Kolar: ಕುರ್ಚಿಗೆ ಅಧಿಕಾರಿಗಳಿಬ್ಬರ ತಿಕ್ಕಾಟ; ಕೆಲಸ ಸ್ಥಗಿತ


Team Udayavani, Mar 12, 2024, 2:34 PM IST

Kolar: ಕುರ್ಚಿಗೆ ಅಧಿಕಾರಿಗಳಿಬ್ಬರ ತಿಕ್ಕಾಟ; ಕೆಲಸ ಸ್ಥಗಿತ

ಕೋಲಾರ: ಬರಪೀಡಿತ ಜಿಲ್ಲೆಯ ಗ್ರಾಮೀಣ ಭಾಗಕ್ಕೆ ಯುದ್ಧದೋಪಾದಿಯಲ್ಲಿ ಕುಡಿಯುವ ನೀರನ್ನು ಪೂರೈಕೆ ಮಾಡಲು ಶ್ರಮಿಸಬೇಕಾಗಿದ್ದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಚೇರಿಯು ಕಾಂಗ್ರೆಸ್‌ ಶಾಸಕರಿಬ್ಬರು ಮತ್ತು ಇಬ್ಬರು ಅಧಿಕಾರಿಗಳ ಪ್ರತಿಷ್ಠೆಯ ತಿಕ್ಕಾಟಕ್ಕೆ ಸಿಲುಕಿ ಕೆಲಸಕಾರ್ಯಗಳನ್ನೇ ಸ್ಥಗಿತಗೊಳಿಸಿದೆ.

ವಾರದಿಂದಲೂ ಕೋಲಾರ ಜಿಲ್ಲೆಯ ಗ್ರಾಮೀಣ ಕುಡಿಯುವ ನೀರಿನ ಯೋಜನೆಗಳು ಉಸ್ತುವಾರಿ ಇಲ್ಲದೆ ನನೆಗುದಿಗೆ ಬಿದ್ದಿದ್ದು, ಇಬ್ಬರು ಅಧಿಕಾರಿಗಳ ತಿಕ್ಕಾಟವನ್ನು ಬಗೆಹರಿಸಬೇಕಾಗಿದ್ದ ಜಿಪಂ ಅಧಿಕಾರಿಗಳು ಮೇಲಿನ ಒತ್ತಡ ಹಾಗೂ ಪ್ರಭಾವಕ್ಕೊಳಗಾಗಿ ಮೌನಕ್ಕೆ ಶರಣಾಗಿರುವುದು ಪರಿಸ್ಥಿತಿಯ ವಿಕೋಪಕ್ಕೆ ಸಾಕ್ಷಿಯಾಗಿದೆ.

ಪ್ರಭಾರ ಅಧಿಕಾರ: ಕೋಲಾರ ಮತ್ತು ಮಾಲೂರು ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತ ಜಬೀವುಲ್ಲಾ ಅವರನ್ನು ಖಾಲಿಯಾಗಿದ್ದ ಕಾರ್ಯಪಾಲಕ ಅಭಿಯಂತರ ಹುದ್ದೆಯಲ್ಲಿ ಪ್ರಭಾರವಾಗಿ ನಿಯೋಜಿಸಲಾಗಿತ್ತು. ಜಬೀವುಲ್ಲಾ ಖಾಲಿ ಇರುವ ಕಾರ್ಯಪಾಲಕ ಅಭಿಯಂತರ ಹುದ್ದೆಯ ಜವಾಬ್ದಾರಿ ಹೊತ್ತುಕೊಂಡು ನಿಭಾಯಿಸುತ್ತಿದ್ದರು. ಜಿಲ್ಲಾದ್ಯಂತ ನಡೆಯುತ್ತಿರುವ ಜಲ ಜೀವನ್‌ ಮಿಷನ್‌ ಕಾಮಗಾರಿಗಳು ಸೇರಿ ಗ್ರಾಮೀಣ ಕುಡಿಯುವ ನೀರಿನ ಇನ್ನಿತರ ಜವಾಬ್ದಾರಿಗಳನ್ನು ನಿರ್ವಹಿಸುತ್ತಿದ್ದರು.

ಮತ್ತೂಬ್ಬ ಅಧಿಕಾರಿ: ಇಂತಹ ಸಮಯದಲ್ಲಿ ಕೋಲಾರ ಜಿಲ್ಲೆಯಲ್ಲಿ ಖಾಲಿ ಇದ್ದ ಕಾರ್ಯಪಾಲಕ ಅಭಿಯಂತರ ಹುದ್ದೆಗೆ ಸರ್ಕಾರವು ಅಮರಪ್ಪ ಎಂ. ಹೊಸಕೋಟೆ ಎಂಬ ಅಧಿಕಾರಿಯನ್ನು ವರ್ಗಾವಣೆ ಮಾಡಿದೆ. ಮಾ.4ರಂದು ಸರ್ಕಾರದ ವರ್ಗಾವಣೆ ಆದೇಶ ಹಿಡಿದುಕೊಂಡು ಅಮರಪ್ಪ ಕೋಲಾರಕ್ಕೆ ಆಗಮಿಸಿದ್ದಾರೆ. ಹೀಗೆ ಆಗಮಿಸಿದವರೇ ಸರ್ಕಾರದ ವರ್ಗಾವಣೆ ಆದೇಶದ ಅನ್ವಯ ಕಚೇರಿ ಜವಾಬ್ದಾರಿ ಸ್ವೀಕರಿಸಲು ಮುಂದಾಗಿದ್ದಾರೆ. ಆದರೆ, ಪ್ರಭಾರ ಅಧಿಕಾರದಲ್ಲಿದ್ದ ಜಬೀವುಲ್ಲಾ ಇದಕ್ಕೆ ಸಹಕರಿಸಿಲ್ಲ. ಆದರೂ, ಅಮರಪ್ಪ ಸ್ವಯಂ ಅಧಿಕಾರ ಸ್ಪೀಕರಿಸಿದ್ದಾರೆ.

ತಗಾದೆ ಶುರು: ಇಬ್ಬರೂ ಅಧಿಕಾರಿಗಳು ಒಂದೇ ಕಚೇರಿಯಲ್ಲಿ ಕೆಲಸ ಮಾಡಲು ಮುಂದಾಗಿದ್ದರಿಂದ ಪ್ರಭಾರ ಹಾಗೂ ಖಾಯಂ ಅಧಿಕಾರಿ ನಡುವೆ ತಗಾದೆ ಶುರುವಾಗಿದೆ. ಇದರ ನೇರ ಪರಿಣಾಮ ಗ್ರಾಮೀಣ ಕುಡಿಯುವ ನೀರಿನ ಕಾಮಗಾರಿಗಳ ನಿರ್ವಹಣೆಯ ಮೇಲೆ ಬಿದ್ದಿದೆ. ಪ್ರಭಾರ ಅಧಿಕಾರಿಯ ಅಸಹಕಾರದಿಂದಾಗಿ ಕಾಯಂ ಅಧಿಕಾರಿ ಕಚೇರಿ ನಿರ್ವಹಣೆಯ ಕೀ ಪಡೆದುಕೊಳ್ಳಲಾಗುತ್ತಿಲ್ಲ. ಜೊತೆಗೆ ಕಾಮಗಾರಿ ಬಿಲ್‌ಗ‌ಳನ್ನು ಪಾಸ್‌ ಮಾಡಲು ಖಜಾನೆಯಲ್ಲಿ ಥಂಬ್‌ ನೀಡಲು ಆಗದಂತಾಗಿದೆ. ಇದೇ ಪರಿಸ್ಥಿತಿ ವಾರದಿಂದಲೂ ಇರುವುದರಿಂದ ಕಚೇರಿಯ ಎಲ್ಲಾ ಕೆಲಸ ಕಾರ್ಯಗಳು ಇಬ್ಬರು ಅಧಿಕಾರಿಗಳ ಕಿತ್ತಾಟದಲ್ಲಿ ಬಡವಾದಂತಾಗಿದೆ.

ರಾಜಕೀಯ ಲಾಬಿ: ಇಬ್ಬರೂ ಅಧಿಕಾರಿಗಳು ಜಿಲ್ಲೆಯ ಇಬ್ಬರು ಪ್ರಭಾವಿ ಶಾಸಕರ ಬೆಂಬಲದೊಂದಿಗೆ ತಮ್ಮದೇ ಆದ ನಿಲುವನ್ನು ತೆಗೆದುಕೊಳ್ಳುತ್ತಿದ್ದಾರೆಂದು ಹೇಳಲಾಗುತ್ತಿದೆ. ಪ್ರಭಾರ ಅಧಿಕಾರಿ ಜಬೀವುಲ್ಲಾರಿಗೆ ಮುಖ್ಯಮಂತ್ರಿಗೆ ಹತ್ತಿರವಾಗಿರುವ ಶಾಸಕರ ಬೆಂಬಲವಿದೆ. ಹಾಗೆಯೇ ಅಮರಪ್ಪ ಎಂ. ಹೊಸಕೋಟೆ ಜಿಲ್ಲೆಯ ಮತ್ತೂಬ್ಬ ಹಿರಿಯ ಶಾಸಕರ ಬೆಂಬಲದೊಂದಿಗೆ ವರ್ಗಾವಣೆ ಮಾಡಿಸಿಕೊಂಡು ಬಂದಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ. ಹೀಗಾಗಿ ಕಾಂಗ್ರೆಸ್‌ ಪ್ರಭಾವಿ ಶಾಸಕರಿಬ್ಬರ ನಡುವೆ ಅಧಿಕಾರಿಗಳ ಕಿತ್ತಾಟ ಪರೋಕ್ಷ ಹಗ್ಗಜಗ್ಗಾಟವಾಗಿ ಮಾರ್ಪಟ್ಟಿದೆ.

ಕೆಲಸ ಸ್ಥಗಿತ: ಇಬ್ಬರು ಅಧಿಕಾರಿಗಳ ತಿಕ್ಕಾಟದಿಂದ ಕುಡಿಯುವ ನೀರಿನ ಕಾಮಗಾರಿಗಳು, ಜಲ ಜೀವನ್‌ ಮಿಷನ್‌ ಯೋಜನೆಯು ನನೆಗುದಿಗೆ ಬೀಳುವಂತಾಗಿದೆ. ಈಗಾಗಲೇ ಜಿಲ್ಲೆಯಲ್ಲಿ ಗುತ್ತಿಗೆದಾರರು ನಿರ್ವಹಿಸುತ್ತಿರುವ ಕುಡಿಯುವ ನೀರಿನ ಕಾಮಗಾರಿಗಳ 75 ಕೋಟಿ ರೂ. ಬಾಕಿ ಇದೆ. ಸರ್ಕಾರ 20 ದಿನಗಳ ಹಿಂದಷ್ಟೇ 15 ಕೋಟಿ ರೂ. ಬಿಡುಗಡೆಯೂ ಮಾಡಿದೆ. ಆದರೆ, ಹಣ ಗುತ್ತಿಗೆದಾರರಿಗೆ ಬಿಡುಗಡೆ ಮಾಡಿ ಕಾಮಗಾರಿಗಳ ಕೆಲಸ ಚುರುಕುಗೊಳಿಸಲು ಆಗುತ್ತಿಲ್ಲ. ಕಚೇರಿ ಕಾರ್ಯಗಳು ಸ್ಥಗಿತಗೊಂಡಿವೆ. ವಾರದಿಂದಲೂ ಇಬ್ಬರು ಅಧಿಕಾರಿಗಳ ಪೈಪೋಟಿಯಲ್ಲಿ ಕಚೇರಿ ಕೆಲಸಗಳು ಅನಾಥವಾಗುವಂತಾಗಿದೆ.

ಜಿಲ್ಲಾ ಪಂಚಾಯ್ತಿ ಮೌನಕ್ಕೆ ಶರಣು: ವಾರದಿಂದಲೂ ಇಬ್ಬರು ಶಾಸಕರ ಬೆಂಬಲದೊಂದಿಗೆ ಇಬ್ಬರು ಅಧಿ ಕಾರಿ ಗಳು ಅಧಿಕಾರಕ್ಕಾಗಿ ನಡೆಸುತ್ತಿರುವ ತಿಕ್ಕಾಟದಲ್ಲಿ ಜಿಪಂ ಅಧಿಕಾರಿಗಳು ವಾರದಿಂದಲೂ ಯಾವುದೇ ಕ್ರಮವಹಿಸಿಲ್ಲ ಎಂಬ ಆರೋಪವಿದೆ. ಸರ್ಕಾರದ ಹಂತದಲ್ಲಿ ಇಬ್ಬರೂ ಶಾಸಕರು ಪ್ರಭಾವಿಗಳೇ ಆಗಿರುವುದರಿಂದ ಸರ್ಕಾರದ ಹಂತದಲ್ಲಿಯೇ ಈ ಸಮಸ್ಯೆ ಬಗೆಹರಿಯಲಿ ಎಂದು ಜಿಲ್ಲಾಡಳಿತದ ಹಿರಿಯ ಅಧಿಕಾರಿಗಳು ಕಾಯುತ್ತಿರುವಂತಿದೆ. ಶಾಸಕರು, ಅಧಿಕಾರಿಗಳ ಕಿತ್ತಾಟದಲ್ಲಿ ಕೋಲು ಮುರಿಯುತ್ತಿಲ್ಲ, ಹಾವು ಸಾಯುತ್ತಿಲ್ಲ ಎಂಬಂತಾಗಿದೆ.

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಕೋಲಾರ ಮತ್ತು ಮಾಲೂರು ಸಹಾಯಕ ಕಾರ್ಯಪಾಲಕ ಅಭಿಯಂತರಾಗಿದ್ದ ಜಬೀವುಲ್ಲಾ ಜವಾಬ್ದಾರಿ ಹೊತ್ತುಕೊಂಡಿದ್ದರು. ಈಗ ಸರ್ಕಾರ ಕಾರ್ಯಪಾಲಕ ಅಭಿಯಂತರರನ್ನು ವರ್ಗಾವಣೆ ಮಾಡಿದೆ. ಅವರೇ ಕಚೇರಿ ಜವಾಬ್ದಾರಿ ಹೊತ್ತುಕೊಳ್ಳಬೇಕಾಗುತ್ತದೆ. ಖಜಾನೆಯಲ್ಲಿ ಹೊಸ ಅಧಿಕಾರಿ ಕಾರ್ಯನಿರ್ವಹಣೆಗೆ ಅನುವಾಗುವಂತೆ ಮಾಡಲು ಸೂಚಿಸಿದ್ದೇನೆ. ಆನಾರೋಗ್ಯ ಕಾರಣ ತಾವು ಕಚೇರಿಗೆ ಬಂದಿಲ್ಲ. ಮಂಗಳವಾರ ಎಲ್ಲವನ್ನೂ ಸರಿಪಡಿಸುತ್ತೇನೆ. ● ಪದ್ಮಬಸವಂತಪ್ಪ, ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಜಿಪಂ, ಕೋಲಾರ

ಕೆ.ಎಸ್‌.ಗಣೇಶ್‌

ಟಾಪ್ ನ್ಯೂಸ್

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kempegowda Jayanti: ಜಯಂತಿಗೆ ಎಚ್‌ಡಿಡಿ, ಎಚ್ಡಿಕೆಗೆ ಆಹ್ವಾನ ನೀಡದಿದ್ದಕ್ಕೆ ಆಕ್ರೋಶ 

Kempegowda Jayanti: ಜಯಂತಿಗೆ ಎಚ್‌ಡಿಡಿ, ಎಚ್ಡಿಕೆಗೆ ಆಹ್ವಾನ ನೀಡದಿದ್ದಕ್ಕೆ ಆಕ್ರೋಶ 

14

KGF Gold: ಮತ್ತೆ ಚಿನ್ನ ಕೊಡಲಿದೆ ಕೋಲಾರದ ಕೆಜಿಎಫ್!

Tomato-Price

Kolara: ಗಗನಕ್ಕೇರುತ್ತಿರುವ ಟೊಮೆಟೋ ಬೆಲೆ

ಸರಕಾರದ ವಿರುದ್ಧ ಇಂದು ಬಿಜೆಪಿ ಬೃಹತ್‌ ಪ್ರತಿಭಟನೆ: ಅಶ್ವತ್ಥನಾರಾಯಣ

ಸರಕಾರದ ವಿರುದ್ಧ ಇಂದು ಬಿಜೆಪಿ ಬೃಹತ್‌ ಪ್ರತಿಭಟನೆ: ಅಶ್ವತ್ಥನಾರಾಯಣ

ಲೂಟಿ ಸರಕಾರ ಅಂದ್ರೆ ದಾಖಲೆ ಕೇಳುತ್ತಿದ್ದ ಸಿದ್ದು ಈಗ ಏನು ಮಾಡುತ್ತಾರೆ?: ಅಶೋಕ್‌

ಲೂಟಿ ಸರಕಾರ ಅಂದ್ರೆ ದಾಖಲೆ ಕೇಳುತ್ತಿದ್ದ ಸಿದ್ದು ಈಗ ಏನು ಮಾಡುತ್ತಾರೆ?: ಅಶೋಕ್‌

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.