ನಗರ ಸಭೆ ವ್ಯಾಪ್ತಿ ನಿಗದಿ ಅವೈಜ್ಞಾನಿಕ


Team Udayavani, Dec 10, 2019, 4:18 PM IST

kolar-tdy-1

ಮುಳಬಾಗಿಲು: ನಗರಸಭೆ ವ್ಯಾಪ್ತಿಯನ್ನು ವಿಸ್ತರಣೆ ಮಾಡುವ ಸಂಬಂಧ ಈಗಾಗಲೇ ತಾಲೂಕು ಆಡಳಿತ 5 ಕಿ.ಮೀ. ವ್ಯಾಪ್ತಿಯನ್ನು ನಿರ್ಧರಿಸಿದೆ. ಆದರೆ, ನಿಗದಿ ಮಾಡಿರುವ ವ್ಯಾಪ್ತಿಗೆ ಒಳಪಟ್ಟಿರುವ ಕೆಲವು ಗ್ರಾಮಗಳು ನಗರದಿಂದ 10 ಕಿ.ಮೀ.ಗೂ ಹೆಚ್ಚು ದೂರ ಇವೆ. ಇದರಿಂದ ಈ ಗ್ರಾಮಗಳ ಜನರು, ಅಕ್ರಮ ಸಕ್ರಮ, ಭೂ ಸಾಗುವಳಿ ಪತ್ರಕ್ಕಾಗಿ ಅರ್ಜಿ ಹಾಕಿಕೊಂಡಿರುವರು, ಕೆಲವು ಬಡವರು ಸರ್ಕಾರಿ ಸೌಲಭ್ಯಗಳಿಂದ ದೂರ ಉಳಿಯುವಂತಾಗಿದೆ.

ಕರ್ನಾಟಕ ಪೌರಸಭೆಗಳ ಕಾಯ್ದೆ 19649ನೇ ಪ್ರಕರಣದಲ್ಲಿ ನಿಗದಿಪಡಿಸಿದಂತೆ ಮುಳ ಬಾಗಿಲು ಪುರಸಭೆ ಪ್ರದೇಶವನ್ನು ಸಣ್ಣ ನಗರ ಸಭೆ ಪ್ರದೇಶ ಎಂದು ಘೋಷಣೆ ಮಾಡಿ, ಸರ್ಕಾರದ ನಗರಾಭಿವೃದ್ಧಿ ಇಲಾಖೆ ಅಧೀನ ಕಾರ್ಯದರ್ಶಿ ಸಿದ್ಧಿಕ್‌ಪಾಷ ಅವರು ಆದೇಶ ಹೊರಡಿಸಿದ್ದರು. ಹೀಗಾಗಿ ಕಳೆದ ಜನವರಿ ತಿಂಗಳಿನಲ್ಲಿ ಜಿಲ್ಲಾಧಿಕಾರಿ ಜೆ. ಮಂಜುನಾಥ್‌ ಅವರು, ಇಲ್ಲಿನ ನಗರಸಭೆ ವ್ಯಾಪ್ತಿಯನ್ನು 5 ಕಿ.ಮೀ. ಗುರುತಿಸಲು ತಾಲೂಕು ಆಡಳಿತಕ್ಕೆ ಸೂಚನೆ ನೀಡಿದ್ದರು. ಅದರಂತೆ ಸರ್ವೆ ಕಾರ್ಯ ಮಾಡಿ ತಾಲೂಕು ಆಡಳಿತ ವ್ಯಾಪ್ತಿಯನ್ನು ನಿರ್ಧರಿಸಿದ್ದು, ಅದು ವೈಜ್ಞಾನಿಕವಾಗಿದೆ ಎಂದು ಕೆಲವು ಗ್ರಾಮಸ್ಥರು ಆರೋಪ ಮಾಡಿದ್ದಾರೆ.

ಗುರುತಿಸಲಾದ ಗ್ರಾಮಗಳು: ಈಗಾಗಲೇ ಗುರುತಿಸಿರುವ ವ್ಯಾಪ್ತಿಯಲ್ಲಿ ಕಸಬಾ ಹೋಬಳಿ ಚಾಮರೆಡ್ಡಿಹಳ್ಳಿ, ಜಿ.ವಡ್ಡಹಳ್ಳಿ, ಗುಮ್ಲಾಪುರ, ಕವತನಹಳ್ಳಿ, ಪಿ.ಗಂಗಾಪುರ, ಕೊತ್ತೂರು, ಕಸವಿರೆಡ್ಡಿಹಳ್ಳಿ, ನರಸೀಪುರ ದಿನ್ನೆ, ದೊಡ್ಡಬಂಡಹಳ್ಳಿ, ಕುಂಬಾರಹಳ್ಳಿ, ಚಿಕ್ಕಬಂಡ ಹಳ್ಳಿ, ಜಂಗಾಲಹಳ್ಳಿ, ಅಲ್ಲಾಲಸಂದ್ರ, ಕಪ್ಪಲಮಡಗು, ಮನ್ನೇನಹಳ್ಳಿ, ದಾರೇನಹಳ್ಳಿ, ಸೊನ್ನವಾಡಿ, ಮಂಚಿಗಾನಹಳ್ಳಿ, ಖಾದ್ರೀಪುರ, ತುರುಕರಹಳ್ಳಿ, ಲಿಂಗಾಪುರ, ಸೋಮೇಶ್ವರ ಪಾಳ್ಯ, ಕದರೀಪುರ, ಸಿದ್ದಘಟ್ಟ, ಚಲುವ ನಾಯಕನಹಳ್ಳಿ, ದುಗ್ಗಸಂದ್ರ, ಮಾರಂಡಹಳ್ಳಿ, ಹೊಸಹಳ್ಳಿ, ಸೀಗೇನಹಳ್ಳಿ, ತೊರಡಿ, ಕುರುಬರ ಹಳ್ಳಿ, ಆವಣಿ ಹೋಬಳಿ ಮಲ್ಲಕಚ್ಚನಹಳ್ಳಿ, ಶೆಟ್ಟಿಬಣಕನಹಳ್ಳಿ, ಅಸಲಿಅತ್ತಿಕುಂಟೆ, ಜಮ್ಮನ ಹಳ್ಳಿ, ದೊಡ್ಡಮಾದೇನಹಳ್ಳಿ, ವಿ.ಗುಟ್ಟ ಹಳ್ಳಿ, ಚಿಕ್ಕಮಾದೇನಹಳ್ಳಿ, ಅನಂತಪುರ, ಕುಮುದೇನಹಳ್ಳಿ, ವರದಗಾನಹಳ್ಳಿ, ದುಗ್ಗಸಂದ್ರ ಹೋಬಳಿ ದೊಡ್ಡಗುರ್ಕಿ, ಎಚ್‌.ಗೊಲ್ಲಹಳ್ಳಿ, ರಚ್ಚಬಂಡಹಳ್ಳಿ, ಕೆ.ಜಿ.ಲಕ್ಷ್ಮೀಸಾಗರ, ಜಂಗಮ ಕನ್ನಸಂದ್ರ ಮತ್ತು ಕುರುಡುಮಲೆ ಗ್ರಾಮ ಗಳನ್ನು ನಗರಸಭೆ ವ್ಯಾಪ್ತಿಗೆ ಸೇರಿಸಲಾಗಿದೆ.

ಸೌಲಭ್ಯಗಳಿಂದ ವಂಚಿತ: ಆದರೆ, ದೊಡ್ಡಗುರ್ಕಿ, ಎಚ್‌.ಗೊಲ್ಲಹಳ್ಳಿ, ರಚ್ಚಬಂಡ ಹಳ್ಳಿ, ಕೆ.ಜಿ.ಲಕ್ಷ್ಮೀಸಾಗರ, ಜಂಗಮ ಕನ್ನಸಂದ್ರ ಮತ್ತು ಕುರುಡುಮಲೆ, ಚಾಮರೆಡ್ಡಿಹಳ್ಳಿ, ಮನ್ನೇನಹಳ್ಳಿ, ದುಗ್ಗಸಂದ್ರ, ವರದಗಾನಹಳ್ಳಿ ಸೇರಿ ಹಲವು ಗ್ರಾಮಗಳು ನಗರದಿಂದ 5 ಕಿ.ಮೀ. ಗಿಂತಲೂ ಹೆಚ್ಚು ದೂರದಲ್ಲಿದ್ದರೂ ತಾಲೂಕು ಆಡಳಿತ ಅವೈಜ್ಞಾನಿಕವಾಗಿಸೇರಿಸಿದೆ. ಇದರಿಂದ ಈ ಗ್ರಾಮಗಳ ಜನರುದರ ಕಾಸ್ತು ಸೇರಿ ಸರ್ಕಾರಿ ಯೋಜನೆಗಳನ್ನು ಪಡೆಯಲಾಗದೇ, ಅದರಿಂದ ದೂರ ಉಳಿಯುಂತಾಗಿದೆ. ಅದಕ್ಕೆ, ಪೂರಕವಾಗಿ ಇತ್ತೀಚಿಗೆ ಸೊನ್ನವಾಡಿ ಗ್ರಾಮದಲ್ಲಿ ತಾಲೂಕು ಆಡಳಿತದಿಂದ ನಡೆದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ ಈ ಗ್ರಾಮಗಳ ಗ್ರಾಮಸ್ಥರು ಪಾಲ್ಗೊಂಡು, ತಾಲೂಕು ಆಡಳಿತ ನಿರ್ಧಾರ ಮಾಡಿರುವ ನಗರಸಭೆ ವ್ಯಾಪ್ತಿಯ ಅವೈಜ್ಞಾನಿಕವಾಗಿ ಕ್ರಮ ದಿಂದ ನಮಗೆ ಸರ್ಕಾರಿ ಸೌಲಭ್ಯ ಸಿಗದಂತಾಗಿದೆ. ಹೀಗಾಗಿ ವೈಜ್ಞಾನಿಕವಾಗಿ ನಿಗದಿ ಮಾಡಿರುವ ನಗರಸಭೆ ವ್ಯಾಪ್ತಿ ರದ್ದು ಮಾಡಲು ಅಬಕಾರಿ ಸಚಿವ ಹಾಗೂ ಕ್ಷೇತ್ರದ ಶಾಸಕ ಎಚ್‌.ನಾಗೇಶ್‌ ಮುಂದೆ ತಮ್ಮ ಮನವಿ ಸಲ್ಲಿಸಿದರು.

ಈಗ ನಿಗದಿ ಮಾಡಿರುವ 5 ಕಿ.ಮೀ. ವ್ಯಾಪ್ತಿಗೆ ಒಳಪಟ್ಟಿರುವ 47 ಗ್ರಾಮಗಳಲ್ಲಿ ಸರ್ಕಾರಿ ಜಮೀನಿನಲ್ಲಿ ಹಲವು ವರ್ಷಗಳಿಂದ ಸಾಗುವಳಿ ಮಾಡಿಕೊಂಡು ತಮ್ಮಗಳ ಕುಟುಂಬಗಳ ನಿರ್ವಹಣೆ ಮಾಡುತ್ತಿದ್ದೇವೆ. ಆದರೆ, ಈಗ ನಗರಸಭೆ ವ್ಯಾಪ್ತಿಯನ್ನು 5 ಕಿ.ಮೀ. ಒಳಪಡದಿದ್ದರೂ ಅವೈಜ್ಞಾನಿಕವಾಗಿ ನಿಗದಿ ಮಾಡಿದ್ದರ ಪರಿಣಾಮ ಭೂ ಮಂಜೂರಾತಿಗಾಗಿ (ದರಕಾಸ್ತು) ಅರ್ಜಿ 57 ಸಲ್ಲಿಸಲು ಅವಕಾಶವಿಲ್ಲದಂತೆ ಆಗಿದೆ ಎಂದು ರೈತರು ತಮ್ಮ ಅಳಲು ತೋಡಿಕೊಂಡಿದ್ದರು.

 

ಎಂ.ನಾಗರಾಜಯ್ಯ

ಟಾಪ್ ನ್ಯೂಸ್

ಸಿ.ಟಿ.ರವಿ

Vijayapura; ವಿಕಸಿತ ಭಾರತಕ್ಕೆ ವಿಶ್ವನಾಯಕ ಮೋದಿ ನಾಯಕತ್ವ ಅನಿವಾರ್ಯ: ಸಿ.ಟಿ.ರವಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

ಯತ್ನಾಳ್

Loksabha Election; ಈಶ್ವರಪ್ಪ ಬಂಡಾಯವನ್ನು ರಾಜಾಹುಲಿ ಶಮನ ಮಾಡಲಿ: ಯತ್ನಾಳ್

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

11

Politics: ಮುನಿಯಪ್ಪ ಬೆಂಬಲಿಗರಿಗೆ ಭವಿಷ್ಯದ ಆತಂಕ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

LS polls 2024: ಕೋಲಾರ ಮೈತ್ರಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಜೆಡಿಎಸ್‌ ಮುಖಂಡರು ಗೈರು

LS polls 2024: ಕೋಲಾರ ಮೈತ್ರಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ; ಜೆಡಿಎಸ್‌ ಮುಖಂಡರು ಗೈರು

ಬಂಗಾರಪೇಟೆ: ರಾಜ್ಯದ ಗಡಿಭಾಗದ ರಸ್ತೆಗಳ ಅಭಿವೃದ್ದಿ ಯಾವಾಗ?

ಬಂಗಾರಪೇಟೆ: ರಾಜ್ಯದ ಗಡಿಭಾಗದ ರಸ್ತೆಗಳ ಅಭಿವೃದ್ದಿ ಯಾವಾಗ?

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

Fraud: ಮದುವೆ ಆಗದೇ ದೈಹಿಕ ಸಂಪರ್ಕ ಬೆಳೆಸಿ ಮಹಿಳಾ ಟೆಕಿಗೆ ವಂಚನೆ

Fraud: ಮದುವೆ ಆಗದೇ ದೈಹಿಕ ಸಂಪರ್ಕ ಬೆಳೆಸಿ ಮಹಿಳಾ ಟೆಕಿಗೆ ವಂಚನೆ

ಸಿ.ಟಿ.ರವಿ

Vijayapura; ವಿಕಸಿತ ಭಾರತಕ್ಕೆ ವಿಶ್ವನಾಯಕ ಮೋದಿ ನಾಯಕತ್ವ ಅನಿವಾರ್ಯ: ಸಿ.ಟಿ.ರವಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

ಯತ್ನಾಳ್

Loksabha Election; ಈಶ್ವರಪ್ಪ ಬಂಡಾಯವನ್ನು ರಾಜಾಹುಲಿ ಶಮನ ಮಾಡಲಿ: ಯತ್ನಾಳ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.