ನೆಲಕಚ್ಚುತ್ತಿದೆ ಕಟಾವಿಗೆ ಬಂದಿರುವ ರಾಗಿ

ಕೆಲ ದಿನಗಳಿಂದ ಮಾಸ್ತಿ ಸುತ್ತಮುತ್ತ ಮಳೆ ಹಿನ್ನೆಲೆ ,ಕೃಷಿ ಚಟುವಟಿಕೆಗಳಿಗೆ ಎಲ್ಲೆಡೆಕೂಲಿ ಕಾರ್ಮಿಕರೇ ಸಿಗುತ್ತಿಲ್ಲ

Team Udayavani, Nov 7, 2020, 3:42 PM IST

kolar-tdy-1

ಮಾಸ್ತಿ: ತೀವ್ರ ಬರಗಾಲಕ್ಕೆ ತುತ್ತಾಗಿದ್ದರಿಂದ ಹೊಲ ಗಳಲ್ಲಿ ರಾಗಿ ಬೆಳೆ ಸಿರಿಧಾನ್ಯ ಬೆಳೆಗಳಿಲ್ಲದೆ,ಕಂಗಾಲಾಗಿದ್ದ ರೈತರ ಪಾಲಿಗೆ ವರದಾನವಾಗಿ ಈ ಬಾರಿ ಸುರಿದ ಮಳೆಯಿಂದಾಗಿ ಉತ್ತಮ ಇಳುವರಿ ರಾಗಿ ಬೆಳೆದಿದೆ. ಆದರೆ, ಕಟಾವು ಮಾಡಲು ಸೂಕ್ತ ವಾತಾವರಣ ಹಾಗೂ ಕೂಲಿ ಕಾರ್ಮಿಕರ ಕೊರತೆಯಿಂದ ಕೈಗೆ ಬಂದ ತುತ್ತು ಬಾಯಿಗೆ ಬರುವಂತಿಲ್ಲ ಎಂಬಂತಾಗುತ್ತಿದೆ.

ರಾಗಿ ಬೆಳೆ ಕಟಾವು ಮಾಡಲು ಸೂಕ್ತ ವಾತಾವರಣ ಹಾಗೂ ಕೂಲಿ ಕಾರ್ಮಿಕರ ಕೊರತೆ ಸತತ ಬರಗಾಲದಿಂದಾಗಿ ರಾಗಿ, ಅವರೆ, ಅಲಸಂಧಿ, ನವಣೆಸೇರಿದಂತೆ ಸಿರಿಧಾನ್ಯಗಳ ಬೆಳೆಗಳಿಲ್ಲದೇ ರೈತರು ಆತಂಕಕ್ಕೆ ಒಳಗಾಗಿದ್ದರು. ಜಾನುವಾರುಗಳ ಮೇವಿಗಾಗಿ ರೈತರು ಪರದಾಡುವಂತಾಗಿತ್ತು.

ನಿಟ್ಟುಸಿರು ಬಿಟ್ಟಿದ್ದರು: ಕೋಲಾರ ಜಿಲ್ಲೆಯ ಹಲವು ಬೆಳೆಗಳಲ್ಲಿ ಒಂದಾದ ರಾಗಿ ಬೆಳೆಯು ಪ್ರಮುಖ ವಾಗಿದ್ದು, ಈ ಬಾರಿ ವರುಣನ ಕೃಪೆಯಿಂದ ಉತ್ತಮಮಳೆ ಸುರಿದಿದೆಯಾದರೂ ಕೆರೆ-ಕುಂಟೆಗಳು ತುಂಬುವಷ್ಟು ಮಳೆಯಾಗಿಲ್ಲ. ಆದರೂ ಈ ಬಾರಿ ಸುರಿದ ಉತ್ತಮ ಮಳೆಯಿಂದ ರಾಗಿ ಬೆಳೆಯಿಂದಸಮಾಧಾನದಿಂದ ನಿಟ್ಟುಸಿರು ಬಿಟ್ಟಿದ್ದರು. ಕಾರ್ಮಿಕರು ಸಿಗುತ್ತಿಲ್ಲ: ಈ ಬಾರಿ ರಾಗಿ ಬೆಳೆಯು ಹುಲುಸಾಗಿ ಬೆಳೆದಿದ್ದು, ಕಟಾವಿಗೆ ಬಂದಿದೆ. ಎಲ್ಲಾ ಕಡೆ ರಾಗಿ ಬೆಳೆ ಕಟಾವು ಮಾಡುವುದು ಒಂದೇಸಮಯವಾದ್ದರಿಂದ ಕೂಲಿ ಕಾರ್ಮಿಕರ ಕೊರತೆ ಹಾಗೂ ಕಾರ್ಮಿಕರಕೂಲಿಯೂ ಹೆಚ್ಚಾಗಿದೆ. ಒಬ್ಬರಿಗೆದಿನಕ್ಕೆ 350 ರಿಂದ 500 ರೂ.ವರೆಗೂ ನೀಡಬೇಕಾಗಿದೆ.

ಕೆಲವು ಕಡೆ ಕೂಲಿ ಕಾರ್ಮಿಕರು ಒಪ್ಪಂದವೂ ಸಹ ಮಾಡಿಕೊಳ್ಳುತ್ತಿರುವುದು ಹೆಚ್ಚಾಗಿ ಕಂಡು ಬರುತ್ತಿದೆ. ಇತ್ತೀಚೆಗೆ ಕಾರ್ಖಾನೆಗಳು ಹೆಚ್ಚಾಗಿರುವುದರಿಂದ ಮಹಿಳೆಯರು ಸೇರಿದಂತೆ ಪ್ರತಿಯೊಬ್ಬರೂ ಕಾರ್ಖಾನೆಗಳತ್ತ ಮುಖ ಮಾಡುತ್ತಿರು ವುದರಿಂದಕೃಷಿಚಟುವಟಿಕೆಗಳಿಗೆಕೂಲಿಕಾರ್ಮಿಕರೇ ಸಿಗುತ್ತಿಲ್ಲ. ಇದರಿಂದ ಕೂಲಿ ಕಾರ್ಮಿಕರ ಕೊರತೆಯುಂಟಾಗಿದೆ.

ರೈತರ ಪರದಾಟ: ಮಾಸ್ತಿ ಭಾಗವು ತಮಿಳುನಾಡು ಗಡಿಗೆ ಹೊಂದಿಕೊಂಡಿರುವುದರಿಂದ ರಾಗಿ ಬೆಳೆ ಕಟಾವು ಮಾಡಲು ತಮಿಳುನಾಡು ಕಡೆಯಿಂದ ಅಥವಾ ಬಂಗಾರಪೇಟೆ ತಾಲೂಕಿನ ಬೂದಿಕೊಟೆ, ಕಾಮಸಮುದ್ರ ಸೇರಿದಂತೆ ಬೇರೆ ಕಡೆಯಿಂದ ಕೂಲಿ ಕಾರ್ಮಿಕರನ್ನು ಕರೆತಂದು ಹೆಚ್ಚಿನ ಕೂಲಿ ನೀಡಿ ಕಟಾವು ಮಾಡಿಸಿಕೊಳ್ಳುವ ಅನಿವಾರ್ಯತೆ ಬಂದೊದಗಿದೆ. ಆಧುನಿಕ ತಂತ್ರಜ್ಞಾನ ಹೆಚ್ಚಾದಂತೆಲ್ಲಾ ಕೃಷಿಯಂತ್ರೋಪಕರಣಗಳುಬಂದಿದ್ದರೂಸಮಯಕ್ಕೆ ಸರಿಯಾಗಿ ಸಿಗದ ಕಾರಣ ರೈತರು ಪರದಾಡುವಂತಾಗಿದೆ.

ಗುರುವಾರದಿಂದ ಹಲವು ಕಡೆ ಶುರುವಾಗಿರುವ ಮೋಡ ಕವಿದ ವಾತಾವರಣ ಹಾಗೂ ಆಗಾಗ ಸುರಿಯುತ್ತಿರುವ ಮಳೆಯಿಂದಾಗಿ ಕಟಾವಿಗೆ ಬಂದಿರುವ ರಾಗಿ ಬೆಳೆಯನ್ನು ಕಟಾವು ಮಾಡಲ ಸಮಯ ಸಿಗದ ಕಾರಣ ರಾಗಿ ಬೆಳೆ ಹೊಲಗಳಲ್ಲೇನೆಲಕ್ಕುರುಳುತ್ತಿದೆ. ಕೆಲವು ಕಡೆ ಕಟಾವು ಮಾಡಿಶೇಖರಣೆ ಮಾಡಿದ್ದಾರೆ. ಇದೇ ರೀತಿಯಾಗಿ ಮಳೆಮುಂದುವರಿದರೆ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗುತ್ತೆ ಈ ಬಾರಿ ರಾಗಿ ಬೆಳೆ.

ರಾಗಿ ಬೆಳೆಯನ್ನೇ ಪ್ರಮುಖಬೆಳೆಯ ನ್ನಾಗಿಸಿಕೊಂಡು ಬೆಳೆಯುತ್ತಿರುವ ರೈತರಿಗೆ ಬೆಳೆಕಟಾವು ಮಾಡಲು ಯಂತ್ರೋಪಕರಣಗಳನ್ನುಕೃಷಿ ಇಲಾಖೆ ಒದಗಿಸುತ್ತಿಲ್ಲ.ಖಾಸಗಿಯವರು ಹೇಳಿದಷ್ಟು ಹಣ ಕೊಟ್ಟುಕಟಾವು ಮಾಡಿಸಬೇಕಾದ ಪರಿಸ್ಥಿತಿ ಬಂದೊದಗಿದೆ. ಕೃಷಿ ಇಲಾಖೆ ಬೆಳೆಕಟಾವಿಗೆಯಂತ್ರಗಳನ್ನು ಒದಗಿಸಿ ರೈತರಿಗೆ ಅನುಕೂಲ ಕಲ್ಪಿಸಬೇಕು. ಹರೀಶ್‌, ರಾಗಿ ಬೆಳೆದು ನಷ್ಟಕ್ಕೊಳಗಾಗಿರುವ ತಿಪ್ಪಸಂದ್ರದ ರೈತ

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

11

Politics: ಮುನಿಯಪ್ಪ ಬೆಂಬಲಿಗರಿಗೆ ಭವಿಷ್ಯದ ಆತಂಕ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.