ರೈತರ ಹಾಲಿನ ದರ 5 ರೂ. ಹೆಚ್ಚಿಸಲು ಆಗ್ರಹ


Team Udayavani, Sep 21, 2022, 7:10 PM IST

tdy-18

ಬಂಗಾರಪೇಟೆ: ಇತ್ತೀಚೆಗೆ ಹಾಲು ಉತ್ಪಾದಕರ ಸಂಖ್ಯೆ ಇಳಿಮುಖವಾಗುತ್ತಿದ್ದು, ಹಾಲು ಉತ್ಪಾದನೆ ಸಹ ಕುಂಠಿತಗೊಳ್ಳುತ್ತಿದೆ. ಈಗಾಗಲೇ ಸುಮಾರು 2000 ಸಂಘಗಳ ಮೂಲಕ ಹಾಲಿನ ದರವನ್ನು ಹೆಚ್ಚಿಸುವಂತೆ ಮನವಿ ಮಾಡಿದ್ದು, ಸರ್ಕಾರ ಕನಿಷ್ಠ 5 ರೂ.ಗಳನ್ನು ಏರಿಕೆ ಮಾಡಿದರೆ ರೈತರಿಗೆ ಹೆಚ್ಚು ಅನುಕೂಲವಾಗಲಿದೆ ಎಂದು ಕೋಚಿಮುಲ್‌ ನಿರ್ದೇಶಕ ಜಯಸಿಂಹ ಕೃಷ್ಣಪ್ಪ (ಗೋಪಿ) ಸರ್ಕಾರಕ್ಕೆ ಒತ್ತಾಯ ಮಾಡಿದರು.

ತಾಲೂಕಿನ ಬೂದಿಕೋಟೆ ಗ್ರಾಮದಲ್ಲಿ ಬೂದಿಕೋಟೆ ಹಾಲು ಉತ್ಪಾದಕರ ಸಹಕಾರ ಸಂಘದ 2021-22ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ಒಕ್ಕೂಟದಿಂದ ಈ ಹಿಂದೆ ನಿತ್ಯ 12 ಲಕ್ಷ ಲೀ. ಹಾಲು ಉತ್ಪಾದನೆಯಾಗುತ್ತಿದ್ದು, ಈಗ 10 ಲಕ್ಷಕ್ಕೆ ಇಳಿದಿದ್ದು, ಹಾಲಿನ ಪೌಡರ್‌ ಉತ್ಪಾದನೆಗೂ ಕಷ್ಟವಾಗುತ್ತಿದೆ. ಮುಂದಿನ ದಿನಗಳಲ್ಲಿ ಹಾಲಿನ ಸಮಸ್ಯೆ ಎದುರಾಗಬಾರದು ಎಂದರೆ, ಸರ್ಕಾರ ಎಚ್ಚೆತ್ತುಕೊಂಡು ಹಾಲಿನ ದರವನ್ನು ಏರಿಕೆ ಮಾಡಬೇಕು. ಈಗಾಗಲೇ ಒಕ್ಕೂಟದಿಂದ 3 ರೂ ಹೆಚ್ಚಿಗೆ ನೀಡುತ್ತಿರುವುದರಿಂದ ಒಕ್ಕೂಟಕ್ಕೆ ತಿಂಗಳಿಗೆ 9 ಕೋಟಿ ನಷ್ಟ ಉಂಟಾಗುತ್ತಿದೆ ಎಂದು ಹೇಳಿದರು.

ಹೈನುಗಾರಿಕೆಗೆ ಉತ್ತೇಜನ ನೀಡಲು ಬ್ಯಾಂಕ್‌ ನವರು ನೀಡಿದ ಸಾಲವನ್ನು ರೈತರು ಸಕಾಲಕ್ಕೆ ಮರುಪಾವತಿ ಮಾಡಿದರೆ ಇನ್ನಷ್ಟು ರೈತರು ಸಾಲ ಪಡೆ‌ದು ಹೈನುಗಾರಿಕೆ ಆರಂಭಿಸಲು ಸಾಧ್ಯವಾಗುತ್ತದೆ. ಚರ್ಮಗಂಟು ರೋಗದಿಂದ ಬಳಲುತ್ತಿರುವ ರಾಸುಗಳಿಗೆ ಒಕ್ಕೂಟದಿಂದ ವೈದ್ಯರನ್ನು ಕಳುಹಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಖಾಸಗಿ ಡೇರಿಯವರು ಹಾಲು ಹಾಕುವಂತೆ ರೈತರಿಗೆ ಒತ್ತಡವನ್ನು ಹೇರುತ್ತಿದ್ದಾರೆ. ಇದಕ್ಕೆ ಯಾರೂ ಆಸ್ಪದ ಕೊಡದೆ ಗುಣಮಟ್ಟದ ಹಾಲು ಪೂರೈಕೆ ಮಾಡಿ ಡೇರಿಗಳು ಬೆಳೆಯಲು ಒತ್ತು ಕೊಡಬೇಕು. ಕೋಚಿಮುಲ್‌ ಡೇರಿಗಳಿಗೆ ಹೆಚ್ಚು ಲಾಭಾಂಶ ಬಂದರೆ ಲಾಭದ ಹಣ ಪುನಃ ಉತ್ಪಾದಕರಿಗೆ ವಿತರಣೆ ಮಾಡಲಾಗುತ್ತದೆ. ಆದರೆ ಖಾಸಗಿ ಡೇರಿಗೆ ಲಾಭ ಬಂದರೆ ಕಾರ್ಪೊರೇಟ್‌ ಕಂಪನಿಗಳಿಗಾಗುತ್ತಿದೆ ಎಂದರು.

ಬೂದಿಕೋಟೆ ಸಹಕಾರ ಸಂಘದ ಅಧ್ಯಕ್ಷ ವಿ.ಮಾರ್ಕಂಡೇಗೌಡ ಮಾತನಾಡಿ, ಉತ್ಪಾದಕರು ಗುಣಮಟ್ಟದ ಹಾಲನ್ನು ಡೇರಿಗೆ ಪೂರೈಕೆ ಮಾಡಿದ್ದ ರಿಂದ ಸಂಘಕ್ಕೆ 14.84 ಲಕ್ಷ ಲಾಭ ಬಂದಿದೆ. ಈ ಹಣದಲ್ಲಿ 6 ಲಕ್ಷ ರೂ.ಗಳನ್ನು ರೈತರಿಗೆ ಬೋನಸ್‌ ರೂಪದಲ್ಲಿ ಹಂಚಿಕೆ ಮಾಡಲಾಗುತ್ತದೆ. ರೈತರು ಪ್ರತಿ ಲೀಟರ್‌ ಹಾಲಿಗೆ 400 ಗ್ರಾಂ ನಷ್ಟು ಪೀಡ್ಸ್‌ನ್ನು ನೀರಲ್ಲಿ ಬೆರಸಿ ದ್ರವ ರೂಪದಲ್ಲಿ ನೀಡದೇ ನೇರವಾಗಿ ನೀಡಿದರೆ ಗುಣಮಟ್ಟದ ಹಾಲು ಸಿಗುತ್ತದೆ ಎಂದರು.

ಕೋಚಿಮುಲ್‌ ಬಂಗಾರಪೇಟೆ ಶಿಬಿರದ ಉಪ ವ್ಯವಸ್ಥಾಪಕ ಡಾ.ವೆಂಕಟರಮಣ, ವಿಸ್ತರಣಾಧಿಕಾರಿ ಅಮರೇಶ್‌, ವಿಎಸ್‌ಎಸ್‌ಎನ್‌ ಮಾಜಿ ಅಧ್ಯಕ್ಷ ಆರ್‌.ವಿಜಯಕುಮಾರ್‌, ಗ್ರಾಪಂ ಸದಸ್ಯ ಬಿ.ಕೃಷ್ಣಪ್ಪ ಶೆಟ್ಟಿ, ರಾಜಗೋಪಾಲ್‌, ಡೇರಿ ಸಂಘದ ಉಪಾಧ್ಯಕ್ಷ ಬಿ.ಚಂದ್ರಶೇಖರ್‌, ಮುಖ್ಯ ಕಾರ್ಯನಿರ್ವಾಹಕ ಜಿ.ಮುನಿರಾಜು, ನಿರ್ದೇಶಕರಾದ ಮಂಜುನಾಥ, ಗೋವಿಂದಪ್ಪ, ಚಂದ್ರಪ್ಪ, ವಿನೋದ್‌ ಕುಮಾರ್‌, ನಾರಾಯಣ, ಜೆ.ಆರ್‌.ನರೇಶ್‌, ಹಾಲು ಪರೀಕ್ಷಕ ಹರೀಶ್‌ ಕುಮಾರ್‌, ಪ್ರಮೋದ್‌ ಇತರರಿದ್ದರು.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.