ಸುಸಜ್ಜಿತ ಮಾರುಕಟ್ಟೆ ನಿರ್ಮಿಸಿದ್ರೂ ವ್ಯಾಪಾರಿಗಳು ಬರಲ್ಲ

ಫ‌ುಟ್ಪಾತ್‌ನಲ್ಲೇ ವ್ಯಾಪಾರ ವಹಿವಾಟು ನಡೆಸುತ್ತಿರುವ ಹೂ, ಹಣ್ಣು ವ್ಯಾಪಾರಿಗಳು

Team Udayavani, Jul 27, 2019, 10:01 AM IST

kolar-tdy–1

ಮುಳಬಾಗಿಲು ನಗರದ ಬಸ್‌ ನಿಲ್ದಾಣದ ಸಮೀಪ ನಗರಸಭೆಯಿಂದ ಲಕ್ಷಾಂತರ ರೂ. ಖರ್ಚು ಮಾಡಿ ನಿರ್ಮಿಸಿರುವ ಹೂವು ಮತ್ತು ಹಣ್ಣು ಮಾರುಕಟ್ಟೆ.

ಮುಳಬಾಗಿಲು: ನಗರದ ಪ್ರಮುಖ ರಸ್ತೆಯ ಫ‌ುಟ್ಪಾತ್‌ನಲ್ಲಿ ಹೂ ಮತ್ತು ಹಣ್ಣು ವ್ಯಾಪಾರ ಮಾಡುತ್ತಿರುವುದರಿಂದ ವಾಹನ ಸಂಚಾರಕ್ಕೆ ತೊಂದರೆ ಆಗುತ್ತಿದೆ. ಇದನ್ನು ತಪ್ಪಿಸಲು ನಗರಸಭೆಯು ಲಕ್ಷಾಂತರ ರೂ. ವೆಚ್ಚ ಮಾಡಿ ಮಾರುಕಟ್ಟೆ ನಿರ್ಮಿಸಿದ್ದರೂ ಯಾರು ಅಲ್ಲಿಗೆ ಹೋಗುತ್ತಿಲ್ಲ. ಇದರಿಂದ ಮಳಿಗೆಗಳು ಮಲ ಮೂತ್ರ ವಿಸರ್ಜನೆ ತಾಣಗಳಾಗಿವೆ.

2007-08ರಲ್ಲಿ ಅಂದಿನ ಪೌರಾಡಳಿತ ಸಚಿವ ಆಲಂಗೂರ್‌ ಶ್ರೀನಿವಾಸ್‌ ಕ್ಷೇತ್ರಾಭಿವೃದ್ಧಿ ಅನುದಾನ ದಲ್ಲಿ ಬಸ್‌ ನಿಲ್ದಾಣದಂಚಿನಲ್ಲಿ ನಗರಸಭೆಯು 10 ಲಕ್ಷ ರೂ.ನಲ್ಲಿ ಹೂವು ಮತ್ತು ಹಣ್ಣು ಮಾರುಕಟ್ಟೆ ಸ್ಥಾಪಿಸಿದೆ. ಒಟ್ಟು 250 ವ್ಯಾಪಾರಿಗಳಿಗೆ ಮಳಿಗೆಗಳನ್ನು ಗೊತ್ತು ಮಾಡಿ, 2500 ರೂ. ಠೇವಣಿ, ಮಾಸಿಕ ಬಾಡಿಗೆ 260 ರೂ. ನಿಗದಿ ಪಡಿಸಿ, ವ್ಯಾಪಾರಕ್ಕೆ ಚಾಲನೆ ನೀಡಲಾಗಿತ್ತು.

ಆದಾಯಕ್ಕೆ ಹೊಡೆತ: ಪ್ರಾರಂಭದ ದಿನಗಳಲ್ಲಿ ಭರ್ಜರಿ ವ್ಯಾಪಾರ ವಹಿವಾಟುಗಳು ನಡೆಯುತ್ತಿತ್ತು. ಈ ಸಮಯದಲ್ಲಿ ಪ್ರಮುಖ ರಸ್ತೆಗಳಲ್ಲಿರುವ ಅಂಗಡಿ ವರ್ತಕರು ಹಲವು ವರ್ಷಗಳಿಂದ ತಮ್ಮ ಅಂಗಡಿ ಮುಂಭಾಗದಲ್ಲಿ ವ್ಯಾಪಾರ ಮಾಡಲು ಹೂವು ಮತ್ತು ಹಣ್ಣು ಮಾರಾಟಗಾರರಿಗೆ ಸ್ಥಳ ನೀಡಿ, ದಿನವೊಂದಕ್ಕೆ 100-150 ರೂ.ನಂತೆ ಶುಲ್ಕ ಪಡೆಯು ತ್ತಿದ್ದರು.ನಗರಸಭೆ ಮಾರುಕಟ್ಟೆ ಸ್ಥಾಪಿಸಿದ್ದರಿಂದ ಆದಾಯಕ್ಕೆ ಹೊಡೆತ ಬಿದ್ದಿತ್ತು.

ಸರ್ಕಾರಕ್ಕೆ ನಷ್ಟ: ಬಜಾರು ರಸ್ತೆ, ಎಂ.ಸಿ.ರಸ್ತೆ ವರ್ತಕರಿಗೆ ಫ‌ುಟ್ಪಾತ್‌ ವ್ಯಾಪಾರಿಗಳಿಂದ ತಿಂಗಳಿಗೆ 3 ರಿಂದ 4 ಸಾವಿರ ರೂ. ಆದಾಯ ಬರುತ್ತಿತ್ತು. ಇದಕ್ಕೆ ಕತ್ತರಿ ಬಿದ್ದಿದ್ದರಿಂದ ಮುಖ್ಯರಸ್ತೆಗಳೇ ವ್ಯಾಪಾರಕ್ಕೆ ಸೂಕ್ತ ಎಂದು ಹೂ ಹಣ್ಣು ಮಾರಾಟಗಾರನ್ನು ಮರಳು ಮಾಡಿ ಅಲ್ಲಿಂದ ಖಾಲಿ ಮಾಡುವಂತೆ ಮಾಡಿದರು.

ಮಾರುಕಟ್ಟೆ ನಿರ್ಮಾಣ ಮಾಡಿ ಹಲವು ವರ್ಷ ಕಳೆದರೂ ಮಳಿಗೆ ಬಾಡಿಗೆ ಪಡೆದಿರುವ ಮಾರಾಟಗಾರರು, ಇತ್ತ ಸುಳಿದಿಲ್ಲ.ಇದರಿಂದ ಸರ್ಕಾರಕ್ಕೆ ಲಕ್ಷಾಂತರ ರೂ. ನಷ್ಟವಾಗಿದೆ. ಈ ವಿಚಾರದ ಬಗ್ಗೆ ಹೂ ಮತ್ತು ಹಣ್ಣು ಮಾರಾಟಗಾರರ ಸಂಘ ಹಲವು ಬಾರಿ ತಿಳಿಸಲಾಗಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಅಳಲು ತೋಡಿಕೊಂಡಿದೆ.

ಮಾರುಕಟ್ಟೆಯಲ್ಲಿ ಅಂಗಡಿ ದುರಸ್ತಿಗೊಳಿಸಿ ಶೀಘ್ರದಲ್ಲಿಯೇ ಹರಾಜು ಹಾಕಲಾಗುವುದು ಎಂದು ನಗರಸಭೆ ಪೌರಾಯುಕ್ತ ಶ್ರೀನಿವಾಸ್‌ ಹೇಳಿದರು.

● ಎಂ.ನಾಗರಾಜಯ್ಯ

ಟಾಪ್ ನ್ಯೂಸ್

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

11

Politics: ಮುನಿಯಪ್ಪ ಬೆಂಬಲಿಗರಿಗೆ ಭವಿಷ್ಯದ ಆತಂಕ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

LS polls 2024: ಕೋಲಾರ ಮೈತ್ರಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಜೆಡಿಎಸ್‌ ಮುಖಂಡರು ಗೈರು

LS polls 2024: ಕೋಲಾರ ಮೈತ್ರಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ; ಜೆಡಿಎಸ್‌ ಮುಖಂಡರು ಗೈರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.