ಕೆಜಿಎಫ್ ನಲ್ಲಿ ಅರ್ಥಪೂರ್ಣ ರಾಜ್ಯೋತ್ಸವ
Team Udayavani, Nov 2, 2019, 2:13 PM IST
ಕೆಜಿಎಫ್: ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಕರ್ನಾಟಕ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಧ್ವಜಾರೋಹಣ ನೆರವೇರಿಸಿ, ತಾಯಿ ಭುವನೇಶ್ವರಿಗೆ ಪೂಜೆ ಸಲ್ಲಿಸಿದ ಬಳಿಕ ಎಸ್ಪಿ ಎಂ.ಎಸ್.ಮೊಹಮ್ಮದ್ ಸುಜೀತ ಮಾತನಾಡಿ, ರಾಜ್ಯದಲ್ಲಿ ಕೆಜಿಎಫ್ಪೊ ಲೀಸ್ ಜಿಲ್ಲೆಯು ವಿಶೇಷ ಸ್ಥಾನವನ್ನು ಪಡೆದಿದೆ. ಕನ್ನಡ ನಾಡು-ಚಿನ್ನದ ಬೀಡು ಎಂಬ ಹೆಸರು ಬರಲು ಕಾರಣವಾದ ಕೋಲಾರ ಚಿನ್ನದ ಗಣಿ ಪ್ರದೇಶದಲ್ಲಿ ಪೊಲೀಸ್ ಇಲಾಖೆಯು ಉತ್ತಮ ಸೇವೆ ಸಲ್ಲಿಸುತ್ತಿದೆ.
ನಾಡು, ನುಡಿಯ ಅಭಿವೃ ದ್ಧಿಗೆ ಇನ್ನೂ ಹೆಚ್ಚಿನ ಸಹಕಾರ ನೀಡಲು ನಾಗರಿಕರಿಗೆ ಸಲಹೆ ನೀಡಿದರು. ಶಾಲಾ ಮಕ್ಕಳಿಗೆ ಪ್ರಾಥಮಿಕ ಹಂತದಲ್ಲೇ ದೇಶ, ನಾಡಿನ ಬಗ್ಗೆ ಅಕ್ಕರೆ ಮೂಡಿಸುವ ಕಾರ್ಯವಾಗಬೇಕು, ಎಲ್ಲರೂ ಕೈಜೊಡಿಸಿದ್ದಲ್ಲಿ ಮಾತ್ರ ನಾಡಿನ ಸರ್ವತೋಮುಖ ಅಭಿವೃದ್ಧಿ ಸಾಧ್ಯವೆಂದು ಅಭಿಪ್ರಾಯಪಟ್ಟರು.
ಡಿವೈಎಸ್ಪಿ ಬಿ.ಎಲ್.ಶ್ರೀನಿವಾಸ ಮೂರ್ತಿ, ಸಹಾಯಕ ಆಡಳಿತಾಧಿಕಾರಿ ಎಂ.ಮೂರ್ತಿ, ಪೊಲೀಸ್ ಇನ್ಸ್ಪೆಕ್ಟರ್ಗಳಾದ ಎಂ.ಸೂರ್ಯಪ್ರಕಾಶ್, ಮುಸ್ತಾಕ್ಪಾಷ, ಶಿವರಾಜ್ ಮುಧೋಳ್, ವೆಂಕಟರವಣಪ್ಪ, ಎನ್. ಉಮಾಶಂಕರ್ ಸೇರಿದಂತೆ ಜಿಲ್ಲೆಯ ಎಲ್ಲಾ ಪಿಎಸ್ಐಗಳು, ಜಿಲ್ಲಾ ಪೊಲೀಸ್ ಕಚೇರಿಯ ಅಧಿಕಾರಿ, ಲಿಪಿಕ ಸಿಬ್ಬಂದಿ ಉಪಸ್ಥಿತರಿದ್ದರು.
ಆರ್ಪಿಐ ಟಿ.ಮಂಜುನಾಥ ನೇತೃತ್ವದಲ್ಲಿ ಆಕರ್ಷಕ ಪಥ ಸಂಚಲನ ನಡೆಯಿತು. ಡಿಎಆರ್ ಪೊಲೀಸ್ ವಾದ್ಯ ವೃಂದದಿಂದ ನಾಡಗೀತೆ, ಸಿಬ್ಬಂದಿಯಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ರಾಜ್ಯೋತ್ಸವದ ಹಿನ್ನೆಲೆಯಲ್ಲಿ ಗೌರವ ರಕ್ಷೆ, ಪಹರೆ ಪಡೆಯ ಗೌರವ ವಂದನೆಗಳನ್ನು ಕನ್ನಡ ಭಾಷೆಯಲ್ಲಿ ನೀಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್ ಗಾಂಧಿ
Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ
Politics: ಮುನಿಯಪ್ಪ ಬೆಂಬಲಿಗರಿಗೆ ಭವಿಷ್ಯದ ಆತಂಕ
Lok Sabha Election ಬಳಿಕವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು