3 ತಿಂಗಳಿಂದ ಸಂಬಳವೇ ಬಂದಿಲ್ಲ


Team Udayavani, Sep 10, 2019, 3:41 PM IST

kolar-tdy-1

ಮುಳಬಾಗಿಲು: ಎರಡು ಮೂರು ತಿಂಗಳಿನಿಂದ ಸಂಬಳವಿಲ್ಲದೇ ಶಾಲಾ ಶಿಕ್ಷಕರು ಸಾಲ ಮಾಡಿ ಜೀವನ ಸಾಗಿಸುತ್ತಿದ್ದಾರೆ ಎಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಕೆ.ವಿ.ಜಗನ್ನಾಥ್‌ ಅಳಲು ತೋಡಿಕೊಂಡರು.

ನಗರದ ನೇತಾಜಿ ಕ್ರೀಡಾಂಗಣದಲ್ಲಿ ಸೆ.12ರಂದು ನಡೆಯುವ ಶಿಕ್ಷಕರ ದಿನಾಚರಣೆ ಪ್ರಯುಕ್ತ ಶಿಕ್ಷಕರಿಗೆ ಹಮ್ಮಿಕೊಂಡಿದ್ದ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿ, ಬ್ಯಾಂಕ್‌ಗಳಲ್ಲಿ ಗೃಹ ಸಾಲ ಪಡೆದಿರುವ ಶಿಕ್ಷಕರಿಗೆ ಸಮಯಕ್ಕೆ ಸರಿಯಾಗಿ ಸಾಲ ಪಾವತಿ ಮಾಡಲಾಗದೇ ಬ್ಯಾಂಕ್‌ ಅಧಿಕಾರಿಗಳು ಬಡ್ಡಿ ವಿಧಿಸುತ್ತಿದ್ದಾರೆ. 2019-20ನೇ ಸಾಲಿನ ಹಣಕಾಸು ಬಜೆಟ್ ಮಾಡುವಾಗ ಬಿಇಒ ಕಚೇರಿಯಿಂದ 40 ಕೋಟಿ ರೂ., ಹಣವನ್ನು ಕಡಿಮೆ ಮಾಡಿ ಇಲಾಖೆಗೆ ಮಾಹಿತಿ ನೀಡಿರುವುದರಿಂದ ಪ್ರಸ್ತುತ ನಾವು ಸಂಬಳವಿಲ್ಲದೇ ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ ಎಂದು ದೂರಿದರು.

ಜಮಾ ಆಗಿಲ್ಲ: ಅಧಿಕಾರಿಗಳು ಮಾಡಿದ ತಪ್ಪಿಗೆ ಶಿಕ್ಷಕರು ಶಿಕ್ಷೆಗೆ ಗುರಿಯಾಗಿರುವುದು ತುಂಬ ನೋವಾಗುತ್ತಿದೆ. ಈಗ 10 ಕೋಟಿ ರೂ. ಅನುದಾನ ಬಂದಿದ್ದರೂ ವಾರದಿಂದ ಶಿಕ್ಷಕರ ಬಿಲ್ಲುಗಳು ಉಪಖಜಾನೆಯಲ್ಲಿ ಇದ್ದು, ಇದುವರೆಗೂ ಹಣ ಕೆ2(ಗ್ರೇಡ್‌) ನಿಂದ ಕೆ1ಗೆ ಜಮಾ ಆಗದೇ, ಖಜಾನೆ ಅಧಿಕಾರಿಗಳು ಬೆಂಗಳೂರಿಗೆ ಹೋಗಿ ಎನ್‌ಎಂಸಿಯಲ್ಲಿ ಸರಿಪಡಿಸಿಕೊಂಡು ಬನ್ನಿ ಎಂದು ಉತ್ತರಿಸು ತ್ತಾರೆ. ಕೂಡಲೇ ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಶಿಕ್ಷಕರಿಗೆ ಸಂಬಳವನ್ನು ನೀಡಬೇಕೆಂದು ಒತ್ತಾಯಿಸಿದರು.

ಗೈರಾದ ಶಿಕ್ಷಕರು: ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಎನ್‌.ರೆಡ್ಡಪ್ಪ ಮಾತನಾಡಿ, ತಾಲೂಕಿನಲ್ಲಿ 1500 ಶಿಕ್ಷಕರು ಇದ್ದು, ಕೆಲವೇ ಶಿಕ್ಷಕರು ಭಾಗವಹಿಸಿರುವುದು ಬೇಸರವಾಗಿದೆ. ನಮ್ಮ ತಾಲೂಕಿನಲ್ಲಿ ಮಾತ್ರ ಈ ಶಿಕ್ಷಕರ ದಿನಾಚರಣೆ ಪ್ರಯುಕ್ತ ಇಂತಹ ಕ್ರೀಡಾಕೂಟ ಹಮ್ಮಿಕೊಂಡಿರುವುದು ವಿಶೇಷ. ಇದನ್ನು ಎಲ್ಲಾ ಶಿಕ್ಷಕರು ಸದುಪಯೋಗಪಡಿಸಿಕೊಳ್ಳಬೇಕೆಂದು ವಿನಂತಿಸಿದರು.

ಪ್ರತಿಭೆ ಅನಾವರಣಗೊಳಿಸಿ: 6 ದಿನದಿಂದ ಖಜಾನೆಗೆ ತಿರುಗಾಡುತ್ತಿದ್ದು, ಖಜಾನೆ ಅಧಿಕಾರಿಗಳು ಸಬೂಬನ್ನು ಹೇಳುತ್ತಿದ್ದಾರೆ. ಈ ದಿನ ಶಿಕ್ಷಕರು ಕ್ರೀಡಾಕೂಟಗಳಲ್ಲಿ ಪಾಲ್ಗೊಂಡು ತಮ್ಮಲ್ಲಿರುವ ಪ್ರತಿಭೆ ಅನಾವರಣಗೊಳಿಸಬೇಕು. ಸೆ.12ರಂದು ಶ್ರೀನಿವಾಸಕಲ್ಯಾಣ ಮಂಟಪದಲ್ಲಿ ಶಿಕ್ಷಕರ ದಿನಾಚರಣೆ ಹಮ್ಮಿಕೊಂಡಿದ್ದು, ತಾಲೂಕಿನ ಎಲ್ಲಾ ಶಿಕ್ಷಕರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ವಿನಂತಿಸಿದರು.

ಶಿಕ್ಷಕರು ಮತ್ತು ಶಿಕ್ಷಕಿಯರು ಷಾಟ್ಪುಟ್, ಡಿಸ್ಕಸ್‌ ಥ್ರೋ, 100 ಮೀ., 200ಮೀ. ಓಟ. ನಡಿಗೆ, ಜಾನಪದ ಗೀತೆ, ಥ್ರೋಭಾಲ್, ವಾಲಿಬಾಲ್ ಮುಂತಾದ ಕ್ರೀಡೆಗಳನ್ನು ಏರ್ಪಡಿಸಲಾಗಿತ್ತು. ರಾಜ್ಯ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಇ.ಶ್ರೀನಿವಾಸಗೌಡ, ಪ್ರಭಾರಿ ಕ್ಷೇತ್ರ ಸಮನ್ವಯಾಧಿಕಾರಿ ವನಜಾಕ್ಷಮ್ಮ, ಇಸಿಒಗಳಾದ ಅಂಜಿತ್‌ಕುಮಾರ್‌, ಮುನಿಶಾಮಿ, ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಎಂ.ವಿ.ಜನಾರ್ದನ್‌, ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳಾದ ಸೋಮಶೇಖರ್‌, ಆನಂದ್‌, ಖಾಸಗಿ ಶಾಲೆಗಳ ಶಿಕ್ಷಕರ ಸಂಘದ ಅಧ್ಯಕ್ಷ ಶಂಕರ್‌, ಕಾರ್ಯದರ್ಶಿ ಆದಿಲ್ಪಾಷ, ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಗೌರವಾಧ್ಯಕ್ಷ ಶಿವಣ್ಣ, ಉಪಾಧ್ಯಕ್ಷರಾದ ಮಂಜುನಾಥ್‌, ಗೌರವ್ವ ಗಾಣಿಗೇರ್‌, ಪ್ರಧಾನ ಕಾರ್ಯದರ್ಶಿ ತಾಯಲೂರಪ್ಪ, ಸಂಘಟನಾ ಕಾರ್ಯದರ್ಶಿ ರಾಮಕೃಷ್ಣ, ಜಿಲ್ಲಾ ಶಿಕ್ಷಕರ ಸಂಘದ ಉಪಾಧ್ಯಕ್ಷ ಆವಣಿ ಆನಂದ್‌, ಸಂಘಟನಾ ಕಾರ್ಯದರ್ಶಿ ಶಾಂತಕುಮಾರಿ, ಜಿಲ್ಲಾ ಪದಾಧಿಕಾರಿಗಳಾದ ಎಚ್.ವೆಂಕಟಗಿರಿಯಪ್ಪ, ನಾಗರತ್ನಮ್ಮ, ಬೇಬಿ, ಕಲಾವತಿ, ನಾಗರಾಜ್‌, ಎನ್‌ಪಿಎಸ್‌ ನೌಕರರ ಸಂಘದ ಅಧ್ಯಕ್ಷ ಸುಬ್ರಮಣಿ, ಮುಖಂಡರಾದ ಪೈಜುಲ್ಲಾ, ರಾಜ್‌ಕುಮಾರ್‌, ನಟರಾಜ್‌ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KGF: ಅಪ್ರಾಪ್ತ ವಯಸ್ಸಿನ ಗರ್ಭಿಣಿಯರು;  98 ಕೇಸ್‌ ದಾಖಲು

KGF: ಅಪ್ರಾಪ್ತ ವಯಸ್ಸಿನ ಗರ್ಭಿಣಿಯರು;  98 ಕೇಸ್‌ ದಾಖಲು

ಕಾಡು ಪ್ರಾಣಿ ದಾಳಿ: ಕೋಲಾರದ ಯೋಧ ಗುಜರಾತ್‌ನಲ್ಲಿ ಸಾವು

ಕಾಡು ಪ್ರಾಣಿ ದಾಳಿ: ಕೋಲಾರದ ಯೋಧ ಗುಜರಾತ್‌ನಲ್ಲಿ ಸಾವು

Kolar Lok Sabha constituency: ಅಲೆಗಳು ಗೌಣ, ಸ್ಥಳೀಯ ಲೆಕ್ಕಾಚಾರಗಳೇ ನಿರ್ಣಾಯಕ

Kolar Lok Sabha constituency: ಅಲೆಗಳು ಗೌಣ, ಸ್ಥಳೀಯ ಲೆಕ್ಕಾಚಾರಗಳೇ ನಿರ್ಣಾಯಕ

Kolar: ಕುರ್ಚಿಗೆ ಅಧಿಕಾರಿಗಳಿಬ್ಬರ ತಿಕ್ಕಾಟ; ಕೆಲಸ ಸ್ಥಗಿತ

Kolar: ಕುರ್ಚಿಗೆ ಅಧಿಕಾರಿಗಳಿಬ್ಬರ ತಿಕ್ಕಾಟ; ಕೆಲಸ ಸ್ಥಗಿತ

11

Drinking water: ಜಾತ್ರೆಗೆ ಬಂದ ರಾಸುಗಳಿಗೆ ಕುಡಿಯಲು ನೀರಿಲ!

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

6-mng

Nandini Brand: 50 ಐಸ್‌ ಕ್ರೀಂ ಮಾರುಕಟ್ಟೆಗೆ

Bangalore: ರಾಜಧಾನಿ 14 ಕೆರೆಗಳಿಗೆ ಕೆ.ಸಿ.ವ್ಯಾಲಿ ನೀರು

Bangalore: ರಾಜಧಾನಿ 14 ಕೆರೆಗಳಿಗೆ ಕೆ.ಸಿ.ವ್ಯಾಲಿ ನೀರು

5-mng

Mangaluru: ರೋಗಿಗಳಲ್ಲಿ ಭರವಸೆ ತುಂಬುವ ಕೆಲಸವಾಗಲಿ: ರೈ| ರೆ| ಡಾ| ಸಲ್ಡಾನ್ಹಾ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.