ಕ್ಲಾಕ್ ಟವರ್ ಮೇಲೆ ರಾಷ್ಟ್ರ ಧ್ವಜ ಹಾರಿಸುವೆ
Team Udayavani, Mar 15, 2022, 1:50 PM IST
ಮುಳಬಾಗಿಲು : ಶೀಘ್ರದಲ್ಲಿಯೇ ಕೋಲಾರದ ಕ್ಲಾಕ್ ಟವರ್ಗೆ ತ್ರಿವರ್ಣ ಧ್ವಜದ ಬಣ್ಣ ಹಚ್ಚಿ ರಾಷ್ಟ್ರಧ್ವಜವನ್ನು ಹಾರಿಸುವುದಾಗಿ ಸಂಸದ ಎಸ್.ಮುನಿಸ್ವಾಮಿ ಸವಾಲು ಹಾಕಿದರು.
ನಗರದ ಹಳೆಯ ನ್ಯಾಯಾಲಯದ ಮುಂಭಾಗದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ, ವಿಶ್ವ ಹಿಂದೂ ಪರಿಷತ್, ಭಜರಂಗದಳ, ಶ್ರೀರಾಮಸೇನೆ, ಹಿಂದೂ ಜಾಗರಣೆ ವೇದಿಕೆಯಿಂದ ಏರ್ಪಡಿಸಿದ್ದ 392ನೇ ಚತ್ರಪತಿ ಶಿವಾಜಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ದೇಶ, ಧರ್ಮದ ಬಗ್ಗೆ ಯಾರು ಗೌರವ ಕೊಡುತ್ತಾರೊ ಅವರಿಗೆ ನಾವು ಗೌರವ ನೀಡುತ್ತೇವೆ. ಗೌರವ ಕೊಡದವರಿಗೆ ನಾವೂ ಗೌರವ ನೀಡಲ್ಲ ಎಂದರು.
ವರ್ಕ್ ಷಾಪ್, ಚಿಕನ್ ಅಂಗಡಿಗಳಲ್ಲಿ ಕೆಲಸ ಮಾಡುತ್ತಾ ಹಿಂದೂಗಳು ಗುಲಾಮರಾಗಿದ್ದಾರೆ, ಅವರಿಗೆ ಆತ್ಮಸಾಕ್ಷಿಯ ಅಗತ್ಯವಿದೆ ಎಂದು ಟೀಕಿಸಿದರಲ್ಲದೆ ತೆಲುಗು ಚಲನಚಿತ್ರದ ಡೈಲಾಗ್ ಅನ್ನು ವೇದಿಕೆಯಲ್ಲಿ ಹೇಳಿದಾಗ ಕಾರ್ಯಕರ್ತರು ಹರ್ಷೋದ್ಗಾರ ಮಾಡಿದರು. ಭಾರತ ದೇಶವನ್ನು ಅನ್ಯ ಧರ್ಮಿಯರು 800 ವರ್ಷ ಆಳಿದ್ದಾರೆ. ಈ ದೇಶದಲ್ಲಿ 100 ಕೋಟಿ ಹಿಂದುಗಳು ಇದ್ದೀವಿ, ನಾವುಗಳು ಮನಸ್ಸು ಮಾಡಿದರೆ ನಿಮ್ಮ ಅಂಗಡಿಗಳಲ್ಲಿ ವ್ಯಾಪಾರ ಆಗಲ್ಲ ಎಂದು ವ್ಯಂಗವಾಡಿದರು.
ನಿಮ್ಮ ಕೈಯಲ್ಲಿ ಏನೂ ಆಗಲ್ಲ, ಕೋಲಾರ ಕ್ಲಾಕ್ ಟವರ್ ನಮ್ಮದು ಎಂದರಲ್ಲದೆ ನಾನು ಎಂ.ಪಿ ಆಗುವುದಕ್ಕೆ ಮುಂಚೆಯೇ ಇದರ ಮೇಲೆ ಕಣ್ಣು ಇಟ್ಟಿದ್ದೆ. ರಾಜ್ಯ ಮತ್ತು ಕೇಂದ್ರ ಸರ್ಕಾರ ನಮ್ಮದೇ ಪಕ್ಷ ಅಧಿಕಾರದಲ್ಲಿ ಇರುವುದರಿಂದ ನಮ್ಮ ವಶಕ್ಕೆ ಪಡೆದುಕೊಂಡು ತೀರುತ್ತೇವೆಂದು ಸವಾಲು ಹಾಕಿದರು.
ಪ್ರಕರ ಬಾಲವಾಗ್ಮಿ, ಹಿಂದೂಪರ ಹೋರಾಟಗಾರ್ತಿ ಹಾರಿಕಾ ಮಂಜುನಾಥ್, ವಿಶ್ವ ಹಿಂದೂ ಪರಿಷತ್ ವಿಭಾಗ ಕಾರ್ಯದರ್ಶಿ ಶರಣ್ ಪಂಪುವೆಲ್, ಕೊರ್ಲಹಳ್ಳಿ ವೆಂಕಟೇಶ ಆಚಾರ್ಯ ಸ್ವಾಮೀಜಿ ಹಿಂದೂ ಧರ್ಮ, ಮತ್ತು ಶಿವಾಜಿ ಅವರ ಬಗ್ಗೆ ಭಾಷಣ ಮಾಡಿದರು.
ಮಧ್ಯಾಹ್ನ 2 ಗಂಟೆಗೆ ಮುತ್ಯಾಲಪೇಟೆಯ ಗಂಗಮ್ಮ ಗುಡಿಯ ಮುಂಭಾಗದಿಂದ ಪ್ರಾರಂಭವಾದ ಶೋಭಾಯಾತ್ರೆ ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ ರಾತ್ರಿ 7 ಗಂಟೆಗೆ ಹಳೆ ಕೋರ್ಟ್ ಮುಂಭಾಗದಲ್ಲಿ ಸಮಾವೇಶ ಕಾರ್ಯಕ್ರಮಕ್ಕೆ ಆಗಮಿಸಿದರು, ರಾತ್ರಿ 9.30 ಗಂಟೆಯ ವರೆಗೂ ಕಾರ್ಯಕ್ರಮ ನಡೆಯಿತು. ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್ ಗಾಂಧಿ
Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ
Politics: ಮುನಿಯಪ್ಪ ಬೆಂಬಲಿಗರಿಗೆ ಭವಿಷ್ಯದ ಆತಂಕ
Lok Sabha Election ಬಳಿಕವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್