ಗರಿಕೆ ಸಾಂಸ್ಕೃತಿಕ ಕೇಂದ್ರದಿಂದ ಮಕ್ಕಳಿಗೆ ಪಾಠ

ರಂಗಭೂಮಿ ಜೊತೆಗೆ ಉಚಿತ ಬೋಧನೆ

Team Udayavani, Oct 5, 2020, 4:39 PM IST

ಗರಿಕೆ ಸಾಂಸ್ಕೃತಿಕ ಕೇಂದ್ರದಿಂದ ಮಕ್ಕಳಿಗೆ ಪಾಠ

ಬಂಗಾರಪೇಟೆ: ಐದಾರು ತಿಂಗಳಿನಿಂದ ಕೋವಿಡ್ ಸೋಂಕಿನಿಂದಾಗಿ ಶಾಲೆಗಳಿಗೆ ಸರ್ಕಾರ ರಜೆ ಘೋಷಿಸಿದ್ದು, ಶಿಕ್ಷಣದಿಂದ ದೂರವಾಗಿದ್ದ ಗ್ರಾಮೀಣ ಪ್ರದೇಶದ ಮಕ್ಕಳಿಗೆ ವಿದ್ಯಾಭ್ಯಾಸ ಕಲಿಕೆಗೆ ಪ್ರಾಮುಖ್ಯತೆ ಕೊಟ್ಟು ಪ್ರತಿ ದಿನ ಉಚಿತ ಶಿಕ್ಷಣ ನೀಡಲು ತಾಲೂಕಿನ ಬೂದಿಕೋಟೆ ಹೋಬಳಿಯ ಕಾರಮಾನಹಳ್ಳಿಯ ಗರಿಕೆ ಸಾಂಸ್ಕೃತಿಕಕೇಂದ್ರ ಮುಂದಾಗಿದೆ.

ರಂಗಭೂಮಿಯೊಟ್ಟಿಗೆ ಶಿಕ್ಷಣ: ಗ್ರಾಮೀಣಭಾಗದ ಶಾಲಾ ಮಕ್ಕಳಿಗೆ ಐದು ವರ್ಷಗಳಿಂದ ಪಠ್ಯಕ್ಕೆ ಪೂರಕವಾಗಿ ಕಲೆ ಮತ್ತು ಸಾಹಿತ್ಯಕ್ಕೆ ಕೊಂಡಿಯಾಗಿರುವ ರಂಗಭೂಮಿಯೊಟ್ಟಿಗೆ ಶಿಕ್ಷಣ ನೀಡುತ್ತಾ ತಾಲೂಕಿನ ಬೂದಿಕೋಟೆ ಹೋಬಳಿ ಕಾರಮಾನಹಳ್ಳಿಯ ಗರಿಕೆ ಸಾಂಸ್ಕೃತಿಕ ಕೇಂದ್ರ ಬಂದಿದೆ. ಜೊತೆಗೆ ಪ್ರತಿ ವರ್ಷ ಬೇಸಿಗೆಯಲ್ಲಿ ಬೇಸಿಗೆ ರಂಗ ಶಿಬಿರ ಆಯೋಜನೆ ಮಾಡಿ ಮಕ್ಕಳಿಂದ ನಾಟಕ ಕಟ್ಟುವಲ್ಲಿ ಸಹ ಯಶಸ್ವಿಯಾಗಿದೆ.

ಕನ್ನಡ, ಇಂಗ್ಲಿಷ್‌ ತರಗತಿ: ಕೋವಿಡ್ ಲಾಕ್‌ ಡೌನ್‌ ಕರಿನೆರಳು ಸಂಸ್ಥೆಯ ಚಟುವಟಿಕೆಗಳ ಮೇಲೆ ಬಿದ್ದಿದ್ದು, ಯಾರೂ ಸಹ ದೃತಿಗೆಡದೆ ಮಕ್ಕಳು ಶಿಕ್ಷಣ ಮತ್ತು ಇತರೆ ಚಟುವಟಿಕೆಗಳಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಹಾಗೂ ಪೋಷಕರ ಒತ್ತಾಯದ ಮೇರೆಗೆ ಪ್ರತಿ ದಿನ ಕನ್ನಡ ಹಾಗೂ ಇಂಗ್ಲಿಷ್‌ ತರಗತಿಗಳನ್ನು ತೆಗೆದುಕೊಳ್ಳಲಾಗುತ್ತಿದೆ.

ಜಿಲ್ಲೆಗೆ ಮಾದರಿ: ಗಡಿಭಾಗದಲ್ಲಿಕನ್ನಡದ ಜೊತೆಗೆ ತೆಲುಗು ಮತ್ತು ತಮಿಳು ಪ್ರಭಾವ ಹೆಚ್ಚಾಗಿರುವ ಕಾರಣದಿಂದ ಕನ್ನಡಕ್ಕೆ ಒತ್ತು ಕೊಡುವ ಮೂಲಕ ಈ ಭಾಗದ ಮಕ್ಕಳ ಮುಂದಿನ ಶೈಕ್ಷಣಿಕ ಪ್ರಗತಿಗೆ ಕನ್ನಡ ಭಾಷೆ ಮಾನದಂಡವಾಗಬೇಕೆಂಬ ಮಹದಾಸೆ ಸಂಸ್ಥೆ ಹೊಂದಿದೆ. ಸಂಸ್ಥೆಯು ಸರ್ಕಾರದ ಯಾವುದೇ ಸಂಪನ್ಮೂಲಗಳನ್ನು ಬಳಸದೇ, ಸಮಾನ ಮನಸ್ಕರು ಒಟ್ಟುಗೂಡಿ ಆರ್ಥಿಕ ಕ್ರೋಢಿಕರಿಸುತ್ತಾ ಚಟುವಟಿಕೆಗಳನ್ನು ಹಮ್ಮಿಕೊಂಡು ಬರುತ್ತಿರುವ ಗರಿಕೆ ಸಂಸ್ಥೆ ಜಿಲ್ಲೆಗೆ ಮಾದರಿಯಾಗಿದೆ.

ಪಾಠ, ಚಿತ್ರಕಲೆ, ಸಂಗೀತ: ಗರಿಕೆ ಕುಟೀರಕ್ಕೆ ಪ್ರತಿದಿನ ಕಾರಮಾನಹಳ್ಳಿ ಗ್ರಾಮದ 1ರಿಂದ ಪಿಯುಸಿ ವರೆಗೆ ವ್ಯಾಸಂಗ ಮಾಡುತ್ತಿರುವ 24 ಹೆಣ್ಣು ಹಾಗೂ 26 ಗಂಡು ಮಕ್ಕಳು ಬರುತ್ತಿದ್ದು,ಇವರಿಗೆ ಇಬ್ಬರು ಬೋಧಕರಿದ್ದಾರೆ. ಮಕ್ಕಳು ಪಾಠಪ್ರವಚನಗಳ ಜೊತೆಗೆ ಚಿತ್ರಕಲೆ, ಲಯ, ಸಂಗೀತ, ರಂಗಭೂಮಿ ಕಲಿಯುತ್ತಿದ್ದಾರೆ.

ಇಲ್ಲಿಗೆ ಬರುವಂತಹ ಬಹಳಷ್ಟು ಮಕ್ಕಳಿಗೆ ಓದಲು ಮತ್ತು ಬರೆಯಲು ಕನ್ನಡ ಸರಿಯಾಗಿ ಬರುವುದಿಲ್ಲವಾದ್ದರಿಂದ ಕನ್ನಡ ವರ್ಣಮಾಲೆ, ವ್ಯಾಕರಣ ಕಲಿಸಲು ಒತ್ತು ಕೊಟ್ಟು ವಾರಕ್ಕೆ ಎರಡುದಿನ ಇಂಗ್ಲಿಷ್‌ ಸಹ ಕಲಿಸಲಾಗುತ್ತಿದೆ. ಸಾಕಷ್ಟು ಮಕ್ಕಳು ಬೆಳಗ್ಗೆಯಿಂದ ಸಂಜೆಯ ತನಕ ಬೇರೆಯವರ ಹಾಗೂ ತಮ್ಮದೇ ಜಮೀನಿನಲ್ಲಿ ಹಾಗೂ ಮನೆಯಲ್ಲಿ ಕೆಲಸ ಮಾಡುತ್ತಾ ಸಂಜೆ ಬಂದು ಸಂತೋಷದಿಂದ ಎಲ್ಲರೊಟ್ಟಿಗೆ ಬೆರೆತು ಆಟವಾಡುತ್ತಾ ಪಾಠಕಲಿಯುತ್ತಿದ್ದಾರೆ.

ಕೋವಿಡ್ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು ವಿದ್ಯಾಗಮ ಯೋಜನೆ ಮೂಲಕ ಶಿಕ್ಷಣ ನೀಡಲು ಮುಂದಾಗಿದ್ದರೂ ಸಹ ಇನ್ನವಿದ್ಯಾರ್ಥಿಗಳು ಅತಂತ್ರದಲ್ಲಿದ್ದಾರೆ. ಕೋವಿಡ್ ಹರಡದಂತೆ ಎಚ್ಚರಿಕೆಯ ನಿಯಮಗಳನ್ನು ಪಾಲಿಸುತ್ತಾ ಮಕ್ಕಳಿಗೆ ಶಿಕ್ಷಣ ನೀಡಲಾಗುತ್ತಿದೆ. ಕಿರಣ್‌, ಟ್ರಸ್ಟಿ, ಗರಿಕೆ ಸಾಂಸ್ಕೃತಿಕ ಕೇಂದ್ರ ಕಾರಮಾನಹಳ್ಳಿ

 

ಎಂ.ಸಿ.ಮಂಜುನಾಥ್

ಟಾಪ್ ನ್ಯೂಸ್

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kempegowda Jayanti: ಜಯಂತಿಗೆ ಎಚ್‌ಡಿಡಿ, ಎಚ್ಡಿಕೆಗೆ ಆಹ್ವಾನ ನೀಡದಿದ್ದಕ್ಕೆ ಆಕ್ರೋಶ 

Kempegowda Jayanti: ಜಯಂತಿಗೆ ಎಚ್‌ಡಿಡಿ, ಎಚ್ಡಿಕೆಗೆ ಆಹ್ವಾನ ನೀಡದಿದ್ದಕ್ಕೆ ಆಕ್ರೋಶ 

14

KGF Gold: ಮತ್ತೆ ಚಿನ್ನ ಕೊಡಲಿದೆ ಕೋಲಾರದ ಕೆಜಿಎಫ್!

Tomato-Price

Kolara: ಗಗನಕ್ಕೇರುತ್ತಿರುವ ಟೊಮೆಟೋ ಬೆಲೆ

ಸರಕಾರದ ವಿರುದ್ಧ ಇಂದು ಬಿಜೆಪಿ ಬೃಹತ್‌ ಪ್ರತಿಭಟನೆ: ಅಶ್ವತ್ಥನಾರಾಯಣ

ಸರಕಾರದ ವಿರುದ್ಧ ಇಂದು ಬಿಜೆಪಿ ಬೃಹತ್‌ ಪ್ರತಿಭಟನೆ: ಅಶ್ವತ್ಥನಾರಾಯಣ

ಲೂಟಿ ಸರಕಾರ ಅಂದ್ರೆ ದಾಖಲೆ ಕೇಳುತ್ತಿದ್ದ ಸಿದ್ದು ಈಗ ಏನು ಮಾಡುತ್ತಾರೆ?: ಅಶೋಕ್‌

ಲೂಟಿ ಸರಕಾರ ಅಂದ್ರೆ ದಾಖಲೆ ಕೇಳುತ್ತಿದ್ದ ಸಿದ್ದು ಈಗ ಏನು ಮಾಡುತ್ತಾರೆ?: ಅಶೋಕ್‌

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.