ಬೆಂಗಳೂರಿಗೆ ಹೆಚ್ಚು ರೈಲುಗಳ ಸಂಚಾರ


Team Udayavani, Nov 16, 2019, 3:04 PM IST

kolar-tdy-2

ಬಂಗಾರಪೇಟೆ: ಕೆಜಿಎಫ್ ಹಾಗೂ ಬಂಗಾರಪೇಟೆ ಭಾಗದಲ್ಲಿ ಯಾವುದೇ ಕೈಗಾರಿಕೆಗಳು ಇಲ್ಲ. ಅಲ್ಲದೆ, ಚಿನ್ನದಗಣಿ ಮುಚ್ಚಿರುವುದರಿಂದ ಜನ ಪ್ರತಿನಿತ್ಯ ಕೆಲಸಕ್ಕೆ ಬೆಂಗಳೂರಿಗೆ ಹೋಗುತ್ತಾರೆ. ಅವರ ಅನುಕೂಲಕ್ಕಾಗಿ ಹೆಚ್ಚು ಪ್ಯಾಸೆಂಜರ್‌ ರೈಲುಗಳನ್ನು ಓಡಿಸಲು ಕೇಂದ್ರ ಸರ್ಕಾರ ಕ್ರಮಕೈಗೊಳ್ಳಲಿದೆ ಎಂದು ಸಂಸದ ಎಸ್‌. ಮುನಿಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು.

ಪಟ್ಟಣದ ರೈಲ್ವೆ ನಿಲ್ದಾಣದಲ್ಲಿ ಬಂಗಾರಪೇಟೆ-ಮಾರಿಕುಪ್ಪಂ ನಡುವಿನ ನೂತನ ಮೆಮು ರೈಲಿಗೆ ಚಾಲನೆ ನೀಡಿ ಮಾತನಾಡಿದ ಅವರು, ಕೆಜಿಎಫ್ ತಾಲೂಕಿನಿಂದ ಬೆಳಗ್ಗೆ 11ರಿಂದ 12 ಗಂಟೆಯ ಮಧ್ಯದಲ್ಲಿ ಬೆಂಗಳೂರಿಗೆ ಹೋಗುವ ಪ್ರಯಾಣಿಕರ ಅನುಕೂಲಕ್ಕಾಗಿ ಮಾರಿಕುಪ್ಪ-ಬಂಗಾರಪೇಟೆ ಮಾರ್ಗದ ಮಧ್ಯೆ ನೂತನ ಮೆಮು ರೈಲು ಓಡಿಸಲಾಗುತ್ತಿದೆ ಎಂದು ಹೇಳಿದರು.

ನೂತನ ರೈಲು ಮಾರ್ಗ: ಬೆಂಗಳೂರಿನ ವೈಟ್‌ಪೀಲ್ಡ್‌, ಕೋಲಾರ, ಮುಳಬಾಗಿಲು, ವಿ.ಕೋಟೆ ಮಾರ್ಗವಾಗಿ ಕುಪ್ಪಂಗೆ ನೂತನ ರೈಲು ಮಾರ್ಗ, ಮಾರಿಕುಪ್ಪಂ- ಬಂಗಾರಪೇಟೆ ಮಾರ್ಗ ಮಧ್ಯೆ ಡಬಲ್‌ ಟ್ರ್ಯಾಕ್‌ ನಿರ್ಮಾಣ ಹಾಗೂ ಬಂಗಾರಪೇಟೆ ಜಂಕ್ಷನ್‌ ಆಧುನೀಕರಣಕ್ಕೆ ವಿಶೇಷ ಯೋಜನೆ ರೂಪಿಸಿ, ಕೂಡಲೇ ಕೆಲಸ ಪ್ರಾರಂಭಿಸಲು ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಾಜ್ಯ ರೈಲು ಖಾತೆ ಸಚಿವರ ಮೂಲಕ ಮನವಿ ಮಾಡಿದ್ದು, ಮುಂದಿನ ತಿಂಗಳು ಕಾರ್ಯರೂಪಕ್ಕೆ ಬರಲಿದೆ ಎಂದು ಹೇಳಿದರು.

ಟ್ರ್ಯಾಕ್‌ ಸಮಸ್ಯೆ ಬಗೆಹರಿಸಲು ಯತ್ನ: ಪ್ರತಿ ದಿನ ಬೆಳಗ್ಗೆ 8.30 ರಿಂದ 11 ಗಂಟೆಯವರೆಗೂ ಬಂಗಾರಪೇಟೆ- ಬೆಂಗಳೂರು ಮಾರ್ಗದಲ್ಲಿ ಯಾವುದೇ ರೈಲುಗಾಡಿಗಳು ಇಲ್ಲ. ಇದರಿಂದ ಈ ಸಮಯದಲ್ಲಿ ಬೆಂಗಳೂರಿಗೆ ಪ್ರಯಾಣಿಸುವವರಿಗೆ ತೊಂದರೆ ಆಗಿದೆ. ಈ ಅವಧಿಯಲ್ಲಿ ಹೊಸ ರೈಲು ಓಡಿಸಲು ಟ್ರ್ಯಾಕ್‌ ಸಮಸ್ಯೆ ಇದೆ. ಅದನ್ನು ಬಗೆಹರಿ ಸಲು ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದರು. ಸಿಗ್ನಲ್‌ ಸಮಸ್ಯೆ ನಿವಾರಣೆಗೆ ಸೂಚನೆ: ಬಂಗಾರಪೇಟೆ ಪಟ್ಟಣದ ಬೂದಿಕೋಟೆ ವೃತ್ತದಲ್ಲಿ ಯೂಟರ್ನ್ಮಾ ರ್ಗದಿಂದ ಸಾರ್ವಜನಿಕರ ಸಂಚಾರಕ್ಕೆ ತೀವ್ರ ಕಷ್ಟಕರವಾಗಿರುವ ಬಗ್ಗೆ ಸಾಕಷ್ಟು ದೂರುಗಳು ಬಂದಿವೆ. ಇದರ ಬಗ್ಗೆ ರೈಲ್ವೆ ಇಲಾಖೆಯ ಅಧಿಕಾರಿಗಳೊಂದಿಗೆ ಈಗಾಗಲೇ ಚರ್ಚೆ ಮಾಡಲಾಗಿದೆ. ಬಂಗಾರಪೇಟೆ-ಬೆಂಗಳೂರು ಮಾರ್ಗದಲ್ಲಿ ಹೆಚ್ಚು ರೈಲುಗಾಡಿಗಳು ಓಡಾಡುತ್ತಿರುವುದರಿಂದ ಸಿಗ್ನಲ್‌ಗ‌ಳ ಕೊರತೆಯಿಂದ ಸಮಸ್ಯೆ ಉಂಟಾಗಿದೆ.  ಈ ಸಮಸ್ಯೆಯನ್ನು ಕೂಡಲೇ ಬಗೆಹರಿಸಲು ರೈಲ್ವೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.

ಶಾಸಕ ಎಸ್‌.ಎನ್‌.ನಾರಾಯಣಸ್ವಾಮಿ, ಬಿಜೆಪಿ ಜಿಲ್ಲಾಧ್ಯಕ್ಷ ಹಾಗೂ ಮಾಜಿ ಶಾಸಕರಾದ ಬಿ.ಪಿ.ವೆಂಕಟಮುನಿಯಪ್ಪ, ವೈ.ಸಂಪಂಗಿ. ಜಿಪಂ ಸದಸ್ಯ ಬಿ.ವಿ.ಮಹೇಶ್‌, ಎಂ.ಪಿ.ಶ್ರೀನಿವಾಸಗೌಡ, ರೈಲ್ವೆ ಡಿಸಿಎಂ ಶಿವ್ನಾಕರ್‌ ವಿಶ್ವಾಸ್‌, ವಾಣಿಜ್ಯಾಧಿಕಾರಿ ಆರ್‌. ಮುರಳಿ, ರೈಲ್ವೆ ಪಿಆರ್‌ಒ ನರೇಂದ್ರ, ಮುಖಂಡರಾದ ಬಿ.ಹೊಸರಾಯಪ್ಪ, ಎಂ.ಸಂಪಂಗಿರೆಡ್ಡಿ, ಸೀತಾರಾಮಪ್ಪ, ಕೀಲುಕೊಪ್ಪ ಶ್ರೀನಿವಾಸಮೂರ್ತಿ, ತ್ಯಾಗರಾಜ್‌, ಮುನಿಸ್ವಾಮಿರೆಡ್ಡಿ, ಭಜರಂಗದಳ ಮಹೇಶ್‌, ಶಾಂತಿನಗರ ಮಂಜುನಾಥ್‌, ಕೆಸರನಹಳ್ಳಿ ಮಂಜುನಾಥ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

11

Politics: ಮುನಿಯಪ್ಪ ಬೆಂಬಲಿಗರಿಗೆ ಭವಿಷ್ಯದ ಆತಂಕ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.