ನ್ಯಾಯಾಧೀಶರಿಂದ ಕಾನೂನು ಸಾಕ್ಷರತಾ ರಥಕ್ಕೆ ಚಾಲನೆ
Team Udayavani, Feb 15, 2020, 4:51 PM IST
ಶ್ರೀನಿವಾಸಪುರ: ತಾಲೂಕಾದ್ಯಂತ ಶುಕ್ರವಾರದಿಂದ 17 ರವರಿಗೆ 4 ದಿನಗಳ ಕಾಲ 12 ಸ್ಥಳಗಳಲ್ಲಿ ಇಲಾಖೆ ಮತ್ತು ತಾಪಂ ಸಂಯೋಜನೆಯೊಂದಿಗೆ ಹಮ್ಮಿಕೊಂಡಿರುವ ಕಾನೂನು ಸಾಕ್ಷರಥಾ ರಥ ಮತ್ತು ಜನತಾ ನ್ಯಾಯಾಲಯ ಜಾಗೃತಿ ಕಾರ್ಯಕ್ರಮಕ್ಕೆ ನ್ಯಾಯಾಲಯ ಆವರಣದಲ್ಲಿ ಜೆಎಂಎಫ್ ನ್ಯಾಯಾ ಲಯದ ಪ್ರಧಾನ ಸಿವಿಲ್ ನ್ಯಾಯಾಧೀಶ ಎಚ್.ಆರ್.ದೇವರಾಜು ಚಾಲನೆ ನೀಡಿದರು.
ತಾಲೂಕಾದ್ಯಂತ ವಿವಿಧ ಗ್ರಾಮಗಳಲ್ಲಿ 4 ದಿನಗಳ ಕಾಲ ಹಮ್ಮಿಕೊಂಡಿರುವ ಜಾಗೃತಿ ಕಾರ್ಯಕ್ರಮದ ರಥೋತ್ಸವಕ್ಕೆ ನ್ಯಾಯಾಲಯದ ಅವರಣದಲ್ಲಿ ಚಾಲನೆ ಪಡೆದುಕೊಂಡು ಪ್ರಥಮ ಕಾರ್ಯಕ್ರಮವಾಗಿ ಪಟ್ಟಣದ ಕರ್ನಾಟಕ ಮಾದರಿ ಪ್ರೌಢ ಶಾಲೆಯಲ್ಲಿ ಫೋಕ್ಸೋ ಕಾಯಿದೆ ಹಾಗೂ ಬಾಲ್ಯ ವಿವಾಹ ಉಪನ್ಯಾಸ ಕಾರ್ಯಕ್ರಮ ನಡೆಸಲಾಯಿತು. ಶಾಲೆಯ ಮುಖ್ಯ ಶಿಕ್ಷಕರಾದಎಂ.ಬೈರೇಗೌಡ ಅಧ್ಯಕ್ಷತೆ ವಹಿಸಿದ್ದರು. ಜೆ
ಎಂಎಫ್ ಪ್ರಧಾನ ಸಿವಿಲ್ ನ್ಯಾಯಾಧೀಶ ಎಚ್.ಆರ್. ದೇವರಾಜು,ಅಪರ ಸಿವಿಲ್ ನ್ಯಾಯಾಧೀಶ ನಾಗೇಶ್ ನಾಯಕ್, ವಕೀಲರ ಸಂಘದ ಅಧ್ಯಕ್ಷ ಎನ್.ವಿ. ಜಯ ರಾಮೇಗೌಡ, ಹಿರಿಯ ವಕೀಲರಾದ ಕೆ .ಶಿವಪ್ಪ, ಟಿ.ವೆಂಕಟೇಶ್, ಜೆ.ಎನ್. ಶಂಕರಪ್ಪ ನಾಯಕ, ಸಿಪಿಐ ರಾಘವೇಂದ್ರ ಪ್ರಕಾಶ್, ವಕೀಲ ರಾಜಗೋಪಾಲ್, ಕೆ.ನಾಗರಾಜಪ್ಪ ಇತರರು ಇದ್ದರು. ಯಲ್ದೂರು ನ್ಯಾಷನಲ್ ಹೈಸ್ಕೂಲ್ನಲ್ಲಿ ಶಾಲಾ ಮುಖ್ಯೋಪಾಧ್ಯಾಯ ಕೆ.ಪ್ರಕಾಶಯ್ಯ ಅವರ ಅಧ್ಯಕ್ಷತೆಯಲ್ಲಿ ಸ್ವಚ್ಛ ಭಾರತ್ ಹಾಗೂ ಜನನ ಮರಣ ಉಪನ್ಯಾಸದಲ್ಲಿ ಅಪರ ಸಿವಿಲ್ ನ್ಯಾಯಾಧೀಶ ನಾಗೇಶ್ ನಾಯಕ್ ಕಾರ್ಯಕ್ರಮ ಉದ್ಘಾಟಿಸಿದರು.
ಪ್ರಧಾನ ಸಿವಿಲ್ ನ್ಯಾಯಾಧೀಶ ಎಚ್.ಆರ್. ದೇವ ರಾಜು, ವಕೀಲರ ಸಂಘದ ಅಧ್ಯಕ್ಷ ಎನ್.ವಿ. ಜಯ ರಾಮೇಗೌಡ, ರೂಪಾವತಿ, ಟಿ. ವೆಂಕಟೇಶ್ ಉಪಸ್ಥಿತರಿದ್ದರು. ಯಲ್ದೂರು ಹೋಬಳಿ ವ್ಯಾಪ್ತಿಯ ಮುತ್ತಕಪಲ್ಲಿ ಸರ್ಕಾರಿ ಪ್ರೌಢಶಾಲೆ ಆವರಣ ದಲ್ಲಿ ಶಾಲೆ
ಮುಖ್ಯೋಪಾಧ್ಯಾಯರಾದ ರೋಸ್ಲಿನ್ ಸತ್ಯ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರವನ್ನು ಜೆಎಂಎಫ್ ಪ್ರಧಾನ ಸಿವಿಲ್ ನ್ಯಾಯಾಧೀಶ ದೇವರಾಜು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಹೆಣ್ಣು ಮಕ್ಕಳ ಭ್ರೂಣ ಹತ್ಯೆ , ಜೀವನಾಂಶ ಉಪನ್ಯಾಸ ನೀಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolar; ಮೋದಿ ಶನಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆ
CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?
ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್ದು: ಕೃಷ್ಣಬೈರೇ ಗೌಡ
Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್
H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ