ಕೋಲಾರ, ಮಾಲೂರು, ಕೆಜಿಎಫ್‌ನಲ್ಲಿ ಹೆಚ್ಚು ಸೋಂಕು


Team Udayavani, May 19, 2021, 4:59 PM IST

Most infections in Kolar, Mallur, KGF

ಕೋಲಾರ: ಜಿಲ್ಲೆಯಲ್ಲಿ ಕೋಲಾರ, ಮಾಲೂರು,ಕೆಜಿಎಫ್‌ ತಾಲೂಕುಗಳಲ್ಲಿ ಹೆಚ್ಚಿನ ಕೋವಿಡ್‌ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿಲಾಕ್‌ಡೌನ್‌ ಮತ್ತಷ್ಟು ಬಿಗಿಗೊಳಿಸಲು ತೀರ್ಮಾನಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವಅರವಿಂದ ಲಿಂಬಾವಳಿ ತಿಳಿಸಿದರು.

ನಗರ ಹೊರವಲಯದ ಜಿಲ್ಲಾಡಳಿತ ಭವನದಲ್ಲಿ ಮಂಗಳವಾರ ಪ್ರಧಾನಿ ನರೇಂದ್ರ ಮೋದಿಯೊಂದಿಗೆ ನಡೆದ ವಿಡಿಯೋ ಸಂವಾದದಲ್ಲಿಭಾಗವಹಿಸಿದ್ದ ಬಳಿಕ ಸುದ್ದಿಗಾರರೊಂದಿಗೆ ಅವರುಮಾತನಾಡಿ, ಸೋಂಕು ತಡೆಗೆ ಕಠಿಣ ಕ್ರಮಗಳ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಆ ತಾಲೂಕುಗಳಲ್ಲಿ ಲಾಕ್‌ಡೌನ್‌ ಕ್ರಮ ಮತ್ತಷ್ಟು ಬಿಗಿಗೊಳಿಸುವಸಂಬಂಧ ರೂಪುರೇಷೆ ಸಿದ್ಧಪಡಿಸಲಾಗುತ್ತಿದೆ ಎಂದುಹೇಳಿದರು.

ಡೀಸಿ ಜೊತೆ ಚರ್ಚಿಸಿ ನಿರ್ಧಾರ: ಪ್ರತಿದಿನ 100ಕ್ಕೂಹೆಚ್ಚುಕೊರೊನಾ ಪ್ರಕರಣಗಳು ದೃಢಪಡುವ ದೇಶದ463 ಆಯ್ದ ಜಿಲ್ಲೆಗಳ ಉಸ್ತುವಾರಿ ಸಚಿವರು, ಡೀಸಿಗಳೊಂದಿಗೆ ಚರ್ಚೆ ನಡೆಸಿ ಹಲವು ನಿರ್ದೇಶನಗಳನ್ನುಪ್ರಧಾನಿ, ಗೃಹ ಸಚಿವರು ನೀಡಿದ್ದಾರೆ. ಕರ್ನಾಟಕದಲ್ಲಿ ಕೋಲಾರ ಸೇರಿ 17 ಜಿಲ್ಲೆಯವರು ಭಾಗವಹಿಸಿದ್ದು, ಪ್ರಧಾನಿಯೊಂದಿಗಿನ ಸಂವಾದದ ಬಳಿಕ ನಾವೂಡೀಸಿಯೊಂದಿಗೆ ಚರ್ಚಿಸಿ ಹಲವು ತೀರ್ಮಾನಮಾಡಿರುವುದಾಗಿ ತಿಳಿಸಿದರು.

ಸೋಂಕಿತರ ಮಾಹಿತಿ ನೀಡಿ: ಜಿಲ್ಲೆಯಲ್ಲಿ ಹೋಂಐಸೋಲೇಶನ್‌ನಲ್ಲಿರುವ 5000ಕ್ಕಿಂತಲೂ ಹೆಚ್ಚುಮಂದಿಯನ್ನು ಪ್ರತಿದಿನ ದೂರವಾಣಿ ಕರೆ ಮೂಲಕವಿಚಾರಿಸಬೇಕು. ಪ್ರತಿ ಗ್ರಾಮದಲ್ಲಿ ಟಾಸ್ಕ್ಫೋರ್ಸ್‌ ನಡೆಸಿ ಆ ಭಾಗದ ಸದಸ್ಯರು, ಗ್ರಾಪಂನವರು ಸೋಂಕಿತರ ಮಾಹಿತಿ ನೀಡಬೇಕು ಎಂದು ಹೇಳಿದರು.

ಸೋಂಕು ಕಡಿಮೆ ಮಾಡಲು ಕ್ರಮ: ಮನೆಯಲ್ಲಿಯೇ ಇರುತ್ತಾರಾ ಅಥವಾ ಹೊರಗೆ ಓಡಾಡುತ್ತಾರಾ ಎನ್ನುವುದನ್ನು ಪರಿಶೀಲಿಸಿ ಓಡಾಡುವವರನ್ನುಕೋವಿಡ್‌ ಕೇರ್‌ ಸೆಂಟರ್‌ಗೆ ಕರೆ ತರಲು ಚಿಂತಿಸಿದ್ದು,ಜಿಲ್ಲೆಯಲ್ಲಿ ಪ್ರಕರಣಗಳ ಸಂಖ್ಯೆಯನ್ನು ಕ್ರಮೇಣ ಕಡಿಮೆಯಾಗಿಸಲು ಅಗತ್ಯ ಕ್ರಮಕೈಗೊಳ್ಳಲಿದ್ದೇವೆಎಂದು ವಿವರಿಸಿದರು.

ಜಿಲ್ಲಾಡಳಿತ ಅನುಮತಿ: ಕೊರೊನಾ ಗ್ರಾಮ ಮಟ್ಟದಟಾಸ್ಕ್ಪೋರ್ಸ್‌ನಲ್ಲಿ ಪಕ್ಷಭೇದ ಮರೆತು ಕೈಜೋಡಿಸಬೇಕು. ಕೊರೊನಾ ಮುಕ್ತ ಗ್ರಾಮವಾಗಿಸಲು ಗುರಿನೀಡಲಾಗುವುದು. ಖಾಸಗಿ ಕೋವಿಡ್‌ ಕೇರ್‌ಸೆಂಟರ್‌ ನೀಡಲು ಸರಕಾರ, ಜಿಲ್ಲಾಡಳಿತವುಅನುಮತಿ ನೀಡಲಿದೆ ಎಂದು ವಿವರಿಸಿದರು.

ಗೌರವ ಧನ: ಅಸೋಷಿಯೇಷನ್‌, ಎನ್‌ಜಿಒ,ಆಶ್ರಮ ಸೇರಿ ಯಾರೇ ಮುಂದೆ ಬಂದರೂಅನುಮತಿ ನೀಡಲಾಗುವುದು. ನಂಬಿಕೆಗೆ ಇಂತಹಸಂಸ್ಥೆಗಳು ಅರ್ಹರಾಗಿರುವ ಹಿನ್ನೆಲೆಯಲ್ಲಿ ಬಳಕೆಮಾಡಿಕೊಳ್ಳಲಾಗುತ್ತಿದ್ದು, ಆರೋಗ್ಯ ಸೇವೆಗೆ ಅವರುಬಳಸಿಕೊಳ್ಳುವ ವೈದ್ಯರು, ಸಿಬ್ಬಂದಿಗೆ ಗೌರವ ಧನವನ್ನುನೀಡಲು ಸರಕಾರ ಸಿದ್ಧವಾಗಿದೆ ಎಂದು ತಿಳಿಸಿದರು.

ಕೇರ್‌ ಸೆಂಟರ್‌: ಅಲ್ಲದೆ, ಕೋವಿಡ್‌ ಸಂದರ್ಭದಲ್ಲಿ 30 ಕಂಪನಿಗಳು ಜಿಲ್ಲೆಯಲ್ಲಿ ಅಗತ್ಯ ವಸ್ತುಗಳಸೇವೆಯಡಿ ಕಾರ್ಯನಿರ್ವಹಿಸುತ್ತಿದ್ದು, ಪ್ರತಿಯೊಬ್ಬಸಿಬ್ಬಂದಿಯನ್ನು ಪರೀಕ್ಷೆಗೆ ಒಳಪಡಿಸಲು ಡೀಸಿ ಸೂಚನೆ ನೀಡಲಿದ್ದಾರೆ. ಒಂದು ವೇಳೆ ಹೆಚ್ಚಿನಮಂದಿಗೆ ಪಾಸಿಟಿವ್‌ ಬಂದರೆ ಅಲ್ಲಿಯೇ ಕೋವಿಡ್‌ಕೇರ್‌ ಸೆಂಟರ್‌ ಆರಂಭಿಸಲು ಸೂಚಿಸಲಾಗುವುದುಎಂದು ಹೇಳಿದರು.

ವಿಡಿಯೋ ಸಂವಾದದಲ್ಲಿ ಡೀಸಿ ಡಾ.ಆರ್‌.ಸೆಲ್ವಮಣಿ, ಜಿಪಂ ಸಿಇಒ ಎನ್‌.ಎಂ.ನಾಗರಾಜ್‌,ಎಸ್ಪಿಗಳಾದ ಕೋಲಾರ ಕಾರ್ತಿಕ್‌ರೆಡ್ಡಿ, ಕೆಜಿಎಫ್‌ಇಲಕ್ಕಿಯಾ ಕರುಣಾಕರನ್‌, ಎಡೀಸಿ ಡಾ.ಸ್ನೇಹಾ,ತಹಶೀಲ್ದಾರ್‌ ಶೋಭಿತಾ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.