ಅಪರಾಧ ಮುಕ್ತಕ್ಕೆ ಕಾನೂನು ಅರಿವು ಅಗತ್ಯ: ರೇಖಾ


Team Udayavani, Jan 29, 2020, 3:00 AM IST

aparadha

ಕೋಲಾರ: ಕಾನೂನಿನ ಅರಿವು ಪಡೆಯುವ ಮೂಲಕ ಅಪರಾಧ ಮುಕ್ತ ಹಾಗೂ ನೆಮ್ಮದಿ ಜೀವನ ನಡೆಸಿ, ನಿಮ್ಮ ಹಕ್ಕುಗಳ ರಕ್ಷಣೆ ಜತೆಗೆ ಕರ್ತವ್ಯಗಳನ್ನು ಪಾಲಿಸಿ ಎಂದು 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಬಿ.ಎಸ್‌.ರೇಖಾ ತಿಳಿಸಿದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘದ ವತಿಯಿಂದ ತಾಲೂಕಿನ ಕಾಡಹಳ್ಳಿಯಲ್ಲಿ ಬೆಂಗಳೂರಿನ ಕ್ರೈಸ್ಟ್‌ ಸ್ಕೂಲ್‌ ಆಫ್‌ ಲಾ ಹಮ್ಮಿಕೊಂಡಿದ್ದ ಶಿಬಿರದಲ್ಲಿ ಕಾನೂನು ಅರಿವು-ನೆರವು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ನಿರಂತರ ಅಧ್ಯಯನ ಅವಶ್ಯ: ಕಾನೂನು ಪದವಿ ಓದುತ್ತಿರುವ ವಿದ್ಯಾರ್ಥಿಗಳು ಕೇವಲ ಹಣ ಗಳಿಕೆಗೆ ಸೀಮಿತವಾಗದೇ ಕಕ್ಷಿದಾರರ ಹಿತ ಕಾಯುವ, ಬಡವರಿಗೆ ನೆರವಾಗುವ ಗುಣ ಬೆಳೆಸಿಕೊಳ್ಳಿ, ನಿರಂತರ ಅಧ್ಯಯನದಿಂದ ಮಾತ್ರ ಉತ್ತಮ ವಕೀಲರಾಗಲು ಸಾಧ್ಯ ಎಂಬುದನ್ನು ಅರಿಯಿರಿ ಎಂದರು.

ಕಾನೂನನ್ನು ಗೌರವಿಸಿ: ಹಿರಿಯ ಸಿವಿಲ್‌ ನ್ಯಾಯಾ ಧೀಶರು ಹಾಗೂ ಕಾನೂನು ಸೇವಾ ಪ್ರಾ ಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಎಚ್‌.ಗಂಗಾಧರ್‌, ಪ್ರತಿಯೊಬ್ಬ ಪ್ರಜೆಯೂ ಕಾನೂನನ್ನು ತಿಳಿದು ಗೌರವಿಸಬೇಕಿದ್ದು ಅದು ನಮ್ಮ ಪ್ರಮುಖ ಕರ್ತವ್ಯಗಳಲ್ಲೊಂದಾಗಿದೆ ಎಂದು ತಿಳಿಸಿದರು.

ಉತ್ತಮ ಜೀವನ ನಡೆಸಿ: ಪ್ರತಿಯೊಬ್ಬರೂ ನಮ್ಮ ಮೂಲಭೂತ ಕರ್ತವ್ಯಗಳೇನು ಎಂಬುದನ್ನು ತಿಳಿದು ನಡೆದುಕೊಳ್ಳುವುದು ಸಮಾಜ ಮತ್ತು ಬದುಕಿಗೆ ತೀರಾ ಅವಶ್ಯಕತೆ ಇದೆ. ಭೂಮಿ ಮೇಲೆ ಇರುವ ಪ್ರತಿ ಜೀವಿಗೂ ಬದುಕುವ ಹಕ್ಕಿದೆ. ಇದನ್ನು ಮನಗಂಡು ಎಲ್ಲರಿಗೂ ಉತ್ತಮ ಜೀವನ ನಡೆಸಲು ಅವಕಾಶ ಮಾಡಿಕೊಡಬೇಕಿದೆ ಎಂದು ಸಲಹೆ ನೀಡಿದರು.

ವಿದ್ಯಾರ್ಥಿಗಳು ಸೇರಿದಂತೆ ಇನ್ನಿತರರು ವಾಹನ ಚಲಾಯಿಸುವ ಮುನ್ನ ಸಾರಿಗೆ ಇಲಾಖೆ ಸೂಚನೆ ಷರತ್ತುಗಳನ್ನು ಪಾಲಿಸುವುದು ಕಡ್ಡಾಯವಾಗಿರುತ್ತದೆ. ಇದರಿಂದ ಅಪಘಾತ ಸೇರಿದಂತೆ ಇನ್ನಿತರೆ ತೊಂದರೆಗಳಿಗೆ ಒಳಗಾದವರಿಗೆ ವಿಮೆ ಪರಿಹಾರ ಸಿಗುವಂತಾಗುತ್ತದೆ ಎಂದರು.

ಕಾನೂನು ಮೀರದಿರಿ: ಕಾನೂನು ಬಾಹಿರ, ಸಮಾಜ ವಿರೋಧಿ ಚಟುವಟಿಕೆಗಳಲ್ಲಿ ಯಾರೂ ಭಾಗವಹಿಸದೆ ಮುಕ್ತವಾದ ಜೀವನ ನಡೆಸುವುದು ಎಲ್ಲರಿಗೂ ಒಳಿತು. ಕಾನೂನು ಮೀರಿ ಹೋದದ್ದೆ ಆದರೆ ತಕ್ಕ ಶಿಕ್ಷೆ ಅನುಭವಿಸಲೇಬೇಕಾಗುತ್ತದೆ ಎಂದು ಎಚ್ಚರಿಸಿದರು.

ಹೆಣ್ಣನ್ನು ಗೌರವಿಸುವುದು ಅವರ ಘನತೆ ಎತ್ತಿ ಹಿಡಿಯುವುದು ನಮ್ಮ ಸಂಸ್ಕೃತಿ. ಬದಲಾಗಿ ಅವರ ಮೇಲೆ ಅತ್ಯಾಚಾರಗಳಂತಹ ಪೈಶಾಚಿಕ ಕೃತ್ಯಗಳನ್ನು ಎಸಗಿದವರಿಗೆ ಗಲ್ಲು ಶಿಕ್ಷೆಯಂತಹ ಕಠಿಣ ಶಿಕ್ಷೆಗೆ ಅವರನ್ನು ಒಳಪಡಿಸಿರುವುದು ನಾವೆಲ್ಲಾ ಪ್ರಸ್ತುತ ಬೆಳವಣಿಗೆಗಳಲ್ಲಿ ಕಾಣುತ್ತಿದ್ದೇವೆ. ಹೀಗಾಗಿ ಕಾನೂನು ಪಾಲನೆ ಮಾಡುವುದು ನಮ್ಮೆಲ್ಲರ ಮೇಲಿದೆ ಎಂದು ನುಡಿದರು.

ಜಾಗೃತಿ ಅವಶ್ಯ: ಶಿಕ್ಷಕ ಸಂಯೋಜಕ ಮಲ್ಲಯ್ಯ, ಎಂ.ಆರ್‌.ಮಲ್ಲಯ್ಯ, ಸಂವಿಧಾನದ ಅರಿವು ನಮ್ಮೆಲ್ಲರಿಗೂ ಬರಬೇಕಾದರೆ ಇತಿಹಾಸ ಅಭ್ಯಾಸಿಸಬೇಕು. ಕಾನೂನಿನಡಿ ನಾವು ನಡೆದರೇ ಸ್ವಾತಂತ್ರ ಭಾರತಕ್ಕೆ ನಿಜವಾದ ಅರ್ಥ ಸಿಗುತ್ತದೆ. ಕಾನೂನಿನ ಜಾಗೃತಿ ಪ್ರತಿ ಹಳ್ಳಿ ಮನೆಗೂ ತಲುಪಿ ಇದರ ಧ್ಯೇಯೋದ್ದೇಶ ತಿಳಿಸುವ ಕೆಲಸಗಳು ಆಗಬೇಕಾಗಿದೆ ಎಂದರು.

ಸಮಾನತೆ ಇರಲಿ: ಶಿಕ್ಷಕ ಸಂಯೋಜಕಿ ಎಚ್‌.ಎಲ್‌.ಜಯಂತಿಬಾಯಿ, ಸಾಮಾಜಿಕವಾಗಿ ಆರ್ಥಿಕವಾಗಿ ಮತ್ತು ರಾಜಕೀಯವಾಗಿ ಬದುಕಲು ಸಂವಿಧಾನ ಮತ್ತು ಅದರಲ್ಲಿನ ಕಾನೂನು ಅವಶ್ಯಕತೆ ಬಹಳ ಇದೆ. ಜಾತಿ ಧರ್ಮ ತೊಡೆದು ಮೇಲುಕೀಳುಗಳ ತುತ್ಛ ಮನೋಭಾವ ದೂರಮಾಡಿ ಸಮಾನತೆಯಿಂದ ಬದುಕು ನಡೆಸಬೇಕೆಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಕಾಡಹಳ್ಳಿ ಶಾಲೆ ಮುಖ್ಯ ಶಿಕ್ಷಕ ಅಶ್ವತ್ಥನಾರಾಯಣ, ವಿದ್ಯಾರ್ಥಿ ಕಾರ್ಯನಿರ್ವಾಹಕರಾದ ಗೌರಿ ಎಂ.ಬೆಳವಾಡಿ, ನಿಖೀತಾ ಪ್ರಸಾದ್‌, ಬಿ.ಎನ್‌.ಶಾರದಾ, ಶಿವಪ್ರಕಾಶ್‌ ಎಂ.ನಾಗರಾಳೆ, ಯಶ್‌ವರ್ಧನ್‌ ಜೈನ್‌ ಇದ್ದರು.

ಶಿಕ್ಷಾರ್ಹ ಅಪರಾಧ: ಎಲ್ಲಾ ಕಾನೂನುಗಳ ಅರಿವು ಸಾಧ್ಯವಿಲ್ಲವಾದರೂ ನಮ್ಮ ದೈನಂದಿನ ಬದುಕಿನಲ್ಲಿ ಅಗತ್ಯವಾದ ಕಾನೂನುಗಳ ಅರಿವು ಪಡೆಯುವುದು ಅವಶ್ಯಕ, ತಪ್ಪು ಮಾಡಿದ ಮೇಲೆ ನನಗೆ ಕಾನೂನಿನ ಅರಿವಿಲ್ಲ ಎಂದರೆ ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ.

ಕಾನೂನನ್ನು ಗೌರವಿಸುವುದು ಪ್ರತಿಯೊಬ್ಬ ಪ್ರಜೆಯ ಕರ್ತವ್ಯ, ಇದರಲ್ಲಿ ಬಡವ, ಶ್ರೀಮಂತನೆಂಬ ಬೇಧ ಭಾವವಿಲ್ಲ ಎಂದು ತಿಳಿಸಿದರು. ಬಾಲ್ಯವಿವಾಹ, ವರದಕ್ಷಿಣೆ, ಮಹಿಳೆ ಮತ್ತು ಮಕ್ಕಳ ಮೇಲಿನ ದೌರ್ಜನ್ಯ ಇವೆಲ್ಲವೂ ಅತ್ಯಂತ ಕಠಿಣ ಶಿಕ್ಷಾರ್ಹ ಅಪರಾಧ ಎಂದು 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ತಿಳಿಸಿದರು.

ಟಾಪ್ ನ್ಯೂಸ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.