ಜಿಲ್ಲೆಯ ಜನತೆಗೆ ಆಘಾತ ತಂದ ನಾಗೇಶ್‌ ನಡೆ!

ಇತ್ತೀಚಿಗಷ್ಟೇ ಸಚಿವರಾಗಿದ್ದ ನಾಗೇಶ್‌ ರಾಜೀನಾಮೆ ನೀಡಿ ಮುಂಬೈಗೆ ಪ್ರಯಾಣ • ಕ್ಷೇತ್ರದ ಜನರ ಆಕ್ರೋಶ

Team Udayavani, Jul 9, 2019, 1:05 PM IST

kolar-tdy-2..

ಕೋಲಾರ ಜಿಲ್ಲೆಯ ಮುಳಬಾಗಿಲು ಕ್ಷೇತ್ರದಿಂದ ಪಕ್ಷೇತರ ಶಾಸಕರಾಗಿ ಆಯ್ಕೆಯಾಗಿರುವ ಎಚ್.ನಾಗೇಶ್‌ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಮುಂಬೈಗೆ ತೆರಳಿದರು.

ಕೋಲಾರ: ಮುಳಬಾಗಿಲು ಶಾಸಕ ಎಚ್.ನಾಗೇಶ್‌ ಅನಿರೀಕ್ಷಿತ ಬೆಳವಣಿಗೆಯಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಅತೃಪ್ತ ಶಾಸಕ ಬಣ ಸೇರಿಕೊಳ್ಳಲು ಮುಂಬೈ ತಲುಪಿರುವುದು ಜಿಲ್ಲೆಯ ಜನರಿಗೆ ಆಘಾತ ತಂದಿದೆ.

ಜಿಲ್ಲೆಯ ರಾಜಕಾರಣಕ್ಕೆ ಹೊಸಬರಾಗಿರುವ ಎಚ್.ನಾಗೇಶ್‌ ಕೇವಲ ಒಂದೇ ತಿಂಗಳಿನಲ್ಲಿ ಶಾಸಕರಾಗಿ ಆಯ್ಕೆಯಾಗಿಬಿಟ್ಟಿದ್ದರು. ಆದರೆ, ಶಾಸಕರಾಗಿ ಆಯ್ಕೆಯಾದಾಗಿನಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವವರೆಗೂ ಎಚ್.ನಾಗೇಶ್‌ ತುಳಿದಿರುವ ದಾರಿ ರಾಜಕೀಯವಾಗಿ ವಿವಾದಕ್ಕೆ ಕಾರಣವಾಗಿದೆ.

ಅದರಲ್ಲೂ ಆರ್‌.ವೆಂಕಟರಾಮಯ್ಯ, ಎಂ.ವಿ.ಕೃಷ್ಣಪ್ಪ, ಎಂ.ವಿ.ವೆಂಕಟಪ್ಪ ಮತ್ತು ಆಲಂಗೂರ್‌ ಶ್ರೀನಿವಾಸ್‌ರನ್ನು ಕೊಟ್ಟಂತಹ ಮುಳಬಾಗಿಲು ಕ್ಷೇತ್ರದಲ್ಲಿ ಆಯ್ಕೆಯಾಗಿರುವ ಎಚ್.ನಾಗೇಶ್‌, ಕ್ಷಣಕ್ಕೊಂದು ದಿನಕ್ಕೊಂದು ರಾಜಕೀಯ ನಿಲುವುಗಳನ್ನು ತೆಗೆದುಕೊಂಡು ತಮ್ಮನ್ನು ಆಯ್ಕೆ ಮಾಡಿದ ಮತದಾರರಿಗೆ ದ್ರೋಹ ಬಗೆಯುತ್ತಿದ್ದಾರೆಯೇ ಎಂಬ ಅನುಮಾನವೂ ಕಾಡುವಂತಾಗಿದೆ.

ಅನಿರೀಕ್ಷಿತವಾಗಿ ಆಯ್ಕೆ: ರಾಜ್ಯದ ಮೂಡಣ ದಿಕ್ಕಿನ ಮೊದಲ ಕ್ಷೇತ್ರ ಮುಳಬಾಗಿಲಿನಿಂದ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದಿಂದ ಕೊತ್ತೂರು ಮಂಜುನಾಥ್‌ ನಾಮಪತ್ರ ಸಲ್ಲಿಸಿದ್ದರು. ಆದರೆ, ಜಾತಿ ಪ್ರಮಾಣ ಪತ್ರ ವಿವಾದದಲ್ಲಿ ತಿರಸ್ಕೃತಗೊಂಡಿದ್ದರಿಂದ ಕಾಂಗ್ರೆಸ್‌ ಪಕ್ಷಕ್ಕೆ ನಾಮಪತ್ರವೇ ಇಲ್ಲದಂತಾಯಿತು. ಕಣದಲ್ಲಿ ಉಳಿದಿದ್ದವರ ಪೈಕಿ ನಾಮಪತ್ರ ಸಲ್ಲಿಸಿದ್ದ ಎಚ್.ನಾಗೇಶ್‌, ಹಿರಿಯ ಮುಖಂಡ ಡಿ.ಕೆ.ಶಿವಕುಮಾರ್‌ಗೆ ಆಪ್ತರೆಂಬ ಕಾರಣಕ್ಕೆ ಕಾಂಗ್ರೆಸ್‌ ಬೆಂಬಲಿತ ಪಕ್ಷೇತರರೆಂದು ಆಯ್ಕೆ ಮಾಡಿಕೊಳ್ಳಲಾಯಿತು. ಮಾಜಿ ಶಾಸಕ ಕೊತ್ತೂರು ಮಂಜುನಾಥ್‌ರ ಬೆಂಬಲವೂ ಸಿಕ್ಕಿತ್ತು. ಇದರಿಂದ ಕೇವಲ ಒಂದೇ ತಿಂಗಳಲ್ಲಿ ಎಚ್.ನಾಗೇಶ್‌ ಶಾಸಕರಾಗಿ ಆಯ್ಕೆಬಿಟ್ಟಿದ್ದರು.

ಎಣಿಕೆ ಕೇಂದ್ರದಿಂದಲೇ ಡಿಕೆಶಿ ಸುಪರ್ದಿಗೆ: ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೂ ಬಹುಮತ ಬಾರದಿರುವುದರಿಂದ ಪಕ್ಷೇತರರಾಗಿ ಆಯ್ಕೆಯಾದವರಿಗೆ ಕಿಮ್ಮತ್ತು ಹೆಚ್ಚಾಗಿತ್ತು. ಇದನ್ನು ಗ್ರಹಿಸಿದ್ದ ಡಿ.ಕೆ.ಶಿವಕುಮಾರ್‌ ಮತ ಎಣಿಕೆ ನಡೆಯುತ್ತಿದ್ದ ಕೋಲಾರದ ಬಾಲಕರ ಕಾಲೇಜಿಗೆ ಖುದ್ದು ಆಗಮಿಸಿ ಎಚ್.ನಾಗೇಶ್‌ರನ್ನು ತಮ್ಮೊಂದಿಗೆ ಕರೆದೊಯ್ದಿದ್ದರು. ಮೈತ್ರಿ ಸರಕಾರಕ್ಕೆ ಬೆಂಬಲ ಕೊಡಿಸುವಲ್ಲಿಯೂ ಯಶಸ್ವಿಯಾಗಿದ್ದರು. ಆದರೆ, ಭರವಸೆ ನೀಡಿದಂತೆ ಎಚ್.ನಾಗೇಶ್‌ರಿಗೆ ಮಂತ್ರಿ ಸ್ಥಾನ ಕೊಡಿಸುವಲ್ಲಿ ವಿಫ‌ಲವಾಗಿದ್ದರು. ಇದು ಸಹಜವಾಗಿಯೇ ಎಚ್.ನಾಗೇಶ್‌ರ ಅಸಮಾಧಾನಕ್ಕೆ ಕಾರಣವಾಗಿತ್ತು.

ಬಿಜೆಪಿ ಪಾಳೆಯಕ್ಕೆ: ಮಂತ್ರಿ ಸ್ಥಾನ ಸಿಗಲಿಲ್ಲವೆಂದು ಅಸಮಾಧಾನಗೊಂಡಿದ್ದ ಎಚ್.ನಾಗೇಶ್‌, ಮೈತ್ರಿ ಸರ್ಕಾರಕ್ಕೆ ನೀಡಿದ್ದ ಬೆಂಬಲ ವಾಪಸ್‌ ಪಡೆದುಕೊಂಡು ಮುಂಬೈ ಹಾರಿಬಿಟ್ಟಿದ್ದರು. ಆದರೆ, ಆಪರೇಷನ್‌ ವಿಫ‌ಲವಾಗಿದ್ದರಿಂದ ಎಚ್.ನಾಗೇಶ್‌ ಮತ್ತೆ ವಾಪಸ್ಸಾಗಿದ್ದರು. ಪುನಃ ಹಳೆ ಗಂಡನ ಪಾದವೇ ಗತಿ ಎಂಬಂತೆ ಮೈತ್ರಿ ಸರ್ಕಾರಕ್ಕೆ ಬೆಂಬಲ ವ್ಕಕ್ತಪಡಿಸಿದ್ದರು. ಹಲವು ತಿಂಗಳುಗಳು ಕಾದರೂ ಮಂತ್ರಿ ಸ್ಥಾನ ಸಿಕ್ಕಿರಲಿಲ್ಲ. ಆದರೆ, ತೀರಾ ಇತ್ತೀಚಿಗೆ ಎಚ್.ನಾಗೇಶ್‌ ಜೆಡಿಎಸ್‌ ಕೋಟಾದಲ್ಲಿ ಮಂತ್ರಿಯಾದರು. ಮಾಜಿ ಕೇಂದ್ರ ಸಚಿವ ಕೆ.ಎಚ್.ಮುನಿಯಪ್ಪ ಬಹಿರಂಗವಾಗಿಯೇ ವಿರೋಧಿಸಿದ್ದರು. ಜಿಲ್ಲೆಯ ಇತರೇ ರಾಜಕಾರಣಿಗಳು ಮತ್ತು ಜನತೆಯಿಂದ ಎಚ್.ನಾಗೇಶ್‌ಗೆ ಅಭೂತ ಪೂರ್ವ ಸ್ವಾಗತವೇನು ಸಿಗಲಿಲ್ಲ. ಮಂತ್ರಿಯಾಗಿ 15 ದಿನ ಕಾದ ನಂತರ ವಾರದ ಹಿಂದಷ್ಟೇ ಸಣ್ಣ ಕೈಗಾರಿಕೆ ಸಚಿವರಾಗಿ ಅಧಿಕಾರ ಸ್ಪೀಕರಿಸಿದ್ದರು. ನಾಲ್ಕೈದು ದಿನಗಳ ಹಿಂದಷ್ಟೇ ಸ್ವ ಕ್ಷೇತ್ರದಲ್ಲಿ ಸನ್ಮಾನವನ್ನು ಏರ್ಪಡಿಸಿಕೊಂಡಿದ್ದರು.

ಮತ್ತೆ ವಿದಾಯ: ಇದೀಗ ಅನಿರೀಕ್ಷಿತ ಬೆಳವಣಿಗೆಯಲ್ಲಿ ಎಚ್.ನಾಗೇಶ್‌ ಸಚಿವ ಸ್ಥಾನಕ್ಕೆ ರಾಜ್ಯಪಾಲರ ಮೂಲಕ ರಾಜೀನಾಮೆ ನೀಡಿ, ವಿಶೇಷ ವಿಮಾನದಲ್ಲಿ ಮುಂಬೈ ತೆರಳಿ ಅತೃಪ್ತರ ಬಣವನ್ನು ಸೇರ್ಪಡೆಯಾಗಿದ್ದಾರೆ. ಎಚ್.ನಾಗೇಶ್‌ರ ಈ ದಿಢೀರ್‌ ನಿರ್ಧಾರಗಳು ಕೋಲಾರ ರಾಜಕಾರಣದಲ್ಲಿ ಸಾಕಷ್ಟು ಟೀಕೆಗೆ ಗುರಿಯಾಗಿದೆ. ಮುಳಬಾಗಿಲು ಕ್ಷೇತ್ರ ಸೇರಿದಂತೆ ಜಿಲ್ಲೆಯ ಜನತೆ ಎಚ್.ನಾಗೇಶ್‌ರ ರಾಜಕೀಯ ನಿಲುವುಗಳಿಗೆ ಬೇಸತ್ತಿದ್ದಾರೆ. ಇಂತವರ ಆಯ್ಕೆಗೆ ಕಾರಣಕರ್ತರಾದವರ ಮೇಲೂ ಕಿಡಿಕಾರುತ್ತಿರುವುದು ಕಂಡು ಬರುತ್ತಿದೆ. ರಿಯಲ್ ಎಸ್ಟೇಟ್ ಹಿನ್ನೆಲೆ, ಹಣದ ಥೈಲಿ ತಂದವರನ್ನು ರಾಜಕೀಯ ಪಕ್ಷಗಳು ಹಾಗೂ ಸ್ಥಳೀಯ ಮುಖಂಡರು ಒಪ್ಪಿಕೊಂಡು ಆಯ್ಕೆ ಮಾಡಿಕೊಂಡರೆ ಇಂತದ್ದೇ ಪರಿಸ್ಥಿತಿ ನಿರ್ಮಾಣವಾಗುತ್ತದೆಯೆಂದು ಟೀಕಿಸುತ್ತಿದ್ದಾರೆ.

ಎಚ್.ನಾಗೇಶ್‌ರ ರಾಜಕೀಯ ಮೇಲಾಟವು ಅವರನ್ನು ಆಯ್ಕೆ ಮಾಡಿದ ಮತದಾರರಿಗೂ, ಪ್ರಜಾಪ್ರಭುತ್ವಕ್ಕೂ ಕಳಂಕ ತರುವಂತಾಗಿದೆಯೆಂಬ ಟೀಕೆ ಜಿಲ್ಲಾದ್ಯಂತ ಸಾರ್ವತ್ರಿಕವಾಗಿ ವ್ಯಕ್ತವಾಗುತ್ತಿದೆ.

 

● ಕೆ.ಎಸ್‌.ಗಣೇಶ್‌

ಟಾಪ್ ನ್ಯೂಸ್

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

11

Politics: ಮುನಿಯಪ್ಪ ಬೆಂಬಲಿಗರಿಗೆ ಭವಿಷ್ಯದ ಆತಂಕ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-sdssd

Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.