Lok Adalat: ವಿಚ್ಛೇದನ ತೊರೆದು ಅದಾಲತ್‌ನಲ್ಲಿ  ಒಂದಾದ 2 ಕುಟುಂಬ


Team Udayavani, Sep 10, 2023, 4:22 PM IST

01

ಮುಳಬಾಗಿಲು: ನಗರದ ಜೆಎಂಎಫ್ಸಿ ನ್ಯಾಯಾಲ ಯದಲ್ಲಿ ನಡೆದ ಲೋಕ ಅದಾಲತ್‌ನಲ್ಲಿ ಹಿರಿಯ ನ್ಯಾಯಾಧೀಶ ಪಿ.ಈಶ್ವರ್‌ ಸಮ್ಮುಖದಲ್ಲಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದ ಎರಡು ಜೋಡಿಗಳು ವೈಮನಸ್ಸು ಮರೆತು ಒಂದಾಗಲು ನ್ಯಾಯಾಧೀಶರು ಮತ್ತು ವಕೀಲರು ಒಳಗೊಂಡಂತೆ ನ್ಯಾಯಾಲಯವೇ ಸಾಕ್ಷಿಯಾಯಿತು.

ಕೋಲಾರ ತಾಲೂಕು ಯಾನಾದಹಳ್ಳಿ ಗ್ರಾಮದ ವೈ.ವಿ.ಮಂಜುನಾಥ್‌ ಎಂಬಾತ 2017ರ ಅಕ್ಟೋಬರ್‌ 14ರಂದು ಮುಳಬಾಗಿಲು ತಾಲೂಕು ದೇವರಾಯಸಮುದ್ರ ಗ್ರಾಮದ ಗಾಯತ್ರಿ ಎಂಬುವರೊಂದಿಗೆ ಮದುವೆಯಾಗಿದ್ದು, ಸಂಸಾರದಲ್ಲಿ ಉಂಟಾದ ಸಣ್ಣ ಪುಟ್ಟ ಗಲಾಟೆಗಳಿಂದ ದಾಂಪತ್ಯದಿಂದ ಬೇರೆಯಾಗಲು ನಿರ್ಧರಿಸಿದ ದಂಪತಿಗಳಿಬ್ಬರೂ ವಿವಾಹ ವಿಚ್ಛೇದನಕ್ಕೆ ನ್ಯಾಯಾಲಯ ಮೊರೆ ಹೋಗಿದ್ದರು. ಅದೇ ರೀತಿ ಕಳೆದ 3 ವರ್ಷದ ಹಿಂದೆ ಮುಳಬಾಗಿಲು ತಾಲೂಕು ಮಲ್ಲೆಕುಪ್ಪ ಗ್ರಾಮದ ಆನಂದಕುಮಾರ್‌ ಮತ್ತು ರೇವತಿ ವಿವಾಹವಾಗಿದ್ದರು. ಆದರೆ ದಂಪತಿಗಳ ನಡುವೆ ಉಂಟಾದ ಕೌಟುಂಬಿಕ ಕಲಹದಿಂದ ಬೇಸರಗೊಂಡು ವಿಚ್ಛೇದನ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಎರಡೂ ಜೋಡಿಗಳಿಗೂ ನ್ಯಾಯಾಧೀಶ ಪಿ.ಈಶ್ವರ್‌ ಕೌನ್ಸಿಲಿಂಗ್‌ ನೀಡಿದ್ದರ ಅನ್ವಯ ವೈಮಸ್ಸು ಮರೆತು ಒಂದಾದರು.

2,354 ಪ್ರಕರಣ ಇತ್ಯರ್ಥ: ಹಿರಿಯ ಸಿವಿಲ್‌ ನ್ಯಾಯಾಧೀಶ ಪಿ.ಈಶ್ವರ್‌ ಅವರ ನ್ಯಾಯಾಲಯದಲ್ಲಿ 1,175 ಪ್ರಕರಣಗಳ ಪೈಕಿ 1,137 ಪ್ರಕರಣ ಇತ್ಯರ್ಥ ಪಡಿಸಿ 1.88 ಕೋಟಿ ಹಣವನ್ನು ಇತ್ಯರ್ಥ ಪಡಿಸಿದರು. ಪ್ರಧಾನ ಸಿವಿಲ್‌ ನ್ಯಾಯಾಧೀಶ ನರಸಿಂಹಮೂರ್ತಿ ಪ್ರಧಾನ ಸಿವಿಲ್‌ ನ್ಯಾಯಾಲಯದಲ್ಲಿ 825 ಪ್ರಕರಣಗಳ ಪೈಕಿ 804 ಪ್ರಕರಣ ಇತ್ಯರ್ಥ ಪಡಿಸಿ 1,02,70,289 ರೂ. ಇತ್ಯರ್ಥ ಪಡಿಸಿದರು.

ಅದೇ ರೀತಿ ಕಿರಿಯ ಶ್ರೇಣಿ ನ್ಯಾಯಾಲಯದ 418 ಪ್ರಕರಣಗಳ ಪೈಕಿ 413 ಪ್ರಕರಣ ಇತ್ಯರ್ಥ ಪಡಿಸಿ 8,060 ರೂ. ಇತ್ಯರ್ಥ ಪಡಿಸಿದರು. ಒಟ್ಟಾರೆ ಮೂರು ನ್ಯಾಯಾಲಯಗಳ 2,418 ಪ್ರಕರಣ ಪೈಕಿ 2,354 ಪ್ರಕರಣ ಇತ್ಯರ್ಥ ಪಡಿಸಿದ್ದಾರೆ. ಹಿರಿಯ ವಕೀಲ ಕೆ.ಆರ್‌.ರಾಜಣ್ಣ, ಶೇಖರ್‌, ವೆಂಕಟರಮಣ(ಬಾಬು), ಚಂದ್ರಶೇಖರ್‌ ಪೂಜಾರಿ, ಶಂಕರ್‌, ಸರ್ಕಾರಿ ಅಭಿಯೋಜಕರಾಗಿ ಆಯ್ಕೆಯಾಗಿರುವ ಆರ್‌.ನಾಗರಾಜ್‌ ಸೇರಿದಂತೆ ಹಲವು ವಕೀಲರು ಮತ್ತು ಕಕ್ಷಿದಾರರಿದ್ದರು.

ಟಾಪ್ ನ್ಯೂಸ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.