ವಕೀಲ ವೃತಿ ಘನತೆ ಕಾಪಾಡಿಕೊಳ್ಳಿ


Team Udayavani, Dec 5, 2022, 4:00 PM IST

ವಕೀಲ ವೃತಿ ಘನತೆ ಕಾಪಾಡಿಕೊಳ್ಳಿ

ಕೋಲಾರ: ನಿರಂತರ ಅಧ್ಯಯನದ ಮೂಲಕ ಉತ್ತಮ ವಕೀಲರಾಗಲು ಅವಕಾಶವಿದ್ದು, ವಕೀಲ ವೃತ್ತಿಯ ಘನತೆ ಗೌರವವನ್ನು ಕಾಪಾಡಿ ಕೊಂಡು ಮುನ್ನಡೆಯಬೇಕು ಎಂದು ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಜಿ.ಶ್ರೀಧರ್‌ ಹೇಳಿದರು.

ನಗರದ ವಕೀಲರ ಸಂಘದ ಸಭಾಂಗಣದಲ್ಲಿ ವಕೀಲರ ದಿನಾಚರಣೆ ಅಂಗವಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ರೋಟರಿ ಸಂಸ್ಥೆ, ಲಯನ್ಸ್‌ ರಕ್ತ ನಿಧಿ ಮತ್ತು ವಕೀಲರ ಸಂಘದ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಸ್ವಯಂ ಪ್ರೇರಿತ ರಕ್ತದಾನ ಶಿಬಿರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿ, ಪ್ರತಿ ವರ್ಷದಂತೆ ಈ ವರ್ಷವೂ ಬಹಳ ಎಲ್ಲಾ ವಕೀಲರನ್ನು ಒಟ್ಟುಗೂಡಿಸಿ ವಕೀಲರ ದಿನಾ ಚರಣೆಯನ್ನು ಆಚರಣೆ ಮಾಡಿದ್ದೇವೆ. ಈ ದಿನದಂದು ಕಾರ್ಯಕ್ರಮದ ಜೊತೆಗೆ ಸಮಾಜಕ್ಕೂ ಕೊಡುಗೆ ನೀಡುವ ಉದ್ದೇಶದಿಂದ ರಕ್ತದಾನ ಶಿಬಿರ ಹಮ್ಮಿಕೊಂಡಿದ್ದು, ನೂರಾರು ವಕೀಲರು ರಕ್ತದಾನಕ್ಕೆ ಮುಂದಾಗಿರುವುದು ಶ್ಲಾಘನೀಯ ಎಂದರು.

ಇತ್ತೀಚಿನ ದಿನಗಳಲ್ಲಿ ಅಪಘಾತಗಳಲ್ಲಿ ಗಾಯಗೊಂಡವರಿಗೆ, ವಿವಿಧ ಕಾಯಿಲೆ, ಶಸ್ತ್ರ ಚಿಕಿತ್ಸೆಗೆ ಒಳಗಾದವರಿಗೆ ರಕ್ತದ ಅಗತ್ಯವಿದೆ. ಆದರೆ, ಅದನ್ನು ತಯಾರಿಸಲು ಸಾಧ್ಯವಿಲ್ಲ. ಮಾನವೀಯ ನೆಲಗಟ್ಟಿನಲ್ಲೇ ಮನುಷ್ಯರಾದ ನಾವೇ ರಕ್ತ ನೀಡುವ ಮೂಲಕ ಮತ್ತೂಂದು ಜೀವದ ರಕ್ಷಣೆಗೆ ಕೈಜೋಡಿಸಬೇಕು ಎಂದರು.

ವಕೀಲರ ಸಮಸ್ಯೆಗಳಿಗೆ ಉತ್ತರಿಸಿದ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ನಾಗರಾಜ್‌ ಅವರು, ಬಹಳ ದಿನಗಳಿಂದ ಎಲೆ ಕ್ಟ್ರಾನಿಕ್‌ ಎವಿಡೆನ್ಸ್‌ ಕುರಿತು ಬಹಳಷ್ಟು ಅರಿವಿನ ಕೊರತೆಯಿದ್ದು, ವಕೀಲರ ಮನವಿಯ ಮೇರೆಗೆ ಸಂಪೂರ್ಣ ಮಾಹಿತಿಯನ್ನು ನೀಡುವ ಮೂಲಕ ಇತರೆ ವಿವಿಧ ಸೆಕ್ಷನ್‌ಗಳ ಮಾಹಿತಿ ಒದಗಿಸಿದರು.

ಪ್ರಕರಣಗಳ ವಿಲೇವಾರಿಗೆ ಸಹಕರಿಸಿ: ನ್ಯಾಯಾಲಯದಲ್ಲಿ ಹೆಚ್ಚುತ್ತಿರುವ ಪ್ರಕರಣಗಳ ವಿಲೇವಾರಿಯಲ್ಲಿ ವಕೀಲರು ಸಹಕಾರ ನೀಡಬೇಕು. ಪ್ರಕರಣಗಳನ್ನು ಶೀಘ್ರ ಇತ್ಯರ್ಥಪಡಿಸಲು ಪ್ರತಿಯೊಬ್ಬರಲ್ಲೂ ಬದ್ಧತೆ ಮುಖ್ಯ. ವಿಚಾರಣೆ ಶೀಘ್ರ ಮುಗಿಸಿದರೆ ಬೇಗ ನ್ಯಾಯದಾನ ಒದಗಿಸಲು ಸಾಧ್ಯ ಎಂದರು. ಉತ್ತಮ ಸಮಾಜ ಸೇವೆ ಮಾಡಿ: ಒಟ್ಟಾರೆ ಎಲ್ಲಾ ವಕೀಲರು ಸಮಾಜದ ಚಿಂತನೆ ಮಾಡಿ, ಜನಸಾಮಾನ್ಯರಿಗೆ ನಿಜವಾದ ನ್ಯಾಯ ಒದಗಿಸುವ ಮೂಲಕ ವಕೀಲರು ಸಮುದಾಯದಲ್ಲಿ ಒಂದು ಉತ್ತಮ ಸಮಾಜ ಸೇವೆ ಮಾಡಬೇಕು. ಕೇವಲ ಹಣ ಸಂಪಾದನೆ ಮಾತ್ರವಲ್ಲ, ಸಮಾಜಕ್ಕೂ ನೆರವಾಗಬಹುದು ಎಂಬುದನ್ನು ಮೊದಲು ಅರಿಯಬೇಕು. ಈ ನಿಟ್ಟಿನಲ್ಲಿ ವಕೀಲರು ಅತ್ಯಂತ ಉತ್ತಮ ಕೆಲಸ ಮಾಡಿದ್ದಾರೆ. ಇಂದು ಕೊರತೆ ಇರುವ ರಕ್ತವನ್ನು ಶಿಬಿರದ ಮೂಲಕ ಒದಗಿಸುವ ಮೂಲಕ ಸಮಾಜಕ್ಕೆನೆರವಾಗುವ ಕೆಲಸ ಮಾಡಿದ್ದಾರೆ ಎಂದು ಹೇಳಿದರು.

ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ರಘುಪತಿಗೌಡ, ಹಿರಿಯ ವಕೀಲರಾದ ಎಂ.ವಿ.ಸುಬ್ಟಾರೆಡ್ಡಿ, ಬಿಸಪ್ಪಗೌಡ, ಕೋದಂಡಪ್ಪ ಹಾಜರಿದ್ದರು.

ಅಪಘಾತಗಳಲ್ಲಿ ಗಾಯವಾದ, ಶಸ್ತ್ರ ಚಿಕಿತ್ಸೆಗೆ ಒಳಗಾದವರಿಗೆ ರಕ್ತದ ಅಗತ್ಯವಿದೆ. ಆದರೆ, ಅದನ್ನು ತಯಾರಿಸಲು ಸಾಧ್ಯವಿಲ್ಲ. ಮಾನವೀಯ ನೆಲಗಟ್ಟಿನಲ್ಲೇ ಮನುಷ್ಯರಾದ ನಾವೇ ರಕ್ತ ನೀಡುವ ಮೂಲಕ ಮತ್ತೂಂದು ಜೀವದ ರಕ್ಷಣೆಗೆ ಕೈಜೋಡಿಸಬೇಕು. -ಜಿ.ಶ್ರೀಧರ್‌, ಅಧ್ಯಕ್ಷ ಜಿಲ್ಲಾ ವಕೀಲರ ಸಂಘ

ಟಾಪ್ ನ್ಯೂಸ್

josh hazlewood glenn maxwell will not feature opening match of RCB

ಐಪಿಎಲ್ 2023: ಆರ್ ಸಿಬಿಯ ಮೊದಲ ಪಂದ್ಯಕ್ಕೆ ಲಭ್ಯವಿಲ್ಲ ಹೇಜಲ್ವುಡ್, ಮ್ಯಾಕ್ಸವೆಲ್

ರಾಮನ ಅವತಾರ ತಾಳಿದ ರಿಷಿ; ಫ‌ಸ್ಟ್‌ ಲುಕ್‌ ಪೋಸ್ಟರ್‌ ಬಂತು

ರಾಮನ ಅವತಾರ ತಾಳಿದ ರಿಷಿ; ಫ‌ಸ್ಟ್‌ ಲುಕ್‌ ಪೋಸ್ಟರ್‌ ಬಂತು

ಟ್ಯೂಷನ್ ಗೆ ತೆರಳಿ ನಾಪತ್ತೆಯಾಗಿದ್ದ ಬಾಲಕನ ಮೃತದೇಹ ಕುಮಾರಧಾರ ನದಿಯಲ್ಲಿ ಪತ್ತೆ

ಟ್ಯೂಷನ್ ಗೆ ತೆರಳಿ ನಾಪತ್ತೆಯಾಗಿದ್ದ ಬಾಲಕನ ಮೃತದೇಹ ಕುಮಾರಧಾರ ನದಿಯಲ್ಲಿ ಪತ್ತೆ

navazuddin

ನಟ ನವಾಜುದ್ದೀನ್,ಮಾಜಿ ಪತ್ನಿಗೆ ಮಕ್ಕಳ ಸಲುವಾಗಿ ಹಾಜರಾಗಲು ಹೇಳಿದ ಹೈಕೋರ್ಟ್

ಬೆಂದೂರ್ ವೆಲ್; ಖಾಸಗಿ ಬಸ್ ಧಾವಂತಕ್ಕೆ ಮತ್ತೊಂದು ಬಲಿ, ನಿಲ್ಲಿಸದೆ ಪರಾರಿಯಾದ ಚಾಲಕ

ಬೆಂದೂರ್ ವೆಲ್; ಖಾಸಗಿ ಬಸ್ ಧಾವಂತಕ್ಕೆ ಮತ್ತೊಂದು ಬಲಿ, ನಿಲ್ಲಿಸದೆ ಪರಾರಿಯಾದ ಚಾಲಕ

4-mangaluru

ಮಂಗಳೂರು: 14ನೇ ಮಹಡಿಯಿಂದ ಬಿದ್ದು ಯುವಕ ಮೃತ್ಯು

ಸಿನಿಮಾಕ್ಕೆ ಭಾಷೆಗಳ ಗಡಿ ಸಲ್ಲದು…: ಕನ್ನಡಕ್ಕೆ ಬಂದ ಅನುಪಮ್ ಖೇರ್

ಸಿನಿಮಾಕ್ಕೆ ಭಾಷೆಗಳ ಗಡಿ ಸಲ್ಲದು…: ಕನ್ನಡಕ್ಕೆ ಬಂದ ಅನುಪಮ್ ಖೇರ್



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

TDY-15

ರಾಹುಲ್‌ ಕೋಲಾರಕ್ಕೆ ಬಂದರೇನು ಬದಲಾವಣೆ ಆಗಲ್ಲ

tdy-20

ಕೋಲಾರ: ಸಿದ್ದು ಸ್ಪರ್ಧೆ ಘೋಷಣೆಗೆ ಏ.5ರ ಗಡುವು

ಏ.5ಕ್ಕೆ ಕೋಲಾರಕ್ಕೆ ರಾಹುಲ್‌ ಗಾಂಧಿ

ಕೋಲಾರಕ್ಕೆ ಏ.5 ರಂದು ರಾಹುಲ್‌, ಕಾಂಗ್ರೆಸ್‌ ಶಕ್ತಿ ಪ್ರದರ್ಶನ

tdy-16

ಸಿದ್ದು ಬೆಂಬಲಿಗರ ಪಾಳೆಯದಲ್ಲಿ ನೀರವ ಮೌನ

tdy-15

ಕ್ಷೇತ್ರದ ಅಭಿವೃದ್ಧಿಗೆ ಸಂಕಲ್ಪ ಮಾಡೋಣ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

josh hazlewood glenn maxwell will not feature opening match of RCB

ಐಪಿಎಲ್ 2023: ಆರ್ ಸಿಬಿಯ ಮೊದಲ ಪಂದ್ಯಕ್ಕೆ ಲಭ್ಯವಿಲ್ಲ ಹೇಜಲ್ವುಡ್, ಮ್ಯಾಕ್ಸವೆಲ್

ರಾಮನ ಅವತಾರ ತಾಳಿದ ರಿಷಿ; ಫ‌ಸ್ಟ್‌ ಲುಕ್‌ ಪೋಸ್ಟರ್‌ ಬಂತು

ರಾಮನ ಅವತಾರ ತಾಳಿದ ರಿಷಿ; ಫ‌ಸ್ಟ್‌ ಲುಕ್‌ ಪೋಸ್ಟರ್‌ ಬಂತು

ಟ್ಯೂಷನ್ ಗೆ ತೆರಳಿ ನಾಪತ್ತೆಯಾಗಿದ್ದ ಬಾಲಕನ ಮೃತದೇಹ ಕುಮಾರಧಾರ ನದಿಯಲ್ಲಿ ಪತ್ತೆ

ಟ್ಯೂಷನ್ ಗೆ ತೆರಳಿ ನಾಪತ್ತೆಯಾಗಿದ್ದ ಬಾಲಕನ ಮೃತದೇಹ ಕುಮಾರಧಾರ ನದಿಯಲ್ಲಿ ಪತ್ತೆ

crime (2)

ಬಳ್ಳಾರಿ: ತವರು ಮನೆ ಸೇರಿದ್ದ ಪತ್ನಿಯ ಕೊಲೆಗೆ ಯತ್ನಿಸಿದ ಕುಡುಕ ಗಂಡ

navazuddin

ನಟ ನವಾಜುದ್ದೀನ್,ಮಾಜಿ ಪತ್ನಿಗೆ ಮಕ್ಕಳ ಸಲುವಾಗಿ ಹಾಜರಾಗಲು ಹೇಳಿದ ಹೈಕೋರ್ಟ್