ಮಾವು ಬೆಳೆಗಾರರು ಬೇಸಿಗೆ ಬೇಸಾಯ ಕ್ರಮ ಅನುಸರಿಸಲಿ


Team Udayavani, May 11, 2019, 11:16 AM IST

k-3

ಕೋಲಾರ: ಜಿಲ್ಲೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಾವು ಬೆಳೆಗಾರರಿದ್ದು, ಕಾಲಕ್ಕೆ ತಕ್ಕಂತೆ ಮಾವು ಬೆಳೆ ನಿರ್ವಹಣೆ ಮಾಡಬೇಕಿದೆ. ಇಲ್ಲದೇ ಹೋದಲ್ಲಿ ರೋಗ ಮತ್ತು ಕೀಟಗಳ ಬಾಧೆ, ಇಳುವರಿಯಲ್ಲಿ ಕುಂಠಿತ ಅನುಭವಿಸಬೇಕಾಗುತ್ತದೆ. ಆದ್ದರಿಂದ ರೈತ ಫಲಾನುಭವಿಗಳು ರಕ್ಷಣಾ ಕ್ರಮ ಕೈಗೊಳ್ಳಬೇಕಾಗಿದೆ.

ಬೇಸಿಗೆಯಲ್ಲಿ ಎರಡು ಬಾರಿ ನೇಗಿಲಿನಿಂದ ಆಳವಾಗಿ ಉಳುಮೆ ಮಾಡುವುದು, ಭೂಮಿಯನ್ನು ಸಮತಟ್ಟು ಮಾಡುವುದು. ಹೆಚ್ಚಿನ ಸಾಂಧ್ರತೆಯುಳ್ಳ ನೆಡುತೋಪುಗಳಿಗಾಗಿ ಸಾಲುಗಳು, ಸಸ್ಯಗಳನ್ನು 5 ಮೀಟರ್‌ ಅಂತರದಲ್ಲಿ ನೆಡಲು, ಅಗೆಯುವ ಗುಂಡಿಗಳ ಹೊಂದಾಣಿಕೆ ಮಾಡುವುದು ಮತ್ತು ಗೂಟದಿಂದ ಗುರುತು ಮಾಡುವುದು ಹಾಗೂ ಸಾಮಾನ್ಯ ನೆಡುತೋಪುಗಳಿಗೆ 9 ಮೀ. ಅಂತರ ನೀಡಬೇಕು. ಗುಂಡಿಯ ಗಾತ್ರ, ಅಳತೆ 90X-90X90 ಸೆಂ.ಮೀ.ಇರಬೇಕು.

ಗುಂಡಿ ಅಗೆಯುವಾಗ ಮುನ್ನೆಚ್ಚರಿಕೆ ಕ್ರಮ: ಅಗೆದ (1 ಅಡಿ) ಮೇಲ್ಭಾಗದ ಮೇಲ್ಪದರದ ಮಣ್ಣನ್ನು ಎಡಭಾಗದಲ್ಲಿ ಇರಿಸಬೇಕು. ಅಗೆದ ಗುಂಡಿಯನ್ನು ತುಂಬುವ ಮೊದಲು ಮಣ್ಣಿನಿಂದ ಬರುವ ಕೀಟ ಮತ್ತು ರೋಗಗಳನ್ನು ನಿಯಂತ್ರಿಸಲು ಸೂಯನ ಕಿರಣಗಳಿಗೆ ಗುಂಡಿಗಳನ್ನು 2 ವಾರಗಳವರೆಗೆ ತೆರೆದಿಡಬೇಕು.

ಸರ್ಕಾರದ ವಿಶ್ವಾಸಾರ್ಹ ನರ್ಸರಿಗಳಿಂದ, ತೋಟಗಾರಿಕೆ ಇಲಾಖೆ ಶಿಫಾರಸ್ಸು ಮಾಡಿದ ನರ್ಸರಿಗಳಿಂದ ಸಸಿ ಪಡೆಯಲು ವ್ಯವಸ್ಥೆ ಮಾಡಿಕೊಳ್ಳಬೇಕು. ಹಣ್ಣು ಬಿಡುವ ಮರಗಳಿಂದ ಮಾವಿನ ಹಣ್ಣುಗಳನ್ನು ಸರಿಯಾಗಿ ಪಕ್ವವಾದ ನಂತರ ಸುಧಾರಿತ ಕ್ರಮಗಳನ್ನು ಅನುಸರಿಸುವುದರೊಂದಿಗೆ ಕಟಾವು ಮಾಡಬೇಕಿದೆ.

ಕೊಯ್ಲೋತ್ತರ ಕ್ರಮ ಕಡ್ಡಾಯ: ಹಳೆಯ ತೋಟಗಳಲ್ಲಿ ಕಾಂಡಕೊರಕ ಹುಳುವಿನ ಬಾಧೆ ಇದ್ದಲ್ಲಿ, ಹೀಲರ್‌ ಕಮ್‌ ಸೀಲರ್‌ ಚಿಕಿತ್ಸೆಯನ್ನು ನೀಡಬೇಕು. ಪ್ಯಾಕ್‌ಹೌಸ್‌ ಹೊಂದಿರುವ ರೈತರು ಕೊಯ್ಲು ಮುಂಚಿನ ಹಾಗೂ ಕೊಯ್ಲೋತ್ತರ ಕ್ರಮ ಕಡ್ಡಾಯವಾಗಿ ಪಾಲಿಸಬೇಕು.

ಹಣ್ಣುಗಳನ್ನು ಮಾಗಿಸಲು ಐಐಎಚ್ಆರ್‌, ಬೆಂಗಳೂರು ವತಿಯಿಂದ ಅಭಿವೃದ್ಧಿ ಪಡಿಸಲಾಗಿರುವ ಮಾವು ಮಾಗಿಸುವ ಘಟಕಗಳನ್ನು ಉಪಯೋಗಿಸಿಕೊಳ್ಳುವುದು, ಹಣ್ಣು ನೊಣ ಮತ್ತು ಚಿಬ್ಬು ರೋಗದ ಹಾನಿಯನ್ನು ತಡೆಗಟ್ಟುವ ಸಲುವಾಗಿ ಐಐಎಚ್ಆರ್‌, ಬೆಂಗಳೂರಿಂದ ಶಿಫಾರಸ್ಸು ಮಾಡಿದಂತೆ ಕೊಯ್ಲು ಮಾಡಲಾದ ಹಣ್ಣುಗಳನ್ನು ಬಿಸಿ ನೀರಿನಲ್ಲಿ ಉಪಚರಿಸಬೇಕು.

ಕೊಯ್ಲು ಮಾಡಲಾದ ಹಣ್ಣುಗಳನ್ನು ವಿಂಗಡಣೆ ಮತ್ತು ಪ್ಯಾಕಿಂಗ್‌ ಮಾಡಿ ಮಾರುಕಟ್ಟೆಗೆ ಕಳುಹಿಸುವುದು. ದೂರದ ಮಾರುಕಟ್ಟೆಗೆ ಉತ್ತಮ ಗುಣಮಟ್ಟದ ಪ್ಯಾಕಿಂಗ್‌ ಸಾಮಗ್ರಿಗಳನ್ನು ಬಳಸಿಕೊಂಡು ಸಣ್ಣ ಪ್ರಮಾಣದ ಪ್ಯಾಕಿಂಗ್‌ಗಳಲ್ಲಿ ಕಳುಹಿಸಿಕೊಡುವುದು, ಮಾವಿನ ಹಣ್ಣಿನ ಹಣ್ಣು ನೊಣದ ಮೋಹಕ ಬಲೆಯಲ್ಲಿ ಮೋಹಕ ಧಾತುವನ್ನು ಬದಲಿಸುವುದು, ಬಿದ್ದ ಹಣ್ಣುಗಳನ್ನು ಸಂಗ್ರಹಿಸುವುದು ಹಾಗೂ ನಾಶಪಡಿಸುವುದು, ಮಾವಿನ ಹಣ್ಣಿನ ಹಣ್ಣು ನೊಣದ ಆಕರ್ಷಣೆಗೆ ಬೇಟ್ ಪದಾರ್ಥವನ್ನು ಸಿಂಪಡಿಸುವುದು ಮಾಡಬೇಕು.

ಮಾಹಿತಿಗೆ ದೂ. 7829512236, ತೋಟಗಾರಿಕೆ ಸಲಹಾ ಮತ್ತು ಮಾಹಿತಿ ಕೇಂದ್ರ ಸಂಪರ್ಕಿಸಿ.

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kempegowda Jayanti: ಜಯಂತಿಗೆ ಎಚ್‌ಡಿಡಿ, ಎಚ್ಡಿಕೆಗೆ ಆಹ್ವಾನ ನೀಡದಿದ್ದಕ್ಕೆ ಆಕ್ರೋಶ 

Kempegowda Jayanti: ಜಯಂತಿಗೆ ಎಚ್‌ಡಿಡಿ, ಎಚ್ಡಿಕೆಗೆ ಆಹ್ವಾನ ನೀಡದಿದ್ದಕ್ಕೆ ಆಕ್ರೋಶ 

14

KGF Gold: ಮತ್ತೆ ಚಿನ್ನ ಕೊಡಲಿದೆ ಕೋಲಾರದ ಕೆಜಿಎಫ್!

Tomato-Price

Kolara: ಗಗನಕ್ಕೇರುತ್ತಿರುವ ಟೊಮೆಟೋ ಬೆಲೆ

ಸರಕಾರದ ವಿರುದ್ಧ ಇಂದು ಬಿಜೆಪಿ ಬೃಹತ್‌ ಪ್ರತಿಭಟನೆ: ಅಶ್ವತ್ಥನಾರಾಯಣ

ಸರಕಾರದ ವಿರುದ್ಧ ಇಂದು ಬಿಜೆಪಿ ಬೃಹತ್‌ ಪ್ರತಿಭಟನೆ: ಅಶ್ವತ್ಥನಾರಾಯಣ

ಲೂಟಿ ಸರಕಾರ ಅಂದ್ರೆ ದಾಖಲೆ ಕೇಳುತ್ತಿದ್ದ ಸಿದ್ದು ಈಗ ಏನು ಮಾಡುತ್ತಾರೆ?: ಅಶೋಕ್‌

ಲೂಟಿ ಸರಕಾರ ಅಂದ್ರೆ ದಾಖಲೆ ಕೇಳುತ್ತಿದ್ದ ಸಿದ್ದು ಈಗ ಏನು ಮಾಡುತ್ತಾರೆ?: ಅಶೋಕ್‌

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.