ಅನುದಾನವಿಲ್ಲದೆ ನನೆಗುದಿಗೆ ಬಿದ್ದ ರಸ್ತೆ ಅಭಿವೃದ್ಧಿ
Team Udayavani, Dec 3, 2019, 3:43 PM IST
ಬಂಗಾರಪೇಟೆ: ತಾಲೂಕಿನ ಕೆಲವು ಗ್ರಾಮಗಳ ರಸ್ತೆಗಳ ಸ್ಥಿತಿ ಹೇಳತೀರದಾಗಿದೆ. 10 ವರ್ಷಗಳ ಹಿಂದೆ ಡಾಂಬರುಕಂಡಿದ್ದ ಹಳ್ಳಿಗಳ ಸಂಪರ್ಕ ರಸ್ತೆಗಳು ಈಗ ಗುಂಡಿ ಬಿದ್ದು, ಡಾಂಬರು ಕಿತ್ತುಹೋಗಿ ಜಲ್ಲಿ ರಸ್ತೆಗಳಾಗಿವೆ. ಇತ್ತೀಚಿಗೆ ಬಿದ್ದ ಮಳೆಯಿಂದ ಗುಂಡಿಯಲ್ಲಿ ನೀರು ಶೇಖರಣೆಯಾಗಿ ವಾಹನಗಳು ಓಡಾಡಲು ಸಾಧ್ಯವಾಗುತ್ತಿಲ್ಲ. ರಸ್ತೆ ಮತ್ತಷ್ಟು ಹದಗೆಟ್ಟು ಸವಾರರ ಜೀವಕ್ಕೆ ಸಂಚಕಾರ ತರುವಂತಿವೆ.
ಇದಕ್ಕೆ ತಾಲೂಕಿನ ಗಾಜಗ–ಸಂಗನಹಳ್ಳಿ ರಸ್ತೆ ಜೀವಂತ ಸಾಕ್ಷಿಯಾಗಿದೆ. ತಾಲೂಕಿನ ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ 2019-20ನೇ ಸಾಲಿನಲ್ಲಿ ರಾಜ್ಯ ಸರ್ಕಾರದಿಂದ 10 ಕೋಟಿ ರೂ. ಅನುದಾನ ಮಂಜೂರು ಆಗಿತ್ತು. ಅದರಲ್ಲಿ ಈ ರಸ್ತೆ ಅಭಿವೃದ್ಧಿಗೂ ಅನುದಾನ ಮೀಸಲಿಡಲಾಗಿತ್ತು. ನಂತರ ಬಂದ ಬಿಜೆಪಿ ಸರ್ಕಾರ ಉತ್ತರ ಕರ್ನಾಟಕದಲ್ಲಿ ಉಂಟಾದ ಅತಿವೃಷ್ಟಿಯಿಂದಾಗಿ ಹಿಂದೆ ಸರ್ಕಾರ ಬಿಡುಗಡೆಮಾಡಿದ್ದ 10 ಕೋಟಿ ರೂ. ಅನುದಾನ ವಾಪಸ್ ಪಡೆದಿರುವುದರಿಂದರಸ್ತೆ ದುರಸ್ತಿ ಕಾಮಗಾರಿ ನನೆಗುದಿಗೆ ಬಿದ್ದದಂತಾಗಿದೆ.
ತಾಂತ್ರಿಕ ಸಮಸ್ಯೆ: ತಾಲೂಕು ಕೇಂದ್ರ ಸ್ಥಾನದಿಂದ ಇತಿಹಾಸ ಪ್ರಸಿದ್ಧ ಹೈದರಾಲಿ ಹುಟ್ಟಿದ ಬೂದಿಕೋಟೆ ಮಾರ್ಗದ ಮಾಲೂರು ತಾಲೂಕು ಗಡಿ ಪ್ರದೇಶಕ್ಕೆ ಹೊಂದಿಕೊಂಡಿರುವ ಟೇಕಲ್ ಮುಖ್ಯರಸ್ತೆಗೆ ಸಂಪರ್ಕ ಕಲ್ಪಿಸುವ ಈ ರಸ್ತೆಯನ್ನು 10 ವರ್ಷಗಳಿಂದ ಅಭಿವೃದ್ಧಿ ಪಡಿಸದ ಕಾರಣ ಹದಗೆಟ್ಟಿದೆ. ಸಂಬಂಧಪಟ್ಟ ಇಲಾಖೆಗಳುಅಭಿವೃದ್ಧಿಗೆ ಕ್ರಮಕೈಗೊಂಡರೂ ಪದೇಪದೆ ತಾಂತ್ರಿಕ ಸಮಸ್ಯೆಗಳು ಸಂಭವಿಸುತ್ತಲೇ ಇವೆ.
ಓಡಾಡಲು ಕಷ್ಟ: ಗಾಜಗ–ಸಂಗನಹಳ್ಳಿ ರಸ್ತೆಯು ಪಂಚಾಯತ್ ರಾಜ್ ಇಲಾಖೆ ಎಂಜಿನಿಯರ್ ತಾಂತ್ರಿಕ ಉಪವಿಭಾಗಕ್ಕೆ ಸೇರಿದೆ. ಮಳೆ ಬಂದರೆ ಈ ರಸ್ತೆಯಲ್ಲಿ ನೀರು ತುಂಬಿಕೊಂಡು, ಗುಂಡಿಯಾವುದು, ರಸ್ತೆಯಾವುದು ಗೊತ್ತಾಗುವುದಿಲ್ಲ. ಜನಸಾಮಾನ್ಯರು, ದ್ವಿಚಕ್ರ ವಾಹನ ಸವಾರರು ಈ ರಸ್ತೆಯಲ್ಲಿ ಓಡಾಡಲು ಕಷ್ಟಪಡುತ್ತಾರೆ.
ಭಾರೀ ವಾಹನಗಳ ಸಂಚಾರವೂ ಕಷ್ಟ: ಗಾಜಗ ಗ್ರಾಮದಿಂದ ದೆಬ್ಬನಹಳ್ಳಿ–ಜುಂಜನಹಳ್ಳಿ ಮಾರ್ಗದ ಮೂಲಕಸಂಗನಹಳ್ಳಿ ಹೋಗುವ ರಸ್ತೆ ಉದ್ದಕ್ಕೂ ಮೊಣಕಾಲುದ್ದದ ಗುಂಡಿಗಳು ಬಿದ್ದಿವೆ. ರಸ್ತೆಯಲ್ಲಿ ಗುಂಡಿಗಳು ಬಿದ್ದಿರುವುದರಿಂದ ಮಳೆ ನೀರು ಬಂದು ರಸ್ತೆಯಲ್ಲಿಯೇ ನೀರು ನಿಂತಿದೆ. ರಸ್ತೆಯ ಪಕ್ಕದಲ್ಲಿ ಗಿಡಗಂಟಿಗಳು ಬೆಳೆದಿರುವುದರಿಂದ ಅಗಲವಾಗಿದ್ದ ರಸ್ತೆ ಸಣ್ಣದಾಗಿದೆ. ಇದರಲ್ಲಿ ದ್ವಿಚಕ್ರ ವಾಹನಗಳು ಬಿಟ್ಟರೆ ಉಳಿದಂತೆ ಯಾವುದೇ ದೊಡ್ಡ ವಾಹನಗಳು ಸಂಚರಿಸಲು ತೀವ್ರ ಕಷ್ಟಕವಾಗಿವೆ. ರೈತರು ಬೆಳೆದ ಬೆಳೆಯನ್ನು ಮಾರುಕಟ್ಟೆಗೆ ಸಾಗಿಸಲು ಸಾಧ್ಯವಾಗದ ಮಟ್ಟಿಗೆ ಹದಗೆಟ್ಟಿರುವ ಈ ರಸ್ತೆಯನ್ನು ಹಿಂದಿಯೇ ಜನಪ್ರತಿನಿಧಿಗಳು ಹಾಗೂ ಇಲಾಖೆಯ ಅಧಿಕಾರಿಗಳು ದುರಸ್ತಿ ಮಾಡಬೇಕಿತ್ತು.
ಮಳೆಗಾಲ ಪ್ರಾರಂಭಗೊಂಡರೆ ದ್ವಿಚಕ್ರ ವಾಹನ ಸೇರಿದಂತೆ ಇತರೆ ವಾಹನಗಳು ಓಡಾಡಲು ಕಷ್ಟವೇ ಆಗಿದೆ. ಜನರ ಗೋಳು ಕೇಳುವವರೇ ಇಲ್ಲದಂತಾಗಿದೆ. ಈ ಭಾಗದ ಸಾರ್ವಜನಿಕರು ಯಾರ ಬಳಿ ತಮ್ಮ ಸಮಸ್ಯೆ ಹೇಳಿಕೊಳ್ಳಬೇಕೋ ಎಂಬುದು ಗೊತ್ತಾಗದೇ, ತ್ರಿಶಂಕು ಸ್ಥಿತಿಯಲ್ಲಿದ್ದಾರೆ.
–ಎಂ.ಸಿ.ಮಂಜುನಾಥ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್ ಗಾಂಧಿ
Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ
Politics: ಮುನಿಯಪ್ಪ ಬೆಂಬಲಿಗರಿಗೆ ಭವಿಷ್ಯದ ಆತಂಕ
Lok Sabha Election ಬಳಿಕವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!
Kushtagi:ವಿದ್ಯುತ್ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ
Festivals: ಹಬ್ಬಗಳು ಮರೆಯಾಗುತ್ತಿವೆಯೇ?