ವಿದ್ಯಾರ್ಥಿನಿಗೆ ಅಶ್ಲೀಲ ಮೆಸೇಜ್: ಶಿಕ್ಷಕನಿಗೆ ಧರ್ಮದೇಟು
ಇಂತಹದ್ದೇ ಪ್ರಕರಣದಲ್ಲಿ ಅವರನ್ನು ಸಸ್ಪೆಂಡ್ ಮಾಡಲಾಗಿತ್ತು.
Team Udayavani, Dec 9, 2022, 6:47 PM IST
ಕೋಲಾರ: ತಾಲೂಕಿನ ನರಸಾಪುರ ಸರ್ಕಾರಿ ಪಿಯು ಕಾಲೇಜಿನ ಪ್ರೌಢ ಶಾಲಾ ಶಿಕ್ಷಕರೊಬ್ಬರು ವಿದ್ಯಾರ್ಥಿನಿಯೊಬ್ಬರಿಗೆ ಅಶ್ಲೀಲ ಮೆಸೇಜ್ ಕಳುಹಿಸಿದ್ದಾರೆಂದು ಆರೋಪಿಸಿ ಗ್ರಾಮಸ್ಥರು ಶಾಲೆಗೆ ಬಂದು ಶಿಕ್ಷಕನಿಗೆ ಬಿಇಒ ಎದುರೇ ಧರ್ಮದೇಟು ಕೊಟ್ಟ ಘಟನೆ ನಡೆದಿದೆ.
ಕನ್ನಡ ಶಿಕ್ಷಕ ಸಿ.ಎಂ.ಪ್ರಕಾಶ್ ಎಂಬುವ ವರೇ ಈ ಕೃತ್ಯ ಎಸಗಿದ ಶಿಕ್ಷಕರೆನ್ನಲಾಗಿದ್ದು, ಶಾಲೆಯ ಬಾಲಕಿಯೊಬ್ಬರಿಗೆ ಅಶ್ಲೀಲ ಮೆಸೇಜ್ ಕಳುಹಿಸಿರುವ ಕುರಿತು ಗ್ರಾಮದ ಹಲವಾರು ಮಂದಿ ಶಾಲೆಗೆ ಧಾವಿಸಿದ್ದರು. ಘಟನೆ ಕುರಿತು ಮಾಹಿತಿ ಪಡೆದ ಕ್ಷೇತ್ರ ಶಿಕ್ಷಣಾಧಿಕಾರಿ ಕನ್ನಯ್ಯ ಶಾಲೆಗೆ ಭೇಟಿ ನೀಡಿ ಗ್ರಾಮಸ್ಥರು ಹಾಗೂ ಮಕ್ಕಳಿಂದ ಪ್ರಕರಣದ ಕುರಿತು ಮಾಹಿತಿ ಸಂಗ್ರಹಿಸಿದ್ದು, ಈ ಸಂಬಂಧ ಆರೋಪಿ ಶಿಕ್ಷಕನ ವಿರುದ್ಧ ಕ್ರಮಕ್ಕೆ ಡಿಡಿಪಿಐ ಅವರಿಗೆ ವರದಿ ನೀಡಿದ್ದಾರೆ ಎನ್ನಲಾಗಿದೆ.
ಶಿಕ್ಷಕ ಸಿ.ಎಂ.ಪ್ರಕಾಶ್ ಈ ಹಿಂದೆಯೂ ತಾನು ಕೆಲಸ ಮಾಡಿದ ಹಲವಾರು ಶಾಲೆಗಳಲ್ಲಿ ಇದೇ ರೀತಿ ದುರ್ವರ್ತನೆ ತೋರಿದ್ದು, 2010ರಲ್ಲಿ ಇದೇ ನರಸಾಪುರ ಪ್ರೌಢಶಾಲೆಯಲ್ಲಿ ಬಾಲಕಿ ಯೊಬ್ಬರೊಂದಿಗೆ ಕೆಟ್ಟದಾಗಿ ವರ್ತಿಸಿದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಧರ್ಮದೇಟು ನೀಡಿದ್ದು, ಇಲ್ಲಿಂದ ವರ್ಗಾಯಿಸಲಾಗಿತ್ತು.
ಅಲ್ಲದೆ ಇಂತಹದ್ದೇ ಪ್ರಕರಣದಲ್ಲಿ ಅವರನ್ನು ಸಸ್ಪೆಂಡ್ ಮಾಡಲಾಗಿತ್ತು. ನಂತರ ಮದನಹಳ್ಳಿ ಶಾಲೆಯಲ್ಲೂ ಇದೇ ರೀತಿಯ ದುರ್ವರ್ತನೆ ತೋರಿದ್ದರೆನ್ನಲಾಗಿದ್ದು, ಅಲ್ಲಿನ ಶಾಲಾಭಿವೃದ್ದಿ ಸಮಿತಿ ಈ ಶಿಕ್ಷಕನಿಗೆ ಎಚ್ಚರಿಕೆಯನ್ನೂ ನೀಡಿತ್ತು ಎನ್ನಲಾಗಿದೆ.
ಮದನಹಳ್ಳಿಯಿಂದ ವರ್ಗವಾಗಿ ನರಸಾಪುರಕ್ಕೆ ಬಂದ ಈ ಶಿಕ್ಷಕ ಮತ್ತೆ ಇಲ್ಲಿಯೂ ಅದೇ ಚಾಳಿ ಮುಂದುವರಿಸಿದ್ದು, ಗ್ರಾಮಸ್ಥರು ಕಠಿಣ ಕ್ರಮಕ್ಕೆ ಆಗ್ರಹಿಸಿದ್ದರಲ್ಲದೇ ಮತ್ತೆ ನರಸಾಪುರ ಶಾಲೆಯಲ್ಲಿ ಕೆಲಸ ಮಾಡಲು ಬಿಡುವುದಿಲ್ಲ ಎಂದು ಎಚ್ಚರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolar; ಮೋದಿ ಶನಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆ
CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?
ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್ದು: ಕೃಷ್ಣಬೈರೇ ಗೌಡ
Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್
H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್
MUST WATCH
ಹೊಸ ಸೇರ್ಪಡೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ