ರಾ.ಹೆ.234ರಲ್ಲಿ ಸುರಕ್ಷತೆಯಿಲ್ಲದ ತಂಗುದಾಣಗಳು

ಟೆಂಡರ್‌ ಪಡೆದ ಅಶೋಕ್‌ ಬಿಲ್ಡ್ಕಾನ್‌ ಕಂಪನಿಯಿಂದ ಕಳಪೆ ಕಾಮಗಾರಿ: ಆರೋಪ

Team Udayavani, Jun 8, 2019, 11:07 AM IST

kolar-tdy-2..

ಮುಳಬಾಗಿಲು ತಾಲೂಕು ರಾ.ಹೆ.234ರ ಬೇವಹಳ್ಳಿ ಗೇಟ್ಲ್ಲಿ ಪ್ರಯಾಣಿಕರಿಗಾಗಿ ನಿರ್ಮಿಸಿರುವ ತಂಗುದಾಣ.

ಮುಳಬಾಗಿಲು: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಕೋಟ್ಯಂತರ ರೂ. ವೆಚ್ಚದಲ್ಲಿ ತಾಲೂಕಿನ ರಾ.ಹೆ.234ರ ಬಸ್‌ ಗೇಟ್‌ಗಳಲ್ಲಿ ಪ್ರಯಾಣಿಕರಿಗೆ ಸುರಕ್ಷತೆ ಇಲ್ಲದ ಅವೈಜ್ಞಾನಿಕ ತಂಗುದಾಣಗಳನ್ನು ನಿರ್ಮಿಸಿದ್ದಾರೆಂಬ ಕೂಗು ಜನಸಾಮಾನ್ಯರಲ್ಲಿ ವ್ಯಾಪಕವಾಗಿ ಕೇಳಿ ಬರುತ್ತಿದೆ.

ಜಿಲ್ಲೆಯ ಶ್ರೀನಿವಾಸಪುರದಿಂದ ಮುಳಬಾಗಿಲಿನ ಆಂಧ್ರದ ಗಡಿವರೆಗೂ ಹಾದು ಹೋಗಿರುವ ಸುಮಾರು 40 ಕಿ.ಮೀ ಜಿಲ್ಲಾ ಮಟ್ಟದ ರಸ್ತೆಯನ್ನು ಸರ್ಕಾರ 2006ರಲ್ಲಿ ಮೇಲ್ದರ್ಜೆಗೇರಿಸಿ ರಾಜ್ಯ ಹೆದ್ದಾರಿ 58 ಆಗಿ ಘೋಷಿಸಿದ ನಂತರ 2009-10ರಲ್ಲಿ ರಾಷ್ಟ್ರೀಯ ಹೆದ್ದಾರಿ 234 ಆಗಿ ಘೋಷಣೆಯಾಗಿದೆ.

219 ಕೋಟಿ. ರೂ. ವೆಚ್ಚ: ಈ ರಸ್ತೆಯನ್ನು ಕಳೆದ 2015ರಲ್ಲಿಯೇ ಎರಡನೇ ಹಂತದ ಕಾಮಗಾರಿಯಲ್ಲಿ ಚಿಕ್ಕಬಳ್ಳಾಪುರದಿಂದ ಮುಳಬಾಗಿಲುವರೆಗೂ 82-821ಕಿ.ಮೀ. ರಸ್ತೆಯನ್ನು 219 ಕೋಟಿ ರೂ.ಗಳ ವೆಚ್ಚದಲ್ಲಿ ದ್ವಿಪಥದ ರಸ್ತೆ ಅಭಿವೃದ್ಧಿ ಮಾಡಲು ಅಶೋಕ್‌ ಬಿಲ್zಕಾನ್‌ ಕಂಪನಿ ಗುತ್ತಿಗೆ ಪಡೆದು 7 ಮೀ. ಡಾಂಬರೀಕರಣ ಹಾಗೂ ಎರಡೂ ಕಡೆಗಳಲ್ಲಿ 5 ಮೀ ಮಣ್ಣಿನ ರಸ್ತೆ ಮತ್ತು ಇಕ್ಕೆಲಗಳಲ್ಲಿ ಚರಂಡಿ ಸೇರಿದಂತೆ 16 ಮೀ ರಸ್ತೆ ಅಗಲ ವಿಸ್ತೀರ್ಣದಲ್ಲಿ ರಸ್ತೆಯ ನಿರ್ಮಾಣದಲ್ಲಿ ನಿಗದಿತ ಸೌಕರ್ಯಗಳೊಂದಿಗೆ 2018ರ ಒಳಗಾಗಿ ಅಭಿವೃದ್ಧಿ ಪಡಿಸಲು ಕಾಮಗಾರಿ ನಡೆದು ಪೂರ್ಣಗೊಂಡಿದೆ.

ಎರಡೂ ಕಡೆ ತಂಗುದಾಣ: ಆದರೆ ಸದರೀ ಕಂಪನಿಯು ರಸ್ತೆಯನ್ನು ಅಭಿವೃದ್ಧಿ ಪಡಿಸಲು ಜೆಎಸ್‌ಆರ್‌ ಕಂಪನಿಗೆ ಉಪ ಗುತ್ತಿಗೆ ನೀಡಲಾಗಿದ್ದು ಅದರಂತೆ ರಸ್ತೆ ನಿರ್ಮಾಣ ಮಾಡಲಾಗಿದೆ. ಪ್ರಯಾಣಿಕರು ಹಳ್ಳಿಗಳಿಂದ ಹೊರ ಊರುಗಳಿಗೆ ತೆರಳಲು ಬಸ್‌ ಗೇಟ್‌ಗೆ ಬಂದಾಗ ಪ್ರಯಾಣಿಕರು ಕುಳಿತುಕೊಂಡು ದಣಿವಾರಿಸಿಕೊಳ್ಳಲು ಮತ್ತು ಬಿಸಿಲು, ಮಳೆ, ಗಾಳಿಯಿಂದ ಪಾರಾಗಲು ಸದರೀ ರಸ್ತೆಯ ಉತ್ತನೂರು ಕ್ರಾಸ್‌, ಮುಡಿಯನೂರು, ಬೆಸ್ತರಹಳ್ಳಿ, ಬೇವಹಳ್ಳಿ, ಗೋಪಾಲಪುರ, ಕೂತಾಂಡಹಳ್ಳಿ, ಕುರುಡುಮಲೆ ಕ್ರಾಸ್‌, ಮಲ್ಲಸಂದ್ರ, ದೊಡ್ಡಗುರ್ಕಿ ಕ್ರಾಸ್‌, ಕದರೀಪುರ ಪ್ರತಿಯೊಂದು ಗೇಟ್‌ನ ರಸ್ತೆಯ ಎರಡೂ ಕಡೆಗಳಲ್ಲಿ ಸುರಕ್ಷತೆಯುಳ್ಳ ತಂಗುದಾಣ ನಿರ್ಮಾಣ ಮಾಡಬೇಕು ಆದರೆ ಕಂಪನಿ ಸುರಕ್ಷತೆ ಇಲ್ಲದ ತಂಗುದಾಣ ನಿರ್ಮಾಣ ಮಾಡಿದ್ದಾರೆ.

ಸಾರ್ವಜನಿಕರ ಆರೋಪ: ಆದರೆ ಅಶೋಕ್‌ ಬಿಲ್ಕಾನ್‌ ಲಿಮಿಟೆಡ್‌ ಕಂಪನಿಯು ಉಪ ಗುತ್ತಿಗೆದಾರ ಚಿಕ್ಕಬಳ್ಳಾಪುರ ಲಕ್ಷ್ಮೀನಾರಾಯಣ ಎಂಬುವರು ಉತ್ತನೂರು ಕ್ರಾಸ್‌, ಬೇವಹಳ್ಳಿ ಗೇಟ್, ಗೋಪಾಲಪುರ ಗೇಟ್‌ಗಳಲ್ಲಿ ಮಾತ್ರ 15/9 ಅಡಿ ಅಗಲ ಮತ್ತು 10 ಅಡಿ ಎತ್ತರವುಳ್ಳ ವಿಸ್ತೀರ್ಣದ ತಂಗುದಾಣದಲ್ಲಿ 8 ಜನರು ಮಾತ್ರ ಕುಳಿತು ಕೊಳ್ಳುವಷ್ಟು ಕಲ್ಲು ಚಪಡಿಗಳ ಆಸನ, ಅದರ ಸುತ್ತಲೂ 4 ಅಡಿ ಎತ್ತರದ ಗೋಡೆ ನಾಮಕೇವಾಸ್ತೆ ನಿರ್ಮಾಣ ಮಾಡಿಸಲಾಗಿದೆ.

ಗ್ರಾಮಗಳಿಂದ ದೂರವಿರುವ ಈ ಬಸ್‌ ಗೇಟ್‌ಗಳಲ್ಲಿ ಪ್ರಯಾಣಿಕರು ಬಿಸಿಲು, ಮಳೆ, ಗಾಳಿಯಿಂದ ಪಾರಾಗಲು ಈ ತಂಗುದಾಣಗಳನ್ನು ಆಶ್ರಯಿಸಿದರೆ ಮಳೆ, ಬಿರುಗಾಳಿಯಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗದೇ ಪರದಾಡು ವಂತಹ ಸನ್ನಿವೇಶ ಎದುರಾಗುತ್ತದೆ ಎಂದು ಸಾರ್ವಜನಿಕರು ಆರೋಪಿಸಿದರು.

● ಎಂ.ನಾಗರಾಜಯ್ಯ

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.