ಸರ್ಕಾರಿ ಜಾಗದಲ್ಲಿ ಮನೆ, ಶೆಡ್‌ ನಿರ್ಮಾಣ; ತೆರವಿಗೆ ತಾಕೀತು

ಪುರಸಭೆ ಕಚೇರಿಗೆ ದಿಢೀರ್‌ ಭೇಟಿ ನೀಡಿದ ಆಡಳಿತಾಧಿಕಾರಿಯೂ ಆದ ಎಸಿ ಸೋಮಶೇಖರ್‌

Team Udayavani, Jan 23, 2020, 5:19 PM IST

23-January-23

ಮಾಲೂರು: ಆಡಳಿತಾಧಿಕಾರಿಯೂ ಆದ ಎಸಿ ಸೋಮಶೇಖರ್‌ ಪುರಸಭೆಗೆ ದಿಢೀರ್‌ ಭೇಟಿ ನೀಡಿ, ಸಾರ್ವಜನಿಕರ ದೂರಿನ ಅನ್ವಯ ಅಕ್ರಮಗಳ ತನಿಖೆಗೆ ಆದೇಶ ಹೊರಡಿಸಿದರು. ಈ ವೇಳೆ ಜನರು ನೀಡಿದ್ದ ದೂರಿನ ಮೇಲೆ ದಾಖಲೆಗಳನ್ನು ಪರಿಶೀಲಿಸಿ ಮಾತನಾಡಿದ ಅವರು, ಕೆಲ ಬಡಾ ವಣೆಯಲ್ಲಿನ ಸಿಎ ನಿವೇಶನವನ್ನು ಅಕ್ರಮ ಖಾತೆ ಮಾಡಿ, ಪರಭಾರೆ ಮಾಡಿರುವುದರ ಜೊತೆಗೆ ಕೆಲವು ಪ್ರಭಾವಿಗಳು ಸರ್ಕಾರಿ ಜಾಗ ಅತಿಕ್ರಮಣ ಮಾಡಿ
ಮನೆ, ಶೆಡ್‌ ನಿರ್ಮಿಸಿ ಕೊಂಡಿ ರುವುದಾಗಿ ದೂರು ಬಂದಿವೆ ಎಂದು ಹೇಳಿದರು.

ಮೂರು ಪ್ರಕರಣ ಇತ್ಯರ್ಥಪಡಿಸಿ: ಕೆಲವು ಖಾಸಗಿ ವ್ಯಕ್ತಿಗಳು 9000 ಚದರ ಅಡಿಯಷ್ಟು
ಸರ್ಕಾರಿ ಜಾಗದಲ್ಲಿ ಶೆಡ್‌ ನಿರ್ಮಿಸಿಕೊಂಡು, ವಹಿವಾಟು ನಡೆಸುತ್ತಿರುವುದಾಗಿ, ಮುಖ್ಯಾಧಿಕಾರಿಗಳ ವಸತಿ ಗೃಹವನ್ನೂ ಖಾಸಗಿ ವ್ಯಕ್ತಿಯೊಬ್ಬರು ಸ್ವಾಧೀನ ಪಡಿಸಿಕೊಂಡು ಶೆಡ್‌ ನಿರ್ಮಿಸಿದ್ದಾರೆ ಎಂದು ಜನರು ದೂರು ನೀಡಿದ್ದಾರೆ. ಈ ಮೂರು ಪ್ರಕರಣಗಳನ್ನು ಇತ್ಯರ್ಥಪಡಿಸುವ ನಿಟ್ಟಿನಲ್ಲಿ ಪುರಸಭಾ ಮುಖ್ಯಾಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದ್ದೇನೆ ಎಂದು ಹೇಳಿದರು.

ತೆರವು: ಈ ಕೂಡಲೇ ಎರಡು ಅಧಿಕಾರಿಗಳ ತಂಡ ರಚಿಸಿ ಅಕ್ರಮ ಸಿಎ ನಿವೇಶನಗಳ
ಪರಭಾರೆ, ಸ್ವಾಧೀನದ ಬಗ್ಗೆ ತನಿಖೆ ನಡೆಸಿ ವರದಿ ನೀಡಲು ಸೂಚಿಸಲಾಗಿದೆ. ತಾವು ಸಹ ಅಕ್ರಮ ಶೆಡ್‌ ತೆರವು ಕಾರ್ಯಾಚರಣೆಯಲ್ಲಿ ಭಾಗವಹಿಸುತ್ತಿರುವುದಾಗಿ ತಿಳಿಸಿದರು.
ವರದಿ ಮಂಡಿಸಿ: ಅದೇ ರೀತಿಯಲ್ಲಿ ಮಾಲೂರು ಪಟ್ಟಣದಲ್ಲಿ ಕಂದಾಯ ಇಲಾಖೆಯ ಕೆಲವು ಭೂಮಿಗಳಲ್ಲಿ ಅಕ್ರಮ ಶೆಡ್‌ಗಳ ನಿರ್ಮಾಣ, ರಾಜಕಾಲುವೆಗಳ ಒತ್ತುವರಿ, ಪಟ್ಟಣದ ಪ್ರಮುಖ ರಸ್ತೆಗಳ ಚರಂಡಿಗಳ ಮೇಲೆ ರಾತ್ರೋರಾತ್ರಿ ಪೆಟ್ಟಿಗೆ ಅಂಗಡಿ ಇಟ್ಟಿರುವುದು ಕಂಡು ಬಂದಿದೆ. ಮೂರು ದಿನಗಳ ಒಳಗಾಗಿ ವರದಿ ಮಂಡಿಸಿ, ತೆರವು ಮಾಡುವುದಾಗಿ ತಿಳಿಸಿದರು.
ಬೀಗ ಮುದ್ರೆ: ಪುರಸಭೆಗೆ ಬಾಡಿಗೆ ಮತ್ತು ತೆರಿಗೆ ಪಾವತಿಸದ ಕಾರಣ, 25 ಅಂಗಡಿಗಳಿಗೆ ಬೀಗ ಹಾಕಲಾಗಿದೆ. ಇನ್ನೂ ಕೆಲವು ಕಲ್ಯಾಣ ಮಂಟಪಗಳು, ಉದ್ಯಮಗಳು, ತೆರಿಗೆ ಬಾಕಿ ಉಳಿಸಿ ಕೊಂಡಿರುವ ಕಾರಣ, ಶೀಘ್ರ ಬೀಗ ಮುದ್ರೆ ಹಾಕುವ ಕಾರ್ಯ ಮಾಡುತ್ತಿರುವುದಾಗಿ ತಿಳಿಸಿದರು.

ಕಂದಾಯ ಇಲಾಖೆಯಿಂದ ತಾಲೂಕಿನ ಆರು ಗ್ರಾಮಗಳನ್ನು ಪೋಡಿ ಮುಕ್ತ ಮಾಡಲು ಮುಂದಾಗಿದ್ದು, ಕೆಲವು ರಾಜಕಾಲುವೆಗಳ ಒತ್ತುವರಿ ತೆರವಿಗೂ ಕಠಿಣ ಕ್ರಮ ಅನುಸರಿಸಲಾಗುತ್ತಿದೆ. ಅದರಂತೆ ಬೈರನಹಳ್ಳಿಯ ರಾಜಕಾಲುವೆ, ಕೆಲವು ಗೋಕುಂಟೆಗಳ ಒತ್ತುವರಿ ತೆರವಿಗೆ ಆದೇಶ ನೀಡಲಾಗಿದೆ ಎಂದು ಹೇಳಿದರು. ಖಾಸಗಿ ಇಡುವಳಿ
ದಾರ ರೈತರ ಪಿ ನಂಬರ್‌ ತೆಗೆಯುವ ಕಾರ್ಯವಾಗಿ ತಾಲೂಕಿನ 90 ಪ್ರಕರಣ ಪಟ್ಟಿ ಮಾಡಿ ಸರ್ವೆ ಇಲಾಖೆಯ ಅಧಿಕಾರಿ ಗಳೊಂದಿಗೆ ದುರಸ್ತಿ ಮಾಡಿಸಲಾಗುತ್ತಿದೆ ಎಂದರು. ಮುಖ್ಯಾಧಿಕಾರಿ ಪ್ರಸಾದ್‌ ಮಾತನಾಡಿ, ಎಸಿ ಆದೇಶದಂತೆ ಎಲ್ಲಾ ಅಕ್ರಮಗಳ ತನಿಖೆ ನಡೆಸಿ ಮೂರು ದಿನಗಳ ಒಳಗೆ ವರದಿ ಮಂಡಿಸ ಲಾಗುವುದು. ಅಕ್ರಮಗಳ ತೆರವಿಗೆ ಕಾರ್ಯಾಚರಣೆ ಆರಂಭಿಸುವುದಾಗಿ ತಿಳಿಸಿದರು.

ಟಾಪ್ ನ್ಯೂಸ್

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

Vijayendra (2)

JDS ಪ್ರಜ್ವಲ್ ಗೆ ಮೋದಿ ನೆರವು; ದಾರಿ ತೋಚದೆ ಟೀಕಿಸುತ್ತಿದ್ದಾರೆ: ವಿಜಯೇಂದ್ರ ತಿರುಗೇಟು

1-wdsad

I.N.D.I.A ಕೂಟದಲ್ಲಿ ವರ್ಷಕ್ಕೆ ಒಬ್ಬರನ್ನು ಪ್ರಧಾನಿಯನ್ನಾಗಿಸಲು ಚಿಂತನೆ: ಅಣ್ಣಾಮಲೈ

1-wwwqe

HSC PARALI; ಲಕ್ಷದ್ವೀಪದಿಂದ ಮಂಗಳೂರಿಗೆ ಆಗಮಿಸಿದ ಹೈ ಸ್ಪೀಡ್ ಪರಲಿ

1-qweqweq

CNG ಇಂಧನ ನಿರಂತರ ಪೂರೈಕೆಗೆ ಕೇಂದ್ರಕ್ಕೆ ಯಶ್ ಪಾಲ್ ಸುವರ್ಣ ಮನವಿ

ಸಿ.ಟಿ.ರವಿ

Belagavi; ಪ್ರಜ್ವಲ್ ಪ್ರಕರಣವು ಚುನಾವಣೆಗೆ ಪ್ರಭಾವ ಬೀರುತ್ತದೆ: ಸಿ.ಟಿ.ರವಿ

1-wqqweqwe

BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

Vijayendra (2)

JDS ಪ್ರಜ್ವಲ್ ಗೆ ಮೋದಿ ನೆರವು; ದಾರಿ ತೋಚದೆ ಟೀಕಿಸುತ್ತಿದ್ದಾರೆ: ವಿಜಯೇಂದ್ರ ತಿರುಗೇಟು

Uppinangady: ತೀವ್ರ ಜ್ವರ; ಅರ್ಚಕ ಸಾವು

Uppinangady: ತೀವ್ರ ಜ್ವರ; ಅರ್ಚಕ ಸಾವು

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Kamalapur: ಜಾತಿ ನಿಂದನೆ ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ

Kamalapur: ಜಾತಿ ನಿಂದನೆ ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.