ನಗರಸಭೆ ಚುನಾವಣೆ: ವಿವಿ ಪ್ಯಾಟ್‌, ನೋಟಾ ಇರಲ್ಲ


Team Udayavani, Nov 6, 2019, 3:19 PM IST

kolar-tdy-2

ಕೋಲಾರ: ಮತ ಯಂತ್ರಗಳಲ್ಲಿ ಈ ಬಾರಿ ಮತದಾನ ಖಾತ್ರಿ ಯಂತ್ರ(ವಿವಿ ಪ್ಯಾಟ್‌) ಬಳಸುತ್ತಿಲ್ಲ ಮತ್ತು ನೋಟಾಗೆ ಅವಕಾಶವೂ ಇಲ್ಲ, ಗೊಂದಲಗಳಿಗೆ ಅವಕಾಶ ನೀಡದಂತೆ ಬದ್ಧತೆಯಿಂದ ಕೆಲಸ ಮಾಡಿ ಎಂದು ತಹಶೀಲ್ದಾರ್‌ ಹಾಗೂ ಸಹಾಯಕ ಚುನಾವ ಣಾಧಿಕಾರಿ ಆರ್‌. ಶೋಭಿತಾ ಸಲಹೆ ನೀಡಿದರು.

ನಗರಸಭೆ ಚುನಾವಣೆಗೆ ಸಂಬಂಧಿಸಿದಂತೆ ನಗರದ ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಮಂಗಳವಾರ ನಡೆದ ಮತಗಟ್ಟೆ ಅಧಿಕಾರಿಗಳ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ಮತ ದಾನದ ಕುರಿತು ಇರುವ ಅನುಮಾನ ತರಬೇತಿ ಯಲ್ಲಿ ಪರಿಹರಿಸಿಕೊಳ್ಳಿ, ಸುಗಮ, ಗೊಂದಲ ರಹಿತ ಮತದಾನ ನಡೆಯಲು ಎಲ್ಲಾ ಮಾಹಿತಿ ಈಗಲೇ ಪಡೆದುಕೊಳ್ಳಿ ಎಂದು ಸಲಹೆ ನೀಡಿದರು.

ನಿಷ್ಪಕ್ಷಪಾತ ನಿಲುವು ಇರಲಿ: ಮತದಾರ ನಿರ್ಭಯದಿಂದ ಮತಚಲಾಯಿಸುವ ವಾತಾವ ರಣವನ್ನು ಮತಗಟ್ಟೆಯಲ್ಲಿ ಕಾಪಾಡುವುದು ಪ್ರಿಸೈಡಿಂಗ್‌ ಅಧಿಕಾರಿಗಳ ಹೊಣೆ. ನೀವು ನಿಮ್ಮ ಕರ್ತವ್ಯ ನಿರ್ವಹಣೆಯಲ್ಲಿ ಯಾವುದೇ ಮುಲಾಜಿಗೆ ಒಳಗಾಗದಿರಿ, ನಿಷ್ಪಕ್ಷಪಾತ ನಿಲುವು ನಿಮ್ಮದಾಗಿರಲಿ ಎಂದು ಹೇಳಿದರು.

ಯಾರ ಪರ ಕೆಲಸ ಮಾಡಬೇಡಿ: ಚುನಾವಣಾ ಆಯೋಗ ಶಾಂತಿಯುತ, ನಿಷ್ಪಕ್ಷಪಾತ ಮತದಾನದ ಆಶಯ ಹೊಂದಿದೆ. ಈ ಆಶಯಕ್ಕೆ ಧಕ್ಕೆ ಬಾರದಂತೆ ಕೆಲಸ ನಿರ್ವಹಿಸುವ ಹೊಣೆ ಮತಗಟ್ಟೆಯ ಜವಾಬ್ದಾರಿ ಹೊತ್ತ ನಿಮ್ಮಗಳ ಮೇಲಿದೆ. ಯಾವುದೇ ಪಕ್ಷ, ವ್ಯಕ್ತಿಯ ಪರ ಕೆಲಸ ಮಾಡದಿರಿ, ನಿಮಗೆ ಚುನಾವಣಾ ಆಯೋಗದ ಸೂಚನೆಯಂತೆ ನೀಡಿರುವ ನಿಯಮ ಚಾಚೂ ತಪ್ಪದೇ ಪಾಲಿಸಿ ಎಂದು ಹೇಳಿದರು.

ಅನುವು ಮಾಡಿಕೊಡಿ: ಸಹಾಯಕ ನೋಡಲ್‌ ಅಧಿಕಾರಿ ಕೆ.ಎಸ್‌.ನಾಗರಾಜಗೌಡ, ಚುನಾವಣಾ ನೀತಿ, ನಿಯಮ ಕ್ರಮಬದ್ಧವಾಗಿ ಪಾಲಿಸಿ, ಶಿಕ್ಷಕರೇ ಚುನಾವಣಾ ಕೆಲಸ ನಿರ್ವಹಿಸುತ್ತಿದ್ದು, ನಿಮಗೆ ಈ ಬಗ್ಗೆ ಮೊದಲೇ ಅರಿವಿದ್ದರೂ ಮತ್ತೂಮ್ಮೆ ಅಗತ್ಯ ಮಾಹಿತಿ ಪಡೆದುಕೊಳ್ಳಿ, ಸುಗಮ ಮತದಾನಕ್ಕೆ ಅನುವು ಮಾಡಿಕೊಡಿ ಎಂದು ಹೇಳಿದರು.

ದೂ.ಸಂಖ್ಯೆ ಪಡೆಯಿರಿ: ಗುರುತಿನ ಚೀಟಿ ನೋಡಿಯೇ ಮತದಾನಕ್ಕೆ ಅನುವು ಮಾಡಿಕೊಡಿ, ನಿಮಗೆ ಅನುಮಾನ ಬಂದರೆ ಪರಿಶೀಲಿಸಿ, ಇತರೆ ಮತಗಟ್ಟೆಯ ಸಿಬ್ಬಂದಿಯ ದೂರವಾಣಿ ಸಂಖ್ಯೆ ಪಡೆದುಕೊಳ್ಳಿ, ಸಹಕಾರ ಮನೋಭಾವದಿಂದ ಮತದಾನದಲ್ಲಿ ಯಾವುದೇ ಲೋಪವಾಗದಂತೆ ಕ್ರಮವಹಿಸಿ ಎಂದು ವಿವರಿಸಿದರು.

ತರಬೇತಿ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿ ಉಪನ್ಯಾಸಕ ಗೋಪಿಕೃಷ್ಣನ್‌, ನೀವು ನ.11 ರಂದು ಮತಗಟ್ಟೆಗಳಿಗೆ ತೆರಳುವ ಮುನ್ನಾ ನೀವು ಮಷ್ಟ್ರಿಂಗ್‌ ಕೇಂದ್ರದಲ್ಲಿ ನಿಮ್ಮೊಂದಿಗೆ ಕಾರ್ಯ ನಿರ್ವಹಿಸಲು ನೇಮಕಗೊಂಡಿರುವ ಅಧಿಕಾರಿಗಳನ್ನು ಭೇಟಿ ಮಾಡಿ ಎಂದ ಅವರು, ನಂತರ ಎಲ್ಲರ ಸಹಕಾರ ಪಡೆದು ಮಾಷ್ಟರಿಂಗ್‌ ಕೇಂದ್ರದಲ್ಲಿ ಮತದಾನ ಕೇಂದ್ರಕ್ಕೆ ಹೋಗಲು ಅಗತ್ಯವಾದ ವಸ್ತುಗಳನ್ನು ಪಡೆದುಕೊಂಡು ಖಾತ್ರಿಪಡಿಸಿಕೊಳ್ಳಿ ಎಂದು ವಿವರಿಸಿದರು.

ಮತಗಟ್ಟೆಯಲ್ಲಿ ಬಳಸುವ ಇವಿಎಂ ಬಳಕೆ ಕುರಿತು ಅವರು ಪ್ರಾಯೋಗಿಕವಾಗಿ ಅರಿವು ಮೂಡಿಸಿ ಚುನಾವಣಾ ಕಾರ್ಯಕ್ಕೆ ನೇಮಕಗೊಂಡಿರುವ ಸಿಬ್ಬಂದಿಯ ಅನುಮಾನಗಳನ್ನು ಪರಿಹರಿಸಿದರು. ಇಸಿಒ ಆರ್‌.ಶ್ರೀನಿವಾಸನ್‌, ತರಬೇತು ದಾರರಾದ ರುದ್ರಪ್ಪ, ಮುನಿರಾಜು ಉಪಸ್ಥಿತರಿದ್ದು, ಮತಗಟ್ಟೆಗಳಿಗೆ ನೇಮಕಗೊಂಡಿರುವ ಪಿಆರ್‌ಒ ಮತ್ತು ಎಪಿಆರ್‌ಒಗಳು ತರಬೇತಿ ಪಡೆದುಕೊಂಡರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

11

Politics: ಮುನಿಯಪ್ಪ ಬೆಂಬಲಿಗರಿಗೆ ಭವಿಷ್ಯದ ಆತಂಕ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.