ಬಹಳಷ್ಟು ಕೆಲಸಗಳು ಬಾಕಿ ಉಳಿದಿವೆ, ರಾಜಕಾರಣದಿಂದ ನಿವೃತ್ತಿಯಾಗಲ್ಲ: ರಮೇಶ್ಕುಮಾರ್ ಸ್ಪಷ್ಟನೆ
Team Udayavani, Dec 8, 2020, 8:42 PM IST
ಕೋಲಾರ: ಬಹಳ ಕೆಲಸಗಳು ಬಾಕಿ ಉಳಿದಿವೆ. ಈ ಕೂಡಲೇ ರಾಜಕಾರಣದಿಂದ ನಿವೃತ್ತಿಯಾಗುವುದಿಲ್ಲ ಎಂದು ಮಾಜಿ ಸ್ಪೀಕರ್, ಶ್ರೀನಿವಾಸಪುರ ಶಾಸಕ ರಮೇಶ್ಕುಮಾರ್ ಸ್ಪಷ್ಟಪಡಿಸಿದ್ದಾರೆ.
ರಮೇಶ್ಕುಮಾರ್ ರಾಜಕೀಯದಿಂದ ನಿವೃತ್ತರಾಗುತ್ತಿದ್ದಾರೆಂದು ವದಂತಿ ಹರಡಿದ ಹಿನ್ನಲೇ, ತಾಲೂಕಿನ ಜನ್ನಘಟ್ಟ ಗರಾಮದಲ್ಲಿ ಮಂಗಳವಾರ ಅವರು ಸ್ಪಷ್ಟನೆ ನೀಡಿದರು. ನಾನು ಜನರಿಗಾಗಿ ಸೇವೆ ಮಾಡಲು ಬಹಳಷ್ಟಿದೆ. ಇಂದಿರಾಗಾಂಧಿ ಭಾಷಣವನ್ನು ಕನ್ನಡಕ್ಕೆ ಭಾಷಾಂತರ ಮಾಡಿದವನು ನಾನು. ನನ್ನ ಜೀವನದಲ್ಲಿ ಯಾರೂ ಆಟವಾಡಲು ಬರಬಾರದು ಎಂದು ತಾಕೀತು ಮಾಡಿದ್ದಾರೆ.
ರಾಜಕೀಯ ನಿವೃತ್ತಿ ಎಂಬ ವದಂತಿಗಳನ್ನು ನಂಬಿ ಹಲವಾರು ಗಣ್ಯರು ಫೋನ್ ಮಾಡುತ್ತಿದ್ದಾರೆ. ಬೆಂಗಳೂರು, ಬೆಳಗಾಂ, ವಿಜಯಪುರದಿಂದ ಹಲವರು ಕರೆ ಮಾಡಿ ವಿಚಾರಿಸಿದ್ದಾರೆ. ನನ್ನ ರಾಜಕೀಯ ನಿವೃತ್ತಿ ನನ್ನೊಬ್ಬನ ನಿರ್ಧಾರ ಆಗಿರುವುದಿಲ್ಲ. ನಿವೃತ್ತಿ ಆಗುವಷ್ಟು ಸಮಯ ನನಗಿಲ್ಲ, ನಾನು ಸಾಕಷ್ಟು ಬಂಧನದಲ್ಲಿ ಸಿಲುಕಿದ್ದೇನೆ ಎಂದರು.
ಇದನ್ನೂ ಓದಿ: ಡಿ.12 ರಿಂದ 14ರ ವರೆಗೆ ಮಲೆ ಮಹದೇಶ್ವರ ಬೆಟ್ಟಕ್ಕೆ ಭಕ್ತಾಧಿಗಳಿಗೆ ಪ್ರವೇಶ ನಿಷೇಧ
ಯಾರಿಗೂ ನಾನು ರಾಜಕೀಯ ನಿವೃತ್ತಿ ಪಡೆದುಕೊಳ್ಳುತ್ತಿದ್ದೇನೆ ಎಂದು ಹೇಳಿಲ್ಲ. ದಯಮಾಡಿ ಸುಳ್ಳುಸುದ್ದಿ ಹಬ್ಬಿ ನನ್ನ ಮಾನಹರಣ ಮಾಡಬೇಡಿ. ನನ್ನನ್ನು ಮುಜುಗರಕ್ಕೀಡು ಮಾಡಬೇಡಿ, ನಾನು ನಿವೃತ್ತಿ ಬಗ್ಗೆ ಮಾತನಾಡಿದ್ದರೆ ದಾಖಲೆ ತಂದು ತೋರಿಸಿ. ನಾನೇನು ಸಭೆ ಕರೆದು ಪತ್ರಕರ್ತರನ್ನು ಆಹ್ವಾನಿಸಿದ್ದೇನಾ ? ಪ್ರೆಸ್ಮೀಟ್ ಕರೆದಿದ್ದೇನಾ ? ಎಂದು ಪ್ರಶ್ನಿಸಿದ ಅವರು, ವದಂತಿಗಳನ್ನು ಹರಡುವುದು ಪೀತಪತ್ರಿಕೋದ್ಯಮ ಎನ್ನುತ್ತೇನೆ ಎಂದು ವದಂತಿಗಳನ್ನು ಹರಡಿದವರ ವಿರುದ್ಧ ವಾಗ್ದಾಳಿ ನಡೆಸಿದರು.
ಇದನ್ನೂ ಓದಿ: ಲಾಟರಿಯಲ್ಲಿ ಒಲಿದ ಅದೃಷ್ಟ: ಭಕ್ತರಹಳ್ಳಿ MPCSನಲ್ಲಿ ಮತ್ತೊಮ್ಮೆ ಜೆಡಿಎಸ್ಗೆ ಅಧಿಕಾರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
MUST WATCH
ಹೊಸ ಸೇರ್ಪಡೆ
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA