌಲಭ್ಯ ಒದಗಿಸಲಾಗಿದ್ದು, ಖಾಸಗಿ ವ್ಯಾಮೋಹ ಬಿಟ್ಟು ಮಕ್ಕಳನ್ನು ದಾಖಲು ಮಾಡಿ ಎಂದು ತಾಲೂಕಿನ ಅರಾಭಿಕೊತ್ತನೂರು ಸರ್ಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕ ಸಿ.ಎನ್‌.ಪ್ರದೀಪ್‌ ಕುಮಾರ್‌ ಮನವಿ ಮಾಡಿದರು.

ಅರಾಭಿಕೊತ್ತನೂರು ಗ್ರಾಪಂ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ದಾಖಲಾತಿ ಅಭಿಯಾನ ನಡೆಸಿ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿಯೂ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ ಎಂಬುದಕ್ಕೆ ಇತ್ತೀಚಿನ ಎಸ್ಸೆಸ್ಸೆಲ್ಸಿ ಫಲಿತಾಂಶವೇ ಸಾಕ್ಷಿ. ಜಿಲ್ಲೆಯಲ್ಲಿ 26 ಸರ್ಕಾರಿ ಪ್ರೌಢಶಾಲೆಗಳಲ್ಲಿ ಶೇ.100 ಫಲಿತಾಂಶ ಬಂದಿದೆ ಎಂದು ಹೇಳಿದರು.

ಸಾವಿರಾರು ರೂ. ಡೊನೇಷನ್‌ ನೀಡಿ ಖಾಸಗಿ ಶಾಲೆಗಳಿಗೆ ಸೇರಿಸುವ ಆಲೋಚನೆ ಕೈಡಿ, ಸರ್ಕಾರ ಉಚಿತ ಶಿಕ್ಷಣ ನೀಡಲು ಕ್ರಮವಹಿಸಿದೆ, ಮಕ್ಕಳಿಗೆ ಉಚಿತ ಸಮವಸ್ತ್ರ, ಪಠ್ಯಪುಸ್ತಕ, ಶೂ, ಬಿಸಿಯೂಟ, ಕ್ಷೀರಭಾಗ್ಯ ಮತ್ತಿತರ ಸೌಲಭ್ಯ ನೀಡಿದ್ದು, ಇದರ ಜತೆಗೆ ದಾನಿಗಳಿಂದ ಮಕ್ಕಳಿಗೆ ಉಚಿತ ನೋಟ್ಪುಸ್ತಕ, ಸಮವಸ್ತ್ರ, ಕಲಿಕಾ ಸಾಮಗ್ರಿಗಳನ್ನು ಕೊಡಿಸುವ ಪ್ರಯತ್ನದಲ್ಲಿಯೂ ಯಶಸ್ವಿಯಾಗಿದ್ದೇವೆ ಎಂದು ಹೇಳಿದರು.

ಸ್ಮಾರ್ಟ್‌ ಕ್ಲಾಸ್‌ ಸೌಲಭ್ಯ: ಅರಾಭಿಕೊತ್ತನೂರು ಸರ್ಕಾರಿ ಪ್ರೌಢಶಾಲೆಗೆ ದಾನಿಗಳ ನೆರವನಿಂದ ಹೈಟೆಕ್‌ ಸ್ಪರ್ಶ ನೀಡಲಾಗಿದ್ದು, ಸ್ಮಾರ್ಟ್‌ ಕ್ಲಾಸ್‌ ಸೌಲಭ್ಯವಿದೆ. 80ಕ್ಕೂ ಹೆಚ್ಚು ಲೈವ್‌ ವಿಜ್ಞಾನ ಸಲಕರಣೆಗಳಿರುವ ಸುಸಜ್ಜಿತ ಪ್ರಯೋಗಾಲಯ ಇದೆ. ಜಿಲ್ಲೆಯಲ್ಲೇ ಮೊದಲ ಬಾರಿಗೆ ಶಾಲೆಯಲ್ಲಿ ಸಮಾಜವಿಜ್ಞಾನ ಪ್ರಯೋಗಾಲಯ ಆರಂಭಿಸಿದ್ದೇವೆ, ಮಕ್ಕಳಿಗೆ ಕುಡಿಯಲು ಮತ್ತು ಅಡುಗೆಗೂ ಫಿಲ್ಟರ್‌ ನೀರನ್ನೇ ಬಳಸಲಾಗುತ್ತಿದೆ ಎಂದು ತಿಳಿಸಿದರು. ಮಕ್ಕಳಲ್ಲಿ ಕ್ರೀಡಾಸಕ್ತಿ, ಸಾಂಸ್ಕೃತಿಕ, ಸಾಮಾನ್ಯ ಜ್ಞಾನ ವೃದ್ದಿಗೆ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ, ಮಕ್ಕಳ ಸುರಕ್ಷತೆಗೆ ಶಾಲೆಗೆ ಸುಸಜ್ಜಿತ ಕಾಂಪೌಂಡ್‌, ತಂತಿ ಬೇಲಿ ಸೌಲಭ್ಯವೂ ಇದೆ ಎಂದು ತಿಳಿಸಿದರು.

ಆಂಗ್ಲ, ಕನ್ನಡ ಮಾಧ್ಯಮ: ಶಾಲೆಯಲ್ಲಿ ಎಲ್ಲಾ ಪಠ್ಯ ವಿಷಯಗಳಿಗೂ ನುರಿತ ಅನುಭವಿ ಶಿಕ್ಷಕರಿದ್ದು, ಮಕ್ಕಳ ಕಲಿಕಾ ಕಾರ್ಯಕ್ಕೆ ನಿರಂತರವಾಗಿ ಒತ್ತು ನೀಡುವ ಮೂಲಕ ವಿಶೇಷ ತರಗತಿಗಳನ್ನು ನಡೆಸಲಾಗುತ್ತಿದೆ ಎಂದು ತಿಳಿಸಿದರು.

ಸರ್ಕಾರಿ ಶಾಲೆಗೆ ಸೇರಿಸಿ: ಶಾಲೆಯಲ್ಲಿ ಆಂಗ್ಲಮಾಧ್ಯಮ ಮತ್ತು ಕನ್ನಡ ಮಾಧ್ಯಮಗಳೆರಡೂ ಇದ್ದು, ಈ ಬಾರಿಯ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಆಂಗ್ಲ ಮಾಧ್ಯಮದಲ್ಲಿ ಶೇ.100 ಫಲಿತಾಂಶ ಬಂದಿದೆ. ಈ ಹಿನ್ನೆಲೆಯಲ್ಲಿ ಪೋಷಕರು ಖಾಸಗಿ ಶಾಲೆಗೆ ಸೇರಿಸಿ ಸಾವಿರಾರು ರೂ. ಹಣ ಕಳೆದುಕೊಳ್ಳದೇ, ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಿ, ಗುಣಮಟ್ಟದ ಶಿಕ್ಷಣ ಪಡೆಯಲು ಸಹಕರಿಸಿ ಎಂದು ಕೋರಿದರು.

ಅರಾಭಿಕೊತ್ತನೂರು, ಚಿಕ್ಕಅಯ್ಯೂರು, ವೆಂಕಟಾಪುರ, ಕೆಂದಟ್ಟಿ ಗ್ರಾಮಗಳಿಗೆ ಭೇಟಿ ನೀಡಿ ಪೋಷಕರಿಗೆ ಶಾಲೆಯಲ್ಲಿ ಸಿಗುವ ಸೌಲಭ್ಯಗಳ ಕುರಿತು ಮನವರಿಕೆ ಮಾಡಿಕೊಡಲಾಯಿತು. ಎಸ್‌ಡಿಎಂಸಿ ಸದಸ್ಯೆ ಪಾರ್ವತಿ, ಶಾಲೆಯ ಶಿಕ್ಷಕರಾದ ಭವಾನಿ, ಸಿ.ಎಲ್.ಶ್ರೀನಿವಾಸಲು, ಸುಗುಣಾ, ವೆಂಕಟರೆಡ್ಡಿ, ಡಿ.ಚಂದ್ರಶೇಖರ್‌, ನೇತ್ರಾವತಿ, ದಾಕ್ಷಾಯಿಣಮ್ಮ ಮತ್ತಿತರರಿದ್ದರು.

ಟಾಪ್ ನ್ಯೂಸ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.