![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
ಮಾಂಸದ ಅಂಗಡಿಗಳಿಗೆ ಬೀಗ
Team Udayavani, Mar 16, 2020, 5:33 PM IST
![kolar-tdy-1](https://www.udayavani.com/wp-content/uploads/2020/03/kolar-tdy-1-8-620x350.jpg)
ಮುಳಬಾಗಿಲು: ಸರ್ಕಾರದ ಆದೇಶ ದನ್ವಯ ಭಾನುವಾರ ನಗರಸಭೆ ವ್ಯಾಪ್ತಿಯಲ್ಲಿರುವ ಬೀದಿಬದಿಯ ಆಹಾರ ಮಳಿಗೆಗಳಿಗೆ ಪೌರಾಯುಕ್ತ ಶ್ರೀನಿವಾಸ್ಮೂರ್ತಿ ಮತ್ತು ಸಿಬ್ಬಂದಿ ಕೊರೊನಾ ವೈರಸ್ ಕುರಿತು ಜಾಗೃತಿ ಮೂಡಿಸಿದರು.
ಕೊರೊನಾ ವೈರಸ್ ಬಟ್ಟೆಗಳ ಮೇಲೆ 9 ಗಂಟೆ ಜೀವಿಸಿದ್ದರೆ, ವಸ್ತುಗಳ ಮೇಲೆ 12 ಗಂಟೆಗಳ ಕಾಲ ಮತ್ತು ಕೈಗಳಲ್ಲಿ 10 ನಿಮಿಷ ಜೀವಿಸುತ್ತದೆ. ಹೀಗಾಗಿ ವಸ್ತುಗಳನ್ನು ಡಿಟರ್ಜಂಟ್ನಿಂದ ಶುಚಿ ಗೊಳಿಸಬೇಕು. ಬಟ್ಟೆಗಳನ್ನು ತೊಳೆದು, 2 ಗಂಟೆಗಳ ಕಾಲ ಬಿಸಿಲಿನಲ್ಲಿ ಹಾಕಿದರೆ ವೈರಸ್ ಸಾಯುತ್ತದೆ. ಈ ವೈರಸ್ 26-27 ಡಿಗ್ರಿ ಬಿಸಿ ಉಷ್ಣಾಂಶವಿದ್ದರೆ, ಸಾಯುತ್ತದೆ. ಅದಕ್ಕಾಗಿ ಬಿಸಿ ನೀರನ್ನು ಕುಡಿಯಬೇಕು ಮತ್ತು ದೇಹವನ್ನು ಬಿಸಿಲಿಗೆ ಒಡ್ಡುವುದು ಉತ್ತಮ. ಈ ವೈರಸ್ ಸೋಂಕಿತ ವ್ಯಕ್ತಿಯು ಕೆಮ್ಮಿದಾಗ ಮತ್ತು ಸೀನಿದಾಗ, ನಿಕಟ ಸಂಪರ್ಕದಲ್ಲಿದ್ದಾಗ, ಸೋಂಕಿತ ವ್ಯಕ್ತಿಯನ್ನು ಮುಟ್ಟಿದಾಗ, ಅಲ್ಲದೇ ಆತನ ವಸ್ತುಗಳನ್ನು ಬರೀ ಕೈಗಳಿಂದ ಮುಟ್ಟಿದಾಗ ಒಬ್ಬರಿಂದ ಮತ್ತೂಬ್ಬರಿಗೆ ಹರಡುತ್ತದೆ. ಮುಖ್ಯವಾಗಿ ಸ್ವಚ್ಛಗೊಳಿಸದೇ ಕೈಗಳಿಂದ ಕಣ್ಣು, ಮೂಗು, ಬಾಯಿಯನ್ನು ಮುಟ್ಟುವುದರಿಂದಲೂ ಹರಡುವುದರಿಂದ ತಂಪು ಪಾನೀಯಗಳಿಂದ ದೂರವಿರ ಬೇಕು ಎಂದು ಹೇಳಿದರು.
ಆಗ ಮಾತ್ರ ತಮ್ಮನ್ನು ತಾವು ರಕ್ಷಿಸಿ ಕೊಂಡು ಕುಟುಂಬ ಮತ್ತು ಸಮಾಜವನ್ನೂ ರಕ್ಷಿಸಲು ಸಾಧ್ಯ ವಾಗುವುದರಿಂದ ಈ ಎಲ್ಲ ಸೂಚನೆ ಗಳನ್ನು ಖಡ್ಡಾಯವಾಗಿ ಪಾಲಿಸಬೇಕು. ಸ್ವಚ್ಛತೆ ಕುರಿತು ಕಟ್ಟು ನಿಟ್ಟಿನ ಷರತ್ತುಗಳನ್ನೊಳಗೊಂಡ ನೋಟಿಸ್ ಜಾರಿ ಮಾಡಿದರಲ್ಲದೇ ಎಲ್ಲ ಕುರಿ, ಕೋಳಿ ಮತ್ತು ಹಂದಿ ಮಾಂಸದ ಅಂಗಡಿಗಳನ್ನು ಮುಚ್ಚಿಸಿದರು.
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.