ಸುರಕ್ಷತೆ ಇಲದ್ಲ ರಾಷ್ಟ್ರೀಯ ಹೆದ್ದಾರಿ 75ರ ತಂಗುದಾಣ

ಮಳೆ ಬಂದರೆ ನೆನೆಯಬೇಕು, ಗಾಳಿ ಬಂದರೆ ಸಹಿಸಿಕೊಳ್ಳಬೇಕು; ನಿಲುಗಡೆ ಒಂದು ಕಡೆಯಾದರೆ ತಂಗುದಾಣ ಮತ್ತೊಂದು ಕಡೆ

Team Udayavani, Sep 3, 2021, 4:18 PM IST

ಸುರಕ್ಷತೆ ಇಲದ್ಲ ರಾಷ್ಟ್ರೀಯ ಹೆದ್ದಾರಿ 75ರ ತಂಗುದಾಣ

ಮುಳಬಾಗಿಲು: ನಗರದ ಅಂಚಿನಿಂದ ಕರ್ನಾಟಕ ಗಡಿ ಭಾಗದವರೆಗೆ ರಾಷ್ಟ್ರೀಯ ಹೆದ್ದಾರಿ 75ರ ವಿವಿಧ ಹಳ್ಳಿಗಳ ಗೇಟ್‌ನಲ್ಲಿ ನಿರ್ಮಿಸಿರುವ ಬಸ್‌ ಶೆಲ್ಟರ್‌ ಗಳು ಜನರ ಉಪಯೋಗಕ್ಕೆ ಬಾರದಂತಾಗಿದೆ.

ಹೆದ್ದಾರಿ ಸಂಪರ್ಕ: ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯ ಹಾಗೂ ಭಾರತ ಸರ್ಕಾರದ ಆದೇಶದ ಅನುಸಾರ ಜೆಎಸ್‌ಆರ್‌ ಟೋಲ್‌ವೇಸ್‌ ಪ್ರೈವೇಟ್ ಕಂಪನಿ 2015ರಲ್ಲಿ ಮುಳಬಾಗಿಲು ನಗರದ ಅಂಚಿನಿಂದ ಕರ್ನಾಟಕ ಗಡಿ ಭಾಗದವರೆಗೆ ಸುಮಾರು 15 ಕಿ.ಮೀ.
ರಾಷ್ಟ್ರೀಯ ಹೆದ್ದಾರಿ 75ರ ಚತುಷ್ಪಥ ರಸ್ತೆಯನ್ನು ನೂರಾರು ಕೋಟಿ ರೂ.ವೆಚ್ಚದಲ್ಲಿ ನಿರ್ಮಿಸಿದ್ದಾರೆ. ಇದರಿಂದ ತಾಲೂಕಿನ ಜನತೆ ಆಂಧ್ರದ ಚೆನ್ನೈ, ತಿರುಪತಿ ಮತ್ತು ಬೆಂಗಳೂರು ಸೇರಿ ಯಾವುದೇ ಮೂಲೆಗೆ ಹೋಗಬೇಕಾದರೂ ಇದೇ ಹೆದ್ದಾರಿ ಸಂಪರ್ಕ ಕಲ್ಪಿಸಲಿದೆ.

2015ರಲ್ಲಿ ನಿರ್ಮಾಣ: ತಾಲೂಕಿನ ಅಭಿವೃದ್ಧಿ ದೃಷ್ಟಿಯಿಂದ ಒಳ್ಳೆಯ ಬೆಳವಣಿಗೆ. ಅಂತೆಯೇ ಎನ್‌. ಯಲುವಹಳ್ಳಿ ಬಳಿ ಟೋಲ್‌ ಪ್ಲಾಜಾ ನಿರ್ಮಿಸಲಾಗಿದೆ. ಸದರಿ ಟೋಲ್‌ ಅನ್ನು 2015 ರ ಜೂ.13 ರಂದು ಅಂದಿನ ಮುಳಬಾಗಿಲು ಶಾಸಕ ಜಿ. ಮಂಜುನಾಥ್‌ ಮತ್ತು ಶ್ರೀನಿವಾಸಪುರ ಶಾಸಕರಾದ ಕೆ.ಆರ್‌.ರಮೇಶ್‌ಕುಮಾರ್‌, ಜೆಎಸ್‌ಆರ್‌ ಕಂಪನಿ ಛೇರ್ಮನ್‌ ಜೆ.ಶ್ರೀನಿವಾಸರೆಡ್ಡಿ, ವ್ಯವಸ್ಥಾಪಕ ನಿರ್ದೇಶಕ ಭಕ್ತವತ್ಸಲರೆಡ್ಡಿ ಚಾಲನೆ ನೀಡಿದ್ದರು. ಈ ವೇಳೆ,ಕಾರು, ಜೀಪ್‌ ಹಾದು ಹೋಗಲು 20- 25 ರೂ.,ಟೆಂಪೋ 30-45 ರೂ., ಬಸ್‌ 60-90 ರೂ., 3 ಆ್ಯಕ್ಸಲ್‌ ವಾಹನಕ್ಕೆ 65-100 ರೂ., 4 ಆ್ಯಕ್ಸಲ್‌ 95-140 ರೂ.,7 ಆ್ಯಕ್ಸಲ್‌ ವಾಹನಕ್ಕೆ115 ರೂ. ಶುಲ್ಕ ವಸೂಲಿ ಮಾಡಲಾಗುತ್ತಿದೆ. ಆದರೆ, ಈ ಮಾರ್ಗದಲ್ಲಿ ಹಲವಾರು ಗ್ರಾಮಗಳಿದ್ದು ಪ್ರಯಾಣಿಕರು ಹಳ್ಳಿಗಳಿಂದ ಹೊರ ಊರುಗಳಿಗೆ ತೆರಳಲು ಬಸ್‌ ಗೇಟ್‌ಗೆ ಬಂದಾಗ ಪ್ರಯಾಣಿಕರು ಕುಳಿತುಕೊಂಡು ದಣಿವಾರಿಸಿಕೊಳ್ಳಲು ಮತ್ತು ಬಿಸಿಲು, ಮಳೆ, ಗಾಳಿಯಿಂದ ಪಾರಾಗಲು ಅಸಾಧ್ಯವಾಗಿದೆ.

ಇದನ್ನೂ ಓದಿ:ವಾಹನ ಟೋಯಿಂಗ್ ಮಾಡುವಾಗ ನಿಯಮಾವಳಿ ಪಾಲಿಸಿ: ಪೊಲೀಸರಿಗೆ ಗೃಹ ಸಚಿವರ ತಾಕೀತು

ಡೀಸಿ ಕ್ರಮ ಕೈಗೊಳ್ಳಲಿ: ಕೋಟ್ಯಂತರ ರೂ. ವೆಚ್ಚದಲ್ಲಿ ನಿರ್ಮಿಸಿರುವಹೆದ್ದಾರಿಯಲ್ಲಿ ಸಂಚರಿಸುವ ಪ್ರಯಾಣಿಕರಿಗೆ ಯಾವುದೇ ಸೌಲಭ್ಯಗಳಿಲ್ಲದೇ ಇರು ವುದರಿಂದ ಪ್ರತಿಯೊಂದು ಗೇಟ್‌ನ ಎರಡೂ ಕಡೆ ಸುರಕ್ಷತೆಯುಳ್ಳ ತಂಗುದಾಣ ನಿರ್ಮಿಸಬೇಕು. ಸರ್ಕಾರ ಜನರ ತೆರಿಗೆ ಹಣದಿಂದ ಜನರಿಗಾಗಿ ನಿರ್ಮಿಸಿರುವ ರಸ್ತೆಯಲ್ಲಿ ಜನರಿಂದ ಶುಲ್ಕ ವಸೂಲಿ ಮಾಡಿದರೂ ಸುರಕ್ಷತಾ ಕ್ರಮಕೈಗೊಂಡಿಲ್ಲ. ಈ ಕುರಿತು ಜಿಲ್ಲಾಧಿಕಾರಿಗಳು ಇತ್ತ ಕಡೆ ಗಮನಹರಿಸಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ಬಿಸಿಲು-ಮಳೆಗೆ ತಂಗುದಾಣ ಆಶ್ರಯಿಸಿದರೂ ಪ್ರಯೋಜನವಿಲ್ಲ
ಈಗಾಗಲೇ ಸೊನ್ನವಾಡಿ ಬೈಪಾಸ್‌ ಸಮೀಪ, ನರಸಿಂಹತೀರ್ಥ, ಸೀಗೇನಹಳ್ಳಿ, ಅಲ್ಲಾಲಸಂದ್ರ ಗೇಟ್‌, ಕಪ್ಪಲಮಡಗು, ಶ್ರೀರಂಗಪುರ, ವೆಂಕಟಾಪುರ, ಎನ್‌.ವಡ್ಡಹಳ್ಳಿ, ಪದ್ಮಘಟ್ಟ, ತಾತಿಕಲ್‌, ಹಳೆಕುಪ್ಪ, ನಂಗಲಿ,ಮುದಿಗೆರೆ, ಗಡೂxರು ಗೇಟ್‌ಗಳಲ್ಲಿ ಬಸ್‌ ಶೆಲ್ಟರ್‌ ನಿರ್ಮಿಸಲಾಗಿದೆ.ಆದರೆ, ಬಸ್‌ ನಿಲುಗಡೆ ಒಂದುಕಡೆಯಾದರೆ, ಶೆಲ್ಟರ್‌ ನಿರ್ಮಿಸಿರುವುದು ಮತ್ತೂಂದುಕಡೆ. ಇದರಿಂದಾಗಿ ಸದರಿ ಶೆಲ್ಟರ್‌ಗಳು ಜನರ ಉಪಯೋಗಕ್ಕೆ ಬಾರದಂತಾಗಿದೆ. ಅಲ್ಲದೇ ಈ ಬಸ್‌ ಗೇಟ್‌ಗಳಲ್ಲಿ ಪ್ರಯಾಣಿಕರು ಬಿಸಿಲು, ಮಳೆ, ಗಾಳಿಯಿಂದ ಪಾರಾಗಲು ತಂಗುದಾಣಗಳನ್ನು ಆಶ್ರಯಿಸಿದರೂ ಸುರಕ್ಷತೆ ಇಲ್ಲದೇ ಪ್ರಯಾಣಿಕರು ಪರದಾಡುವಂತಹ ಸನ್ನಿವೇಶ ಎದುರಾಗಿದೆ.

ರಾ. ಹೆ.75ರಲ್ಲಿ ನಿರ್ಮಿ ಸಿರುವ ತಂಗುದಾಣಗಳಿಂದ ಜನರಿಗೆ ಆಗುತ್ತಿರುವ ಅನಾನುಕೂಲದ ಬಗ್ಗೆ ಜಿಲ್ಲಾಧಿ ಕಾರಿಗಳ ಗಮನಕ್ಕೆ ತರಲಾಗುವುದು. ನಂತರಕ್ರಮ ಕೈಗೊಳ್ಳಲಾಗುವುದು.
– ರಾಜಶೇಖರ್‌, ತಹಶೀಲ್ದಾರ್‌

ರಾ.ಹೆ.75ರ ಮುಳಬಾಗಿಲಿನಿಂದ ಕರ್ನಾಟಕ ಗಡಿವರೆಗೂ ಜೆಎಸ್‌ಆರ್‌ ಕಂಪನಿ ಆಯಾ ಗೇಟ್‌ಗಳಲ್ಲಿ ಸುರಕ್ಷತೆಯುಳ್ಳ ಬಸ್‌ ಶೆಲ್ಟರ್‌ ನಿರ್ಮಿಸಬೇಕು. ಈ ಬಗ್ಗೆ ಜಿಲ್ಲಾಧಿಕಾರಿಗಳುಕ್ರಮಕೈಗೊಳ್ಳಬೇಕು.
-ಕಸವಿರೆಡ್ಡಿಹಳ್ಳಿ ರಾಜು, ಮುಖಂಡ

-ಎಂ.ನಾಗರಾಜಯ್ಯ

ಟಾಪ್ ನ್ಯೂಸ್

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಇಂದಿನ ಸ್ಥಿತಿ “ಮನೆಯೊಂದು 100 ಬಾಗಿಲು’: ಮುನಿಸ್ವಾಮಿ ವ್ಯಂಗ್ಯ

Congress ಇಂದಿನ ಸ್ಥಿತಿ “ಮನೆಯೊಂದು 100 ಬಾಗಿಲು’: ಮುನಿಸ್ವಾಮಿ ವ್ಯಂಗ್ಯ

Students: ಗೋಡೆ ಒಡೆಯಲು ಎಸ್ಸೆಸ್ಸೆಲ್ಸಿ ಮಕ್ಕಳ ಬಳಕೆ: ಕ್ರಮಕ್ಕೆ ಆಗ್ರಹ

Students: ಗೋಡೆ ಒಡೆಯಲು ಎಸ್ಸೆಸ್ಸೆಲ್ಸಿ ಮಕ್ಕಳ ಬಳಕೆ: ಕ್ರಮಕ್ಕೆ ಆಗ್ರಹ

KGF: ಅಪ್ರಾಪ್ತ ವಯಸ್ಸಿನ ಗರ್ಭಿಣಿಯರು;  98 ಕೇಸ್‌ ದಾಖಲು

KGF: ಅಪ್ರಾಪ್ತ ವಯಸ್ಸಿನ ಗರ್ಭಿಣಿಯರು;  98 ಕೇಸ್‌ ದಾಖಲು

ಕಾಡು ಪ್ರಾಣಿ ದಾಳಿ: ಕೋಲಾರದ ಯೋಧ ಗುಜರಾತ್‌ನಲ್ಲಿ ಸಾವು

ಕಾಡು ಪ್ರಾಣಿ ದಾಳಿ: ಕೋಲಾರದ ಯೋಧ ಗುಜರಾತ್‌ನಲ್ಲಿ ಸಾವು

Kolar Lok Sabha constituency: ಅಲೆಗಳು ಗೌಣ, ಸ್ಥಳೀಯ ಲೆಕ್ಕಾಚಾರಗಳೇ ನಿರ್ಣಾಯಕ

Kolar Lok Sabha constituency: ಅಲೆಗಳು ಗೌಣ, ಸ್ಥಳೀಯ ಲೆಕ್ಕಾಚಾರಗಳೇ ನಿರ್ಣಾಯಕ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.