ಮುಳಬಾಗಿಲು: ಅಭಿವೃದ್ಧಿಯಿಂದ ದೂರ ಉಳಿದ ಆವಣಿ ಬೆಟ್ಟದ “ಅಂತರಗಂಗೆ’

ಲವಕುಶರ ಜನ್ಮಸ್ಥಳ ಹಾಗೂ ವಾಸದ ಮನೆ ಇದೆ

Team Udayavani, Mar 1, 2024, 3:00 PM IST

ಮುಳಬಾಗಿಲು: ಅಭಿವೃದ್ಧಿಯಿಂದ ದೂರ ಉಳಿದ ಆವಣಿ ಬೆಟ್ಟದ “ಅಂತರಗಂಗೆ’

ಉದಯವಾಣಿ ಸಮಾಚಾರ
ಮುಳಬಾಗಿಲು: ತಾಲೂಕಿನ ಪುರಾಣ ಪ್ರಸಿದ್ಧ ಆವಣಿ ಸೀತಾಮಾತೆ ಬೆಟ್ಟದ ತಪ್ಪಲಿನಲ್ಲಿ ಅಂತರಗಂಗೆ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ನಿರ್ಲಕ್ಷ್ಯದಿಂದ ಮೂಲಸೌಕರ್ಯಗಳ ಕೊರತೆಯಿಂದ ಅಭಿವೃದ್ಧಿಯಾಗದೇ ಜನಮಾನಸದಿಂದ ದೂರ ಉಳಿದಿದೆ ಎಂಬ ಕೂಗು ವ್ಯಾಪಕವಾಗಿ ಕೇಳಿ ಬರುತ್ತಿದೆ.

ತಾಲೂಕಿನಲ್ಲಿ ವಿಜಯನಗರ ಅರಸರ ಕಾಲದಿಂದಲೂ ಹೆಸರುವಾಸಿಯಾಗಿದ್ದ ಪುರಾಣ ಪ್ರಸಿದ್ಧ ಆಂಜನೇಯಸ್ವಾಮಿ, ಕುರುಡುಮಲೆ ವಿನಾಯಕ ದೇವಾಲಯ ಸೇರಿದಂತೆ ನೂರಾರು ಪುರಾಣ ಪ್ರಸಿದ್ಧ ಕ್ಷೇತ್ರಗಳ ಸಾಲಿಗೆ ಆವಣಿ ಕ್ಷೇತ್ರವೂ ಸೇರಿದ್ದು, ಇಲ್ಲಿರುವ ರಾಷ್ಟ್ರೀಯ ಸ್ಮಾರಕಗಳ ಸಾಲಿಗೆ ಸೇರಿದ ಶ್ರೀ ರಾಮಲಿಂಗೇಶ್ವರ ದೇವಾಲಯದ ಅಂಚಿನಲ್ಲಿಯೇ ಬೆಟ್ಟವಿದ್ದು, ರಾಮ, ಲಕ್ಷ್ಮಣ, ಸೀತಾಮಾತೆ ವಾಸವಾಗಿದ್ದ ಸ್ಥಳ, ಅಶ್ವಮೇಧಯಾಗದ ಕುದುರೆಯನ್ನು ಕಟ್ಟಿ ಹಾಕಿದ ಧೀಮಂತ ವ್ಯಕ್ತಿಗಳಾದ ಲವಕುಶರ ಜನ್ಮಸ್ಥಳ ಹಾಗೂ ವಾಸದ ಮನೆ, ಸೀತಾಮಾತೆಯು ಜಿಗುಪ್ಸೆಗೊಂಡು ಭೂಗರ್ಭ ಸೇರಿದ ಪ್ರದೇಶ, ಬೆಟ್ಟದ ತಪ್ಪಲಿನಲ್ಲಿ ಶ್ರೀರಾಮ- ಲಕ್ಷ್ಮಣರು ವಾಸವಾಗಿದ್ದ ವೇಳೆ ಅಲ್ಲಿ  ಸ್ಥಾಪಿಸಲಾಗಿದ್ದ ಪಂಚಲಿಂಗ, ವಾಲ್ಮೀಕಿ ಮಹರ್ಷಿ ರಾಮಾಯಣ ಬರೆದ ಸ್ಥಳ ಇಲ್ಲಿನ ಐತಿಹ್ಯಗಳಾಗಿದೆ.

ವಿವಿಧ ದೇಗುಲಗಳು: ಆವಣಿ ಗ್ರಾಮದಲ್ಲಿರುವ ಪುರಾಣ ಪ್ರಸಿದ್ಧ ಸೀತಾಮಾತೆ ಬೆಟ್ಟದ ತಪ್ಪಲಿನ ದಕ್ಷಿಣ ಭಾಗಕ್ಕಿರುವ ಶಿವಲಿಂಗಗಳ ಕೆಲವೇ ಅಡಿಗಳ ದೂರಲ್ಲಿ ಶ್ರೀ ಗಂಗಾಧರೇಶ್ವರ ದೇಗುಲವಿದ್ದು, ಅದರೊಂದಿಗೆ ಸದರಿ ದೇಗುಲ ಪಕ್ಕದಲ್ಲಿಯೇ ಶ್ರೀನರಸಿಂಹಸ್ವಾಮಿಯ ದೇಗುಲವಿದೆ. ಪ್ರತಿವರ್ಷ ಯುಗಾದಿಯ ಹಬ್ಬದಂದು ನರಸಿಂಹಸ್ವಾಮಿ ದೇಗುಲದಲ್ಲಿ ನಡೆಯುವ ವಿಶಿಷ್ಟವಾದ ಪೂಜಾ ಕಾರ್ಯಕ್ರಮ ನೋಡುಗರ ಮೈನವಿರೇಳುವಂತಿರುತ್ತದೆ.

ಸರ್ಕಾರಕ್ಕೆ ಸಾಕಷ್ಟು ಆದಾಯ: ಅದರ ಅಂಚಿನಲ್ಲಿಯೇ ಅತ್ಯಂತ ಮಹತ್ವವಾದ 10×10 ಅಡಿ ಅಗಲದ ವಿಸ್ತೀರ್ಣದಲ್ಲಿ ಅಂತರಗಂಗೆ ಇದ್ದು, ಕೋಲಾರದ ಅಂತರಗಂಗೆಯಂತೆ ಇಲ್ಲಿಯೂ ಸಹ ವರ್ಷವಿಡೀ ಬಸವಣ್ಣನ ಹೊಕ್ಕಳಿನಲ್ಲಿ ನೀರು ಬರುತ್ತದೆ. ಈ ನೀರು ಕುಡಿಯಲು ಅತ್ಯುತ್ತಮವಾಗಿದ್ದು, ಇದರ ಸುತ್ತಮುತ್ತಲೂ ವಾಸವಾಗಿರುವ 25-30 ದಲಿತ ಕುಟುಂಬಗಳಿಗೆ ಅಂತರಗಂಗೆಯ ನೀರೇ ಜೀವನಾಧಾರವಾವಾಗಿರುತ್ತದೆ ಎನ್ನಲಾಗಿದೆ.

ಒಟ್ಟಿನಲ್ಲಿ ಪ್ರತಿವರ್ಷ ಆವಣಿ ಕ್ಷೇತ್ರದಲ್ಲಿ ನಡೆಯುವ ಶ್ರೀಪ್ರಸನ್ನ ರಾಮಲಿಂಗೇಶ್ವರ ಬ್ರಹ್ಮರಥೋತ್ಸವಕ್ಕೆ ಲಕ್ಷಾಂತರ ಜನರು
ಭೇಟಿ ನೀಡುತ್ತಾರೆ. ಅದರಂತೆ ಸಾಕಷ್ಟು ಆದಾಯ ಸರ್ಕಾರಕ್ಕೆ ಜಮಾ ಆಗುತ್ತಿದ್ದರೂ, ಯಾವುದೇ ಇಲಾಖೆ ಅಭಿವೃದ್ಧಿ ಮಾಡದ ಕಾರಣ ಅಂತರಗಂಗೆಯು ಅಭಿವೃದ್ಧಿಯಿಂದ ದೂರವಾಗಿ ಉಳಿದಿದೆ.

ಪುನರ್‌ ನಿರ್ಮಾಣ ಮಾಡಲು ಆಗ್ರಹ 
ಈ ಅಂತರಗಂಗೆ ಪುಣ್ಯಕ್ಷೇತ್ರವು ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದ ಮೂಲ ಭೂತ ಸೌಕರ್ಯ ಕೊರತೆಯಿಂದ ಅಭಿವೃದ್ಧಿಯಾಗದೇ ಜನಮಾನಸದಿಂದ ದೂರ ಉಳಿದಿದ್ದು, ಇದರಿಂದ ಈ ಅಂತರಗಂಗೆಯನ್ನು ಪುನರ್‌ ನಿರ್ಮಾಣ ಮಾಡಬೇಕೆಂದು ಮುಖಂಡ ಆವಣಿ ಕಾಶಿ ಎಂಬುವರು ಪ್ರಾಚ್ಯವಸ್ತು ಇಲಾಖೆ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.

ಆವಣಿ ಕ್ಷೇತ್ರವು ಪ್ರಾಚ್ಯವಸ್ತುಇಲಾಖೆ ಒಡೆತನದಲ್ಲಿರು ವುದರಿಂದ ಸೀತಾಮಾತೆ ಬೆಟ್ಟದ ತಪ್ಪಲಿನಲ್ಲಿರುವ ಅಂತರಗಂಗೆ ಅಭಿವೃದ್ಧಿಯ ಕುರಿತು ಪ್ರಾಚ್ಯವಸ್ತು ಇಲಾಖೆಯು ಕ್ರಮ ಕೈಗೊಳ್ಳಲಿದೆ.
●ಸಿ. ಸುಬ್ರಮಣ್ಯಂ, ರಾಜಸ್ವ ನಿರೀಕ್ಷಕ, ಆವಣಿ ಹೋಬಳಿ

■ ಎಂ. ನಾಗರಾಜಯ್ಯ

 

ಟಾಪ್ ನ್ಯೂಸ್

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.