ಬಿಸಿಲು, ಆಲಿಕಲ್ಲು ಮಳೆಗೆ ಉದುರಿದ ಮಾವು

ಇಳುವರಿ ಇಲ್ಲದೆ ತಲೆ ಮೇಲೆ ಕೈಹೊತ್ತು ಕೂತ ರೈತ • ಅಳಿದುಳಿದ ಮಾವಿಗೆ ಹೂಜಿ ನೊಣಗಳ ಕಾಟ

Team Udayavani, May 22, 2019, 3:49 PM IST

kolar-tdy-3..

ಮಾಸ್ತಿ ಗ್ರಾಮದಲ್ಲಿ ರೈತರು ಬೆಳೆದಿರುವ ಮಾವಿನ ಗಿಡದಲ್ಲಿ ಅಳಿದುಳಿದಿರುವ ಮಾವಿನ ಕಾಯಿ.

ಮಾಸ್ತಿ: ಈ ಬಾರಿ ಬಿಸಿಲಿನ ತಾಪಮಾನ ಹೆಚ್ಚಾಗಿ, ಮಾವಿನ ಮರಗಳಲ್ಲಿ ಹೂವಿನ ಪ್ರಮಾಣ ಕಡಿಮೆಯಾಗಿ, ಇಳುವರಿಯಲ್ಲಿ ಭಾರೀ ಕುಸಿತವಾಗಿದೆ. ಮೇ ಮುಗಿಯುತ್ತ ಬಂದರೂ ಮಾವು ಇನ್ನೂ ಮಾಗುವ ಸ್ಥಿತಿಯಲ್ಲಿದ್ದು, ರೈತರನ್ನು ಚಿಂತಿಗೀಡುಮಾಡಿದೆ.

ಆರಂಭದಲ್ಲಿ ಮರದ ತುಂಬಾ ಹೂ ಬಿಟ್ಟು ನಿರೀಕ್ಷೆ ಹುಟ್ಟಿಸಿತ್ತು. ಆದರೆ, ವಾತಾವರಣದಲ್ಲಿನ ಏರುಪೇರು ರೈತನ ಲೆಕ್ಕಾಚಾರ ತಲೆಕೆಳಗಾಗಿಸಿದೆ. ಪ್ರತಿ ವರ್ಷ ಒಂದು ಗಿಡದಿಂದ 60 ರಿಂದ 70 ಕೆ.ಜಿ. ಮಾವಿನ ಫ‌ಲ ಬರುತ್ತಿತ್ತು. ಆದರೆ, ಈ ಬಾರಿ 30 ರಿಂದ 40ಕ್ಕೆ ಇಳಿದಿದೆ. ಹಿಂದಿನಂತೆ ಈ ಬಾರಿಯೂ ಬರಗಾಲ, ಬಿಸಿಲಿನ ತಾಪ ಹೆಚ್ಚಾಗಿ ಗಿಡಕ್ಕೆ 30 ಕೆ.ಜಿ. ಹಣ್ಣು ಬಂದರೆ ಹೆಚ್ಚು ಎನ್ನುವಂತಾಗಿದೆ.

ಇನ್ನು ಒಂದು ಟನ್‌ ಮಾವು ಬಿಟ್ಟ ಗಿಡಗಳಲ್ಲಿ ಈಗ ಒಂದು ಕಾಯಿಯೂ ಕಾಣಿಸಿಗುತ್ತಿಲ್ಲ. ಹಣ್ಣುಗಳ ಗಾತ್ರದಲ್ಲಿ ಕೂಡ ವ್ಯತ್ಯಾಸ ಕಂಡು ಬರುತ್ತಿದೆ. ಕಳೆದ ವರ್ಷ ಮೂರು ಹಣ್ಣುಗಳಿಗೆ ಒಂದು ಕೆ.ಜಿ. ತೂಗುತ್ತಿತ್ತು. ಈಗ ಏಳು ಹಣ್ಣುಗಳು ಸೇರಿದರೂ ಕೆ.ಜಿ. ತೂಗುತ್ತಿಲ್ಲ.

ಮಣ್ಣು ಪಾಲು: ಮಾವು ಹೂ ಬಿಡುವ ಸಮಯದಲ್ಲಿ 30 ರಿಂದ 35 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಬೇಕು. ಆದರೆ, ಮಾಲೂರು ತಾಲೂಕಿನಲ್ಲಿ ಪ್ರಸ್ತುತ ಬಿಸಿಲಿನ ತಾಪಮಾನ 42 ಡಿಗ್ರಿ ಸೆಲ್ಸಿಯಸ್‌ವರೆಗೂ ಏರಿಕೆಯಾಗಿ ಬಿಸಿಲಿಗೆ ಮಾವಿನ ಹೂ ಉದುರಿ ಹೋಗಿವೆ. ಅದರಲ್ಲೂ ಕಳೆದ 1 ತಿಂಗಳಿಂದ ಬಿಸಿಲಿನ ತಾಪಮಾನದಿಂದ ಮಾವಿನ ಕಾಯಿಗಳು ಸಹ ಉದುರಿಹೋಗಿವೆ. ಭೂಮಿಯಲ್ಲಿ ನೀರಿನ ಅಂಶ ಇಲ್ಲದ ಕಾರಣ ಮರಗಳು ಒಣಗುತ್ತಿದ್ದು, ಗಿಡಗಳಲ್ಲಿನ ಕಾಯಿಯ ಗೊಂಚಲುಗಳು ಮಣ್ಣಿನ ಪಾಲಾಗುತ್ತಿವೆ.

ತಲೆ ಮೇಲೆ ಕೈಹೊತ್ತ ರೈತ: ಮಾಸ್ತಿ ಹೋಬಳಿ 50 ಹೆಕ್ಟೇರ್‌ ಭೂ ಪ್ರದೇಶದಲ್ಲಿ ಮಾವು ಬೆಳೆಯಲಾಗುತ್ತಿದೆ. ತೋತಾಪುರಿ, ನೀಲಂ, ಬಾದಾಮಿ, ಮಲ್ಲಿಕಾ, ರಸಪುರಿ, ಬೇಗಂಪಲ್ಲಿ, ಅಲ್ಪೋನ್ಸಾ ಸೇರಿ ಹಲವು ಜಾತಿಯ ಮಾವಿನ ಗಿಡಗಳನ್ನು ನಾಟಿ ಮಾಡಿದ್ದು, ಹೆಚ್ಚಿನ ಇಳುವರಿಯ ನಿರೀಕ್ಷೆಯಲ್ಲಿದ್ದರು. ಆದರೆ, ಬಿಸಿಲಿನ ಬೇಗೆಯಿಂದ ಮಾವಿನ ಗಿಡಗಳಲ್ಲಿ ಇಳುವರಿ ಕಡಿಮೆಯಾಗಿರುವುದರಿಂದ ಇದನ್ನೇ ನಂಬಿದ್ದ ರೈತರು ತಲೆ ಮೇಲೆ ಕೈ ಹೊತ್ತು ಕೂರುವಂತಾಗಿದೆ.

ಹೂಜಿ ನೊಣಗಳ ಕಾಟ: ಈಗಾಗಲೇ ಮಾರುಕಟ್ಟೆ ಸೇರಿ ಹಣ್ಣಿನ ಅಂಗಡಿಗಳಿಗೆ ವಿವಿಧ ಜಾತಿಯ ಮಾವಿನ ಹಣ್ಣುಗಳು ಬಂದಿವೆ. ಇಳುವರಿ ಕುಸಿತವಾಗಿರುವುದರಿಂದ ಬೆಲೆಯಲ್ಲಿಯೂ ಏರಿಕೆಯಾಗಿದೆ. ಮಾಸ್ತಿ ಸೇರಿ ತಾಲೂಕಿನ ವಿವಿಧೆಡೆ ಅಲ್ಪ ಸ್ವಲ್ಪ ಮಳೆಯಾಗುತ್ತಿದೆ. ಬಾಡಿದ್ದ ಮಾವಿನ ಗಿಡಗಳಿಗೆ ಸ್ವಲ್ಪ ಮಟ್ಟಿಗೆ ಅನುಕೂಲವಾಗಿದೆ. ಆದರೂ ಬಿಸಿಲಿನ ತಾಪ ಕಡಿಮೆಯಾಗುತ್ತಿಲ್ಲ.

ಹೂಜಿ ನೊಣಗಳ ಕಾಟ: ಅದರಲ್ಲೂ ಗಿಡಗಳಲ್ಲಿ ಉಳಿದಿರುವ ಕಾಯಿಗಳಿಗೆ ಹೂಜಿ ನೊಣಗಳ ಕಾಟ ಹೆಚ್ಚಾಗುತ್ತಿದೆ. ಕಾಯಿಯೊಳಗೆ ಹೂಜಿ ಪ್ರವೇಶಿಸಿದರೆ ಸಾಕು ಆ ಕಾಯಿಯನ್ನು ತಿನ್ನಲು ಆಗುವುದಿಲ್ಲ. ಸರ್ಕಾರ ಮಾವು ಬೆಳೆಯಿಂದ ನಷ್ಟ ಅನುಭವಿಸಿರುವ ರೈತರಿಗೆ ನಷ್ಟ ಪರಿಹಾರ ನೀಡಬೇಕಾಗಿದೆ.

ಕಾಯಿ ಕಟ್ಟಿಲ್ಲ: ಬಿಸಿಲಿನ ತಾಪ ಹೆಚ್ಚಾಗಿರುವುದರ ಜತೆಗೆ ಕೊಳವೆ ಬಾವಿಯಲ್ಲಿ ಅಂತರ್ಜಲದ ಮಟ್ಟ ಕಡಿಮೆಯಾಗಿದೆ. ಹವಾಮಾನ ವೈಪರೀತ್ಯದಿಂದ ಗಿಡದಲ್ಲಿ ಹಿಂದೆ ಬಿಟ್ಟಿದ್ದ ಹೂವು ಉದುರಿದೆ. ಇದರಿಂದ ಮಾವಿನ ಇಳುವರಿ ಕುಂಠಿತವಾಗಿದೆ. ಸಾಮಾನ್ಯವಾಗಿ ಗಿಡದಲ್ಲಿ 200 ರಿಂದ 300 ಕಾಯಿ ಕಟ್ಟುತ್ತಿದ್ದವು. ಆದರೆ, ಈ ಬಾರಿ 30 ರಿಂದ 60 ಕಾಯಿ ಬಿಟ್ಟಿವೆ. ತೋಟದಲ್ಲಿ ಗಿಡಗಳ ಮಧ್ಯೆ ಟ್ರ್ಯಾಕ್ಟರ್‌ನಿಂದ ಭೂಮಿ ಹಸನು ಮಾಡಿ, ಗಿಡಗಳಿಗೆ ಔಷಧ ಸಿಂಪರಣೆ ಸೇರಿ ಎಕರೆಗೆ ಸಾವಿರಾರು ರೂ. ವೆಚ್ಚ ಮಾಡಲಾಗಿದೆ. ಆದರೆ, ಈ ವರ್ಷ ಇಳುವರಿ ಕಡಿಮೆಯಾಗಿದೆ ಎಂದು ರೈತರು ಅಳಲಾಗಿದೆ.

.ಎಂ.ಮೂರ್ತಿ

ಟಾಪ್ ನ್ಯೂಸ್

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.