Manchahalli school: ಮಂಚಹಳ್ಳಿ ಶಾಲಾ ಕಟ್ಟಡ ದುರಸ್ತಿಗೆ ನಿರ್ಲಕ್ಷ್ಯ


Team Udayavani, Oct 28, 2023, 6:19 PM IST

tdy-19

ಬಂಗಾರಪೇಟೆ: ಇತ್ತೀಚಿನ ದಿನಗಳಲ್ಲಿ ಪೋಷಕರ ಖಾಸಗಿ ಶಾಲೆಗಳ ವ್ಯಾಮೋಹ ಸೇರಿ ಮತ್ತಿತರ ಕಾರಣಗಳಿಂದ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ದಿನೇದಿನೆ ಕ್ಷೀಣಿಸುತ್ತಿರುವುದು ಸಾಮಾನ್ಯ ವಾಗಿದೆ. ಆದರೆ, ಇದಕ್ಕೆಲ್ಲ ಅಪವಾದದಂತಿರುವ ತಾಲೂಕಿನ ಮಾವಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿ ಯ ಮಂಚಿಹಳ್ಳಿ ಪ್ರಾಥಮಿಕ ಶಾಲೆ, ಇಲಾಖೆಯಿಂದಲೇ ನಿರ್ಲಕ್ಷ್ಯಕ್ಕೊಳಗಾಗಿರುವುದು ದುರಂತ.

ಮಂಚಿಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆ ತಾಲೂಕು ಕೇಂದ್ರದಿಂದ ಸುಮಾರು 8 ಕಿಮೀ ದೂರದಲ್ಲಿದ್ದು, ವಿದ್ಯಾರ್ಥಿಗಳ ಸಂಖ್ಯೆಗೇನು ಕೊರತೆಯಿಲ್ಲ. ಆದರೆ, ಶಾಲಾ ಕಟ್ಟಡ ಅಸಮರ್ಪಕ ನಿರ್ವಹಣೆಯಿಂದ ಶಿಥಿಲಾವಸ್ಥೆ ತಲುಪಿದ್ದು, ಶಿಕ್ಷಣ ಇಲಾಖೆ ಇದುವರೆಗೂ ದುರಸ್ತಿ ಕಾರ್ಯಕ್ಕೆ ಮುಂದಾಗಿಲ್ಲ. ಹೀಗಾಗಿ ಇದ್ದೂ ಇಲ್ಲದಂತಿರುವ ಕಟ್ಟಡದಿಂದಾಗಿ ಮಕ್ಕಳು ರಸ್ತೆ ಬದಿಯಲ್ಲಿ ಕುಳಿತು ಪಾಠ ಕೇಳಬೇಕಾದ ಅನಿವಾರ್ಯ ಪರಿಸ್ಥಿತಿ ಎದುರಾಗಿದೆ.

ಮಂಚಹಳ್ಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆ ಯಲ್ಲಿ 1ರಿಂದ 5ನೇ ತರಗತಿವರೆಗೂ ಕೊಠಡಿಗಳಿವೆ. 1ನೇ ತರಗತಿಯಲ್ಲಿ 9 ವಿದ್ಯಾರ್ಥಿಗಳು, 2ನೇ ತರಗತಿಯಲ್ಲಿ 12, 3ನೇ ತರಗತಿಯಲ್ಲಿ 9, 4ನೇ ತರಗತಿಯಲ್ಲಿ 8 ಹಾಗೂ 5ನೇ ತರಗತಿಯಲ್ಲಿ 9 ವಿದ್ಯಾರ್ಥಿಗಳು ಸೇರಿ ಒಟ್ಟು 47 ವಿದ್ಯಾರ್ಥಿಗಳು ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಎರಡು ಶಾಲಾ ಕಟ್ಟಡಗಳಿದ್ದು, ಒಂದು ಕಟ್ಟಡ ಸಂಪೂರ್ಣ ಶಿಥಿಲಾವಸ್ಥೆಗೆ ತಲುಪಿದೆ.

ಗ್ರಾಮದಲ್ಲಿ ಬಹುತೇಕ ಕುಟುಂಬಗಳು ವ್ಯವ ಸಾಯ, ಕೂಲಿ ಮಾಡಿ ಬದುಕು ಸಾಗಿಸುತ್ತಿವೆ. ಎಲ್ಲರೂ ಬಡತನಕ್ಕೆ ಸೇರಿರುವುದರಿಂದ ನಗರ ಪ್ರದೇಶಗಳಲ್ಲಿನ ಶಾಲೆಗೆ ಮಕ್ಕಳನ್ನು ಸೇರಿಸುವಷ್ಟು ಶಕ್ತರಲ್ಲ. ಹೀಗಾಗಿ ಗ್ರಾಮದಲ್ಲೇ ಇರುವ ಶಾಲೆಗೆ ಮಕ್ಕಳನ್ನು ದಾಖಲಿಸಿದ್ದಾರೆ. ಶಾಲೆಯಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗಿ ದ್ದರೂ ಸೂಕ್ತ ಕಟ್ಟಡ ಇಲ್ಲ. ಸಮಸ್ಯೆ ಹೆಚ್ಚಾಗಿದ್ದರೂ ಶಿಕ್ಷಣ ಇಲಾಖೆ ಜಾಣ ಕುರುಡುತನ ಪ್ರದರ್ಶಿಸುತ್ತಿದೆ.

ಬೇರೆ ಶಾಲೆಯತ್ತ ಪೋಷಕರ ಚಿತ್ತ: ಮಂಚಹಳ್ಳಿ ಸರ್ಕಾರಿ ಶಾಲೆಯ ಎರಡೂ ಕಟ್ಟಡಗಳು ದುಸ್ಥಿತಿಯಲ್ಲಿದ್ದು, ಬೇರೆ ದಾರಿಯಿಲ್ಲದೇ ವಿದ್ಯಾರ್ಥಿ ಗಳು ಜೀವಭಯದಲ್ಲೇ ಪಾಠ ಕೇಳಬೇಕಾದ ಅನಿವಾ ರ್ಯತೆಗೆ ಸಿಲುಕಿದ್ದಾರೆ. ಕಟ್ಟಡದ ಸಮಸ್ಯೆಯಿಂದ ಆತಂಕಕ್ಕೆ ಒಳಗಾಗಿರುವ ಕೆಲ ಪೋಷಕರು ತಮ್ಮ ಮಕ್ಕಳನ್ನು ಬೇರೆ ಗ್ರಾಮದ ಸರ್ಕಾರಿ ಶಾಲೆಗೆ ಸೇರಿ ಸಿದ್ದಾರೆ. ಗ್ರಾಪಂನ 15ನೇ ಹಣಕಾಸು ಯೋಜನೆಯಡಿ ಇಬ್ಬರು ಗ್ರಾಪಂ ಸದಸ್ಯರು ಶಾಲೆಗೆ ಕಾಂಪೌಂಡ್‌, ನೆಲಹಾಸು ಹಾಗೂ ಮೇಲ್ಛಾವಣಿ ರಿಪೇರಿ ಮಾಡಿಸಿದ್ದರೂ ಕೊಂಚ ಮಟ್ಟಿನ ಸುಧಾರಣೆಯಾಗಿದೆ.

ಫೋಟೋಗಳು ವಾಟ್ಸಾಪ್‌ ಗ್ರೂಪ್‌ಗ್ಳಿಗಷ್ಟೇ ಸೀಮಿತ: ಶಾಲಾ ಕಟ್ಟಡ ದುಸ್ಥಿತಿ ಬಗ್ಗೆ ಶಿಕ್ಷಕರು, ಶಾಲಾಭಿವೃದ್ಧಿ ಸಮಿತಿ, ಗ್ರಾಮಸ್ಥರು ಹಲವು ಬಾರಿ ಕ್ಷೇತ್ರ ಶಿಕ್ಷಣಾಧಿಕಾರಿ, ಡಿಡಿಪಿಐ ಅಧಿಕಾರಿಗಳಿಗೆ 10 ವರ್ಷಗಳಿಂದಲೂ ಮನವಿ ಸಲ್ಲಿಸುತ್ತಿ ದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಮನವಿ ಕೊಟ್ಟಾ ಗೆಲ್ಲ ಶಾಲೆಗೆ ಭೇಟಿ ಕೊಡುವ ಶಿಕ್ಷಣ ಇಲಾಖೆ ಅಧಿಕಾರಿಗಳು ಕಾಟಾಚಾರಕ್ಕೆಂಬಂತೆ ಶಾಲೆಯ ಫೋಟೋ ಸೆರೆಹಿಡಿದು ವಾಟ್ಸಾಪ್‌ ಗ್ರೂಪ್‌ಗ್ಳಲ್ಲಿ ಶೇರ್‌ ಮಾಡುವುದಕ್ಕಷ್ಟೇ ಸೀಮಿತಗೊಳಿಸಿದ್ದಾರೆ. ಆದರೆ, ಇದುವರೆಗೂ ಇಲಾಖೆ ಯಿಂದ ಶಾಲೆಯ ಅಭಿ ವೃದ್ಧಿಗೆ ಸಂಬಂಧಿಸಿದಂತೆ ಯಾವುದೇ ಕೆಲಸಗಳಾಗಿಲ್ಲ.

ವರದಿ ನೀಡಿದರೂ ಇಲಾಖೆಯ ಮೊಂಡುತನ: ಮಂಚಹಳ್ಳಿಯಲ್ಲಿ 1995ರಲ್ಲಿ ಸರ್ಕಾರಿ ಶಾಲೆ ಕಟ್ಟಡವನ್ನು ಮಣ್ಣಿನಿಂದ ನಿರ್ಮಿಸಲಾಯಿತು. ಈ ವೇಳೆ ಅಳವಡಿಸಿದ್ದ ಬಾಗಿಲು, ಕಿಟಕಿಗಳು ಸಂಪೂರ್ಣ ಶಿಥಿಲಗೊಂಡಿದ್ದವು. ಬಳಿಕ ಶಾಲಾಭಿವೃದ್ಧಿ ಸಮಿತಿ ಕೆಲ ವರ್ಷಗಳ ಹಿಂದೆ ದುರಸ್ತಿಗೆ ಕ್ರಮ ಕೈಗೊಂಡು ಕಬ್ಬಿಣದ ಕಿಟಕಿ, ಬಾಗಿಲು ಹಾಕಿಸಿತು. ಆದರೆ, ಅಸಮರ್ಪಕ ನಿರ್ವಹಣೆ ಕೊರತೆಯಿಂದ ಅವು ತುಕ್ಕು ಹಿಡಿದಿವೆ. ಕಟ್ಟಡದ ಮೇಲ್ಛಾವಣಿಯ ಪದರು ಉದುರಿತ್ತಿವೆ. ಕೆಳಗಡೆಗೆ ಬಗ್ಗಿರುವುದರಿಂದ ಎರಡು ಪಿಲ್ಲರ್‌ಗಳ ಆಧಾರದಲ್ಲಿ ನಿಲ್ಲಿಸಲಾಗಿದೆ. ಸಂಪೂರ್ಣ ಶಿಥಿಲಗೊಂಡಿರುವ ಮೇಲ್ಛಾವಣಿ ಯಾವುದೇ ಸಂದರ್ಭದಲ್ಲೂ ಬೀಳಬಹುದು. ಕಟ್ಟಡವು ಶಿಥಿಲಗೊಂಡಿದ್ದು, ಮಕ್ಕಳನ್ನು ಕೂರಿಸಿಕೊಂಡು ಪಾಠ ಮಾಡಲು ಯೋಗ್ಯವಿಲ್ಲ ಎಂದು ಪಂಚಾಯತ್‌ ರಾಜ್‌ ಇಲಾಖೆ ಅಧಿಕಾರಿಗಳು 5 ವರ್ಷಗಳ ಹಿಂದೆಯೇ ವರದಿ ನೀಡಿದ್ದರೂ ಶಿಕ್ಷಣ ಇಲಾಖೆ ಮೊಂಡುತನ ಮುಂದುವರಿದಿದೆ.

ಮಂಚಹಳ್ಳಿ ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗಿದ್ದು, ಕಟ್ಟಡಗಳಿಲ್ಲದೇ ಪೋಷಕರು ತಮ್ಮ ಮಕ್ಕಳನ್ನು ಕಳುಹಿಸಲು ಆತಂಕ ಎದುರಿಸುತ್ತಿದ್ದಾರೆ. ನೂತನ ಕಟ್ಟಡ ನಿರ್ಮಾಣದ ಬಗ್ಗೆ ಶಿಕ್ಷಣ ಇಲಾಖೆಗೆ ನೂರಾರು ಬಾರಿ ಮನವಿ ಮಾಡಿದರೂ ಯಾರೂ ಸ್ಪಂದಿಸಲಿಲ್ಲ. ಈ ಕಟ್ಟಡದಿಂದ ಅನಾಹುತವಾದರೆ ಶಿಕ್ಷಣ ಇಲಾಖೆಯೇ ನೇರಹೊಣೆ. ಮತ್ತೂಂದು ಕಟ್ಟಡವೂ ಇದೇ ರೀತಿ ದುಸ್ಥಿತಿಗೆ ಹೋಗುವುದನ್ನು ತಪ್ಪಿಸಲು ಮಾವಹಳ್ಳಿ ಗ್ರಾಪಂನ 15ನೇ ಹಣಕಾಸು ಯೋಜನೆಯಲ್ಲಿ ಹಂತ ಹಂತವಾಗಿ ಅಭಿವೃದ್ದಿಪಡಿಸಿರುವುದರಿಂದ ಮಕ್ಕಳಿಗೆ ಅನುಕೂಲವಾಗಿದೆ. 10 ವರ್ಷಗಳಿಂದ ಕಟ್ಟಡ ಶಿಥಿಲಗೊಂಡಿದ್ದರೂ ಶಿಕ್ಷಣ ಇಲಾಖೆ ಬೇಜವಾಬ್ದಾರಿ ಯಿಂದ ನಡೆದುಕೊಳ್ಳುತ್ತಿದೆ. ಜಿಲ್ಲಾಧಿಕಾರಿಗಳು ಖುದ್ದು ಭೇಟಿ ನೀಡಿ ಸೂಕ್ತ ಕ್ರಮ ಕೈಗೊಳ್ಳಬೇಕಿದೆ. – ಎನ್‌.ರಾಧಾ ಮುನಿರಾಜು, ಮಾವಹಳ್ಳಿ ಗ್ರಾಪಂ ಸದಸ್ಯೆ, ಮಂಚಹಳ್ಳಿ

ಬಂಗಾರಪೇಟೆ ವಲಯಕ್ಕೆ ಸೇರಿರುವ ಮಂಚಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಯ ಕಟ್ಟಡ ತೀವ್ರವಾಗಿ ಶಿಥಿಲಗೊಂಡಿರುವುದನ್ನು ಪರಿಶೀಲನೆ ಮಾಡಲಾಗಿದೆ. ಸರ್ಕಾರದಿಂದ ಯಾವುದೇ ಅನುದಾನ ಬಾರದೇ ಇರುವುದರಿಂದ ಹೊಸ ಕಟ್ಟಡ ನಿರ್ಮಾಣ ಮಾಡಲು ಸಾಧ್ಯವಿಲ್ಲ. ನೂತನ ಕಟ್ಟಡ ನಿರ್ಮಾಣ ಮಾಡಲು ಬೇರೆ ಒಂದು ನಿವೇಶನ ನೀಡಿದರೆ ಕಟ್ಟಡ ನಿರ್ಮಾಣ ಮಾಡಬಹುದಾಗಿದ್ದು, ಹಳೆಯ ಕಟ್ಟಡವನ್ನು ಕೆಡವಿ ಅಲ್ಲಿಯೇ ಹೊಸ ಕಟ್ಟಡ ನಿರ್ಮಾಣ ಮಾಡಲು ಅವಕಾಶ ಇಲ್ಲ. ಈ ಬಗ್ಗೆ ಶಿಕ್ಷಣ ಇಲಾಖೆಯ ಮೇಲಾಧಿಕಾರಿಗಳ ಗಮನಕ್ಕೆ ತರಲಾಗಿದ್ದು, ಸರ್ಕಾರದಿಂದ ಮಂಜೂರಾದರೆ ಹೊಸ ಕಟ್ಟಡ ನಿರ್ಮಾಣ ಮಾಡಲಾಗುವುದು. – ಡಿ.ಎನ್‌.ಸುಕನ್ಯಾ, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಬಂಗಾರಪೇಟೆ

 – ಎಂ.ಸಿ.ಮಂಜುನಾಥ್

ಟಾಪ್ ನ್ಯೂಸ್

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.