ಲೋಡ್‌ ಶೆಡ್ಡಿಂಗ್‌ ಆರಂಭ: ಜನರಲ್ಲಿ ಆತಂಕ


Team Udayavani, May 24, 2023, 3:14 PM IST

ಲೋಡ್‌ ಶೆಡ್ಡಿಂಗ್‌ ಆರಂಭ: ಜನರಲ್ಲಿ ಆತಂಕ

ಕೋಲಾರ: ಜಿಲ್ಲೆಯಲ್ಲಿ ಲೋಡ್‌ಶೆಡ್ಡಿಂಗ್‌ ಸಂಕಷ್ಟ ಕಾಡಲಾರಂಭಿಸಿದ್ದು, ಬಿಸಿಲಿನ ಬೇಗೆಗೆ ತತ್ತರಿಸಿರುವ ಜನತೆಯನ್ನು ಕಂಗೆಡುವಂತೆ ಮಾಡಿದೆ. ಕೋಲಾರ ದಲ್ಲಿ ಬಿಸಿಲಿನ ತಾಪ 37 ಡಿಗ್ರಿ ದಾಟಿದ್ದು, ಮನೆಗಳಲ್ಲಿ ಫ್ಯಾನ್‌ ಇಲ್ಲದೇ ಜೀವನ ನಡೆಸುವುದು ಸಾಧ್ಯವಿಲ್ಲ ಎನ್ನುವ ವಾತಾವರಣ ನಿರ್ಮಾಣವಾಗಿದೆ.

ಮಧ್ಯಾಹ್ನ ಸಮಯದಲ್ಲಿ ವಿದ್ಯುತ್‌ ಲೋಡ್‌ ಶೆಡ್ಡಿಂಗ್‌ ಜನರನ್ನು ತಾಪದಲ್ಲಿ ಮುಳುಗಿಸುವಂತೆ ಮಾಡುತ್ತಿದ್ದು, ಜನ ಹಿಡಿಶಾಪ ಹಾಕುವಂತಾಗಿದೆ. ಕೋಲಾರ ಜಿಲ್ಲೆ ಕುಡಿಯುವ ನೀರಿಗಾಗಿ ಸಂಪೂ ರ್ಣವಾಗಿ ಕೊಳವೆ ಬಾವಿಗಳನ್ನೇ ನಂಬಿರುವುದರಿಂದಾಗಿ ಇಲ್ಲಿ ವಿದ್ಯುತ್‌ ಕೈಕೊಟ್ಟರೆ ಕುಡಿಯುವ ನೀರಿನ ಸಮಸ್ಯೆಯೂ ಕಾಡಲಿದೆ.

ಈಗಾಗಲೇ ಗ್ರಾಮೀಣ ಪ್ರದೇಶದಲ್ಲಿ ಪಂಪ್‌ ಸೆಟ್‌ಗಳಿಗೆ ಕೆಲ ಗಂಟೆಗಳು ಮಾತ್ರವೇ ತ್ರಿಫೇಸ್‌ ಕರೆಂಟ್‌ ಸರಬರಾಜು ಮಾಡಲಾಗುತ್ತಿದೆ. ಇದೇ ಅವಧಿಯಲ್ಲಿ ಮಾತ್ರ ಗ್ರಾಮೀಣ ಪ್ರದೇಶದ ಕುಡಿಯವ ನೀರಿನ ಸರಬರಾಜು ನಡೆಯುತ್ತದೆ. ಹತ್ತಾರು ರಾಜ್ಯಗಳಿಗೆ ವಿದ್ಯುತ್‌ ವಿತರಣೆಯ ಹೊಣೆಹೊತ್ತ ಪವರ್‌ ಗ್ರಿಡ್‌ ನಗರಕ್ಕೆ ಹೊಂದಿಕೊಂಡಂತಿದ್ದರೂ, ಜಿಲ್ಲೆಗೆ ಇದರಿಂದ ಆಗಿರುವ ಪ್ರಯೋಜನ ಮಾತ್ರ ಶೂನ್ಯ.

ಪವರ್‌ ಗ್ರಿಡ್‌ನಿಂದ ಜಿಲ್ಲೆಗೆ ನಷ್ಟ: ಜಿಲ್ಲೆಗೆ ಪವರ್‌ ಗ್ರಿಡ್‌ ತಂದೆವೆಂದು ಕೆಲವು ರಾಜಕಾರಣಿಗಳು ಬೀಗಿದರೂ, ಇದರಿಂದ ಆಗಿರುವ ನಷ್ಟ ಮಾತ್ರ ಜಿಲ್ಲೆಗೆ ಸಾವಿರಾರು ಕೋಟಿ ರೂಗಳು. ಇತರೆ ಯಾವುದೇ ರಾಜ್ಯಗಳು ಇದನ್ನು ಬೇಡವೆಂದ ಮೇಲೆ ಇಲ್ಲಿಗೆ ತರಲಾಗಿದೆ. ಭೂಮಿಗೆ ಚಿನ್ನದ ಬೆಲೆ ಇರುವಾಗ, ಈ ಪವರ್‌ ಗ್ರಿಡ್‌ನ‌ ಬೃಹತ್‌ ತಂತಿಗಳು ಹಾದು ಹೋಗಿರುವ ಪ್ರದೇಶಗಳ ಕೆಳಗಿನ ಭೂಮಿ ಕೇಳುವವರೇ ಇಲ್ಲವಾಗಿದೆ. ಇಲ್ಲಿನ ರೈತರ ಭೂಮಿಯ ಬೆಲೆ ಇಳಿಕೆ, ಸೇರಿದಂತೆ ಹಲವಾರು ಸಂಕಷ್ಟಗಳಿಗೆ ಕಾರಣವಾಗಿರುವ ಈ ಪವರ್‌ ಗ್ರಿಡ್‌ ಸಂಸ್ಥೆ ಜಿಲ್ಲೆಗೆ ಸ್ವಲ್ಪ ಪ್ರಮಾಣದಲ್ಲಾದರೂ ಉಚಿತ ಇಲ್ಲವೇ ಕಡಿಮೆ ದರದಲ್ಲಿ ವಿದ್ಯುತ್‌ ನೀಡುವ ಅಗತ್ಯವಿತ್ತು ಪವರ್‌ ಗ್ರಿಡ್‌ಅನ್ನು ಜಿಲ್ಲೆಗೆ ಬಿಟ್ಟುಕೊಟ್ಟ ರಾಜ್ಯಗಳು ಯಾವುದಾದರೂ ಕೈಗಾರಿಕೆಗಳಾಗಿದ್ದಲ್ಲಿ ಮತ್ತು ಅದರಿಂದ ಲಾಭವಿದ್ದಲ್ಲಿ ನಮ್ಮ ಜಿಲ್ಲೆಗೆ ಬಿಟ್ಟಕೊಡುತ್ತಿ ದ್ದವೇ ಎಂಬುದನ್ನು ಆಲೋಚಿಸಬೇಕಾಗುತ್ತದೆ.

ಹೆಚ್ಚುವರಿ ವಿದ್ಯುತ್‌ ಒದಗಿಸುವ ಕಾಳಜಿ ತೋರಲಿ: ಈಗಿನ ವಿದ್ಯುತ್‌  ಕ್ಷಾಮದ ಪರಿಸ್ಥಿತಿಯಲ್ಲಾದರೂ, ಕುಡಿಯಲು ಅಂತರ್ಜಲದ ನೀರು ಮತ್ತು ಅದನ್ನು ಹೊರತೆಗೆಯಲು ವಿದ್ಯುತ್‌ ಅನ್ನೇ ಅವಲಂಬಿಸಿರುವ ಇಲ್ಲಿನ ಜನತೆಯ ಆಶೋತ್ತರಗಳಿಗೆ ಸ್ಪಂದಿಸಿ, ಹೆಚ್ಚುವರಿ ಕರೆಂಟ್‌ ಒದಗಿಸುವ ಪ್ರಾಮಾಣಿಕ ಕಾಳಜಿಯನ್ನು ಪವರ್‌ ಗ್ರಿಡ್‌ ಮತ್ತು ಇದರ ಹೊಣೆಹೊತ್ತಿರುವ ಕೇಂದ್ರ ಸರ್ಕಾರದಲ್ಲಿನ ನಮ್ಮ ಜನಪ್ರತಿನಿಧಿಗಳು ಹೊರಬೇಕಾಗಿದೆ.

ಲೋಡ್‌ ಶೆಡ್ಡಿಂಗ್‌ ಮೂಲಕ ವಿದ್ಯುತ್‌ ಕಣ್ಣಾಮುಚ್ಚಾಲೆ ಆಡಲು ಆರಂಭಿಸಿದರೆ, ನಮಗೆ ಉಚಿತ ವಿದ್ಯುತ್‌ ಬೇಡ, ಸಮರ್ಪಕ ವಿದ್ಯುತ್‌ ನೀಡಿ ಸಾಕು ಎಂದು ಜನರೇ ಸರ್ಕಾರಕ್ಕೆ ದುಂಬಾಲು ಬೀಳುವ ಪರಿಸ್ಥಿತಿ ಎದುರಾಗಲಿದೆ.

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.