40% ಬಿಜೆಪಿ ಸರ್ಕಾರದವರು ನಮ್ಮ ಮೇಲೆ ಲಂಚದ ಆರೋಪ ಮಾಡ್ತಾರೆ


Team Udayavani, Mar 18, 2023, 2:56 PM IST

tdy-16

ಮಾಸ್ತಿ: ನನಗೆ ಸಿಕ್ಕಂತಹ ಅವಕಾಶದಲ್ಲಿ ಜನರ ಕಷ್ಟಕ್ಕೆ ಸ್ಪಂದಿಸುವುದರ ಜತೆಗೆ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿ ನಂಬಿಕೆ ಉಳಿಸಿಕೊಂಡಿದ್ದೇನೆ. ಮತ್ತೂಮ್ಮೆ ಅವಕಾಶ ನೀಡಿದರೆ ಮತ್ತಷ್ಟು ಅಭಿವೃದ್ಧಿ ಕಾರ್ಯ ಮಾಡುತ್ತೇನೆ ಎಂದು ಶಾಸಕ ಕೆ.ವೈ.ನಂಜೇಗೌಡ ಹೇಳಿದರು.

ಮಾಸ್ತಿ ಗ್ರಾಮದ ಬಸ್‌ ನಿಲ್ದಾಣದಲ್ಲಿ ಬ್ಲಾಕ್‌ ಕಾಂಗ್ರೆಸ್‌ ಹಮ್ಮಿಕೊಂಡಿದ್ದ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿ, ಆರೂವರೆ ಸಾವಿರ ಮತಗಳ ಲೀಡ್‌ ಕೊಟ್ಟು ನನ್ನ ಗೆಲುವಿಗೆ ಸಹಕಾರ ನೀಡಿದ ಮಾಸ್ತಿಗೆ ಹೆಚ್ಚಿನ ಕಾಳಜಿ ವಹಿಸಿ ವಿಶೇಷ ಅನುದಾನ ತಂದು ಅಭಿವೃದ್ಧಿಪಡಿಸಿದ್ದೇನೆ ಎಂದು ವಿವರಿಸಿದರು.

ಪ್ರವಾಸಿ ತಾಣವಾಗಿ ಅಭಿವೃದ್ಧಿ: ಡಾ.ಮಾಸ್ತಿ ಹೆಸರಿನಲ್ಲಿ ವಸತಿ ಶಾಲೆಗೆ 25 ಕೋಟಿ ರೂ. ಬಿಡುಗಡೆ, ರಸ್ತೆ ಕಾಮಗಾರಿ, ಹೈಮಾಸ್ಟ್‌ ದೀಪ, ಕೊಳವೆಬಾವಿ ಸೇರಿ ಹತ್ತು ಹಲವು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದು, ಮುಂದೆ ಅವಕಾಶ ನೀಡಿದರೆ ಮಾಸ್ತಿಯನ್ನು ಪ್ರವಾಸಿ ತಾಣವಾಗಿ ಅಭಿವೃದ್ಧಿಪಡಿಸುತ್ತೇನೆ ಎಂದು ಭರವಸೆ ನೀಡಿದರು.

ಸರ್ಕಾರ ಇದ್ದಾಗ ಏನ್‌ ಮಾಡಿದೆ ತಿಳಿಯಲಿ: ಚುನಾವಣೆ ಸಮೀಪಿಸುತ್ತಿದೆ, ಶಾಸಕರಾಗ ಬೇಕೆಂಬ ಆಸೆಯಿಂದ ಬಿಜೆಪಿ ನಾಯಕರು ಭಾಷಣದಲ್ಲಿ ನಂಜೇಗೌಡರು ತಾಲೂಕಿನ ರಸ್ತೆಗಳ ಗುಂಡಿ ಮುಚ್ಚಲಿಲ್ಲ, ಬಡವರಿಗೆ ಮನೆ ಕೊಟ್ಟಿಲ್ಲ ಎಂದು ಹೇಳುತ್ತಿದ್ದಾರೆ. ನನ್ನ ಸರ್ಕಾರ ಇದ್ದಾಗ ನಾನು ಏನು ಮಾಡಿದ್ದೇನೆ ಎಂಬುದನ್ನು ಅವರು ತಿಳಿದುಕೊಳ್ಳಬೇಕು ಎಂದು ತಿರುಗೇಟು ನೀಡಿದರು.

ನೀವು ಏನು ಮಾಡಿದ್ದೀರಿ ಪಟ್ಟಿ ಕೊಡಿ: ಸರ್ಕಾರ ನನಗೆ ಕೊಟ್ಟಂತಹ ಅವಕಾಶವನ್ನು ಬಳಸಿ ಕೊಂಡು, ನಾನು ಕೆಲಸ ಮಾಡಿದ್ದೇನೆ. ಇನ್ನು ಬಿಜೆಪಿಯಲ್ಲಿ ಅಭ್ಯರ್ಥಿಗಳಾಗಬೇಕೆಂದು ಬಂದಿರುವ ನಿಮಗೆ, ಕೇಂದ್ರದಲ್ಲಿ ನಿಮ್ಮದೇ ಸರ್ಕಾರ ಇದೆ. ಒಬ್ಬ ಪಾರ್ಲಿಮೆಂಟ್‌ ಸದಸ್ಯ ಇದ್ದಾರೆ. ರಾಜ್ಯ ಸರ್ಕಾರ ನಿಮ್ಮದೇ ಇದೆ. ಎಲ್ಲವೂ ಇರುವಾಗ ನೀವು ಏನು ಮಾಡಿದೀರಿ ಎಂಬುದನ್ನು ಪಟ್ಟಿ ಕೊಡಿ, ನಾವು ಮಾಡಿರುವಂತಹ ಅಭಿವೃದ್ಧಿ ಕೆಲಸಗಳ ಪಟ್ಟಿ ನೀಡುತ್ತೇವೆ ಎಂದು ಬಿಜೆಪಿಗೆ ಸವಾಲು ಹಾಕಿದರು.

40 ಪರ್ಸೆಂಟ್‌ ಸರ್ಕಾರ: ರಾಜ್ಯ ಹಾಗೂ ಕೇಂದ್ರದಲ್ಲಿ ಯಾವುದೇ ಅಭಿವೃದ್ಧಿ ಕಾಮಗಾರಿಗಳನ್ನು ನಡೆಸದೇ ಬಿಜೆಪಿ ಸುಳ್ಳು ಭರವಸೆಗಳನ್ನು ನೀಡುತ್ತಿದೆ. ಅಧಿಕಾರಿಗಳು ಲಂಚ ಪಡೆಯುತ್ತಾರೆ. ತಹಶೀಲ್ದಾರ್‌ ಕಚೇರಿ, ಯಾವುದೇ ಕಚೇರಿಗೆ ಹೋದರೆ ಲಂಚ ಎಂದು ಬಿಜೆಪಿಯವರು ಭಾಷಣ ಮಾಡುತ್ತಾರೆ. ಆದರೆ, ಅವರದೇ ಸರ್ಕಾರ, ಅವರೇ ಲಂಚ ಪಡೆಯುತ್ತಾರೆ. 40 ಪರ್ಸೆಂಟ್‌ ಸರ್ಕಾರ ಎಂದು ಹೆಸರು ಪಡೆದಿರುವ ನೀವೇ ಲಂಚ ಪಡೆದು ಬೇರೊಬ್ಬರ ಮೇಲೆ ಹೇಳುತ್ತೀರಿ ಎಂದು ಛೇಡಿಸಿದರು. ಭಾರತದಲ್ಲಿ 40 ಪರ್ಸೆಂಟ್‌ ಸರ್ಕಾರ ಎಲ್ಲಿ ಎಂದು ಕೇಳಿದರೆ ಅದು ಕರ್ನಾಟಕ ಎಂದು ಹೇಳುತ್ತಾರೆ. ಇದು ಕಾಂಗ್ರೆಸ್‌ನವರು ಹೇಳುವುದಲ್ಲ. ಗುತ್ತಿಗೆದಾರರು ಹೇಳಿರುವ ಮಾತು. ಬಿಜೆಪಿಯವರು ಲಂಚ ಪಡೆ ಯುವುದಕ್ಕೆ ಅಂತಿಮ ಎನ್ನುವುದು ಇಲ್ಲ ಎಂದು ಹೇಳಿದರು.

ಈಗಾಗಲೇ ಗ್ಯಾರಂಟಿ ಕಾರ್ಡ್‌ ವಿತರಣೆ: ಕಾಂಗ್ರೆಸ್‌ ಪಕ್ಷ ಏನು ಹೇಳಿದೇ ಅದನ್ನೇ ಮಾಡುತ್ತದೆ. ಆದರೆ, ಬಿಜೆಪಿಯಂತೆ ಸುಳ್ಳು ಹೇಳುವುದಿಲ್ಲ. ನಮ್ಮ ಸರ್ಕಾರ ಬಂದ ತಕ್ಷಣ ಪ್ರತಿ ಮನೆಗೆ 200 ಯೂನಿಟ್‌ ಉಚಿತ ವಿದ್ಯುತ್‌, ಪ್ರತಿ ಗೃಹಿಣಿಗೆ 2000 ರೂ., ಪ್ರತಿಯೊಬ್ಬರಿಗೂ 10 ಕೇಜಿ ಅಕ್ಕಿ ವಿತರಿಸಲಾಗುತ್ತದೆ. ಇದು ಕಾಂಗ್ರೆಸ್‌ ಪಕ್ಷದ ಪ್ರಣಾಳಿಕೆ ಆಗಿದೆ. ಈಗಾಗಲೇ ಗ್ಯಾರಂಟಿ ಕಾರ್ಡ್‌ ವಿತರಿಸಲಾಗುತ್ತಿದೆ. ಕಾಂಗ್ರೆಸ್‌ ಪಕ್ಷ ಬೆಂಬಲ ನೀಡುವ ಮೂಲಕ ಮತ ನೀಡಿ ಆಶೀರ್ವಾದ ಮಾಡಬೇಕು ಎಂದು ಮನವಿ ಮಾಡಿದರು.

ಡಿಸಿಸಿ ಬ್ಯಾಂಕ್‌ ನಿರ್ದೇಶಕ ಚನ್ನರಾಯಪ್ಪ, ಜಿಪಂ ಮಾಜಿ ಸದಸ್ಯ ಆನೇಪುರ ಹನುಮಂತಪ್ಪ, ಬ್ಲಾಕ್‌ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಎಚ್‌. ಎಂ.ವಿಜಯನರಸಿಂಹ, ಗ್ರಾಪಂ ಅಧ್ಯಕ್ಷ ಇಮ್ರಾನ್‌, ಸಬ್ದಾರ್‌ಬೇಗ್‌, ಕೃಷ್ಣಕುಮಾರ್‌, ಶ್ರೀನಿವಾಸ್‌, ಶೌಕತ್ತುಲ್ಲಾ ಬೇಗ್‌, ಮೋಹನ್‌ ರಾವ್‌, ಚೇತನ್‌, ನಾಗರಾಜ್‌, ಮುನಿಸ್ವಾಮಿ ಗೌಡ, ವೆಂಕಟೇಶ್‌, ಎಂ.ಸಿ.ನಾರಾಯಣ ಸ್ವಾಮಿ, ತಿಮ್ಮೇಗೌಡ, ಕಾಂಗ್ರೆಸ್‌ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-dsasa

WFI ಬ್ರಿಜ್ ಭೂಷಣ್ ಬಂಧಿಸಲು ಗಡುವು ವಿಧಿಸಿದ ಖಾಪ್ ಮಹಾಪಂಚಾಯತ್

imran-khan

Pakistan ಇಮ್ರಾನ್ ಖಾನ್‌ಗೆ ಭಯೋತ್ಪಾದನಾ ನಿಗ್ರಹ ನ್ಯಾಯಾಲಯದಿಂದ ಜಾಮೀನು

1-dsad

Train ಅವಘಡ; ಬಾಲಸೋರ್ ನಲ್ಲಿ ಎಕ್ಸ್‌ಪ್ರೆಸ್ ರೈಲು ಗೂಡ್ಸ್ ರೈಲಿಗೆ ಢಿಕ್ಕಿ

1-SADSAASD

Nithin Gopi: 39 ರ ಹರೆಯದಲ್ಲೇ ನಟ ನಿತಿನ್​ ಗೋಪಿ ವಿಧಿವಶ

1-sdasdasd

Congress Guarantee ನನ್ನ ಹೆಂಡತಿಗೂ ಸಿಗುತ್ತೆ ರೀ; ಸಿದ್ದರಾಮಯ್ಯ ಹಾಸ್ಯ ಚಟಾಕಿ

1-sadasd

Congress Guarantee ”ಅಕ್ಕಿ ನಿಮ್ದು, ಚೀಲ ನಮ್ದು”: ಬಿಜೆಪಿ ತಿರುಗೇಟು

MLA Vedavyasa Kamath

ಪಾಲಿಕೆ ವ್ಯಾಪ್ತಿಯ ಅನುದಾನ ತಡೆಯಿಂದ ತೀವ್ರ ಸಮಸ್ಯೆ: ಶಾಸಕ ವೇದವ್ಯಾಸ ಕಾಮತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅನುಷ್ಠಾನವಾಗಲಿಲ್ಲ ಮಂಜೂರಾಗಿದ್ದ ಯೋಜನೆ

ಅನುಷ್ಠಾನವಾಗಲಿಲ್ಲ ಮಂಜೂರಾಗಿದ್ದ ಯೋಜನೆ

ಮೂರು ತಿಂಗಳಿಂದ ಅಂಗನವಾಡಿ ಮಕ್ಕಳಿಗಿಲ್ಲ ಹಾಲು

ಮೂರು ತಿಂಗಳಿಂದ ಅಂಗನವಾಡಿ ಮಕ್ಕಳಿಗಿಲ್ಲ ಹಾಲು

tdy-15

ಮಕ್ಕಳ ಸ್ವಾಗತಕ್ಕೆ ಶಿಕ್ಷಕರಿಂದ ಸಕಲ ಸಿದ್ಧತೆ

ಮಂತ್ರಿಗಿರಿ ಸಿಗದ ಜಿಲ್ಲೆಗೆ ಉಸ್ತುವಾರಿ ಯಾರು?

ಮಂತ್ರಿಗಿರಿ ಸಿಗದ ಜಿಲ್ಲೆಗೆ ಉಸ್ತುವಾರಿ ಯಾರು?

ಮೃತ್ಯು ಕೂಪವಾಗಿ ಪರಿಣಮಿಸಿದ ಕಲ್ಲಿನ ಕ್ವಾರಿ

ಮೃತ್ಯು ಕೂಪವಾಗಿ ಪರಿಣಮಿಸಿದ ಕಲ್ಲಿನ ಕ್ವಾರಿ

MUST WATCH

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

ಹೊಸ ಸೇರ್ಪಡೆ

1-dsasa

WFI ಬ್ರಿಜ್ ಭೂಷಣ್ ಬಂಧಿಸಲು ಗಡುವು ವಿಧಿಸಿದ ಖಾಪ್ ಮಹಾಪಂಚಾಯತ್

imran-khan

Pakistan ಇಮ್ರಾನ್ ಖಾನ್‌ಗೆ ಭಯೋತ್ಪಾದನಾ ನಿಗ್ರಹ ನ್ಯಾಯಾಲಯದಿಂದ ಜಾಮೀನು

1-dsad

Train ಅವಘಡ; ಬಾಲಸೋರ್ ನಲ್ಲಿ ಎಕ್ಸ್‌ಪ್ರೆಸ್ ರೈಲು ಗೂಡ್ಸ್ ರೈಲಿಗೆ ಢಿಕ್ಕಿ

1-SADSAASD

Nithin Gopi: 39 ರ ಹರೆಯದಲ್ಲೇ ನಟ ನಿತಿನ್​ ಗೋಪಿ ವಿಧಿವಶ

1-WWQEWQ

Harapanahalli ಮೂವರು ಅಂತರ್ ರಾಜ್ಯ ಕಳ್ಳರ ಬಂಧನ