ಕೋಲಾರ, ಮಾಲೂರು, ಕೆಜಿಎಫ್ನಲ್ಲಿ ಹೆಚ್ಚು ಸೋಂಕು
Team Udayavani, May 19, 2021, 4:45 PM IST
ಕೋಲಾರ: ಜಿಲ್ಲೆಯಲ್ಲಿ ಕೋಲಾರ, ಮಾಲೂರು,ಕೆಜಿಎಫ್ ತಾಲೂಕುಗಳಲ್ಲಿ ಹೆಚ್ಚಿನ ಕೋವಿಡ್ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿಲಾಕ್ಡೌನ್ ಮತ್ತಷ್ಟು ಬಿಗಿಗೊಳಿಸಲು ತೀರ್ಮಾನಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವಅರವಿಂದ ಲಿಂಬಾವಳಿ ತಿಳಿಸಿದರು.
ನಗರ ಹೊರವಲಯದ ಜಿಲ್ಲಾಡಳಿತ ಭವನದಲ್ಲಿ ಮಂಗಳವಾರ ಪ್ರಧಾನಿ ನರೇಂದ್ರ ಮೋದಿಯೊಂದಿಗೆ ನಡೆದ ವಿಡಿಯೋ ಸಂವಾದದಲ್ಲಿಭಾಗವಹಿಸಿದ್ದ ಬಳಿಕ ಸುದ್ದಿಗಾರರೊಂದಿಗೆ ಅವರುಮಾತನಾಡಿ, ಸೋಂಕು ತಡೆಗೆ ಕಠಿಣ ಕ್ರಮಗಳ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಆ ತಾಲೂಕುಗಳಲ್ಲಿ ಲಾಕ್ಡೌನ್ ಕ್ರಮ ಮತ್ತಷ್ಟು ಬಿಗಿಗೊಳಿಸುವಸಂಬಂಧ ರೂಪುರೇಷೆ ಸಿದ್ಧಪಡಿಸಲಾಗುತ್ತಿದೆ ಎಂದುಹೇಳಿದರು.
ಡೀಸಿ ಜೊತೆ ಚರ್ಚಿಸಿ ನಿರ್ಧಾರ: ಪ್ರತಿದಿನ 100ಕ್ಕೂಹೆಚ್ಚುಕೊರೊನಾ ಪ್ರಕರಣಗಳು ದೃಢಪಡುವ ದೇಶದ463 ಆಯ್ದ ಜಿಲ್ಲೆಗಳ ಉಸ್ತುವಾರಿ ಸಚಿವರು, ಡೀಸಿಗಳೊಂದಿಗೆ ಚರ್ಚೆ ನಡೆಸಿ ಹಲವು ನಿರ್ದೇಶನಗಳನ್ನುಪ್ರಧಾನಿ, ಗೃಹ ಸಚಿವರು ನೀಡಿದ್ದಾರೆ. ಕರ್ನಾಟಕದಲ್ಲಿ ಕೋಲಾರ ಸೇರಿ 17 ಜಿಲ್ಲೆಯವರು ಭಾಗವಹಿಸಿದ್ದು, ಪ್ರಧಾನಿಯೊಂದಿಗಿನ ಸಂವಾದದ ಬಳಿಕ ನಾವೂಡೀಸಿಯೊಂದಿಗೆ ಚರ್ಚಿಸಿ ಹಲವು ತೀರ್ಮಾನಮಾಡಿರುವುದಾಗಿ ತಿಳಿಸಿದರು.
ಸೋಂಕಿತರ ಮಾಹಿತಿ ನೀಡಿ: ಜಿಲ್ಲೆಯಲ್ಲಿ ಹೋಂಐಸೋಲೇಶನ್ನಲ್ಲಿರುವ 5000ಕ್ಕಿಂತಲೂ ಹೆಚ್ಚುಮಂದಿಯನ್ನು ಪ್ರತಿದಿನ ದೂರವಾಣಿ ಕರೆ ಮೂಲಕವಿಚಾರಿಸಬೇಕು. ಪ್ರತಿ ಗ್ರಾಮದಲ್ಲಿ ಟಾಸ್ಕ್ಫೋರ್ಸ್ ನಡೆಸಿ ಆ ಭಾಗದ ಸದಸ್ಯರು, ಗ್ರಾಪಂನವರು ಸೋಂಕಿತರ ಮಾಹಿತಿ ನೀಡಬೇಕು ಎಂದು ಹೇಳಿದರು.
ಸೋಂಕು ಕಡಿಮೆ ಮಾಡಲು ಕ್ರಮ: ಮನೆಯಲ್ಲಿಯೇ ಇರುತ್ತಾರಾ ಅಥವಾ ಹೊರಗೆ ಓಡಾಡುತ್ತಾರಾ ಎನ್ನುವುದನ್ನು ಪರಿಶೀಲಿಸಿ ಓಡಾಡುವವರನ್ನುಕೋವಿಡ್ ಕೇರ್ ಸೆಂಟರ್ಗೆ ಕರೆ ತರಲು ಚಿಂತಿಸಿದ್ದು,ಜಿಲ್ಲೆಯಲ್ಲಿ ಪ್ರಕರಣಗಳ ಸಂಖ್ಯೆಯನ್ನು ಕ್ರಮೇಣ ಕಡಿಮೆಯಾಗಿಸಲು ಅಗತ್ಯ ಕ್ರಮಕೈಗೊಳ್ಳಲಿದ್ದೇವೆಎಂದು ವಿವರಿಸಿದರು.
ಜಿಲ್ಲಾಡಳಿತ ಅನುಮತಿ: ಕೊರೊನಾ ಗ್ರಾಮ ಮಟ್ಟದಟಾಸ್ಕ್ಪೋರ್ಸ್ನಲ್ಲಿ ಪಕ್ಷಭೇದ ಮರೆತು ಕೈಜೋಡಿಸಬೇಕು. ಕೊರೊನಾ ಮುಕ್ತ ಗ್ರಾಮವಾಗಿಸಲು ಗುರಿನೀಡಲಾಗುವುದು. ಖಾಸಗಿ ಕೋವಿಡ್ ಕೇರ್ಸೆಂಟರ್ ನೀಡಲು ಸರಕಾರ, ಜಿಲ್ಲಾಡಳಿತವುಅನುಮತಿ ನೀಡಲಿದೆ ಎಂದು ವಿವರಿಸಿದರು.
ಗೌರವ ಧನ: ಅಸೋಷಿಯೇಷನ್, ಎನ್ಜಿಒ,ಆಶ್ರಮ ಸೇರಿ ಯಾರೇ ಮುಂದೆ ಬಂದರೂಅನುಮತಿ ನೀಡಲಾಗುವುದು. ನಂಬಿಕೆಗೆ ಇಂತಹಸಂಸ್ಥೆಗಳು ಅರ್ಹರಾಗಿರುವ ಹಿನ್ನೆಲೆಯಲ್ಲಿ ಬಳಕೆಮಾಡಿಕೊಳ್ಳಲಾಗುತ್ತಿದ್ದು, ಆರೋಗ್ಯ ಸೇವೆಗೆ ಅವರುಬಳಸಿಕೊಳ್ಳುವ ವೈದ್ಯರು, ಸಿಬ್ಬಂದಿಗೆ ಗೌರವ ಧನವನ್ನುನೀಡಲು ಸರಕಾರ ಸಿದ್ಧವಾಗಿದೆ ಎಂದು ತಿಳಿಸಿದರು.
ಕೇರ್ ಸೆಂಟರ್: ಅಲ್ಲದೆ, ಕೋವಿಡ್ ಸಂದರ್ಭದಲ್ಲಿ 30 ಕಂಪನಿಗಳು ಜಿಲ್ಲೆಯಲ್ಲಿ ಅಗತ್ಯ ವಸ್ತುಗಳಸೇವೆಯಡಿ ಕಾರ್ಯನಿರ್ವಹಿಸುತ್ತಿದ್ದು, ಪ್ರತಿಯೊಬ್ಬಸಿಬ್ಬಂದಿಯನ್ನು ಪರೀಕ್ಷೆಗೆ ಒಳಪಡಿಸಲು ಡೀಸಿ ಸೂಚನೆ ನೀಡಲಿದ್ದಾರೆ. ಒಂದು ವೇಳೆ ಹೆಚ್ಚಿನಮಂದಿಗೆ ಪಾಸಿಟಿವ್ ಬಂದರೆ ಅಲ್ಲಿಯೇ ಕೋವಿಡ್ಕೇರ್ ಸೆಂಟರ್ ಆರಂಭಿಸಲು ಸೂಚಿಸಲಾಗುವುದುಎಂದು ಹೇಳಿದರು.
ವಿಡಿಯೋ ಸಂವಾದದಲ್ಲಿ ಡೀಸಿ ಡಾ.ಆರ್.ಸೆಲ್ವಮಣಿ, ಜಿಪಂ ಸಿಇಒ ಎನ್.ಎಂ.ನಾಗರಾಜ್,ಎಸ್ಪಿಗಳಾದ ಕೋಲಾರ ಕಾರ್ತಿಕ್ರೆಡ್ಡಿ, ಕೆಜಿಎಫ್ಇಲಕ್ಕಿಯಾ ಕರುಣಾಕರನ್, ಎಡೀಸಿ ಡಾ.ಸ್ನೇಹಾ,ತಹಶೀಲ್ದಾರ್ ಶೋಭಿತಾ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೆಲಸಕ್ಕೆಂದು ಬಂದು ವೃದ್ಧೆಯ ಕೈ,ಕಾಲು ಕಟ್ಟಿ ಹಾಕಿ ದರೋಡೆ: ನೇಪಾಳಿ ದಂಪತಿಗಾಗಿ ಶೋಧ
ಬೀದಿನಾಯಿ ದಾಳಿಯಿಂದ ಮೃತಪಟ್ಟರೆ ಸ್ಥಳೀಯ ಆಡಳಿತವೇ ಹೊಣೆ; ಹೈಕೋರ್ಟ್
ಇಂಧನ ಇಲಾಖೆಗೆ ಆಯ್ಕೆಗೊಂಡ 1385 ಅಭ್ಯರ್ಥಿಗಳಿಗೆ ಆದೇಶ ಪತ್ರ : ಸಚಿವ ಸುನೀಲ್ ಕುಮಾರ್
ಕನ್ನಡಿಗರಲ್ಲಿ ಪ್ರತ್ಯೇಕ ರಾಜ್ಯದ ಕಿಚ್ಚು ಹಚ್ಚುತ್ತಿರುವ ಕತ್ತಿ ಹೇಳಿಕೆ ಖಂಡನೀಯ : ಜೋಶಿ
ಉದ್ಯಮಗಳ ಬೇಡಿಕೆಗೆ ತಕ್ಕಂತೆ ಕೌಶಲ್ಯ ಪೂರೈಕೆ: ಸಚಿವ ಅಶ್ವತ್ಥನಾರಾಯಣ
MUST WATCH
ಮಲ್ಲಾರು : ಗಾಳಿ ಮಳೆಗೆ ಹಾರಿ ಹೋದ ಶಾಲೆಯ ಮೇಲ್ಛಾವಣಿ, ವಿದ್ಯಾರ್ಥಿಗಳು ಕಂಗಾಲು
ಬಾಳೆ ಕೃಷಿ ಮಾಡಿ ಸೈ ಎನಿಸಿಕೊಂಡಿರುವ ಕಳಸದ ಪ್ರಕಾಶ್ ಕುಮಾರ್
ಕಾಪು ತಾಲೂಕಿನಾದ್ಯಂತ ಭಾರೀ ಮಳೆ ತಗ್ಗು ಪ್ರದೇಶಗಳಲ್ಲಿ ನೆರೆ ಭೀತಿ
ಮಹಾ ತಿರುವು ; ಏಕನಾಥ್ ಶಿಂಧೆಗೆ ಮುಖ್ಯಮಂತ್ರಿ ಹುದ್ದೆ ಬಿಟ್ಟು ಕೊಟ್ಟ ಬಿಜೆಪಿ
ಸುರತ್ಕಲ್ ಸುತ್ತಮುತ್ತ 15 ಕ್ಕೂ ಹೆಚ್ಚು ಮನೆಗಳಿಗೆ ನುಗ್ಗಿದ ನೀರು
ಹೊಸ ಸೇರ್ಪಡೆ
ಶೀತಲ್ ಶೆಟ್ಟಿ ನಿರ್ದೇಶನದ ಮರ್ಡರ್ ಮಿಸ್ಟ್ರಿ ‘ವಿಂಡೋಸೀಟ್’ ಜರ್ನಿ ಶುರು
ಮಣಿಪುರ: ಧಾರಾಕಾರ ಮಳೆಗೆ ಭಾರೀ ಭೂಕುಸಿತ-14 ಮಂದಿ ಸಾವು, 60 ಜನರು ಜೀವಂತ ಸಮಾಧಿ?
ವಿದ್ಯುತ್ ಕಂಬಕ್ಕೆ ಬಿಯರ್ ಸಾಗಿಸುತ್ತಿದ್ದ ಲಾರಿ ಡಿಕ್ಕಿ; ಚಾಲಕ ಸ್ಥಳದಲ್ಲೇ ಸಾವು
ಸಾಮಾನ್ಯ ಮನುಷ್ಯನ ಅಸಾಮಾನ್ಯ ಶಕ್ತಿ: ಇಂದಿನಿಂದ ‘ಬೈರಾಗಿ’ ದರ್ಶನ
ಚೇತನಾ ಪದವಿ ಪೂರ್ವ ವಿಜ್ಞಾನ ಮಹಾವಿದ್ಯಾಲಯ, ಸಿದ್ದಾಪುರ (ಉ.ಕ.)