ಕಂಟೈನ್ಮೆಂಟ್ ಝೋನ್ಗೆ ಸಚಿವ ಭೇಟಿ
Team Udayavani, May 15, 2020, 7:00 AM IST
ಮುಳಬಾಗಿಲು: ಕೊರೊನಾ ತಡೆಗಾಗಿ ಮುಂಜಾಗ್ರತೆಯಾಗಿ ಕಂಟೆನ್ಮೆಂಟ್ ಝೋನ್ ಗಳಲ್ಲಿನ ಪ್ರತಿ ಮನೆಯಲ್ಲೂ ಆರೋಗ್ಯ ತಪಾಸಣೆ ಮಾಡುವಂತೆ ಅಬಕಾರಿ ಸಚಿವ ಎಚ್.ನಾಗೇಶ್ ತಿಳಿಸಿದರು.
ನಗರದ ಬುಸಾಲಕುಂಟೆ ಕೊರೊನಾ ಸೋಂಕಿತ ವೃದ್ದೇ ಕುಟುಂಬ ವಾಸವಾಗಿದ್ದ ಪ್ರದೇಶಕ್ಕೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲಿಸಿದ ನಂತರ ಮಿನಿವಿಧಾನಸೌಧದಲ್ಲಿ ಅಧಿಕಾರಿಗಳ ಸಭೆ ನಡೆಸಿ, ತಾಲೂಕಿನಲ್ಲಿ ಕಂಡು ಬಂದಿರುವ 5 ಕೊರೊನಾ ಪ್ರಕರಣಗಳಿಂದ ಜನರಿಗೆ ಸೋಂಕು ಹರಡದಂತೆ ನೋಡಿಕೊಳ್ಳಲು ಮುಂಜಾಗ್ರತೆಯಾಗಿ ಸೀಲ್ಡೌನ್ ಮಾಡಲಾಗಿದೆ.
ಆದರೂ ಮನೆಗಳಿಂದ ಹೊರ ಬರದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು. ಆರೋಗ್ಯ ಇಲಾಖೆ ಸಿಬ್ಬಂದಿ ಪ್ರತಿ ಮನೆಗೂ ಭೇಟಿ ನೀಡಿ ಆರೋಗ್ಯ ತಪಾಸಣೆಗೊಳಿಸಬೇಕು ಮತ್ತು ಜನರಲ್ಲಿ ಶುಚಿತ್ವ ಕಾಯ್ದುಕೊಳ್ಳಲು ಅರಿವು ಮೂಡಿಸಬೇಕು ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ವರ್ಣಶ್ರೀಗೆ ಸೂಚಿಸಿದರು. ಹಳ್ಳಿಗಳಲ್ಲಿ ನೀರಿನ ಅಭಾವ ಉಂಟಾಗದಂತೆ ನೋಡಿಕೊಳ್ಳಬೇಕು, ಸ್ವತ್ಛತಾ ನೋಡಿಕೊಳ್ಳಲು ಮತ್ತು ಆ ಜೋನ್ ವ್ಯಾಪ್ತಿಯಲ್ಲಿನ ಜನರಿಗೆ ಅಗತ್ಯವುಳ್ಳ ವಸ್ತು ತಲುಪಿಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಆರೋಗ್ಯ ಇಲಾಖೆಗೆ ಅಗತ್ಯವುಳ್ಳ 1000 ಪಿಪಿಇ ಕಿಟ್ ನೀಡಲು ತಾಲೂಕು ಆರೋಗ್ಯಾಧಿಕಾರಿ ಡಾ.ವರ್ಣಶ್ರೀ ಸಚಿವರನ್ನು ಕೋರಿದರು. ಜಿಲ್ಲಾ ರಕ್ಷಣಾಧಿಕಾರಿ ಕಾರ್ತಿಕ್ ರೆಡ್ಡಿ, ಎ.ಎಸ್ಪಿ.ಜಾಹ್ನವಿ, ಸಹಾಯಕ ಕಮಿಷನರ್ ಸೋಮಶೇಖರ್, ಡಿವೈಎಸ್ಪಿ ನಾರಾಯಣಪ್ಪ, ತಾಪಂ ಅಧ್ಯಕ್ಷ ಎ.ವಿ.ಶ್ರೀನಿವಾಸ್, ತಹಶೀಲ್ದಾರ್ ರಾಜಶೇಖರ್, ಪೌರಾಯುಕ್ತ ಶ್ರೀನಿವಾಸ್ಮೂರ್ತಿ, ತಾಪಂ ಇಒ ಎಂ.ಬಾಬು, ತಾಲೂಕು ಆರೋಗ್ಯಾಧಿಕಾರಿ ಡಾ.ವರ್ಣಶ್ರೀ, ಎಇಇ ಗೋಪಾಲ್ ಸಭೆಯಲ್ಲಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು
Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ
Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ