ಕೋಲಾರ, ಮಾಲೂರು, ಕೆಜಿಎಫ್‌ನಲ್ಲಿ ಹೆಚ್ಚು ಸೋಂಕು


Team Udayavani, May 19, 2021, 4:45 PM IST

Most infections in Kolar, Mallur, KGF

ಕೋಲಾರ: ಜಿಲ್ಲೆಯಲ್ಲಿ ಕೋಲಾರ, ಮಾಲೂರು,ಕೆಜಿಎಫ್‌ ತಾಲೂಕುಗಳಲ್ಲಿ ಹೆಚ್ಚಿನ ಕೋವಿಡ್‌ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿಲಾಕ್‌ಡೌನ್‌ ಮತ್ತಷ್ಟು ಬಿಗಿಗೊಳಿಸಲು ತೀರ್ಮಾನಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವಅರವಿಂದ ಲಿಂಬಾವಳಿ ತಿಳಿಸಿದರು.

ನಗರ ಹೊರವಲಯದ ಜಿಲ್ಲಾಡಳಿತ ಭವನದಲ್ಲಿ ಮಂಗಳವಾರ ಪ್ರಧಾನಿ ನರೇಂದ್ರ ಮೋದಿಯೊಂದಿಗೆ ನಡೆದ ವಿಡಿಯೋ ಸಂವಾದದಲ್ಲಿಭಾಗವಹಿಸಿದ್ದ ಬಳಿಕ ಸುದ್ದಿಗಾರರೊಂದಿಗೆ ಅವರುಮಾತನಾಡಿ, ಸೋಂಕು ತಡೆಗೆ ಕಠಿಣ ಕ್ರಮಗಳ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಆ ತಾಲೂಕುಗಳಲ್ಲಿ ಲಾಕ್‌ಡೌನ್‌ ಕ್ರಮ ಮತ್ತಷ್ಟು ಬಿಗಿಗೊಳಿಸುವಸಂಬಂಧ ರೂಪುರೇಷೆ ಸಿದ್ಧಪಡಿಸಲಾಗುತ್ತಿದೆ ಎಂದುಹೇಳಿದರು.

ಡೀಸಿ ಜೊತೆ ಚರ್ಚಿಸಿ ನಿರ್ಧಾರ: ಪ್ರತಿದಿನ 100ಕ್ಕೂಹೆಚ್ಚುಕೊರೊನಾ ಪ್ರಕರಣಗಳು ದೃಢಪಡುವ ದೇಶದ463 ಆಯ್ದ ಜಿಲ್ಲೆಗಳ ಉಸ್ತುವಾರಿ ಸಚಿವರು, ಡೀಸಿಗಳೊಂದಿಗೆ ಚರ್ಚೆ ನಡೆಸಿ ಹಲವು ನಿರ್ದೇಶನಗಳನ್ನುಪ್ರಧಾನಿ, ಗೃಹ ಸಚಿವರು ನೀಡಿದ್ದಾರೆ. ಕರ್ನಾಟಕದಲ್ಲಿ ಕೋಲಾರ ಸೇರಿ 17 ಜಿಲ್ಲೆಯವರು ಭಾಗವಹಿಸಿದ್ದು, ಪ್ರಧಾನಿಯೊಂದಿಗಿನ ಸಂವಾದದ ಬಳಿಕ ನಾವೂಡೀಸಿಯೊಂದಿಗೆ ಚರ್ಚಿಸಿ ಹಲವು ತೀರ್ಮಾನಮಾಡಿರುವುದಾಗಿ ತಿಳಿಸಿದರು.

ಸೋಂಕಿತರ ಮಾಹಿತಿ ನೀಡಿ: ಜಿಲ್ಲೆಯಲ್ಲಿ ಹೋಂಐಸೋಲೇಶನ್‌ನಲ್ಲಿರುವ 5000ಕ್ಕಿಂತಲೂ ಹೆಚ್ಚುಮಂದಿಯನ್ನು ಪ್ರತಿದಿನ ದೂರವಾಣಿ ಕರೆ ಮೂಲಕವಿಚಾರಿಸಬೇಕು. ಪ್ರತಿ ಗ್ರಾಮದಲ್ಲಿ ಟಾಸ್ಕ್ಫೋರ್ಸ್‌ ನಡೆಸಿ ಆ ಭಾಗದ ಸದಸ್ಯರು, ಗ್ರಾಪಂನವರು ಸೋಂಕಿತರ ಮಾಹಿತಿ ನೀಡಬೇಕು ಎಂದು ಹೇಳಿದರು.

ಸೋಂಕು ಕಡಿಮೆ ಮಾಡಲು ಕ್ರಮ: ಮನೆಯಲ್ಲಿಯೇ ಇರುತ್ತಾರಾ ಅಥವಾ ಹೊರಗೆ ಓಡಾಡುತ್ತಾರಾ ಎನ್ನುವುದನ್ನು ಪರಿಶೀಲಿಸಿ ಓಡಾಡುವವರನ್ನುಕೋವಿಡ್‌ ಕೇರ್‌ ಸೆಂಟರ್‌ಗೆ ಕರೆ ತರಲು ಚಿಂತಿಸಿದ್ದು,ಜಿಲ್ಲೆಯಲ್ಲಿ ಪ್ರಕರಣಗಳ ಸಂಖ್ಯೆಯನ್ನು ಕ್ರಮೇಣ ಕಡಿಮೆಯಾಗಿಸಲು ಅಗತ್ಯ ಕ್ರಮಕೈಗೊಳ್ಳಲಿದ್ದೇವೆಎಂದು ವಿವರಿಸಿದರು.

ಜಿಲ್ಲಾಡಳಿತ ಅನುಮತಿ: ಕೊರೊನಾ ಗ್ರಾಮ ಮಟ್ಟದಟಾಸ್ಕ್ಪೋರ್ಸ್‌ನಲ್ಲಿ ಪಕ್ಷಭೇದ ಮರೆತು ಕೈಜೋಡಿಸಬೇಕು. ಕೊರೊನಾ ಮುಕ್ತ ಗ್ರಾಮವಾಗಿಸಲು ಗುರಿನೀಡಲಾಗುವುದು. ಖಾಸಗಿ ಕೋವಿಡ್‌ ಕೇರ್‌ಸೆಂಟರ್‌ ನೀಡಲು ಸರಕಾರ, ಜಿಲ್ಲಾಡಳಿತವುಅನುಮತಿ ನೀಡಲಿದೆ ಎಂದು ವಿವರಿಸಿದರು.

ಗೌರವ ಧನ: ಅಸೋಷಿಯೇಷನ್‌, ಎನ್‌ಜಿಒ,ಆಶ್ರಮ ಸೇರಿ ಯಾರೇ ಮುಂದೆ ಬಂದರೂಅನುಮತಿ ನೀಡಲಾಗುವುದು. ನಂಬಿಕೆಗೆ ಇಂತಹಸಂಸ್ಥೆಗಳು ಅರ್ಹರಾಗಿರುವ ಹಿನ್ನೆಲೆಯಲ್ಲಿ ಬಳಕೆಮಾಡಿಕೊಳ್ಳಲಾಗುತ್ತಿದ್ದು, ಆರೋಗ್ಯ ಸೇವೆಗೆ ಅವರುಬಳಸಿಕೊಳ್ಳುವ ವೈದ್ಯರು, ಸಿಬ್ಬಂದಿಗೆ ಗೌರವ ಧನವನ್ನುನೀಡಲು ಸರಕಾರ ಸಿದ್ಧವಾಗಿದೆ ಎಂದು ತಿಳಿಸಿದರು.

ಕೇರ್‌ ಸೆಂಟರ್‌: ಅಲ್ಲದೆ, ಕೋವಿಡ್‌ ಸಂದರ್ಭದಲ್ಲಿ 30 ಕಂಪನಿಗಳು ಜಿಲ್ಲೆಯಲ್ಲಿ ಅಗತ್ಯ ವಸ್ತುಗಳಸೇವೆಯಡಿ ಕಾರ್ಯನಿರ್ವಹಿಸುತ್ತಿದ್ದು, ಪ್ರತಿಯೊಬ್ಬಸಿಬ್ಬಂದಿಯನ್ನು ಪರೀಕ್ಷೆಗೆ ಒಳಪಡಿಸಲು ಡೀಸಿ ಸೂಚನೆ ನೀಡಲಿದ್ದಾರೆ. ಒಂದು ವೇಳೆ ಹೆಚ್ಚಿನಮಂದಿಗೆ ಪಾಸಿಟಿವ್‌ ಬಂದರೆ ಅಲ್ಲಿಯೇ ಕೋವಿಡ್‌ಕೇರ್‌ ಸೆಂಟರ್‌ ಆರಂಭಿಸಲು ಸೂಚಿಸಲಾಗುವುದುಎಂದು ಹೇಳಿದರು.

ವಿಡಿಯೋ ಸಂವಾದದಲ್ಲಿ ಡೀಸಿ ಡಾ.ಆರ್‌.ಸೆಲ್ವಮಣಿ, ಜಿಪಂ ಸಿಇಒ ಎನ್‌.ಎಂ.ನಾಗರಾಜ್‌,ಎಸ್ಪಿಗಳಾದ ಕೋಲಾರ ಕಾರ್ತಿಕ್‌ರೆಡ್ಡಿ, ಕೆಜಿಎಫ್‌ಇಲಕ್ಕಿಯಾ ಕರುಣಾಕರನ್‌, ಎಡೀಸಿ ಡಾ.ಸ್ನೇಹಾ,ತಹಶೀಲ್ದಾರ್‌ ಶೋಭಿತಾ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.