ಪುರಸಭೆ: ಅಂತಿಮವಾಗದ ಅಭ್ಯರ್ಥಿಗಳ ಪಟ್ಟಿ

ಆಕಾಂಕ್ಷಿಗಳು ಹೆಚ್ಚಿರುವ ಕಾಂಗೆ್ರಸ್‌ನಲ್ಲಿ ಟಿಕೆಟ್ ಹಂಚಿಕೆ ಗೊಂದಲ

Team Udayavani, May 12, 2019, 10:39 AM IST

KOLAR-TDY-1..

ಬಂಗಾರಪೇಟೆ ಪುರಸಭೆ ಕಚೇರಿ ಕಟ್ಟಡದ ಹೊರನೋಟ

ಬಂಗಾರಪೇಟೆ: ಪುರಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು 16 ಕೊನೆ ದಿನವಾಗಿದೆ. ಮೂರು ದಿನಗಳಲ್ಲಿ ಕೇವಲ ಬೆರಳಿಕೆಯಷ್ಟು ನಾಮಪತ್ರ ಸಲ್ಲಿಕೆಯಾಗಿದ್ದು, ರಾಜ್ಯದ ಪ್ರಮುಖ ಮೂರೂ ಪಕ್ಷಗಳು ತಮ್ಮ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗದೇ ಗೊಂದಲದಲ್ಲಿ ಸಿಲುಕಿವೆ.

ಕಾಂಗ್ರೆಸ್‌ಗೆ 27 ವಾರ್ಡ್‌ಗಳಲ್ಲಿ ಮೂರು ನಾಲ್ಕು ಮಂದಿ ಆಕಾಂಕ್ಷಿಗಳಿರುವುದರಿಂದ ಸ್ಥಳೀಯ ಶಾಸಕರಿಗೆ ಯಾರಿಗೆ ಟಿಕೆಟ್ ನೀಡಬೇಕೆಂಬ ತಲೆ ಬಿಸಿ ಶುರುವಾಗಿದೆ. ಮೀಸಲಾತಿ ಬದಲಾಗಿರುವುದರಿಂದ ಹಾಲಿ ಸದಸ್ಯರು ಹೊಸ ವಾರ್ಡ್‌ಗಳತ್ತ ಮುಖ ಮಾಡಿದ್ದು, ತಮಗೆ ಅನುಕೂಲವಾಗಿರುವ ವಾರ್ಡ್‌ಗೇ ಟಿಕೆಟ್ ನೀಡಬೇಕೆಂದು ಮುಖಂಡರಲ್ಲಿ ಒತ್ತಡ ಹೇರುತ್ತಿದ್ದು, ಟಿಕೆಟ್ ಹಂಚಿಕೆ ಗೊಂದಲವಾಗಿದೆ.

ಹುಡುಕಾಟ: ಕಾಂಗ್ರೆಸ್‌ನಲ್ಲಿ ಪ್ರಭಾವಿಗಳು ಸ್ಪರ್ಧಿಸುವ ವಾರ್ಡ್‌ಗಳಲ್ಲಿ ಟಿಕೆಟ್ ಹಂಚಿಕೆ ಬಹುತೇಕ ಇತ್ಯರ್ಥವಾಗಿದೆ. ಕೆಲವು ಕಡೆ ಆಕಾಂಕ್ಷಿಗಳು ಹೆಚ್ಚಾಗಿರುವುದರಿಂದ ಹಾಗೂ ಕೆಲವು ಕಡೆ ಮೀಸಲಾತಿಯಲ್ಲಿ ಅಭ್ಯರ್ಥಿಗಳ ಕೊರತೆ ಹೆಚ್ಚಾಗಿರುವುದರಿಂದ ಮುಖಂಡರು ಹುಡುಕಾಟದಲ್ಲಿ ತೊಡಗಿದ್ದಾರೆ.

ಹೊಸಮುಖಗಳದ್ದೇ ಚಿಂತೆ: ಪುರಸಭೆ 27 ವಾರ್ಡ್‌ಗಳಿಗೆ ವರ್ಷದ ಹಿಂದೆಯೇ ಮೀಸಲಾತಿ ಪ್ರಕಟಣೆಗೊಂಡಿತ್ತು. ಆದ್ದರಿಂದ ಕಾಂಗ್ರೆಸ್‌ನ ಪ್ರಭಾವಿ ಸದಸ್ಯರು ಈಗಾಗಲೇ 6 ತಿಂಗಳ ಹಿಂದೆಯೇ ತಾವು ಸ್ಪರ್ಧೆ ಬಯಸಿರುವ ವಾರ್ಡ್‌ಗಳಲ್ಲಿ ಮತದಾರರನ್ನು ಗೆಲ್ಲಲು ಪ್ರಚಾರ ಪ್ರಾರಂಭಿಸಿದ್ದರು. ಅಲ್ಲದೆ, ಈ ಬಾರಿ ಹೊಸ ಮುಖಗಳೂ ಹಳಬರಿಗೆ ಸಡ್ಡು ಹೊಡೆಯಲು ಸಿದ್ಧತೆಯಲ್ಲಿರುವುದು ರಾಜಕೀಯ ಪಕ್ಷಗಳ ನಾಯಕರಿಗೆ ತಲೆಬಿಸಿಯಾಗಿದೆ. ಯಾರಿಗೇ ಟಿಕೆಟ್ ನೀಡಿದರೂ ಮತ್ತೂಬ್ಬರು ಬಂಡಾಯವಾಗಿ ಕಣಕ್ಕಿಳಿಯದೆ ಪಕ್ಷಕ್ಕಾಗಿ ಶ್ರಮಿಸಬೇಕೆಂದು ಸೂಚನೆ ಸಹ ನೀಡಲಾಗಿದೆ.

ಸೂಕ್ತ ಅಭ್ಯರ್ಥಿಗಳಿಗೆ ತಲಾಶ್‌: ಇನ್ನು ಬಿಜೆಪಿ, ಜೆಡಿಎಸ್‌ನಲ್ಲಿ ಟಿಕೆಟ್ ಬಯಸಿ ಹಲವು ಮಂದಿ ಆಕಾಂಕ್ಷಿಗಳು ಅರ್ಜಿ ಹಾಕಿದ್ದಾರೆ. ಆದರೆ, ಪಟ್ಟಣದ ಪುರಸಭೆ ಹಲವು ದಶಕಗಳಿಂದಲೂ ಕಾಂಗ್ರೆಸ್‌ ಭದ್ರಕೋಟೆಯಾಗಿರುವುದರಿಂದ ಕಾಂಗ್ರೆಸ್‌ ಅಭ್ಯರ್ಥಿ ಎದುರಿಸುವುದು ಅಷ್ಟು ಸುಲಭವಲ್ಲ ಎಂದು ತಿಳಿದು, ಎಲ್ಲಾ ರೀತಿಯಿಂದಲೂ ಬಲಿಷ್ಠವಾಗಿರುವ ಅಭ್ಯರ್ಥಿಗಳನ್ನೇ ಕಣಕ್ಕಿಳಿಸಲು ಎರಡೂ ಪಕ್ಷಗಳು ಅಭ್ಯರ್ಥಿಗಳ ತಲಾಶೆಯಲ್ಲಿದ್ದಾರೆ.

ಪ್ರಚಾರ ಶುರು: ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಪರ ಕೆಲಸ ಮಾಡಿದ ಜೆಡಿಎಸ್‌ ಕಾರ್ಯಕರ್ತರು ಪುರಸಭೆ ಚುನಾವಣೆಯಲ್ಲಿಯೂ ಮೈತ್ರಿ ಮುಂದುವರಿದರೆ ಒಂದಷ್ಟು ಸ್ಥಾನ ಗೆಲ್ಲಬಹುದೆಂಬ ನಿರೀಕ್ಷೆಯಲ್ಲಿದ್ದರು. ಆದರೆ, ಅದು ಫ‌ಲ ನೀಡದ ಕಾರಣ ಏಕಾಂಗಿಯಾಗಿ ಸ್ಪರ್ಧಿಸಬೇಕಾಗಿದೆ. ಮೂರು ಪಕ್ಷಗಳಲ್ಲಿ ಅಭ್ಯರ್ಥಿಗಳ ಅಂತಿಮಗೊಳ್ಳದಿದ್ದರೂ ಆಕಾಂಕ್ಷಿಗಳು ಮಾತ್ರ ತಮ್ಮ ವಾರ್ಡ್‌ಗಳಲ್ಲಿ ಪ್ರಚಾರ ಶುರು ಮಾಡಿಬಿಟ್ಟಿದ್ದಾರೆ. ತಮ್ಮ ಪಕ್ಷ ಟಿಕೆಟ್ ನೀಡಿದರೆ ಸರಿ ಇಲ್ಲದಿದ್ದರೆ ಬಂಡಾಯವಾಗಿಯಾದರೂ ಸರಿ ನಿಂತು ತಮ್ಮ ಅಸ್ತಿತ್ವವನ್ನು ತೋರಿಸಲು ಪಣ ತೊಟ್ಟಿದ್ದಾರೆ.

ಪುರಸಭೆ ಅಧಿಕಾರಕ್ಕೆ ಬಂದ ದಿನದಿಂದ ಕಾಂಗ್ರೆಸ್‌ ಭದ್ರಕೋಟೆಯಾಗಿರುವ ಪುರಸಭೆ ಆಡಳಿತವನ್ನು ಕಾಂಗ್ರೆಸ್‌ ಇನ್ನು ಭದ್ರಪಡಿಸಿಕೊಳ್ಳಲು ಕಸರತ್ತು ಆರಂಭಿಸಿದೆ. ಈ ಹಿಂದೆ 23 ವಾರ್ಡ್‌ಗಳಿದ್ದ ಪುರಸಭೆ ಈಗ 27ಕ್ಕೆ ಏರಿಕೆಯಾಗಿದೆ. ಕಾಂಗ್ರೆಸ್‌, ಬಿಜೆಪಿ, ಜೆಡಿಎಸ್‌ ಅಭ್ಯರ್ಥಿಗಳ ಆಯ್ಕೆ ಲೆಕ್ಕಾಚಾರ ಪ್ರಾರಂಭವಾಗಿದೆ.

ಪುರಸಭೆ 23 ಸದಸ್ಯರ ಪೈಕಿ ಕಾಂಗ್ರೆಸ್‌ 15, ಜೆಡಿಎಸ್‌ 5, ಬಿಜೆಪಿ 2 ಪಕ್ಷೇತರ ಅಭ್ಯರ್ಥಿ 1 ಸ್ಥಾನಗಳಿಸಿದ್ದು, ಕಾಂಗ್ರೆಸ್‌ ಪಕ್ಷದವರು ಆಡಳಿತ ನಡೆಸಿದ್ದರು. ಪಟ್ಟಣದಲ್ಲಿ ಶಾಸಕ ಎಸ್‌.ಎನ್‌.ನಾರಾಯಣಸ್ವಾಮಿ ನೇತೃತ್ವದಲ್ಲಿ ಡಬಲ್ರಸ್ತೆ, ಚರಂಡಿ, ರಸ್ತೆಗಳ ಅಭಿವೃದ್ಧಿ, ನೂತನ ಸಾರ್ವಜನಿಕ ಆಸ್ಪತ್ರೆ ಹೀಗೆ ಹಲವು ಅಭಿವೃದ್ಧಿ ಯೋಜನೆಗಳನ್ನು ಪಟ್ಟಣದಲ್ಲಿ ಮಾಡಲಾಗಿದೆ ಎಂದು, ಕುಡಿಯುವ ನೀರಿನ ಸಮಸ್ಯೆಗೆ ಕೊಳವೆಬಾವಿ ಕೊರೆಯಿಸಿ ನೀರು ಪೂರೈಕೆಗೆ ಕ್ರಮ ಕೈಗೊಳ್ಳಲಾಗಿದೆ. ಪುರಸಭೆ ವ್ಯಾಪ್ತಿಯಲ್ಲಿ ರಂಗಮಂದಿರ, ನೂತನ ಪುರಸಭೆ ಕಚೇರಿ ಕಟ್ಟಡ, ಬಸ್‌ನಿಲ್ದಾಣ, ಒಳಾಂಗಣ ಕ್ರೀಡಾಂಗಣ ಕಾಮಗಾರಿ ಪ್ರಗತಿಯಲ್ಲಿದೆ ಎಂದು ಕಾಂಗ್ರೆಸ್‌ ಹೇಳಿಕೊಳ್ಳುತ್ತಿದ್ದು, ವಾರ್ಡ್‌ಗಳಲ್ಲಿ ಸ್ಪರ್ಧಿಸಲು ಪಕ್ಷದ ಟಿಕೆಟ್ಗಾಗಿ ಕಸರತ್ತು ಆರಂಭಿಸಿದ್ದಾರೆ. ಉಳಿದಂತೆ ಬಿಜೆಪಿ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲು ಜಿಲ್ಲಾಧ್ಯಕ್ಷ ಬಿ.ಪಿ.ವೆಂಕಟಮುನಿಯಪ್ಪ ನೇತೃತ್ವದಲ್ಲಿ ಸಜ್ಜಾಗುತ್ತಿದೆ. ಜೆಡಿಎಸ್‌ ಅಭ್ಯರ್ಥಿಗಳು ಕಡಿಮೆಯಾದರೂ ಕಣಕ್ಕೆ ಇಳಿಸಲು ಮುಖಂಡರಾದ ಎಂ.ಮಲ್ಲೇಶಬಾಬು ನೇತೃತ್ವದಲ್ಲಿ ತಾಲೀಮು ನಡೆಯುತ್ತಿದೆ.

 

ಟಾಪ್ ನ್ಯೂಸ್

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

11

Politics: ಮುನಿಯಪ್ಪ ಬೆಂಬಲಿಗರಿಗೆ ಭವಿಷ್ಯದ ಆತಂಕ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.