ಬೂದಿಕೋಟೆ ಮಹಿಳಾ ಸಂಘಗಳಿಗೆ ಸಿಕ್ಕಿಲ್ಲ ಸಾಲದ ಹಣ


Team Udayavani, Sep 16, 2019, 2:58 PM IST

kolar-tdy-1

ತಾಲೂಕಿನ ಬೂದಿಕೋಟೆ ವಿಎಸ್‌ಎಸ್‌ಎನ್‌ನ ಆಡಳಿತ ಮಂಡಳಿ ಕಚೇರಿಯ ಹೊರನೋಟ.

ಬಂಗಾರಪೇಟೆ: ಮಹಿಳಾ ಸಂಘಗಳಿಗೆ ಡಿಸಿಸಿ ಬ್ಯಾಂಕ್‌ನಿಂದ ಸಾಲ ವಿತರಣೆ ಕಾರ್ಯಕ್ರಮಕ್ಕೆ ಸಂಸದ ಎಸ್‌.ಮುನಿಸ್ವಾಮಿ ಅವರನ್ನು ಆಹ್ವಾನಿಸಿದ್ದಕ್ಕೆ ಬೂದಿಕೋಟೆ ವಿಎಸ್‌ಎಸ್‌ಎನ್‌ ಆಡಳಿತ ಮಂಡಳಿಯಲ್ಲಿ ಭಿನ್ನಮತ ಉಂಟಾಗಿದೆ. ಇದರಿಂದ ಸಾಲ ಘೋಷಣೆಯಾಗಿ 15 ದಿನ ಕಳೆದರೂ 46 ಮಹಿಳಾ ಸಂಘಗಳಿಗೆ ಇನ್ನೂ ಡಿಸಿಸಿ ಬ್ಯಾಂಕ್‌ನಿಂದ ಸಾಲದ ಹಣ ವಿತರಣೆ ಮಾಡಿಲ್ಲ.

ತಾಲೂಕಿನ ಬೂದಿಕೋಟೆ ಸೇರಿ ಐದು ವಿಎಸ್‌ಎಸ್‌ಎನ್‌ ವ್ಯಾಪ್ತಿಯ ಮಹಿಳಾ ಸಂಘಗಳಿಗೆ 7.69 ಕೋಟಿ ರೂ. ಸಾಲದ ಆದೇಶ ಪ್ರತಿ ಇತ್ತೀಚೆಗೆ ವಿತರಣೆ ಮಾಡಲಾಗಿತ್ತು. ಈ ಕಾರ್ಯಕ್ರಮಕ್ಕೆ ಬಿಜೆಪಿ ಸಂಸದ ಎಸ್‌.ಮುನಿಸ್ವಾಮಿ ಅವರನ್ನು ಆಹ್ವಾನಿಸುವ ವಿಚಾರದಲ್ಲಿ ವಿಎಸ್‌ಎಸ್‌ಎನ್‌ನ ಅಧ್ಯಕ್ಷ ಸೀತಾರಾಮಪ್ಪ ಹಾಗೂ ಕೆಲವು ನಿರ್ದೇಶಕರ ನಡುವೆ ಗೊಂದಲ ಸೃಷ್ಟಿಯಾಗಿತ್ತು.

ಸಂಸದ ಎಸ್‌.ಮುನಿಸ್ವಾಮಿ, ಜಿಲ್ಲಾ ಬಿಜೆಪಿ ಅಧ್ಯಕ್ಷ ಬಿ.ಪಿ.ವೆಂಕಟಮುನಿಯಪ್ಪ ಅವರನ್ನು ಯಾವುದೇ ಕಾರಣಕ್ಕೂ ಸಾಲ ವಿತರಣೆ ಕಾರ್ಯಕ್ರಮಕ್ಕೆ ಆಹ್ವಾನ ನೀಡಬಾರದೆಂದು ಷರತ್ತು ವಿಧಿಸಿ, ಸಂಘದ ಅಧ್ಯಕ್ಷ ಸೀತಾರಾಮಪ್ಪ ವಿರುದ್ಧ ಮುನಿಸಿಕೊಂಡಿದ್ದ ನಿರ್ದೇಶಕರ ಸಹಮತ ವಿಲ್ಲದೇ, ಇದ್ದರೂ ಕಾರ್ಯಕ್ರಮ ಆಯೋಜಿಸಿದ್ದನ್ನು ಖಂಡಿಸಿದರು.

ಸೂಪರ್‌ಸೀಡ್‌ ಆಗುವ ಆತಂಕ: ನಂತರ ನಡೆದ ಕಾರ್ಯಕ್ರಮದಲ್ಲಿ ಸಂಸದ ಎಸ್‌.ಮುನಿಸ್ವಾಮಿ ಹಾಗೂ ಮಾಜಿ ಶಾಸಕ ಬಿ.ಪಿ.ವೆಂಕಟಮುನಿಯಪ್ಪ ಹಾಜರಾ ಗಿದ್ದರು. ಇದರಿಂದ ಕೋಪಿಸಿಕೊಂಡಿದ್ದ ನಿರ್ದೇಶ ಕರಾದ ಮಾರ್ಕಂಡೇಯಗೌಡ, ಮುನಿವೆಂಕಟಪ್ಪ, ಆನಂದ್‌, ನಾರಾಯಣಸ್ವಾಮಿ ಹಾಗೂ ಜಯಮ್ಮ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದರು. 12 ನಿರ್ದೇಶಕ ಬಲದ ವಿಎಸ್‌ಎಸ್‌ಎನ್‌ನಲ್ಲಿ ಐದು ನಿರ್ದೇಶಕರು ರಾಜೀನಾಮೆ ನೀಡಿದ್ದರು. ಸಂಸ್ಥೆ ಸೂಪರ್‌ಸೀಡ್‌ ಮಾಡುವ ಭೀತಿಯನ್ನು ಅಧ್ಯಕ್ಷ ಸೀತಾರಾಮಪ್ಪರಿಗೆ ಸೃಷ್ಟಿಸಿದ್ದರು.

ಸಾಲ ವಿತರಣೆ ಕಾರ್ಯಕ್ರಮ ಮುಗಿದು 15 ದಿನ ಕಳೆದರೂ ಡಿಸಿಸಿ ಬ್ಯಾಂಕ್‌ ಇದುವರೆಗೂ ಹಣ ನೀಡಿಲ್ಲ. ಕಾರ್ಯಕ್ರಮದಲ್ಲಿ ಎಲ್ಲರಿಗೂ ಸಾಲ ನೀಡಲಾಗುವುದೆಂದು ಘೋಷಣೆ ಮಾಡಿದ್ದರೂ ಇದುವರೆಗೂ ಸಾಲದ ಹಣ ಫ‌ಲಾನುಭವಿಗಳ ಕೈಸೇರಿಲ್ಲ. ಬೂದಿಕೋಟೆ ವ್ಯಾಪ್ತಿಯಲ್ಲಿ 46 ಮಹಿಳಾ ಸಂಘಗಳಿಗೆ 2.03 ಕೋಟಿ ರೂ. ಹಣ ಬಂದಿಲ್ಲ. ಇದರಿಂದ ಮಹಿಳಾ ಸಂಘಗಳು ತೀವ್ರ ಆತಂಕಕ್ಕೆ ಒಳಗಾಗಿವೆ. ಐದಾರು ದಿನಗಳ ಹಿಂದೆ ಮಹಿಳಾ ಸಂಘಗಳಿಗೆ ತಾಲೂಕಿನ ಹುಣಸನಹಳ್ಳಿ ವಿಎಸ್‌ಎಸ್‌ಎನ್‌ನಿಂದ 3 ಕೋಟಿ ರೂ. ವಿತರಣೆ ಮಾಡಲಾಗಿದೆ. ಆಲಂಬಾಡಿ ಜ್ಯೋತನಹಳ್ಳಿ ವಿಎಸ್‌ಎಸ್‌ಎನ್‌ಗೂ ಸಾಲದ ಹಣ ನೀಡಿಲ್ಲ. ಉಳಿದ ಬಲಮಂದೆ ಹಾಗೂ ಗುಲ್ಲಹಳ್ಳಿ ವಿಎಸ್‌ಎಸ್‌ಎನ್‌ ವ್ಯಾಪ್ತಿಯ ಮಹಿಳಾ ಸಂಘಗಳು ಸಾಲ ವಿತರಣೆಗೆ ಅರ್ಜಿ ಹಾಕಿದ್ದು, ಇನ್ನೂ ಡಿಸಿಸಿ ಬ್ಯಾಂಕ್‌ ಮಂಜೂರಾತಿ ಪತ್ರ ನೀಡೇ ಇಲ್ಲ. ಸಾಲ ವಿತರಣೆ ಕಾರ್ಯಕ್ರಮಲ್ಲಿ ಮೌಖೀಕವಾಗಿ ಘೋಷಣೆ ಮಾಡಿದ್ದಾರೆ ಹೊರತು, ಅಧಿಕೃತವಾಗಿ ಮಂಜೂರಾತಿಯೇ ನೀಡಿಲ್ಲ.

ತಾಲೂಕಿನ ಬೂದಿಕೋಟೆ ವಿಎಸ್‌ಎಸ್‌ಎನ್‌ನಲ್ಲಿ ಆಡಳಿತ ಮಂಡಳಿಯಲ್ಲಿ ಎರಡು ಗುಂಪುಗಳ ನಡುವೆ ವಿವಾದವು ಏರ್ಪಟ್ಟಿರುವುದರಿಂದ ಮಹಿಳಾ ಸಂಘಗಳಿಗೆ ಸಾಲದ ಹಣ ನೀಡುವುದಿಲ್ಲ ಎಂಬ ಸುದ್ದಿ ವ್ಯಾಪಕವಾಗಿ ಕೇಳಿ ಬರುತ್ತಿರುವುದರಿಂದ ಮಹಿಳಾ ಸಂಘಗಳಲ್ಲಿ ತೀವ್ರ ಅಸಮಾಧಾನ ಉಂಟಾಗಿದೆ.

ಆಡಳಿತ ಮಂಡಳಿಯ ರಾಜಕೀಯ ಜಿದ್ದಾಜಿದ್ದಿಗಾಗಿ ಮಹಿಳಾ ಸಂಘಗಳಿಗೆ ಸಾಲದ ಹಣ ನೀಡದೇ ನಿರ್ಲಕ್ಷ್ಯವಹಿಸಿದ್ದಾರೆ. ವಿಎಸ್‌ಎಸ್‌ಎನ್‌ ಅಧ್ಯಕ್ಷ ಸೀತಾರಾಮಪ್ಪ ನನಗೆ ಏನೂ ಗೊತ್ತಿಲ್ಲ ಎಂದು ಹೇಳಿ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ಯಾರಿಗೂ ಸಿಗದೆ ತೋಟದ ಕೆಲಸದಲ್ಲಿ ಬ್ಯೂಸಿಯಾಗಿ ದ್ದಾರೆ ಎನ್ನಲಾಗಿದೆ.

 

● ಎಂ.ಸಿ.ಮಂಜುನಾಥ್‌

ಟಾಪ್ ನ್ಯೂಸ್

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

11

Politics: ಮುನಿಯಪ್ಪ ಬೆಂಬಲಿಗರಿಗೆ ಭವಿಷ್ಯದ ಆತಂಕ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.