ವೈದ್ಯರ ನಿರ್ಲಕ್ಷ್ಯ: ಹೆರಿಗೆ ವೇಳೆ ಮಗು ಸಾವು
Team Udayavani, Feb 14, 2019, 11:07 AM IST
ಕೆಜಿಎಫ್: ಸರ್ಕಾರಿ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯದಿಂದ ಹೆರಿಗೆ ಸಮಯದಲ್ಲಿ ಮಗು ಮೃತಪಟ್ಟಿದೆ ಎಂದು ಆರೋಪಿಸಿ ಕುಟುಂಬಸ್ಥರು ಮತ್ತು ಸಾರ್ವಜನಿಕರು ಆಸ್ಪತ್ರೆ ಮುಂಭಾಗ ಧರಣಿ ಪ್ರತಿಭಟನೆ ನಡೆಸಲಾಯಿತು.
ಮಾಲೂರು ತಾಲೂಕಿನ ಮದನಹಳ್ಳಿ ಗ್ರಾಮದ ನಿವಾಸಿ ಅರುಣ್ಕುಮಾರ್ ಪತ್ನಿ ಸುಮಲತಾ ತವರಾದ ಬಂಗಾರಪೇಟೆ ತಾಲೂಕಿನ ಕೇತಗಾನಹಳ್ಳಿ ಗ್ರಾಮಕ್ಕೆ ಬಂದಿದ್ದರು. ಹೆರಿಗೆ ನೋವು ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಮಂಗಳವಾರ ಕೆಜಿಎಫ್ನ ಸರ್ಕಾರಿ ಮಹಿಳಾ ಮತ್ತು ಮಕ್ಕಳ ಹೆರಿಗೆ ಆಸ್ಪತ್ರೆಗೆ ದಾಖಲಿಸಿದ್ದರು. ಗರ್ಭಿಣಿಯನ್ನು ಪರೀಕ್ಷಿಸಿದ ವೈದ್ಯೆ ಡಾ.ಸುಧಾರಾಣಿ ಎಲ್ಲಾ ನಾರ್ಮಲ್ ಆಗಿದೆ ಎಂದು ತಿಳಿಸಿ ದಾಖಲಿಸಿಕೊಂಡಿದ್ದರು. ಬುಧವಾರ ಮುಂಜಾನೆ ಹೆರಿಗೆ ನೋವು ಕಾಣಿಸಿಕೊಂಡಾಗ ಸುಮಲತಾರಿಗೆ ವಿಪರೀತ ಹೊಟ್ಟೆನೋವಿನಿಂದ ನರಳಾಡಿದ್ದಾರೆ. ವೈದ್ಯರು ಪರೀಕ್ಷಿಸಿ ಮಗು ಹೊಟ್ಟೆಯಲ್ಲಿ ಕೊಳಚೆ ನೀರು ಕುಡಿದು ಬಿಟ್ಟಿದೆ ಕೂಡಲೇ ಶಸ್ತ್ರಚಿಕಿತ್ಸೆ ಮಾಡಬೇಕು ಎಂದು 5.15ರ ವೇಳೆಗೆ ತಿಳಿಸಿದ್ದಾರೆ.
ಪತಿ ಅರುಣ್ಕುಮಾರ್ ಕೂಡಲೇ ಆಪರೇಷನ್ಗೆ ಒಪ್ಪಿಗೆ ನೀಡಿದ್ದಾರೆ. ಆದರೆ ವೈದ್ಯರು 8.45ರ ವೇಳೆಗೆ ಆಪರೇಷನ್ ಮಾಡಿ ಮಗುವನ್ನು ಹೊರ ತೆಗೆದಾಗ ಮಗು ಮೃತಪಟ್ಟಿತ್ತು. ಇದರಿಂದ ರೊಚ್ಚಿಗೆದ್ದ ಪತಿ ಅರುಣ್ಕುಮಾರ್ ಮತ್ತು ಕುಟುಂಬಸ್ಥರು ವೈದ್ಯರು ಕೂಡಲೇ ಆಪರೇಷನ್ ಮಾಡದೆ
ಮೂರು ಗಂಟೆ ವಿಳಂಬ ಮಾಡಿದ ಕಾರಣದಿಂದ ಮಗು ಮೃತಪಟ್ಟಿದೆ. ಮಗು ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ನಮಗೆ ನ್ಯಾಯ ಸಿಗಬೇಕು ಎಂದು ಆಸ್ಪತ್ರೆ ಮುಂಭಾಗ ಹೋರಾಟ ಪ್ರತಿಭಟನೆ ಮಾಡಿದರು.
ಸರ್ಕಾರಿ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿ ಲಂಚಕ್ಕಾಗಿ ಪೀಡಿಸುತ್ತಾರೆ. ಹಣಕೊಟ್ಟರೆ ರೋಗಿಗಳನ್ನ ಚೆನ್ನಾಗಿ ನೋಡುತ್ತಾರೆ. ನಮ್ಮಿಂದ ಸಹ 50 ಸಾವಿರ ಲಂಚ ಕೇಳಿದರು ನೀಡದಿದ್ದಕ್ಕೆ ಮಗು ಕಳೆದು ಕೊಳ್ಳುವಂತಾಗಿದೆ ಎಂದು ವೈದ್ಯರ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಕೂಡಲೇ ಸ್ಥಳಕ್ಕಾಗಮಿಸಿದ ರಾಬರ್ಟ್ ಸನ್ಪೇಟೆ ಪೊಲೀಸರು ಕುಟುಂಬಸ್ಥರನ್ನು ಸಮಾಧಾನ ಮಾಡಿ ಕ್ರಮಜರುಗಿಸುವುದಾಗಿ ಭರವಸೆ ನೀಡಿದ ನಂತರ ಪ್ರತಿಭಟನೆ ಕೈಬಿಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolar; ಮೋದಿ ಶನಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆ
CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?
ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್ದು: ಕೃಷ್ಣಬೈರೇ ಗೌಡ
Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್
H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್