ದಿನ್ನಹಳ್ಳಿ: ಕೂಲಿ ಕಾರ್ಮಿಕರಿಗೆ ನರೇಗಾ ವರದಾನ
Team Udayavani, Jun 23, 2021, 11:00 PM IST
ಮಾಸ್ತಿ: ಲಾಕ್ಡೌನ್ನಿಂದ ಕೈಗೆ ಕೆಲಸವಿಲ್ಲದೆ ಜೀವನನಿರ್ವಹಣೆ ಮಾಡಲು ಪರದಾಡುತ್ತಿದ್ದವರಿಗೆ ನರೇಗಾದಡಿ ಉದ್ಯೋಗ ನೀಡಿ ಹೋಬಳಿಯ ದಿನ್ನಹಳ್ಳಿ ಗ್ರಾಪಂ ನೆರವಾಗಿದೆ. ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಆಸಕ್ತಿಯುಳ್ಳ ರೈತರಿಗೆ ಬದು ನಿರ್ಮಾಣ,ಕೃಷಿ ಹೊಂಡ, ರಾಜಕಾಲುವೆ ಅಭಿವೃದ್ಧಿ, ಕೆರೆ ಹೂಳು ತೆಗೆಯುವುದು, ರಸ್ತೆ ಸೇರಿ ಇತರೆ ಅಭಿವೃದ್ಧಿ ಕೆಲಸಗಳನ್ನು ಮಾಡಿಸಲಾಗುತ್ತಿದೆ.
ದಿನಕ್ಕೆ 289 ರೂ.ಕೂಲಿಯಂತೆ ಕೆಲಸ ನೀಡಿದ್ದು, ಜನರು ಕೂಡಖುಷಿಯಿಂದ ತೊಡಗಿಕೊಂಡು ಜೀವನ ನಿರ್ವಹಣೆ ಮಾಡುತ್ತಿದ್ದಾರೆ. ಪ್ರತಿ ದಿನ ನೂರಾರು ಮಂದಿ ಕೆಲಸಕ್ಕೆ ಬರುತ್ತಿದ್ದು, ಅವರ ಗ್ರಾಮದ ಸುತ್ತಮುತ್ತಲಿನಲ್ಲೇ ಕೆಲಸ ಕೊಡಲಾಗುತ್ತಿದೆ. ಅಲ್ಲದೆ, ಕೊರೊನಾ ನಿಯಮಪಾಲಿಸುತ್ತೇನೆ ಎಂಬ ಪ್ರತಿಜ್ಞೆ ಮಾಡಿಸಲಾಗುತ್ತಿದೆ.
ಪ್ರತಿಯೊಬ್ಬರು ಮಾಸ್ಕ್ ಧರಿಸಿ, ಸಾಮಾಜಿಕ ಅಂತರಕಾಯ್ದುಕೊಂಡು ಮುಂಜಾಗ್ರತಾ ಕ್ರಮ ವಹಿಸಿದ್ದಾರೆ ಎಂದು ದಿನ್ನಹಳ್ಳಿ ಪ್ರಭಾರ ಪಿಡಿಒ ರವೀಂದ್ರ. ಹೇಳಿದರು. ಕೊರೊನಾದಿಂದ ಸಂಕಷ್ಟ ಸಿಲುಕಿದ್ದ ಕುಟುಂಬಗಳಿಗೆ ಉದ್ಯೋಗ ಖಾತ್ರಿ ಯೋಜನೆ ಆಸರೆಯಾಗಿದ್ದು, ಈ ಭಾಗದ ಬಡ ಕುಟುಂಬಗಳಿಗೆ ಬದುಕುವ ಆಸೆಹುಟ್ಟಿಸಿದಂತಾಗಿದೆ.
ಎಂ.ಮೂರ್ತಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolar; ಮೋದಿ ಶನಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆ
CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?
ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್ದು: ಕೃಷ್ಣಬೈರೇ ಗೌಡ
Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್
H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್