ಪ್ರಜಾಪ್ರಭುತ್ವ ಉಳಿಸಿಕೊಳ್ಳಲು ಕಾಂಗ್ರೆಸ್‌ ಸರ್ಕಾರ ಅಗತ್ಯ: Kharge


Team Udayavani, Apr 17, 2023, 7:00 AM IST

ಪ್ರಜಾಪ್ರಭುತ್ವ ಉಳಿಸಿಕೊಳ್ಳಲು ಕಾಂಗ್ರೆಸ್‌ ಸರ್ಕಾರ ಅಗತ್ಯ: Kharge

ಕೋಲಾರ: ಸ್ವಾತಂತ್ರ ಹೋರಾಟದಿಂದ ಗಳಿಸಿದ ಪ್ರಜಾಪ್ರಭುತ್ವವನ್ನು ಉಳಿಸಿಕೊಳ್ಳಲು ಒಗ್ಗಟ್ಟಾಗಿ ರಾಹುಲ್‌ಗಾಂಧಿ ನಾಯಕತ್ವದಲ್ಲಿ ಸಾಗಬೇಕಾಗಿದೆ, ರಾಹುಲ್‌ ಗಾಂಧಿ ಧೈರ್ಯದಿಂದ ಮಾತನಾಡುವ ವ್ಯಕ್ತಿಯಾಗಿದ್ದಾರೆ, ಅನ್ಯಾಯದ ವಿರುದ್ಧ ಹೋರಾಟ ಮಾಡಬೇಕಾದರೆ ಕರ್ನಾಟಕದಲ್ಲಿ ಕಾಂಗ್ರೆಸ್‌ ಸರ್ಕಾರ ಬರಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ ಪ್ರತಿಪಾದಿಸಿದರು.

ನಗರದ ಹೊರವಲಯದಲ್ಲಿ ಜರುಗಿದ “ಜೈ ಭಾರತ್‌ ಸಮಾವೇಶ’ ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದು ಜನಪರ ಯೋಜನೆಗಳು ಮತ್ತೆ ಆರಂಭವಾಗಬೇಕು, ಯಾರೇ ಮುಖ್ಯಮಂತ್ರಿಯಾಗಲಿ ತಮಗೆ ಬೇಕಾಗಿಲ್ಲ, ಕಾಂಗ್ರೆಸ್‌ ಪಕ್ಷಕ್ಕೆ 150 ಸೀಟುಗಳನ್ನು ಕೊಡಬೇಕು, ಡಬಲ್‌ ಇಂಜಿನ್‌ ಸರಕಾರ ತೆಗೆಯಬೇಕು ಎಂದು ಮನವಿ ಮಾಡಿದರು.

ಜನ ಮೋದಿ ಸರಕಾರದ ಮೇಲೆ ಬೇಸತ್ತಿದ್ದಾರೆ, 40 ಪರ್ಸೆಂಟ್‌ ರಾಜ್ಯ ಬಿಜೆಪಿ ಸರಕಾರದ ಮೇಲೆ ಬೇಸತ್ತು ಕಾಂಗ್ರೆಸ್‌ ಸೇರುತ್ತಿದ್ದಾರೆ, ಭ್ರಷ್ಟ ಬಿಜೆಪಿ ಸರಕಾರದ ಬಗ್ಗೆ ಮೋದಿ, ಶಾ ಮಾತನಾಡದೆ ಕಾಂಗ್ರೆಸ್‌ ಬೈಯುತ್ತಾ 9 ವರ್ಷ ಕಳೆದಿದ್ದಾರೆ ಎಂದು ಟೀಕಿಸಿದರು.

ಕಾಂಗ್ರೆಸ್‌ ಏನೂ ಮಾಡಿಲ್ಲ ಎನ್ನುತ್ತಾರೆ ಮೋದಿ. ಬಂಗಾರದ ಗಣಿಗಳನ್ನು, ಸಾರ್ವಜನಿಕ ಉದ್ದಿಮೆಗಳನ್ನು ಆರಂಭಿಸಿ ಕಾಂಗ್ರೆಸ್‌ ಸರಕಾರ ದೇಶಕ್ಕೆ ಲಾಭ ಮಾಡಿಕೊಟ್ಟಿದೆ. ಡಬಲ್‌ ಇಂಜಿನ್‌ ಸರಕಾರ ಕರ್ನಾಟಕಕ್ಕೆ ಏನನ್ನು ಕೊಟ್ಟಿದೆ, ಮೋದಿ ಕಾಲದಲ್ಲಿ ಏನು ಬಂದಿದೆ ಎಂದು ಪ್ರಶ್ನಿಸಿದರು.

ಮೋದಿ ಅವರೇ ಹೇಳಿದಂತೆ 9 ವರ್ಷದಲ್ಲಿ 18 ಕೋಟಿ ಉದ್ಯೋಗ ಸೃಷ್ಟಿಸಬೇಕಾಗಿತ್ತು, ಆದರೆ, ಸಾರ್ವಜನಿಕ ಉದ್ದಿಮೆಗಳನ್ನು ಮಾರಾಟ ಮಾಡಿ ಯುವಕರಿಗೆ ಉದ್ಯೋಗ ಅವಕಾಶ ಇಲ್ಲದಂತೆ ಮಾಡಿದ್ದಾರೆ, ಇದನ್ನು ಪ್ರಶ್ನಿಸಿದ ಸಂಸತ್ತಿನ ತಮ್ಮ 28 ನಿಮಿಷದ ಭಾಷಣಕ್ಕೆ ಬಿಜೆಪಿ ಗಲಾಟೆ ಮಾಡಿ ಅಡ್ಡಿಪಡಿಸಿತು, ಸದನದಲ್ಲೇ ಇದ್ದ ಮೋದಿ ತಡೆಯಲಿಲ್ಲ.
ದೇಶದ ಒಬ್ಬ ಅದಾನಿಗೆ 2014ರಲ್ಲಿ 50 ಸಾವಿರ ಕೋಟಿ ಇದ್ದ ಆಸ್ತಿ, 2020 ರಲ್ಲಿ ಆಸ್ತಿ 2 ಲಕ್ಷ ಕೋಟಿ ಆಗುತ್ತೆ, 2023 ರಲ್ಲಿ ದಿಢೀರ್‌ ಆಗಿ 12ಲಕ್ಷ ಕೋಟಿ ಆಗುತ್ತೆ, ಇದು ಎಲ್ಲಿಂದ ಬಂತು ಎಂಬ ಪ್ರಶ್ನೆಯನ್ನು ರಾಹುಲ್‌ ಗಾಂಧಿ ಕೇಳಿದ್ದರು, ಇದೇ ಕಾರಣದಿಂದ ಕೋಲಾರದಲ್ಲಿ ಮಾತನಾಡಿದ್ದನ್ನೇ ನೆಪವಾಗಿಟ್ಟುಕೊಂಡು ಕೇವಲ 22 ದಿನಗಳಲ್ಲಿ ತೀರ್ಪು ಬಂದು, ಅನರ್ಹತೆ ಮಾಡಿ ಮನೆ ಖಾಲಿ ಮಾಡಿಸಿದರು. ಇದು ಪ್ರಜಾಪ್ರಭುತ್ವವೇ ಎಂದು ಪ್ರಶ್ನಿಸಿದರು.

ಕೋಲಾರ ಬಂಗಾರದ ಜಿಲ್ಲೆ, ಇಡೀ ದೇಶದಲ್ಲಿ ಮೂರೇ ಮೂರು ಬಂಗಾರದ ಗಣಿಗಳಲ್ಲಿ ಕರ್ನಾಟಕದ ಕೋಲಾರ, ತುಮಕೂರು, ರಾಯಚೂರುಗಳಲ್ಲಿವೆ. ಕೋಲಾರ ಬರಗಾಲಕ್ಕೆ ತುತ್ತಾದ ಜಿಲ್ಲೆ, ನೀರಾವರಿ ಕೃಷಿಗೆ ಪೂರಕವಾಗಿರಲಿಲ್ಲ, ಕಾಂಗ್ರೆಸ್‌ ಸರಕಾರ ಬಂದಮೇಲೆ ವಿಶೇಷವಾಗಿ ಕೆರೆಗಳಿಗೆ ನೀರು ತುಂಬಿಸುವ ಕೆಲಸ ಮಾಡಿದ್ದರಿಂದ ನೂರಾರು ಕೆರೆಗಳು ತುಂಬಿವೆ, ಲಕ್ಷಾಂತರ ಎಕರೆ ನೀರಾವರಿ ಆಗುತ್ತಿದೆ.

ಎಂ.ವಿ.ಕೃಷ್ಣಪ್ಪರ ಕಾಲದಲ್ಲಿ ಹೈನೋದ್ಯಮ, ರೇಷ್ಮೆ ಆರಂಭವಾಯಿತು, ಈಗ ಬಂಗಾರ ಜಿಲ್ಲೆಯಿಂದ ಪ್ರಚಾರ ಆರಂಭಿಸಿರುವುದರಿಂದ ಕಾಂಗ್ರೆಸ್‌ ಪಕ್ಷಕ್ಕೆ ಗೆಲುವು ಖಚಿತ ಎಂದು ಪ್ರತಿಪಾದಿಸಿದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.