ಹುಳದೇನಹಳ್ಳಿಯಲ್ಲಿ ನರೇಗಾ ಜಾಗೃತಿ
Team Udayavani, Oct 19, 2019, 4:49 PM IST
ಟೇಕಲ್: ಹೋಬಳಿಯ ಹುಳದೇನಹಳ್ಳಿ ಗ್ರಾಮದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಡಿ ಉದ್ಯೋಗ ಖಾತ್ರಿ ಯೋಜನೆ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಕೈಗೊಂಡಿರುವ ಪ್ರಚಾರದ ವಾಹನ ಶುಕ್ರವಾರ ಗ್ರಾಮಗಳಲ್ಲಿ ಸಂಚರಿಸಿತು.
ಈ ವೇಳೆ ನಡೆದ ಕಾರ್ಯಕ್ರಮಕ್ಕೆ ಗ್ರಾಪಂ ಕಾರ್ಯದರ್ಶಿ ಅಶ್ವತ್ಥಪ್ಪ ಚಾಲನೆ ನೀಡಿ, ನರೇಗಾ ಯೋಜನೆಯಲ್ಲಿ ಕೈಗೊಳ್ಳುವ ಕಾಮಗಾರಿಗಳ ಬಗ್ಗೆ ಮಾತನಾಡಿದರು. ಸ್ಮಶಾನ ಅಭಿವೃದ್ಧಿ, ಕಾಂಕ್ರೀಟ್ ರಸ್ತೆ, ಪ್ರವಾಹ ನಿಯಂತ್ರಣ ಮತ್ತು ಸಂರಕ್ಷಣಾ ಕಾಮಗಾರಿ, ಕೊಳವೆ ಬಾವಿ ಮರುಪೂರಣ ಘಟಕ, ಜಾನುವಾರುಗಳಿಗೆ ಕುಡಿಯುವ ನೀರಿನ ತೊಟ್ಟಿ ನಿರ್ಮಾಣ, ರಾಜೀವ್ಗಾಂಧಿ ಸೇವಾ ಕೇಂದ್ರ, ಅಂಗನವಾಡಿ ಕಟ್ಟಡ ನಿರ್ಮಾಣ, ಹಳ್ಳಿ ಸಂತೆ, ಶಾಲಾ ಶೌಚಾಲಯ, ರಸ್ತೆ ಬದಿ ಗಿಡ ನೆಡುವುದು ಸಹ ಸರ್ಕಾರದ ಯೋಜನೆಗಳೊಂದಿಗೆ ಕೈಗೊಳ್ಳಬಹುದು ಎಂದರು.
ನರೇಗಾ ಯೋಜನೆಯಡಿ ಕೆಲಸ ಮಾಡುವವರಿಗೆ ದಿನಕ್ಕೆ 249 ರೂ. ಕೂಲಿ ದೊರೆಯುತ್ತದೆ. ಕೆಲಸಕ್ಕೆ ಅರ್ಜಿ ಸಲ್ಲಿಸಿದವರು ವರ್ಷದಲ್ಲಿ 100 ದಿನಗಳ ಕಾಲ ಕೆಲಸ ನಿರ್ವಹಿಸಬಹುದು ಎಂದು ತಿಳಿಸಿದರು. ಇದರ ಜೊತೆಗೆ ತೋಟಗಾರಿಕೆ, ರೇಷ್ಮೆ, ಕೃಷಿ, ವಸತಿ ಯೋಜನೆಯಗಳಲ್ಲಿಯೂ ನರೇಗಾ ಯೋಜನೆ ಬಳಸಿಕೊಳ್ಳಬ ಹುದು. ಮುಖ್ಯವಾಗಿ ರೈತರು “ನಮ್ಮ ಉದ್ಯೋಗ ನಮ್ಮ ಹಳ್ಳಿಗೆ’ “ನಮ್ಮ ಗ್ರಾಮ ಅಭಿವೃದ್ಧಿ ನಮ್ಮ ಕೈಯಲ್ಲಿ’ ಎಂಬುದನ್ನು ಅರಿಯಬೇಕು ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolar; ಮೋದಿ ಶನಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆ
CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?
ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್ದು: ಕೃಷ್ಣಬೈರೇ ಗೌಡ
Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್
H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್
MUST WATCH
ಹೊಸ ಸೇರ್ಪಡೆ
Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ
ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ
ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ
CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್
Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು