ಪಾರ್ಕ್ ಬೇಡ ಬಡವರಿಗೆ ನಿವೇಶನ ಕೊಡಿ
Team Udayavani, Dec 15, 2019, 5:36 PM IST
ಕೋಲಾರ: ನಗರದ ಹಳೇ ಆಗ್ರೋ ಕಚೇರಿಯ ಸ್ಥಳ ಖಾಲಿ ಇದ್ದು, ಈ ಸ್ಥಳದಲ್ಲಿ 1.70 ಕೋಟಿ ರೂ. ವೆಚ್ಚದಲ್ಲಿ ಪಾರ್ಕ್ ನಿರ್ಮಾಣ ಮಾಡುತ್ತಿದೆ. ಇಲ್ಲಿ 7 ಎಕರೆ 30 ಗುಂಟೆ ಜಮೀನಿದೆ. 4 ಎಕರೆ 26 ಗುಂಟೆಯಲ್ಲಿ ಪಾರ್ಕ್ ನಿರ್ಮಾಣ ಮಾಡುತ್ತಿದೆ. ಉಳಿದ ಸ್ಥಳದಲ್ಲಿ ಅಂಬೇಡ್ಕರ್ ಕಲ್ಯಾಣ ಮಂಟಪ ನಿರ್ಮಿಸಿ, ಬಡವರಿಗೆ ನಿವೇಶನ ನೀಡಬೇಕೆಂದು ಅಂಬೇಡ್ಕರ್ ಸೇವಾ ಸಮಿತಿ ಪ್ರತಿಭಟಿಸಿತು.
ಆಗ್ರೋ ಕಚೇರಿಯ ಮುಂದೆ ಹೋರಾಟ ನಡೆಸಿ ಮಾತನಾಡಿದ ಅವರು, ಸರ್ವೇ ನಂ.128, ಜಯನಗರ 14ನೇ ವಾರ್ಡ್ನಲ್ಲಿ ದಲಿತರ ಸ್ಮಶಾನ ಕಬಳಿಕೆಯಾಗಿದೆ. ರಾಜಕೀಯ ಪ್ರಭಾವಿಗಳಿಂದ ಪಾರ್ಕ್ ಸ್ಥಳದಲ್ಲಿ ಅವ್ಯವಹಾರ ನಡೆಯುತ್ತಿದೆ. ಇವೆಲ್ಲವನ್ನು ನಿಲ್ಲಿಸಿ ಮನೆಗಳಿಲ್ಲದ ಬಡವರಿಗೆ ಪಾರ್ಕ್ ಬದಲು ನಿವೇಶನ ನೀಡ ಬೇಕು ಹಾಗೂ ಗುತ್ತಿಗೆದಾರರಿಂದ ನಡೆದಿರುವ ಕಳಪೆ ಕಾಮಗಾರಿ ನಿಲ್ಲಿಸಿ. ಗುತ್ತಿಗೆದಾರರ ಲೈಸೆನ್ಸ್ ಕಪ್ಪು ಪಟ್ಟಿಗೆ ಸೇರಿಸಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸಮಿತಿಯ ಸಂಸ್ಥಾಪಕ ಅಧ್ಯಕ್ಷ ಕೆ.ಎಂ.ಸಂದೇಶ್ ತಿಳಿಸಿದರು. ಮುಖಂಡರಾದ ದಲಿತ ನಾರಾಯಣಸ್ವಾಮಿ, ಲಾಯರ್ ಚಲಪತಿ, ಪಿ.ಸಿ.ಬಡಾವಣೆ ಮಂಜುನಾಥ್, ಸುಬ್ಬು, ಕಾಮಧೇನಹಳ್ಳಿ ಶ್ರೀನಿವಾಸಯ್ಯ, ವಿದ್ಯಾರ್ಥಿ ಘಟಕ ಅಧ್ಯಕ್ಷ ಹೇಮಂತ್, ತೊರಲಕ್ಕಿ ಶಶಿ, ಮುದುವಾಡಿ ಲೋಕೇಶ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್ ಗಾಂಧಿ
Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ
Politics: ಮುನಿಯಪ್ಪ ಬೆಂಬಲಿಗರಿಗೆ ಭವಿಷ್ಯದ ಆತಂಕ
Lok Sabha Election ಬಳಿಕವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಆವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು