ಕಾಂಗ್ರೆಸ್‌ ಗೆಲ್ಲಿಸಲು ಒಟ್ಟಾಗಿ ಕೆಲಸ ಮಾಡೋಣ: ಮುನಿಯಪ್ಪ


Team Udayavani, Dec 6, 2022, 4:35 PM IST

tdy-18

ಕೋಲಾರ: ನಾನು ಹಳೆಯದನ್ನು ಮರೆತಿದ್ದೇನೆ. ಗುಂಪುಗಾರಿಕೆ ಬಿಟ್ಟು ಒಟ್ಟಾಗಿ ಕೆಲಸ ಮಾಡುವ ಮೂಲಕ ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸಿ ಎಂದು ಮಾಜಿ ಕೇಂದ್ರ ಸಚಿವ ಕೆ.ಎಚ್‌.ಮುನಿಯಪ್ಪ ಅವರು ರಮೇಶ್‌ಕುಮಾರ್‌ ನೇತೃತ್ವದ ಘಟಬಂಧನ್‌ ನಾಯಕರುಗಳ ಹೆಸರು ಹೇಳದೆ ಪರೋಕ್ಷವಾಗಿ ಕರೆ ನೀಡಿದರು.

ಡಿಸೆಂಬರ್‌ ತಿಂಗಳ ಕೊನೆ ವಾರದಲ್ಲಿ ಕೋಲಾರದಲ್ಲಿ ಕಾಂಗ್ರೆಸ್‌ ಸಮಾವೇಶ ಮಾಡುವ ಉದ್ದೇಶದಿಂದ ಸೋಮವಾರಕೆ.ಎಚ್‌.ಮುನಿಯಪ್ಪ ಅಧ್ಯಕ್ಷತೆಯಲ್ಲಿ ಪಕ್ಷದ ಕಚೇರಿ ಬಳಿ ಕರೆಯಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಪಕ್ಷದಕಾರ್ಯಕರ್ತರಲ್ಲಿ ಗೊಂದಲ ಮೂಡಿಸುತ್ತಾ, ಒಗ್ಗಟ್ಟು ಮೂಡಿಸದೇ ಕೆಲವರು ಪ್ರತ್ಯೇಕಸಭೆಗಳನ್ನು ನಡೆಸುತ್ತಿರುವುದರಿಂದ ಪಕ್ಷದಸಂಘಟನೆಗೆ ಹಾಗೂ ಪಕ್ಷದ ಅಭ್ಯರ್ಥಿಗಳಗೆಲುವಿಗೆ ತೊಂದರೆಯಾಗಲಿದೆ. ಇದನ್ನುಅರ್ಥ ಮಾಡಿಕೊಂಡು, ಇನ್ನು ಮುಂದೆ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಗೊಂಡು ಸಭೆಗಳನ್ನು ನಡೆಸುವಂತೆ ಎಚ್ಚರಿಕೆ ನೀಡಿದರು.

ಕೋಲಾರ ಕ್ಷೇತ್ರಕ್ಕೆ ಸಿದ್ದರಾಮಯ್ಯ ಬಂದರೆ ಸ್ವಾಗತ ಮಾಡಿ, ಗೆಲುವಿಗೆ ಶ್ರಮಿಸೋಣ. ಒಂದು ವೇಳೆ ಅವರು ಇಲ್ಲಿ ಸ್ಪರ್ಧಿಸಲು ಇಚ್ಛಿಸದಿದ್ದರೆ ಸ್ಥಳೀಯರಿಗೆಟಿಕೆಟ್‌ ನೀಡಬೇಕು ಎಂದು ಹೈ ಕಮಾಂಡ್‌ಗೆ ಒತ್ತಾಯಿಸುವುದಾಗಿ ತಿಳಿಸಿದರು.

ಗುಂಪುಗಾರಿಕೆ, ಗೊಂದಲ ಸರಿಪಡಿಸಿ: ಕೋಲಾರ ಕ್ಷೇತ್ರಕ್ಕೆ ಬರುವುದು ಹೈಕಮಾಂಡ್‌ ತೀರ್ಮಾನಕ್ಕೆ ಬಿಟ್ಟಿದ್ದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಹೀಗಾಗಿ, ಒಂದು ವೇಳೆ ಹೈ ಕಮಾಂಡ್‌ ಹೇಳಿದರೆ ಸಿದ್ದರಾಮಯ್ಯ ಅವರನ್ನು ನಾವು ಸ್ವಾಗತ ಮಾಡುತ್ತೇವೆ. ಆದರೆ, ಕೋಲಾರದಲ್ಲಿಗುಂಪುಗಾರಿಕೆ, ಗೊಂದಲಗಳು ಇವೆ. ಇವುಗಳನ್ನು ಸರಿಮಾಡಿಕೊಂಡು ಕೋಲಾರಕ್ಕೆಬನ್ನಿ ಎಂದು ಸಿದ್ದರಾಮಯ್ಯಗೆ ಒಂದು ಎಚ್ಚರಿಕೆಯನ್ನೂ ನೀಡಿದ್ದೇನೆ ಎಂದರು.

ಎಲ್ಲಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಗೆಲ್ಲಿಸಿ: ಕೋಲಾರ ವಿಧಾನ ಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಪಕ್ಷದಿಂದ ಸ್ಪರ್ಧೆ ಮಾಡಲು ಇಚ್ಚಿಸಿರುವ ಮಾಜಿ ಸಭಾಪತಿ ವಿ.ಆರ್‌.ಸುದರ್ಶನ್‌,ಪಕ್ಷದ ಉಪಾಧ್ಯಕ್ಷ ಎಲ್‌.ಎ.ಮಂಜುನಾಥ್‌, ಕಿಸಾನ್‌ ಕೇತ್‌ ಜಿಲ್ಲಾ ಅಧ್ಯಕ್ಷ ಊರುಬಾಗಿಲುಶ್ರೀನಿವಾಸ್‌ ಮಾತನಾಡಿ, ರಾಜ್ಯದಲ್ಲಿ ಬಿಜೆಪಿ ಅಧಿಕಾರದಿಂದ ತೊಲಗಿಸಿ, ಕಾಂಗ್ರೆಸ್‌ಪಕ್ಷವನ್ನು ಅಧಿಕಾರಕ್ಕೆ ತರುವ ಜವಾಬ್ದಾರಿನಮ್ಮ ಮೇಲಿದೆ. ಗುಂಪುಗಾರಿಕೆ ಬಿಟ್ಟು ಮಾಜಿಸಂಸದ ಕೆ.ಎಚ್‌.ಮುನಿಯಪ್ಪ ನೇತೃತ್ವದಲ್ಲಿಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಎಲ್ಲಾ ಕ್ಷೇತ್ರಗಳಲ್ಲಿ ಗೆಲ್ಲಿಸುವ ಕೆಲಸ ಮಾಡಬೇಕು ಎಂದರು.

ಸಭೆಯಲ್ಲಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷರಾದ ಪ್ರಸಾದ್‌ ಬಾಬು, ಉದಯಶಂಕರ್‌, ಪಕ್ಷದಜಿಲ್ಲಾ ಎಸ್‌.ಸಿ ಘಟಕದ ಅಧ್ಯಕ್ಷಕೆ.ಜಯದೇವ್‌, ಪಕ್ಷದ ಎಸ್‌.ಟಿ ವಿಭಾಗದ ಜಿಲ್ಲಾಧ್ಯಕ್ಷ ನಾಗರಾಜ್‌, ಹಿಂದುಳಿದ ವರ್ಗಗಳ ಮಂಜುನಾಥ್‌, ಲಾಲ್‌ ಬಹಾದ್ದೂರ್‌ ಶಾಸ್ತ್ರಿ, ಜಗನ್‌, ರತ್ನಮ್ಮ, ವೆಂಕಟಪತೆಪ್ಪ,ತ್ಯಾಗರಾಜ್‌, ಇಕ್ಬಾಲ್‌ ಅಹಮದ್‌, ಸಲ್ಲಾವುದ್ದೀನ್‌ ಬಾಬು ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

11

Politics: ಮುನಿಯಪ್ಪ ಬೆಂಬಲಿಗರಿಗೆ ಭವಿಷ್ಯದ ಆತಂಕ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.